ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download
LIVE

ಡಿ.ಕೆ.ಶಿವಕುಮಾರ್ ಗೆ ಜಾಮೀನು: ಇಂದು ನಡೆಯುವುದೇನೇನು?

|
Google Oneindia Kannada News

ಬೆಂಗಳೂರು, ಅಕ್ಟೋಬರ್ 24: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ನಿನ್ನೆ ದೆಹಲಿ ಹೈಕೋರ್ಟ್ ಜಾಮೀನು ನೀಡಿದೆ. ಸತತ 50 ದಿನಗಳು ಜೈಲಿನಲ್ಲಿದ್ದ ಡಿ.ಕೆ.ಶಿವಕುಮಾರ್ ನಿನ್ನೆ ಹೊರಬಂದಿದ್ದಾರೆ.

ಡಿ. ಕೆ. ಶಿವಕುಮಾರ್‌ಗೆ ಜಾಮೀನು ಸಿಕ್ಕಿದ್ದು ಹೇಗೆ?; 3 ಅಂಶಗಳುಡಿ. ಕೆ. ಶಿವಕುಮಾರ್‌ಗೆ ಜಾಮೀನು ಸಿಕ್ಕಿದ್ದು ಹೇಗೆ?; 3 ಅಂಶಗಳು

Recommended Video

      Sri Ramulu's Prayer for DK shivakumar Release | Oneindia Kannada

      ಜೈಲಿನಲ್ಲಿ ಕುದಿದು ಹೊರಗೆ ಬಂದಿರುವ ಡಿ.ಕೆ.ಶಿವಕುಮಾರ್ ಅವರ ಇಂದಿನ ನಡೆಗಳು ಅತ್ಯಂತ ಮಹತ್ವದ್ದಾಗಿದ್ದು, ಕುತೂಹಲದಿಂದ ಗಮನಿಸಬೇಕಾದುದ್ದಾಗಿದೆ.

      ಜೈಲಿನಿಂದ ಬಿಡುಗಡೆಯಾದ ಬಳಿಕ ಡಿಕೆ ಶಿವಕುಮಾರ್ ಹೇಳಿದ್ದೇನು?ಜೈಲಿನಿಂದ ಬಿಡುಗಡೆಯಾದ ಬಳಿಕ ಡಿಕೆ ಶಿವಕುಮಾರ್ ಹೇಳಿದ್ದೇನು?

      ಜಾಮೀನು ದೊರೆತು ನಿನ್ನೆ 10 ಗಂಟೆ ಸುಮಾರಿಗೆ ತಿಹಾರ್ ಜೈಲಿನಿಂದ ಹೊರಬಂದ ಡಿ.ಕೆ.ಶಿವಕುಮಾರ್ ಶಿವನ ದೇವಾಲಯಕ್ಕೆ ಪೂಜೆ ಸಲ್ಲಿಸಿ ದೆಹಲಿಯಲ್ಲಿಯೇ ತಮ್ಮ ನಿವಾಸದಲ್ಲಿ ಉಳಿದುಕೊಂಡಿದ್ದಾರೆ.

      DK Shivakumar Got Bail, Coming To Karnataka LIVE Updates In Kannada

      ಇಂದು ಡಿ.ಕೆ.ಶಿವಕುಮಾರ್ ಅವರು ರಾಜ್ಯಕ್ಕೆ ಬರಲಿದ್ದು, ಇಲ್ಲಿ ಅವರ ಅಭಿಮಾನಿಗಳು, ಕಾಂಗ್ರೆಸ್ ಮುಖಂಡರು ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲಿದ್ದಾರೆ.

      ಡಿಕೆಶಿಗೆ ಸಿಕ್ಕಿದ್ದು ಜಾಮೀನಷ್ಟೇ, ಕ್ರಿಮಿನಲ್ ಕೇಸುಗಳು ಇನ್ನೂ ವಿಚಾರಣೆಯಲ್ಲಿವೆ!ಡಿಕೆಶಿಗೆ ಸಿಕ್ಕಿದ್ದು ಜಾಮೀನಷ್ಟೇ, ಕ್ರಿಮಿನಲ್ ಕೇಸುಗಳು ಇನ್ನೂ ವಿಚಾರಣೆಯಲ್ಲಿವೆ!

      ಇಂದು ಸುದ್ದಿಗೋಷ್ಠಿಯನ್ನೂ ಡಿ.ಕೆ.ಶಿವಕುಮಾರ್ ನಡೆಸಲಿದ್ದಾರೆ. ಗೋಷ್ಠಿಯಲ್ಲಿ ಯಾವ ವಿಷಯಗಳನ್ನು ಅವರು ಹಂಚಿಕೊಳ್ಳಲಿದ್ದಾರೆ. ಅವರ ಜೈಲು ಅನುಭವಗಳು ಹೇಗಿದ್ದವು ಮುಂತಾದ ಮಾಹಿತಿಗಳನ್ನು ಅವರು ಮಾಧ್ಯಮಗಳಿಗೆ ನೀಡಲಿದ್ದಾರೆ. ಡಿ.ಕೆ.ಶಿವಕುಮಾರ್ ಕುರಿತ ಕ್ಷಣ-ಕ್ಷಣದ ಮಾಹಿತಿಗಳು 'ಒನ್ ಇಂಡಿಯಾ ಕನ್ನಡ' ನೀಡಲಿದೆ.

      Newest FirstOldest First
      12:19 PM, 24 Oct

      ಬಿಜೆಪಿ ಸಂಸದ ಉಮೇಶ್ ಜಾಧವ್ ಅವರು ಡಿ.ಕೆ.ಸುರೇಶ್ ನಿವಾಸದಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಉಮೇಶ್ ಜಾಧವ್ ಮೊದಲು ಕಾಂಗ್ರೆಸ್‌ನಲ್ಲಿದ್ದರು ಈಗ ಬಿಜೆಪಿ ಸೇರಿ ಸಂಸದರಾಗಿ ಆಯ್ಕೆ ಆಗಿದ್ದಾರೆ.
      8:41 AM, 24 Oct

      ಡಿ.ಕೆ.ಶಿವಕುಮಾರ್ ಇಂದು ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಲಿದ್ದಾರೆ. ನಿನ್ನೆಯಷ್ಟೆ ತಿಹಾರ್ ಜೈಲಿಗೆ ಭೇಟಿ ನೀಡಿದ್ದ ಸೋನಿಯಾ ಗಾಂಧಿ ಡಿ.ಕೆ.ಶಿವಕುಮಾರ್ ಗೆ ಧೈರ್ಯ ತುಂಬಿದ್ದರು. ಕಾಕತಾಳೀಯವೆಂಬಂತೆ ನಿನ್ನೆಯೇ ಡಿ.ಕೆ.ಶಿವಕುಮಾರ್ ಗೆ ಜಾಮೀನು ಸಿಕ್ಕಿತ್ತು.
      7:56 AM, 24 Oct

      ಡಿ.ಕೆ.ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಇಡಿ ಇಲಾಖೆಯು ಇಂದು ಸುಪ್ರೀಂಕೋರ್ಟ್ ಮೊರೆ ಹೋಗಲಿದೆ.
      7:55 AM, 24 Oct

      ಡಿ.ಕೆ.ಶಿವಕುಮಾರ್ ಇಂದು ದೆಹಲಿಯಲ್ಲಿ ತಮ್ಮ ವಕೀಲರನ್ನು ಭೇಟಿ ಮಾಡಲಿದ್ದು, ಅವರೊಂದಿಗೆ ಚರ್ಚಿಸಿ ಪ್ರಕರಣದ ಮುಂದಿನ ಹಂತಗಳ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.

      English summary
      DK Shivakumar got bail from Delhi high court yesterday. He is coming to Karnataka today. He may conduct press meet in Bengaluru.
      ತಾಜಾ ಸುದ್ದಿ ತಕ್ಷಣ ಪಡೆಯಿರಿ
      Enable
      x
      Notification Settings X
      Time Settings
      Done
      Clear Notification X
      Do you want to clear all the notifications from your inbox?
      Settings X