ಐಟಿ-ಇಡಿ ಸಮನ್ಸ್ ರದ್ದಿಗೆ ಡಿಕೆಶಿ ಅರ್ಜಿ: ಆಗಸ್ಟ್ 28ಕ್ಕೆ ಕೋರ್ಟ್ ಆದೇಶ
ಬೆಂಗಳೂರು, ಆಗಸ್ಟ್ 22: ಜಾರಿ ನಿರ್ದೇಶನಾಲಯ ಮತ್ತು ಆದಾಯ ತೆರಿಗೆ ಇಲಾಖೆ ತಮ್ಮ ವಿರುದ್ಧ ನೀಡಿದ್ದ ಸಮನ್ಸ್ ಗಳನ್ನು ರದ್ದು ಮಾಡಬೇಕು ಎಂದು ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಮುಗಿದಿದೆ.
ಹೈಕೋರ್ಟ್ನಲ್ಲಿ ಡಿ.ಕೆ.ಶಿವಕುಮಾರ್ ಅವರು ಈ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ಮುಗಿದಿದ್ದು ಆಗಸ್ಟ್ 28 ರಂದು ಕೋರ್ಟ್ ಆದೇಶ ನೀಡಲಿದೆ.
ಫ್ಲಾಟ್ಗಳ ಮೇಲೆ ಐಟಿ ದಾಳಿ ಪ್ರಕರಣ: ಡಿಕೆಶಿಗೆ ಬಿಗ್ ರಿಲೀಫ್
ಕಳೆದ ವರ್ಷ ಡಿ.ಕೆ.ಶಿವಕುಮಾರ್ ನಿವಾಸ ಸೇರಿದಂತೆ ಅವರ ಬಂಧುಗಳು, ಆಪ್ತರಮನೆಗಳ ಮೇಲೆ ಮತ್ತು ದೆಹಲಿಯಲ್ಲಿ ಡಿಕೆಶಿ ಹೊಂದಿರುವ ಫ್ಲಾಟ್ಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಡಿಕೆ ಶಿವಕುಮಾರ್ ಫ್ಲ್ಯಾಟ್ನಲ್ಲಿ 8.59 ಕೋಟಿ ಹಣ ಪತ್ತೆ ಆಗಿತ್ತು. ಇದು ಡಿ.ಕೆ.ಶಿವಕುಮಾರ್ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿತ್ತು.
ಈ ಸಂಬಂಧ ತನಿಖೆ ನಡೆಸುತ್ತಿದ್ದ ಇಡಿ ಮತ್ತು ಐಟಿ ಡಿ.ಕೆ.ಶಿವಕುಮಾರ್ ಅವರಿಗೆ ಸಮನ್ಸ್ ನೀಡಿತ್ತು. ಈ ಸಮನ್ಸ್ ರದ್ದು ಮಾಡುವಂತೆ ಡಿ.ಕೆ.ಶಿವಕುಮಾರ್ ಅವರು ಅರ್ಜಿ ಸಲ್ಲಿಸಿದ್ದರು.
ನಿನ್ನೆಯಷ್ಟೆ ಇದೇ ಪ್ರಕರಣಗಳಿಗೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್ ಅವರಿಗೆ ರಿಲೀಫ್ ಸಿಕ್ಕಿದ್ದು, ಫ್ಲ್ಯಾಟ್ಗಳಲ್ಲಿ ಸಿಕ್ಕ ಹಣದ ಬಗ್ಗೆ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ಹೈಕೋರ್ಟ್ ತಡೆ ನೀಡಿದೆ.