ಕರ್ನಾಟಕ: ಪ್ರತಿ ಕ್ಷೇತ್ರಕ್ಕೂ "ಗಾಂಧಿ ಜ್ಯೋತಿ' ಕಾರ್ಯಕ್ರಮ: ಡಿಕೆ ಶಿವಕುಮಾರ್
ಬೆಂಗಳೂರು, ಅಕ್ಟೋಬರ್ 02: ಸರ್ಕಾರಿ, ಖಾಸಗಿ ಶಾಲೆ-ಕಾಲೇಜುಗಳು, ಸರ್ಕಾರಿ ಕಚೇರಿಗಳು ಸೇರಿದಂತೆ ರಾಜ್ಯದೆಲ್ಲಡೆ ಮಹಾತ್ಮಾ ಗಾಂಧಿ ಜಯಂತಿ (ಅಕ್ಟೋಬರ್ 02) ಆಚರಣೆ ಮಾಡಲಾಗುತ್ತಿದೆ. ಇದೇ ರೀತಿ ಬೆಂಗಳೂರು ಕಾಂಗ್ರೆಸ್ ಕಚೇರಿಯಲ್ಲೂ ಗಾಂಧಿ ಜಯಂತಿ, ಲಾಲ್ ಬಹದ್ಧೂರ್ ಶಾಸ್ತ್ರಿಯವರ ಜಯಂತಿ ಆಚರಿಸಲಾಯಿತು. ಗಾಂಧೀಜಿಯವರ ಮಹಾನ್ ಸ್ವರೂಪ ನಮ್ಮ ದೇಶಕ್ಕೆ ಬೆಳಕಾಗಿದೆ. ನಾವೆಲ್ಲರೂ ಗಾಂಧೀಜಿಯವರನ್ನು ಸ್ಮರಿಸೋಣ, ಅವರ ಆಶಯಗಳನ್ನು ಉಳಿಸೋಣ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಕರೆ ನೀಡಿದರು. ಕಾಂಗ್ರೆಸ್ ಸಭೆಗಳ ಬಗ್ಗೆ ತಾವು ಬರೆದ ಪುಸ್ತಕವನ್ನು ಬಿಡುಗಡೆಗೊಳಿಸುವುದಾಗಿ ಡಿಸಿಎಂ ತಿಳಿಸಿದ್ದಾರೆ.
ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ರಾಷ್ಟಪಿತ ಮಹಾತ್ಮ ಗಾಂಧೀಜಿಯವರ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಇಂದು ಪವಿತ್ರ ದಿನ. ಇದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಜಿಯವರ ಜನ್ಮ ದಿನಾಚರಣೆ, ಮತ್ತು ವಿಜಯದಶಮಿಯ ಶುಭ ದಿನ ಕೂಡ ಇದೆ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮರ ಜನ್ಮದಿನ. ದುರ್ಗೆ ಎಂದರೆ ಶಕ್ತಿ, ಗಾಂಧಿ ಎಂದರೆ ಶಾಂತಿ. ಎಲ್ಲರಿಗೂ ಶಕ್ತಿ ಮತ್ತು ಶಾಂತಿ ಸಿಗಲಿ ಎಂದು ಕಾಂಗ್ರೆಸ್ ಪಕ್ಷದ ವತಿಯಿಂದ ನಾನು ಪ್ರಾರ್ಥಿಸುತ್ತೇನೆ ಎಂದರು.

"ಗಾಂಧಿ ಜ್ಯೋತಿ' ಕಾರ್ಯಕ್ರಮ
ನಮ್ಮ ದೇಶದ ಯುವಕರಿಗೆ, ವಿದ್ಯಾರ್ಥಿಗಳಿಗೆ, ಜನತೆಗೆ ಗಾಂಧೀಜಿಯವರ ತತ್ವ, ಆದರ್ಶಗಳು ಹಾಗೂ ಗಾಂಧೀಜಿಯವರಿಂದ ಈ ದೇಶಕ್ಕೆ ಏನು ಉಪಯೋಗವಾಯಿತು? ಎಂಬುದರ ಬಗ್ಗೆ ತಿಳಿಸಬೇಕಿದೆ. ಇವೆಲ್ಲವನ್ನೂ ಕೇವಲ ಪುಸ್ತಕದಲ್ಲಿ ಓದುವುದಲ್ಲದೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅವರಿಗೆ ಅರಿವು ಮೂಡಿಸಬೇಕು. ಗಾಂಧೀಜಿಯವರು ಕಾಂಗ್ರೆಸ್ ಅಧ್ಯಕ್ಷತೆ ವಹಿಸಿದ ಶತಮಾನೋತ್ಸವದ ಹಿನ್ನೆಲೆಯಲ್ಲಿ ನಮ್ಮ ಜಿ.ಸಿ. ಚಂದ್ರಶೇಖರ್ ಅವರ ನೇತೃತ್ವದಲ್ಲಿ 'ಗಾಂಧಿ ಜ್ಯೋತಿ' ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಳಾಗುತ್ತದೆ. ಅದನ್ನು ರಾಜ್ಯದ ಪ್ರತಿಯೊಂದು ಕ್ಷೇತ್ರಕ್ಕೆ ಕಳುಹಿಸಬೇಕೆಂದು ಯೋಜನೆ ರೂಪಿಸಿದ್ದೇವೆ.
ಗಾಂಧೀಜಿ ಸಭೆ, ಇಂದಿನ ಸಭೆ ಬಗ್ಗೆ ಡಿಕೆಶಿ ಪುಸ್ತಕ
ಇಂದು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನ ಸಹ ಇದ್ದು, ಅವರು ಒಬ್ಬ ಧೀಮಂತ ನಾಯಕರು, ಅವರು ಸರಳತೆ ನಮಗೆ ಎಂದೆಂದಿಗೂ ಸ್ಫೂರ್ತಿ. ಮಹಾತ್ಮ ಗಾಂಧೀಜಿಯವರು ನೂರು ವರ್ಷದ ಹಿಂದೆ ಕಾಂಗ್ರೆಸ್ ಅಧ್ಯಕ್ಷರಾಗಿ ರೆಸಲ್ಯೂಷನ್ ಮಾಡಿದ ಸಭೆ ಮತ್ತು ನಾವು ಈಗ ನಡೆಸಿದ ಸಭೆ, ಇವೆರಡನ್ನೂ ಸೇರಿಸಿ ನನ್ನ ಅನುಭವದ ಬಗ್ಗೆ ನಾನು ಒಂದು ಪುಸ್ತಕವನ್ನು ಸಹ ಬರೆದಿದ್ದೇನೆ. ಅದನ್ನು ಸಹ ಬಿಡುಗೊಡೆಗೊಳಿಸುತ್ತೇನೆ ಎಂದುತಿಳಿಸಿದರು..
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications