ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಣ ಪತ್ತೆ ಕೇಸು : ಹೈಕೋರ್ಟ್ ಮೊರೆ ಹೋದ ಡಿ.ಕೆ.ಶಿವಕುಮಾರ್

|
Google Oneindia Kannada News

ಬೆಂಗಳೂರು, ಫೆಬ್ರವರಿ 04 : ಜಲಸಂನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದಾರೆ. ತಮ್ಮ ವಿರುದ್ಧ ಜಾರಿ ನಿರ್ದೇಶನಾಲಯ ದಾಖಲಿಸಿರುವ ಇಸಿಐಆರ್ ರದ್ದುಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.

ಜಾರಿ ನಿರ್ದೇಶನಾಲಯ ಡಿ.ಕೆ.ಶಿವಕುಮಾರ್ ವಿರುದ್ಧ Enforcement Case Information Report (ECIR) ದಾಖಲಿಸಿದೆ. ಫೆ.8ರಂದು ವಿಚಾರಣೆಗೆ ಹಾಜರಾಗುವಂತೆ ಡಿ.ಕೆ.ಶಿವಕುಮಾರ್ ಅವರಿಗೆ ನೋಟಿಸ್ ನೀಡಲಾಗಿದೆ.

ಬಂಧನ ಭೀತಿ ಇಲ್ಲ : ವರಸೆ ಬದಲಿಸಿದ ಡಿ.ಕೆ.ಶಿವಕುಮಾರ್ಬಂಧನ ಭೀತಿ ಇಲ್ಲ : ವರಸೆ ಬದಲಿಸಿದ ಡಿ.ಕೆ.ಶಿವಕುಮಾರ್

DK Shivakumar moves High Court seeks ECIR quash

ಬಂಧನದ ಭೀತಿ ಹಿನ್ನಲೆಯಲ್ಲಿ ಸೋಮವಾರ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಜಾರಿ ನಿರ್ದೇಶನಾಲಯ ದಾಖಲು ಮಾಡಿರುವ ಇಸಿಐಆರ್ ರದ್ದುಗೊಳಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

ಇಡಿಯಿಂದ ನೊಟೀಸ್ ಬಂದಿಲ್ಲ, ಬೇರೆ ನೊಟೀಸ್‌ ಬಂದಿದೆ: ಡಿಕೆಶಿಇಡಿಯಿಂದ ನೊಟೀಸ್ ಬಂದಿಲ್ಲ, ಬೇರೆ ನೊಟೀಸ್‌ ಬಂದಿದೆ: ಡಿಕೆಶಿ

ಏನಿದು ಪ್ರಕರಣ : ಡಿ.ಕೆ.ಶಿವಕುಮಾರ್ ಅವರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ದಾಳಿಯ ಬಳಿಕ ಜಾರಿ ನಿರ್ದೇಶನಾಲಯಕ್ಕೆ ವರದಿ ಸಲ್ಲಿಸಿದ್ದರು. ಈ ವರದಿಯನ್ನು ಆಧಾರವಾಗಿ ಇಟ್ಟುಕೊಂಡು ಇಸಿಐಆರ್ ದಾಖಲು ಮಾಡಲಾಗಿದೆ.

ಸಂಕಷ್ಟ ನಿವಾರಣೆಗೆ ಮೂಕಾಂಬಿಕೆಗೆ ಮೊರೆ ಹೋದ ಸಚಿವ ಡಿಕೆ ಶಿವಕುಮಾರ್ಸಂಕಷ್ಟ ನಿವಾರಣೆಗೆ ಮೂಕಾಂಬಿಕೆಗೆ ಮೊರೆ ಹೋದ ಸಚಿವ ಡಿಕೆ ಶಿವಕುಮಾರ್

ಆದಾಯ ತೆರಿಗೆ ಇಲಾಖೆ ದಾಳಿಯ ವೇಳೆ ದೆಹಲಿಯ ಡಿ.ಕೆ.ಶಿವಕುಮಾರ್ ಅವರ ಫ್ಲ್ಯಾಟ್‌ನಲ್ಲಿ 8 ಕೋಟಿ ದಾಖಲೆ ಇಲ್ಲದ ಹಣ ಸಿಕ್ಕಿತ್ತು. ಖರೀದಿ ಮಾಡಿದ ಫ್ಲ್ಯಾಟ್‌ಗೆ ಸಹ ದಾಖಲೆ ಇಲ್ಲದ 4 ಕೋಟಿ ಹಣ ನೀಡಲಾಗಿದೆ ಎಂಬುದು ಆರೋಪವಾಗಿದೆ.

ದಾಳಿಯ ವೇಳೆ ಸಿಕ್ಕ 8 ಕೋಟಿ ಹಣ ನನಗೆ ಕೃಷಿ ಮೂಲದಿಂದ ಬಂದಿದ್ದು ಎಂದು ಡಿ.ಕೆ.ಶಿವಕುಮಾರ್ ಇಡಿ ವಿಚಾರಣೆ ವೇಳೆ ಹೇಳಿದ್ದಾರೆ. ಇಡಿ ಕೇಳಿರುವ ಪ್ರಶ್ನೆಗಳಿಗೆ ಅವರು ಸರಿಯಾದ ಉತ್ತರ ನೀಡಿಲ್ಲ. ಆದ್ದರಿಂದ, ಫೆ.8ರಂದು ಪುನಃ ವಿಚಾರಣೆಗೆ ಆಗಮಿಸಬೇಕು ಎಂದು ನೋಟಿಸ್ ನೀಡಲಾಗಿದೆ.

English summary
Karnataka water resources minister D.K.Shivakumar moved the High Court of Karnataka prayed for quashing of Enforcement Case Information Report (ECIR) field against him.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X