ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿ.ಕೆ.ಶಿವಕುಮಾರ್‌ಗೆ ಜಾಮೀನು, ಬೀಸೋ ದೊಣ್ಣೆಯಿಂದ ಪಾರು

|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 15: ಅಕ್ರಮ ಆಸ್ತಿ ಹಾಗೂ ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಡಿ.ಕೆ.ಶಿವಕುಮಾರ್‌ಗೆ ಷರತ್ತು ಬದ್ಧ ಜಾಮೀನು ದೊರೆತಿದ್ದು, ಬೀಸುವ ದೊಣ್ಣೆಯಿಂದ ಸದ್ಯಕ್ಕೆ ಡಿಕೆಶಿ ಪಾರಾಗಿದ್ದಾರೆ.

ಡಿಕೆಶಿ ಅವರ ದೆಹಲಿಯ ಮನೆಯಲ್ಲಿ ಪತ್ತೆಯಾದ ನಾಲ್ಕು ಕೋಟಿ ಹಣದ ಪ್ರಕರಣದ ಸಂಬಂಧ ಡಿ.ಕೆ.ಶಿವಕುಮಾರ್ ಅವರಿಗೆ ಇಡಿ ಯಿಂದ ಬಂಧನ ಭೀತಿ ಇದ್ದ ಕಾರಣ ಅವರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಹಾಕಿದ್ದರು. ಇಂದು ಬೆಳಿಗ್ಗೆ ಆರ್ಥಿಕ ಅಪರಾಧ ನ್ಯಾಯಾಲಯ ವಿಚಾರಣೆ ನಡೆದು. ಆದೇಶವನ್ನು ಮಧ್ಯಾಹ್ನ ಮೂರು ಗಂಟೆಗೆ ಕಾಯ್ದಿರಿಸಿತ್ತು.

DK Shivakumar gets conditional bail in Hawala case

ಮಧ್ಯಾಹ್ನ ಪ್ರಕರಣ ಸಂಬಂಧ ಆದೇಶ ನೀಡಿದ ನ್ಯಾಯಾಲಯವು ಡಿ.ಕೆ.ಶಿವಕುಮಾರ್ ಅವರಿಗೆ ಷರತ್ತು ಬದ್ಧ ಜಾಮೀನು ದೊರೆತಿದೆ. ನ್ಯಾಯಾಧೀಶ ಎಂ.ಎಸ್.ಆಳ್ವ ಅವರು ಜಾಮೀನು ನೀಡಿ ಆದೇಶ ಹೊರಡಿಸಿದ್ದಾರೆ. ಈ ಸಮಯದಲ್ಲಿ ಡಿ.ಕೆ.ಶಿವಕುಮಾರ್ ಸಹ ನ್ಯಾಯಾಲಯದಲ್ಲಿ ಹಾಜರಿದ್ದರು.

ಇಡಿ ಬಂಧನ ಭೀತಿಯಿಂದ ಡಿಕೆಶಿ ಸೇಫ್? ಕಾಂಗ್ರೆಸ್ಸಿನ ಆ ಆಪತ್ಬಾಂಧವ ಯಾರು? ಇಡಿ ಬಂಧನ ಭೀತಿಯಿಂದ ಡಿಕೆಶಿ ಸೇಫ್? ಕಾಂಗ್ರೆಸ್ಸಿನ ಆ ಆಪತ್ಬಾಂಧವ ಯಾರು?

ಎ1 ಡಿ ಕೆ ಶಿವಕುಮಾರ್, ಎ2 ಸುನೀಲ್ ಕುಮಾರ್ , ಎ3 ಆಂಜನೇಯ ಹಾಗೂ ಎ4 ರಾಜೇಂದ್ರಗೆ ಜಾಮೀನು ಮಂಜೂರಾಗಿದೆ. ಆರೋಪಿಗಳು ತಲಾ ರೂ.25 ಸಾವಿರ ನಗದು ಹಾಗೂ ಒಂದು ಲಕ್ಷ ಬಾಂಡ್ ಶ್ಯೂರಿಟಿ ನೀಡಬೇಕು. ಹಾಗೂ ಸಾಕ್ಷಿಗಳ ಮೇಲೆ ಪರಿಣಾಮ ಬೀರದಂತೆ ಆದೇಶಿಸಿ, ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿದ್ದಾರೆ.

ರಮೇಶ್ ಜಾರಕಿಹೊಳಿ ನನ್ನ ಆಪ್ತ ಸ್ನೇಹಿತರು : ಡಿ.ಕೆ.ಶಿವಕುಮಾರ್ರಮೇಶ್ ಜಾರಕಿಹೊಳಿ ನನ್ನ ಆಪ್ತ ಸ್ನೇಹಿತರು : ಡಿ.ಕೆ.ಶಿವಕುಮಾರ್

English summary
Minister DK Shivakumar gets conditional bail in Havala case. DK Shivakumar facing ED trouble in the case. Economic Criminal Court order to bail DK Shivakumar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X