Get Updates
Get notified of breaking news, exclusive insights, and must-see stories!

Bengaluru Second Airport: 2ನೇ ಏರ್‌ಪೋರ್ಟ್‌ಗೆ ಸ್ಥಳ ಫೈನಲ್‌: ಬಿಗ್‌ ಅಪ್‌ಡೇಟ್‌ ಕೊಟ್ಟ ಡಿ ಕೆ ಶಿವಕುಮಾರ್‌

ಬೆಂಗಳೂರು, ನವೆಂಬರ್‌ 18: ರಾಜಧಾನಿ ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ರಾಜ್ಯ ಸರ್ಕಾರ ವೇಗ ನೀಡಿದೆ. ಏರ್‌ಪೋರ್ಟ್‌ ನಿರ್ಮಾಣವಾಗುವ ಜಾಗದ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ.ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆಗೆ ಮೂರು ಸ್ಥಳಗಳನ್ನು ಪರಿಶೀಲಿಸಲಾಗುತ್ತಿದ್ದು, ಗ್ರೇಟರ್‌ ಬೆಂಗಳೂರು ಹೆಗ್ಗಳಿಕೆಗೂ ಪಾತ್ರವಾಗಿರುವ ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲೇ ಇಂಟರ್‌ ನ್ಯಾಷನಲ್‌ ಏರ್‌ಪೋರ್ಟ್‌ ನಿರ್ಮಾಣವಾಗುವುದು ಬಹುತೇಕ ಖಚಿತ ಎನ್ನಲಾಗಿದ್ದು, ಈ ಬಗ್ಗೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಡಿಸಿಎಂ ಡಿ ಕೆ ಶಿವಕುಮಾರ್‌ ಮಾತನಾಡಿ, ನಮ್ಮ ಸರ್ಕಾರ ಬೆಂಗಳೂರಿನ ಮೂಲ ಸೌಕರ್ಯ ಅಭಿವೃದ್ಧಿಗೆ 1.5 ಲಕ್ಷ ಕೋಟಿ ಮೀಸಲಿಡುತ್ತಿದೆ. 41 ಕಿ.ಮೀ ಉದ್ದದ ಡಬಲ್ ಡೆಕ್ಕರ್ ಮೇಲ್ಸೇತುವೆ, ಅವಳಿ ಸುರಂಗ, ಎಲಿವೇಟೆಡ್ ಕಾರಿಡಾರ್, ಬಫರ್ ರಸ್ತೆಗಳು ಸೇರಿದಂತೆ 117 ಕಿ.ಮೀ ಉದ್ಧದ ಬೆಂಗಳು ಬಿಸಿನೆಸ್ ಕಾರಿಡಾರ್ ಯೋಜನೆ ರೂಪಿಸಲಾಗಿದೆ. ಇದರ ಜೊತೆಗೆ ಬಿಡದಿಯಲ್ಲಿ ಎಐ ಸಿಟಿ ನಿರ್ಮಾಣಕ್ಕೆ ಮುಂದಾಗಿದ್ದೇವೆ. ಇನ್ನು ಬೆಂಗಳೂರಿನ ದಕ್ಷಿಣ ಭಾಗದಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಮುಂದಾಗಿದ್ದೇವೆ. ಶೀಘ್ರದಲ್ಲಿಯೇ ಫೈನಲ್‌ ಆಗಲಿದೆ. ಅತ್ಯುತ್ತಮ ಹವಾಮಾನ ಹಾಗೂ ಸಂಸ್ಕೃತಿಗೆ ಬೆಂಗಳೂರನ್ನು ಮೀರಿಸುವ ಮತ್ತೊಂದು ನಗರ ಬೇರೊಂದಿಲ್ಲ. ನಮ್ಮ ಸರ್ಕಾರ ಅನಿವಾಸಿ ಭಾರತೀಯರಿಗಾಗಿ ಪ್ರತ್ಯೇಕ ಇಲಾಖೆಯನ್ನು ಆರಂಭಿಸಲಿದೆ ಎಂದು ತಿಳಿಸಿದರು.

