ಡಿಕೆಶಿ ಅಪ್ಪಿಕೊಂಡು ಸ್ವಾಗತಿಸಿದ ಕೆ. ಸಿ. ವೇಣುಗೋಪಾಲ್
Recommended Video
ನವದೆಹಲಿ, ಅಕ್ಟೋಬರ್ 24 : ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಭೇಟಿ ಮಾಡಿದರು. ತಿಹಾರ್ ಜೈಲಿನಿಂದ ಡಿ. ಕೆ. ಶಿವಕುಮಾರ್ ಬುಧವಾರ ರಾತ್ರಿ ಬಿಡುಗಡೆಯಾಗಿದ್ದಾರೆ.
ಗುರುವಾರ ಮಧ್ಯಾಹ್ನ ಡಿ. ಕೆ. ಶಿವಕುಮಾರ್ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿಯೂ ಆಗಿರುವ ಕೆ. ಸಿ. ವೇಣುಗೋಪಾಲ್ ಭೇಟಿ ಮಾಡಿದರು. ಡಿ. ಕೆ. ಶಿವಕುಮಾರ್ರನ್ನು ಅಪ್ಪಿಕೊಂಡು ವೇಣುಗೋಪಾಲ್ ಸ್ವಾಗತಿಸಿದರು. ಸಂಸದ ಡಿ. ಕೆ. ಸುರೇಶ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಡಿ. ಕೆ. ಶಿವಕುಮಾರ್ ಭೇಟಿ ಬಗ್ಗೆ ಕೆ. ಸಿ. ವೇಣುಗೋಪಾಲ್ ಟ್ವೀಟ್ ಮಾಡಿದ್ದಾರೆ. "ಡಿ. ಕೆ. ಶಿವಕುಮಾರ್ ಭೇಟಿ ಮಾಡಿ ಸಂಸತವಾಯಿತು. ಬಿಜೆಪಿಯ ದ್ವೇಷ ರಾಜಕಾರಣ ಪ್ರಜಾಪ್ರಭುತ್ವ ಉಳಿಸುವ ನಮ್ಮ ಹೋರಾಟವನ್ನು ಹತ್ತಿಕ್ಕಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ.

ಕೆ. ಸಿ. ವೇಣುಗೋಪಾಲ್ ಎಐಸಿಸಿ ಕಚೇರಿಯಲ್ಲಿದ್ದರು. ಅಲ್ಲಿಯೇ ಡಿ. ಕೆ. ಶಿವಕುಮಾರ್ ಭೇಟಿಯಾಗಿ ಮಾತುಕತೆ ನಡೆಸಿದರು. ತಿಹಾರ್ ಜೈಲಿನಿಂದ ಬಿಡುಗಡೆಯಾದ ಡಿ. ಕೆ. ಶಿವಕುಮಾರ್ ಇನ್ನೂ ದೆಹಲಿಯಲ್ಲಿಯೇ ಇದ್ದು, ರಾಜ್ಯಕ್ಕೆ ಯಾವಾಗ ವಾಪಸ್ ಆಗಲಿದ್ದಾರೆ? ಎಂಬುದು ತಿಳಿದುಬಂದಿಲ್ಲ.
It was a moment of joy when Shri. @DKShivakumar visited me today. BJP’s vendetta politics can never defeat us in our fight to save democracy. pic.twitter.com/fEBqbEwHBs
— K C Venugopal (@kcvenugopalmp) October 24, 2019
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಡಿ. ಕೆ. ಶಿವಕುಮಾರ್ ಬಂಧಿಸಿತ್ತು. 50 ದಿನಗಳ ಜೈಲುವಾಸದ ಬಳಿಕ ಬುಧವಾರ ಅವರು ಷರತ್ತು ಬದ್ಧ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು.
ವಕೀಲರ ಜೊತೆ ಮುಂದಿನ ನಡೆ ಬಗ್ಗೆ ಚರ್ಚಿಸಲು ಡಿ. ಕೆ. ಶಿವಕುಮಾರ್ ದೆಹಲಿಯಲ್ಲಿಯೇ ಉಳಿದಿದ್ದಾರೆ. ಇಂದು ಸಂಜೆ ಅಥವ ಶುಕ್ರವಾರ ಅವರು ಬೆಂಗಳೂರಿಗೆ ವಾಪಸ್ ಆಗುವ ಸಾಧ್ಯತೆ ಇದೆ.












Click it and Unblock the Notifications