ಯೋಗೇಶ್ವರ್ ಗೆ ಸೆಡ್ಡು ಹೊಡೆಯೋಕೆ ಡಿಕೆಶಿ ನೇತೃತ್ವದಲ್ಲಿ ಕಾಂಗ್ರೆಸ್ ಸಮಾವೇಶ
ರಾಮನಗರ, ಅಕ್ಟೋಬರ್ 18: ಚನ್ನಪಟ್ಟಣ ಶಾಸಕ ಸಿ.ಪಿ ಯೋಗೇಶ್ವರ್ ಕಾಂಗ್ರೆಸ್ ಪಕ್ಷಕ್ಕೆ ವಿದಾಯ ಹೇಳಿದ ಬಳಿಕ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ನ ಶಕ್ತಿ ಪ್ರದರ್ಶನ ಮಾಡಿದರು.
ನಿನ್ನೆ(ಅ.17) ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿನ ದೊಡ್ಡಮಳೂರು ಸಮೀಪದ ಚೌಡೇಶ್ವರಿ ಕಲ್ಯಾಣ ಮಂಟಪದಲ್ಲಿ ಕಾಂಗ್ರೆಸ್ ಸಮಾವೇಶವನ್ನು ನಡೆಸಿದರು. ಶಾಸಕ ಯೋಗೇಶ್ವರ್ ಕಾಂಗ್ರೆಸ್ ತೊರೆಯುವ ಮುನ್ನವೇ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಿಗದಿಯಾಗಿತ್ತು.
ಶಾಸಕ ಯೋಗೇಶ್ವರ್ ಕಾರ್ಯಕರ್ತರ ಸಮಾವೇಶದ ಉಸ್ತುವಾರಿ ವಹಿಸಿಕೊಂಡಿದ್ದರು. ಅದರೆ ಶಾಸಕ ಸಿ.ಪಿ ಯೋಗೇಶ್ವರ್ ಕಾಂಗ್ರೆಸ್ ತೊರೆದ ಹಿನ್ನಲೆಯಲ್ಲಿ ಸಚಿವ ಡಿ.ಕೆ ಶಿವಕುಮಾರ ಸಮಾವೇಶದ ಉಸ್ತುವಾರಿಯನ್ನ ಹೆಗಲಿಗೇರಿಸಿಕೊಂಡಿದ್ದಾರೆ. ಅಲ್ಲದೇ ತಮ್ಮ ಹಿಂದಿನ ಹಾಗೂ ಸದ್ಯದ ರಾಜಕೀಯ ಬದ್ಧವೈರಿಯಾಗಿರುವ ಸಿ.ಪಿ ಯೋಗೇಶ್ವರ್ ಗೆ ತಮ್ಮ ತಾಕತ್ತು ಹಾಗೂ ಕಾಂಗ್ರೆಸ್ ಬಲ ತೋರ್ಪಡಿಸಲು ಸಮಾವೇಶ ನಡೆಸಲಾಯಿತ್ತು.

ಕಾರ್ಯಕರ್ತರ ಸಭೆಯಲ್ಲಿ ಶಾಸಕ ಸಿ.ಪಿ ಯೋಗೇಶ್ವರ್ ವಿರುದ್ಧ ಡಿ.ಕೆ. ಸಹೋದರರು ಗುಡುಗಿದರು. ಶಾಸಕ ಸಿ.ಪಿ.ಯೋಗೇಶ್ವರ್ ರವರನ್ನು ನಂಬಿ ನಾವು ಮೋಸ ಹೋಗಿದ್ದೇವೆ ಇನ್ನು ಮುಂದೆ ಹಾಗೆ ಆಗಲ್ಲ. ನಾವು ನಿಮ್ಮ ಜೊತೆ ಇರುತ್ತೇವೆ ಯಾವುದೇ ಆತಂಕ ಬೇಡ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಕಾರ್ಯಕರ್ತರಿಗೆ ಭರವಸೆ ನೀಡಿದರು.
ರಾಜ್ಯ ಸರ್ಕಾರ ಚನ್ನಪಟ್ಟಣ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ನೀಡಿಲ್ಲ ಎಂದು ಸುಳ್ಳು ಆರೋಪ ಮಾಡುವ ಯೋಗೇಶ್ವರ್ ಕೆಲವರನ್ನು ಎತ್ತಿಕಟ್ಟಿ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಕಚೇರಿ ನಿರ್ಮಾಣ ಮಾಡಲು ಅಡ್ಡಿಪಡಿಸಿದರು. ಕೆರೆಗಳಿಗೆ ಭಾಗೀನ ಬಿಡುವ ಶಾಸಕರು ನೀರಾವರಿ ಯೋಜನೆಗಳಿಗೆ ಅನುದಾನ ನೀಡಿದ ಮುಖ್ಯಮಂತ್ರಿಗಳನ್ನು ನೆಪ ಮಾತ್ರಕ್ಕೂ ಆಹ್ವಾನಿಸಲಿಲ್ಲ ಎಂದು ಆರೋಪಿಸಿದರು.
ಚನ್ನಪಟ್ಟಣದಲ್ಲಿ ಇಂದಿನಿಂದ ಶಾಸಕರಿಲ್ಲ. ನಾನೇ ಈ ಕ್ಷೇತ್ರದ ಶಾಸಕ ಕನಕಪುರ ಕ್ಷೇತ್ರದ ಜನತೆಗಿಂತ ಚನ್ನಪಟ್ಟಣ ಕ್ಷೇತ್ರದ ಜನತೆ ಮೇಲೆ ನನಗೆ ಪ್ರೀತಿ ಜಾಸ್ತಿ. ಇಲ್ಲಿನ ಕಾರ್ಯಕರ್ತರನ್ನು ಕಾಪಾಡುವ ಕೆಲಸ ನನ್ನದು, 2018 ವಿಧಾನಸಭಾ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರಕ್ಕೆ ಕಾಂಗ್ರೇಸ್ ಶಾಸಕನ್ನು ಗೆಲ್ಲಿಸಲು ಹೋರಾಟ ಮಾಡುತ್ತೆವೆ ಎಂದು ಅಭಯ ನೀಡಿದರು.

ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದಿಲ್ಲ. ಚನ್ನಪಟ್ಟಣ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಖಚಿತ. ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ನಡುವೆ ತ್ರಿಕೋನ ಸ್ಪರ್ಧೆ ಏರ್ಪಡುತ್ತೆ. ಯೋಗೇಶ್ವರ್ ಯಾವ ಪಕ್ಷಕ್ಕೆ ಬೇಕಾದ್ರೂ ಹೋಗಲಿ ಇನ್ನು ದಳದವರಿಗೆ ಸಿಪಿವೈ ಬಗ್ಗೆ ಗೊತ್ತು ಅದಕ್ಕೆ ಹತ್ತಿರ ಸೇರಿಸಿಕೊಳ್ಳುತ್ತಿಲ್ಲ. ಇನ್ನುಳಿದಿರುವ ಬಿಜೆಪಿಯವರಿಗೆ ಮತ್ತೆ ಅನುಭವವಾಗಲಿದೆ ಎಂದರು.
ನಿಮಗೆ ಮಾನ ಮರ್ಯಾದೆ ಇದ್ರೆ ನಿಮ್ಮ ಸಹೋದರ ಸಿ.ಪಿ.ರಾಜೇಶ್ ರನ್ನ ಜಿಪಂ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಸಿ. ಕೊಟ್ಟ ಮಾತನ್ನ ಉಳಿಸಿಕೊಳ್ಳಿ ಎಂದು ಸಿಪಿವೈಗೆ ಸವಾಲೆಸದರು.
ಶಾಸಕ ಸಿ.ಪಿ ಯೋಗೇಶ್ವರ್ ತಾವು ಕಾಂಗ್ರೆಸ್ ತೊರೆದ ಕಾರಣ ತಮ್ಮ ಹೆಸರು ಪೋಟೋವನ್ನು ಬ್ಯಾನರ್ಗಳಲ್ಲಿ ಬಳಸದಂತೆ ತಿಳಿಸಿದರು. ಅದರೆ ಕೆಲ ಬ್ಯಾನರ್ ಗಳಲ್ಲಿ ಸಿ.ಪಿ ಯೋಗೇಶ್ವರ್ ಪೋಟೋವನ್ನು ಬಳಕೆ ಮಾಡಲಾಗಿದೆ. ಅಲ್ಲದೇ ಮುಂದಿನ 2018 ರ ಮುಖ್ಯಮಂತ್ರಿ ಇಂಧನ ಸಚಿವ ಡಿ.ಕೆ ಶಿವಕುಮಾರ್ ಎನ್ನುವ ಕೆಲವು ಬ್ಯಾನರ್ಗಳು ಚನ್ನಪಟ್ಟಣದಾದ್ಯಂತ ರಾರಾಜಿಸುತ್ತಿದ್ದವು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications