ಡಿಕೆಶಿ ಪತ್ನಿ ನನಗೆ ಕಾಂಗ್ರೆಸ್ ತೊರೆಯದಂತೆ ಕೋರಿದ್ದರು: ರಮೇಶ್ ಜಾರಕಿಹೊಳಿ
ನನ್ನ ವಿರುದ್ಧ ಡಿಕೆ ಶಿವಕುಮಾರ್ ಸಿಡಿ ಹಗರಣದ ಷಡ್ಯಂತ್ರ ಮಾಡಿದ್ದ. ಬೆಳಗಾವಿ ನಾಯಕರೊಬ್ಬರಿಗೆ ಫೋನ್ ಮಾಡಿ ಕೃತ್ಯ ಎಸಗಿದ್ದ. ಅವರು ಇನ್ನೂ ನೂರಾರು ಸಿಡಿ ಮಾಡಿದ್ದಾರೆ ಎಂದು ರಮೇಶ್ ಜಾರಕಿಹೊಳಿ ಆರೋಪಿಸಿದ್ದಾರೆ.
ಬೆಳಗಾವಿ, ಜನವರಿ 30: ನಾನು ಡಿಕೆ ಶಿವಕುಮಾರ್ ಒಳ್ಳೆಯ ಸ್ನೇಹಿತರಾಗಿದ್ದೆವು. ಅವರ ಹೆಂಡತಿ ನನಗೆ ಪಕ್ಷ ಬಿಡದಂತೆ ಹೇಳಿದ್ದರು. ನೀವಿಬ್ಬರು ಒಟ್ಟಿಗೆ ಇರಬೇಕು ಎಂದಿದ್ದರು, ಸಿಡಿ ಹಗರಣವಾದ್ದರಿಂದ ಅವನು ಹೆದರಿಬಿಟ್ಟಿದ್ದ. ಆದರೆ ನಾನು ಹೆದರಲಿಲ್ಲ ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಹೇಳಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, "ನನ್ನ ವಿರುದ್ಧ ಡಿಕೆ ಶಿವಕುಮಾರ್ ಸಿಡಿ ಹಗರಣದ ಷಡ್ಯಂತ್ರ ಮಾಡಿದ್ದ. ಬೆಳಗಾವಿ ನಾಯಕರೊಬ್ಬರಿಗೆ ಫೋನ್ ಮಾಡಿ ಕೃತ್ಯ ಎಸಗಿದ್ದ. ಅವರು ಇನ್ನೂ ನೂರಾರು ಸಿಡಿ ಮಾಡಿದ್ದಾರೆ, ಇದರ ಬಗ್ಗೆ ಸಿಬಿಐ ತನಿಖೆ ಆಗಬೇಕು" ಎಂದು ಅವರು ಒತ್ತಾಯಿಸಿದರು.
ಇದೇ ಮಾದರಿಯ ಸಿಡಿಗಳು ಇನ್ನೂ ಇದ್ದು ಇದರಲ್ಲಿ ಹಿರಿಯ ರಾಜಕಾರಣಿಗಳು ಇದ್ದಾರೆ, ಐಎಎಸ್ ಅಧಿಕಾರಿಗಳು ಇದ್ದಾರೆ, ಈ ಗ್ಯಾಂಗ್ ಅನ್ನು ಸದೆ ಬಡಿಯಬೇಕಾದರೆ ತನಿಖೆಯಾಗಲೇಬೇಕು. ನನ್ನ ಹಾಗೂ ಡಿಕೆಶಿ ವಿರುದ್ಧ ಸಂಬಂಧ ಹಾಳಾಗಲು ಗ್ರಾಮೀಣ ಶಾಸಕಿಯೊಬ್ಬರು ಕಾರಣ, ಕಿತ್ತೂರು ಚೆನ್ನಮ್ಮ ವಿರುದ್ಧ ಅವಹೇಳನ ಪದ ಬಳಕೆಗೆ ಅವರೇ ಕಾರಣ, ಇಲ್ಲಿ ಜಾತಿ ಸಂಘರ್ಷ ಉಂಟಾದರೆ ನಾನು ಕಾರಣ ಅಲ್ಲ. ಇದಕ್ಕೆ ಗ್ರಾಮೀಣ ಶಾಸಕಿ ಕಾರಣ ಎಂದು ಅವರು ಹೇಳಿದರು.

ಬೆಳಗಾವಿಯಲ್ಲಿ ಸಕ್ಕರೆ ಕಾರ್ಖಾನೆಯಲ್ಲಿ ಅಕ್ರಮವಾಗಿದೆ. ನನ್ನಿಂದ ಏನಾದರೂ ಅಕ್ರಮ ಆಗಿದ್ದರೆ ನನ್ನ ತಲೆ ಕಡಿದು ಟೇಬಲ್ ಮೇಲೆ ಇಡುತ್ತೇನೆ. ಡಿಕೆ ಶಿವಕುಮಾರ್ ಅವರನ್ನು ಸಿಬಿಐ ಬಂಧಿಸಬೇಕು. ಸಿಡಿ ಹಗರಣದಲ್ಲಿ ಬಹಳಷ್ಟು ಷಡ್ಯಂತ್ರ ನಡೆದಿದೆ. ನನ್ನ ಬಳಿ 128 ಸಾಕ್ಷ್ಯಗಳಿವೆ, ಅವರು ಮಾರ್ಚ್ 12ರಂದು ಸಿಡಿ ಬಿಡುಗಡೆ ಮಾಡಿದ್ದರು.
ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೆಸರು ಬಳಸದೆ ಆರೋಪ ಮಾಡಿದ ರಮೇಶ್ ಜಾರಕಿಹೊಳಿ. ಚುನಾವಣೆ ಸಂದರ್ಭದಲ್ಲಿ ಸಿಡಿ ಬಿಡುಗಡೆ ಮಾಡಿ ತೇಜೋವಧೆ ಮಾಡುವ ಪಿತೂರಿ ನಡೆಯುತ್ತಿದೆ. ನನ್ನ ಹಾಗೂ ಡಿಕೆಶಿ ವಿರುದ್ಧ ಸಂಬಂಧ ಹಳಸಲು ಆ ಶಾಸಕಿ ಕಾರಣ ಎಂದು ಸುದ್ದಿಗೋಷ್ಟಿಯಲ್ಲಿ ಹೇಳಿದರು.
ಸಿಡಿ ಹಗರಣದಲ್ಲಿ ಕಾಂಗ್ರೆಸ್ನ ದೊಡ್ಡ ದೊಡ್ಡ ನಾಯಕರಿದ್ದಾರೆ. ನನ್ನ ಬಳಿ 20ಕ್ಕೂ ಹೆಚ್ಚು ಆಡಿಯೋ ದಾಖಲೆಗಳಿವೆ. ನನ್ನ ಮೊಬೈಲ್ನಲ್ಲಿ ಹಲವಾರು ನಾಯಕ ಅಕ್ರಮಗಳ ಬಗ್ಗೆ ದಾಖಲೆಗಳಿವೆ. ಒಂದು ಆಡಿಯೋದಲ್ಲಿ ಡಿಕೆ ಶಿವಕುಮಾರ್ ನನ್ನ ಬಳಿ ದುಬೈ ಲಂಡನ್ನಲ್ಲಿ ಮನೆಗಳಿವೆ. ಸಾವಿರಾರು ಕೋಟಿ ಹಣವಿದೆ ಎಂದು ಹೇಳಿದ್ದಾರೆ. ಆಡಿಯೋ ಕೂಡ ನನ್ನ ಬಳಿ ಇದೆ ಎಂದು ಹೇಳಿದರು.

ಆಡಿಯೋದಲ್ಲಿ ನನ್ನ ವಿರುದ್ಧ ಸಂಚು ಮಾಡಿರುವ ಆಡಿಯೋ ಮಾಹಿತಿ ಇದೆ. ನಾನು ಡಿಕಶಿ ಮತ್ತು ಅವರ ಕಂಪೆನಿಯನ್ನು ಬಂಧಿಸುವರೆಗೂ ವಿರಮಿಸುವುದಿಲ್ಲ. ಬೆಂಗಳೂರಿನ ಶಾಂತಿ ನಗರ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿಯಲ್ಲಿ 10,000 ಕೋಟಿ ಅಕ್ರಮ ಆಗಿದೆ. ಡಿಕೆಶಿ, ಸಿಡಿ ಹಗರಣದ ಆ ಹುಡುಗಿ, ನರೇಶ್, ಶ್ರವಣ್, ಮಂಡಿ ಮೊಹಲ್ಲಾದ ಮತ್ತಿಬ್ಬರ ವಿರುದ್ಧ ತನಿಖೆಯಾಗಬೇಕು ಎಂದರು.
ಇದು ನನ್ನ ಕೊನೆಯ ಚುನಾವಣೆ. ನನಗೆ ಈ ರಾಜಕಾರಣ ಸಾಕಾಗಿದೆ. ಮುಂದಿನ ಚುನಾವಣೆ ನನ್ನದು ಕೊನೆ ಚುನಾವಣೆ. ನನ್ನದು ಹಾತಾಶ ಭಾವವಲ್ಲ. ಇಲ್ಲಿ ನಾನು ಹೆದರುವ ಪ್ರಶ್ನೆಯಿಲ್ಲ ಎಂದು ಅವರು ತಿಳಿಸಿದರು.
-
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ












Click it and Unblock the Notifications