ಕರ್ನಾಟಕ: ಪ್ರತಿ ಕ್ಷೇತ್ರಕ್ಕೂ "ಗಾಂಧಿ ಜ್ಯೋತಿ' ಕಾರ್ಯಕ್ರಮ: ಡಿಕೆ ಶಿವಕುಮಾರ್
ಬೆಂಗಳೂರು, ಅಕ್ಟೋಬರ್ 02: ಸರ್ಕಾರಿ, ಖಾಸಗಿ ಶಾಲೆ-ಕಾಲೇಜುಗಳು, ಸರ್ಕಾರಿ ಕಚೇರಿಗಳು ಸೇರಿದಂತೆ ರಾಜ್ಯದೆಲ್ಲಡೆ ಮಹಾತ್ಮಾ ಗಾಂಧಿ ಜಯಂತಿ (ಅಕ್ಟೋಬರ್ 02) ಆಚರಣೆ ಮಾಡಲಾಗುತ್ತಿದೆ. ಇದೇ ರೀತಿ ಬೆಂಗಳೂರು ಕಾಂಗ್ರೆಸ್ ಕಚೇರಿಯಲ್ಲೂ ಗಾಂಧಿ ಜಯಂತಿ, ಲಾಲ್ ಬಹದ್ಧೂರ್ ಶಾಸ್ತ್ರಿಯವರ ಜಯಂತಿ ಆಚರಿಸಲಾಯಿತು. ಗಾಂಧೀಜಿಯವರ ಮಹಾನ್ ಸ್ವರೂಪ ನಮ್ಮ ದೇಶಕ್ಕೆ ಬೆಳಕಾಗಿದೆ. ನಾವೆಲ್ಲರೂ ಗಾಂಧೀಜಿಯವರನ್ನು ಸ್ಮರಿಸೋಣ, ಅವರ ಆಶಯಗಳನ್ನು ಉಳಿಸೋಣ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಕರೆ ನೀಡಿದರು. ಕಾಂಗ್ರೆಸ್ ಸಭೆಗಳ ಬಗ್ಗೆ ತಾವು ಬರೆದ ಪುಸ್ತಕವನ್ನು ಬಿಡುಗಡೆಗೊಳಿಸುವುದಾಗಿ ಡಿಸಿಎಂ ತಿಳಿಸಿದ್ದಾರೆ.
ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ರಾಷ್ಟಪಿತ ಮಹಾತ್ಮ ಗಾಂಧೀಜಿಯವರ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಇಂದು ಪವಿತ್ರ ದಿನ. ಇದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಜಿಯವರ ಜನ್ಮ ದಿನಾಚರಣೆ, ಮತ್ತು ವಿಜಯದಶಮಿಯ ಶುಭ ದಿನ ಕೂಡ ಇದೆ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮರ ಜನ್ಮದಿನ. ದುರ್ಗೆ ಎಂದರೆ ಶಕ್ತಿ, ಗಾಂಧಿ ಎಂದರೆ ಶಾಂತಿ. ಎಲ್ಲರಿಗೂ ಶಕ್ತಿ ಮತ್ತು ಶಾಂತಿ ಸಿಗಲಿ ಎಂದು ಕಾಂಗ್ರೆಸ್ ಪಕ್ಷದ ವತಿಯಿಂದ ನಾನು ಪ್ರಾರ್ಥಿಸುತ್ತೇನೆ ಎಂದರು.

"ಗಾಂಧಿ ಜ್ಯೋತಿ' ಕಾರ್ಯಕ್ರಮ
ನಮ್ಮ ದೇಶದ ಯುವಕರಿಗೆ, ವಿದ್ಯಾರ್ಥಿಗಳಿಗೆ, ಜನತೆಗೆ ಗಾಂಧೀಜಿಯವರ ತತ್ವ, ಆದರ್ಶಗಳು ಹಾಗೂ ಗಾಂಧೀಜಿಯವರಿಂದ ಈ ದೇಶಕ್ಕೆ ಏನು ಉಪಯೋಗವಾಯಿತು? ಎಂಬುದರ ಬಗ್ಗೆ ತಿಳಿಸಬೇಕಿದೆ. ಇವೆಲ್ಲವನ್ನೂ ಕೇವಲ ಪುಸ್ತಕದಲ್ಲಿ ಓದುವುದಲ್ಲದೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅವರಿಗೆ ಅರಿವು ಮೂಡಿಸಬೇಕು. ಗಾಂಧೀಜಿಯವರು ಕಾಂಗ್ರೆಸ್ ಅಧ್ಯಕ್ಷತೆ ವಹಿಸಿದ ಶತಮಾನೋತ್ಸವದ ಹಿನ್ನೆಲೆಯಲ್ಲಿ ನಮ್ಮ ಜಿ.ಸಿ. ಚಂದ್ರಶೇಖರ್ ಅವರ ನೇತೃತ್ವದಲ್ಲಿ 'ಗಾಂಧಿ ಜ್ಯೋತಿ' ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಳಾಗುತ್ತದೆ. ಅದನ್ನು ರಾಜ್ಯದ ಪ್ರತಿಯೊಂದು ಕ್ಷೇತ್ರಕ್ಕೆ ಕಳುಹಿಸಬೇಕೆಂದು ಯೋಜನೆ ರೂಪಿಸಿದ್ದೇವೆ.
ಗಾಂಧೀಜಿ ಸಭೆ, ಇಂದಿನ ಸಭೆ ಬಗ್ಗೆ ಡಿಕೆಶಿ ಪುಸ್ತಕ
ಇಂದು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನ ಸಹ ಇದ್ದು, ಅವರು ಒಬ್ಬ ಧೀಮಂತ ನಾಯಕರು, ಅವರು ಸರಳತೆ ನಮಗೆ ಎಂದೆಂದಿಗೂ ಸ್ಫೂರ್ತಿ. ಮಹಾತ್ಮ ಗಾಂಧೀಜಿಯವರು ನೂರು ವರ್ಷದ ಹಿಂದೆ ಕಾಂಗ್ರೆಸ್ ಅಧ್ಯಕ್ಷರಾಗಿ ರೆಸಲ್ಯೂಷನ್ ಮಾಡಿದ ಸಭೆ ಮತ್ತು ನಾವು ಈಗ ನಡೆಸಿದ ಸಭೆ, ಇವೆರಡನ್ನೂ ಸೇರಿಸಿ ನನ್ನ ಅನುಭವದ ಬಗ್ಗೆ ನಾನು ಒಂದು ಪುಸ್ತಕವನ್ನು ಸಹ ಬರೆದಿದ್ದೇನೆ. ಅದನ್ನು ಸಹ ಬಿಡುಗೊಡೆಗೊಳಿಸುತ್ತೇನೆ ಎಂದುತಿಳಿಸಿದರು..
-
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್












Click it and Unblock the Notifications