DK Shivakumar gives information about the final location for the 2nd International airport

ಕರ್ನಾಟಕ ಸರ್ಕಾರ ಗ್ರಾಮೀಣ ಭಾಗದ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲು ಸಿಎಸ್ಆರ್ ಶಾಲೆಗಳನ್ನು ನಿರ್ಮಿಸಲು ಮುಂದಾಗಿದೆ. ಇದಕ್ಕೆ ನೀವೆಲ್ಲರೂ ಹೆಚ್ಚಿನ ಸಹಕಾರ ನೀಡಬೇಕಾಗಿದೆ. ಜೊತೆಗೆ ಬೆಂಗಳೂರಿನಿಂದಾಚೆಗೆ ಕೈಗಾರಿಕೆಗಳ ಅಭಿವೃದ್ಧಿಗೆ ಹೊಸ ನೀತಿ ರೂಪಿಸಲಾಗಿದೆ. ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡೋಣ. ನೀವು ಬಲಿಷ್ಠವಾದರೆ, ನಾವು ಬಲಿಷ್ಠವಾಗುತ್ತೇವೆ. ನಿಮ್ಮ ಜೊತೆಗಿನ ಸಹಭಾಗಿತ್ವಕ್ಕೆ ನಾವು ಎದುರು ನೋಡುತ್ತೇವೆ. ನಾವೆಲ್ಲರೂ ಸೇರಿ ಉತ್ತಮ ಬೆಂಗಳೂರ, ಉತ್ತಮ ಕರ್ನಾಟ ಹಾಗೂ ಉತ್ತಮ ಭಾರತದ ನಿರ್ಮಾಣ ಮಾಡೋಣ. ಬೆಂಗಳೂರು ಜಾಗತಿಕ ನಗರ, ಜಾಗತಿಕ ಮಟ್ಟದಲ್ಲಿ ನಾವು ಸ್ಪರ್ಧಿಸಲು ಬಯಸುತ್ತೇವೆ. ಇದು ನಿಮ್ಮ ನಗರ, ಈ ನಗರವನ್ನು ಮತ್ತಷ್ಟು ಬಲವಾಗಿ ಬೆಳೆಸಲು ಸಹಕರಿಸಿಎಂದು ಕರೆ ನೀಡಿದರು.

ದೇಶದ ಐಟಿ ರಫ್ತಿನಲ್ಲಿ ಶೇ.40-45ರಷ್ಟು ಪಾಲು ಬೆಂಗಳೂರಿನದ್ದಾಗಿದೆ. ನಮ್ಮಲ್ಲಿ ಹೆಚ್ಚು ಇಂಜಿನಿಯರಿಂಗ್, ಪ್ಯಾರಾ ಮೆಡಿಕಲ್, ಮೆಡಿಕಲ್ ಕಾಲೇಜುಗಳಿವೆ. ಇಲ್ಲಿರುವ ಮಾನವ ಸಂಪನ್ಮೂಲ ಬೇರೆ ಎಲ್ಲೂ ಇಲ್ಲ. ನಮ್ಮ ಸರ್ಕಾರ ಅನ್ವೇಷಣೆ, ತಂತ್ರಜ್ಞಾನ, ಬಂಡವಾಳ ಹೂಡಿಕೆ, ಪ್ರತಿಭೆಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಾ ಬಂದಿದೆ. ನೀವು ನಮ್ಮ ಮೇಲೆ ನಂಬಿಕೆ ಇಟ್ಟು ಬೆಂಗಳೂರಿಗೆ ಆಗಮಿಸಿದ್ದೀರಿ, ನಿಮ್ಮ ಸಮಸ್ಯೆಗಳ ಬಗ್ಗೆ ನಮಗೆ ಅರಿವಿದೆ. ಹೀಗಾಗಿ ನಾವು ನಿಮಗೆ ಅತ್ಯುತ್ತಮ ಮೂಲ ಸೌಕರ್ಯ ಒದಗಿಸಲು ಮುಂದಾಗಿದ್ದೇವೆ ಎಂದು ತಿಳಿಸಿದರು.

ಫ್ಯೂಚರೈಸ್ ಎಂಬುದು ಕೇವಲ ಘೋಷವಾಕ್ಯವಲ್ಲ, ಇದು ಬದಲಾವಣೆ, ನಾಳಿನ ಭವಿಷ್ಯದ ಅಡಿಪಾಯ. ಇಂದು ನೀವು ನಮ್ಮ ಮೇಲೆ ವಿಶ್ವಾಸವಿಟ್ಟು ಇಲ್ಲಿಗೆ ಆಗಮಿಸಿರುವುದಕ್ಕೆ ನಮಗೆ ಹೆಮ್ಮೆ ಇದೆ. ಈ ಕಾರ್ಯಕ್ರಮದ ಯಶಸ್ಸಿನಲ್ಲಿ ನಮ್ಮ ರಾಜ್ಯದ ಯಶಸ್ಸು ಅಡಗಿದೆ. ನಾನು ಇಂದು ನಿಮ್ಮ ಮುಂದೆ ಕೇವಲ ಉಪಮುಖ್ಯಮಂತ್ರಿಯಾಗಿ ನಿಂತಿಲ್ಲ, ಎಲ್ಲ ಬಂಡವಾಳ ಹೂಡಿಕೆ, ನಿಮ್ಮ ಆಲೋಚನೆಗಳ ಧ್ವನಿಯಾಗಿ ನಿಂತಿದ್ದೇನೆ. ಕರ್ನಾಟಕದ ಮೂಲಕ ಜಾಗತಿಕ ಭವಿಯ್ ಭವಿಷ್ಯ ರೂಪಿಸಲು ನಾವಿಂದು ಇಲ್ಲಿ ಸೇರಿದ್ದೇವೆ ಎಂದರು.

ರಾಜ್ಯದಲ್ಲಿ 1998ರಿಂದ ಈ ಐಟಿ ಸಮ್ಮೇಳನ ನಡೆದುಕೊಂಡು ಬರುತ್ತಿದ್ದು, ಈ ಸಮ್ಮೇಳನ ರಾಜ್ಯದ 28ನೇ ಐಟಿ ಕ್ಷೇತ್ರದ ಕಾರ್ಯಕ್ರಮವಾಗಿದೆ. ಬೆಂಗಳೂರು ಟೆಕ್ ಸಮಿಟ್ ಏಷ್ಯಾದ ಅತಿ ದೊಡ್ಡ ಟೆಕ್ ಸಮ್ಮೇಳನಗಳಲ್ಲಿ ಒಂದಾಗಿದೆ. ಇದರೊಂದಿಗೆ ಬೆಂಗಳೂರು ಜಾಗತಿಕ ಐಟಿ ರಾಜಧಾನಿಯಾಗುವತ್ತ ಸಾಗಲು ನೆರವಾಗಲಿದೆ. ಮೊದಲ ಬಾರಿಗೆ ಬೆಂಗಳೂರು ಅರಮನೆ ಮೈದಾನದಿಂದ ಇಂಟರ್ ನ್ಯಾಷನಲ್ ಎಕ್ಸಿಬಿಷನ್ ಸೆಂಟರ್ ಗೆ ಸ್ಥಳಾಂತರವಾಗಿದೆ. ನಾನು ನಗರಾಭಿವೃದ್ಧಿ ಸಚಿವನಾಗಿದ್ದಾಗ ಈ ಕೇಂದ್ರ ಆರಂಭಕ್ಕೆ ಅನುಮತಿ ನೀಡಿದ್ದೆ. ಈ ಸಮ್ಮೇಳನದಲ್ಲಿ 10 ಸಾವಿರ ನವೋದ್ಯಮಗಳು, 60 ಸಾವಿರ ಮಂದಿ ಈ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+