Kichcha Sudeep; ಸುದೀಪ್ ಭೇಟಿ ಮಾಡಿ ಒಟ್ಟಿಗೆ ಭೋಜನ ಸವಿದ ಡಿಕೆಶಿ!
ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಕನ್ನಡ ನಟ ಕಿಚ್ಚ ಸುದೀಪ್ ಭೇಟಿಯಾಗಿ ಮಾತುಕತೆ ನಡೆಸಿದರು.
ಬೆಂಗಳೂರು, ಫೆಬ್ರವರಿ 03; ಕರ್ನಾಟಕದಲ್ಲಿ ಚುನಾವಣೆಯ ಕಾವು ನಿಧಾನವಾಗಿ ಏರುತ್ತಿದೆ. ವಿವಿಧ ಪಕ್ಷಗಳು ಪ್ರಚಾರದ ತಂತ್ರಗಳನ್ನು ರೂಪಿಸುತ್ತಿವೆ. ಸಿನಿಮಾ ನಟರನ್ನು ಪ್ರಚಾರಕ್ಕೆ ಕರೆತರಲು ಪ್ರಯತ್ನವನ್ನು ನಡೆಸಿವೆ.
ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ನಟ ಕಿಚ್ಚ ಸುದೀಪ್ ಭೇಟಿ ಮಾಡಿದರು. ಗುರುವಾರ ರಾತ್ರಿ ಜೆ. ಪಿ. ನಗರದಲ್ಲಿ ನಿವಾಸಕ್ಕೆ ಅವರು ಭೇಟಿ ನೀಡಿದ್ದರು.
ಕಿಚ್ಚ ಸುದೀಪ್ ಜೊತೆ ಭೋಜನ ಸವಿದ ಡಿ. ಕೆ. ಶಿವಕುಮಾರ್ ರಾಜಕೀಯ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಚುನಾವಣಾ ಪ್ರಚಾರಕ್ಕೆ ಬರುವಂತೆ ಆಹ್ವಾನ ನೀಡಿದರು.

ರಾಜ್ಯ ರಾಜಕೀಯ ವಲಯದಲ್ಲಿ ಈ ಭೇಟಿ ಕುತೂಹಲಕ್ಕೆ ಕಾರಣವಾಗಿದೆ. ಕಿಚ್ಚ ಸುದೀಪ್ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಈ ಹಿನ್ನಲೆಯಲ್ಲಿ ಡಿ. ಕೆ. ಶಿವಕುಮಾರ್ ಭೇಟಿಯಾಗಿರುವುದು ಚರ್ಚೆಗೆ ಕಾರಣವಾಗಿದೆ.
ಸುದೀಪ್ ಭೇಟಿ ವೇಳೆ ಡಿ. ಕೆ. ಶಿವಕುಮಾರ್, ಪಕ್ಷದ ಚುನಾವಣಾ ಪ್ರಚಾರ ಕಾರ್ಯಕ್ರಮಗಳಿಗೆ ಸುದೀಪ್ ಆಹ್ವಾನಿಸಿದ್ದಾರೆ. ಮುಂದಿನ ದಿನಗಳಲ್ಲಿ ಪಕ್ಷದ ಸಾಲು-ಸಾಲು ಚುನಾವಣಾ ಪ್ರಚಾರ ಕಾರ್ಯಕ್ರಮಗಳಿವೆ. ಹೀಗಾಗಿ ಪ್ರಚಾರ ಕಾರ್ಯಗಳಲ್ಲಿ ಭಾಗಿಯಾಗುವಂತೆ ಮನವಿ ಮಾಡಿದ್ದಾರೆ.
ನಟಿ ರಮ್ಯಾ ಮತ್ತು ಸಂಸದ ರಾಹುಲ್ ಗಾಂಧಿ ಮೂಲಕ ಸುದೀಪ್ರನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆತರಲಾಗುತ್ತದೆ ಎಂಬ ಸುದ್ದಿಗಳು ಹಬ್ಬಿದ್ದವು. ವಾಲ್ಮೀಕಿ ಸಮುದಾಯಕ್ಕೆ ಕಿಚ್ಚ ಸುದೀಪ್ ಸೇರಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ಸಮುದಾಯದ ಹಲವು ಜನರಿದ್ದಾರೆ. ಆದ್ದರಿಂದ ಕಾಂಗ್ರೆಸ್ ಈ ಮತಗಳ ಮೇಲೆ ಕಣ್ಣಿಟ್ಟಿದೆ.
ಕಿಚ್ಚ ಸುದೀಪ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ಆಪ್ತರು. ಮುಖ್ಯಮಂತ್ರಿಯಾಗಿ ಅವರು ಆಯ್ಕೆಯಾದಾಗ ಟ್ವೀಟ್ ಮಾಡಿ ಶುಭಾಶಯ ಸಲ್ಲಿಸಿದ್ದರು. ಬೇರೆ ಬೇರೆ ಪಕ್ಷಗಳಲ್ಲಿ ಸುದೀಪ್ಗೆ ಹಲವು ಸ್ನೇಹಿತರು ಇದ್ದಾರೆ.
ಪಕ್ಷಕ್ಕೆ ಬಂದರೆ ಸ್ವಾಗತ; ಕಿಚ್ಚ ಸುದೀಪ್, ಡಿ. ಕೆ. ಶಿವಕುಮಾರ್ ಭೇಟಿ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, "ಸಿನಿಮಾ ನಟರು ರಾಜಕೀಯದಿಂದ ದೂರ ಉಳಿದಿರುತ್ತಾರೆ. ಪಕ್ಷದ ತತ್ವ ಸಿದ್ಧಾಂತ ಒಪ್ಪಿ ಸುದೀಪ್ ಕಾಂಗ್ರೆಸ್ ಪಕ್ಷ ಸೇರುವುದಾದರೆ ಸ್ವಾಗತ" ಎಂದು ಹೇಳಿದರು.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
GBA: ನಗರದಲ್ಲಿ ಮತದಾರರ ಪಟ್ಟಿ ಮ್ಯಾಪಿಂಗ್ ಕಾರ್ಯ ಇನ್ನಷ್ಟು ಚುರುಕು -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್












Click it and Unblock the Notifications