NPS ನಿಂದ OPS ಅನುಷ್ಠಾನದ ಕುರಿತು ಮಹತ್ವ ಮಾಹಿತಿ ನೀಡಿದ ಡಿ ಕೆ ಶಿವಕುಮಾರ್

ಬೆಂಗಳೂರು, ಫೆಬ್ರವರಿ 20: ಓಪಿಎಸ್ (ಓಲ್ಡ್ ಪೆನ್ಷನ್ ಸ್ಕೀಮ್) ಜಾರಿ ಸಂಬಂಧ ಅಂಜುಮ್ ಪರ್ವೇಜ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿದ್ದು, ಆ ಸಮಿತಿಯ ವರದಿಯನ್ನು ಪರಿಶೀಲಿಸಿ ಅನುಷ್ಠಾನಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭರವಸೆ ನೀಡಿದರು. ಬೆಂಗಳೂರು ಅರಮನೆ ಮೈದಾನದಲ್ಲಿ ಗುರುವಾರ ಏರ್ಪಡಿಸಿದ್ದ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ ಸಮಾವೇಶದಲ್ಲಿ ಶಿವಕುಮಾರ್ ಅವರು ಗುರುವಾರ ಮಾತನಾಡಿ, ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಓಪಿಎಸ್ ಬಗ್ಗೆ ನಾವು ಭರವಸೆ ನೀಡಿದ್ದೆವು. ಅದರಂತೆ ಅದನ್ನು ಜಾರಿಗೆ ತರಲು ಬದ್ದರಾಗಿದ್ದೇವೆ. ನೀವು ಬಿಟ್ಟರೂ ಈ ವಿಚಾರವನ್ನು ನಾವು ಬಿಡುವುದಿಲ್ಲ. ಆದರೆ ಸ್ವಲ್ಪ ತಾಳ್ಮೆಯಿರಲಿ ಎಂದು ತಿಳಿಸಿದರು.

ಸರ್ಕಾರದ ರಥ ಎಳೆಯುವವರು ಸರ್ಕಾರಿ ನೌಕರರು. ನೀವು ಇಲ್ಲದಿದ್ದರೆ ಸರ್ಕಾರದ ಚಕ್ರ ಮುಂದಕ್ಕೆ ಸಾಗುವುದಿಲ್ಲ. ನಿಮ್ಮ ಸಂಘ ರಚನಾತ್ಮಕವಾಗಿ ಕೆಲಸ ಮಾಡುತ್ತಿದೆ. ಸರ್ಕಾರಿ ಕೆಲಸ ಕೇವಲ ಹುದ್ದೆಯಲ್ಲ. ಅದೊಂದು ಜವಾಬ್ದಾರಿ. ನೀವು ಹೃದಯ ಶ್ರೀಮಂತಿಕೆಯಿಂದ ಜವಾಬ್ದಾರಿ ಸರಿಯಾಗಿ ನಿಭಾಯಿಸಬೇಕು ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ಹೇಳಿದರು.

DK Shivakumar Necessary Steps From The Government For Implementation Of OPS

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಕಾರ್ಯಕ್ರಮಕ್ಕೆ ಆಗಮಿಸಲು ಇಚ್ಛೆ ಇತ್ತು. ಆದರೆ ಅವರಿಗೆ ವೈದ್ಯರು ವಿಶ್ರಾಂತಿ ಹೇಳಿದ್ದಾರೆ. ನಮ್ಮ ಸರ್ಕಾರದ‌ ಮೇಲೆ ಎಲ್ಲಾ ವರ್ಗದ ಜನರ ನಂಬಿಕೆ ಇಟ್ಟಿದ್ದಾರೆ. ಜಾತಿ, ಧರ್ಮದ ತಾರತಮ್ಯ ಮೇಲೆ ನನಗೆ ನಂಬಿಕೆ ಇಲ್ಲ. ಎಲ್ಲಾ ಜಾತಿ, ಸಮುದಾಯಗಳು ಬೇಕು. ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದ ವಿಶ್ವಕ್ಕೆ ಶಾಂತಿ ಸಿಗಲಿ ಎಂದು ನಮ್ಮ ಗುರುಗಳು ಹೇಳಿದ್ದಾರೆ. ಪ್ರತಿಯೊಬ್ಬರೂ ತಮ್ಮ ಧರ್ಮದ ಮೇಲೆ ನಂಬಿಕೆ ಇಟ್ಟುಕೊಂಡಿರುತ್ತಾರೆ. ಅವರ ಆಚಾರ ವಿಚಾರ ಅವರದು. ನಾವು ಅದರಲ್ಲಿ ಯಾಕೆ ಮೂಗು ತೂರಿಸಬೇಕು ಎಂದು ಡಿ ಕೆ ಶಿವಕುಮಾರ್‌ ಅವರು ತಿಳಿಸಿದರು.

ಜನಪ್ರತಿನಿಧಿಗಳು ಹಾಗೂ ಸರ್ಕಾರಿ ನೌಕರರೆಲ್ಲರೂ ಒಂದೇ. ನಾವು ನಿಮ್ಮನ್ನು ಒಟ್ಟಾಗಿ ತೆಗೆದುಕೊಂಡು ಹೋಗುತ್ತೇವೆ. ನಿಮ್ಮ ಬೇಡಿಕೆಯನ್ನು ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಸೇರಿಸಿದ್ದೇವೆ. ನಾವು ರಾಜ್ಯದ ನಾಲ್ಕು ಕೋಟಿ ಜನರಿಗೆ ಸಹಾಯ ಮಾಡುವ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ. ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನರಿಗೆ ಆಸರೆಯಾಗಲು ಪಂಚ ಗ್ಯಾರಂಟಿ ಘೋಷಣೆ ಮಾಡಿದ್ದೇವೆ. ಸರ್ಕಾರ ಹಂತಹಂತವಾಗಿ ಸಂಪನ್ಮೂಲ ಕ್ರೂಢೀಕರಣ ಆದಂತೆ ನಾವು ನಮ್ಮ ಯೋಜನೆಗಳ ಫಲಾನುಭವಿಗಳಿಗೆ ಹಣ ನೀಡುತ್ತೇವೆ.‌ ನಾವು ಯಾರಿಗೂ ಗೃಹಲಕ್ಷ್ಮೀ ಹಣ ತಪ್ಪಿಸುವ ಪ್ರಮೇಯವೇ ಇಲ್ಲ ಎಂದು ಭರವಸೆ ನೀಡಿದರು.

ದೇಶಕ್ಕೆ ಹಾಗೂ ಸಮಾಜಕ್ಕೆ ಸೇವೆ ಸಲ್ಲಿಸುತ್ತಿದ್ದೇವೆ ಎಂಬ ಭಾವನೆ ನಿಮ್ಮಲ್ಲಿರಬೇಕು. ಪರೋಪಕಾರಾಯ ಫಲಂತಿ ವೃಕ್ಷಾಃ ಪರೋಪಕಾರಾಯ ವಹಂತಿ ನದ್ಯಃ, ಪರೋಪಕಾರಾಯ ದುಹಂತಿ ಗಾವಃ, ಪರೋಪಕಾರಾರ್ಥಮ್ ಇದಂ ಶರೀರಮ್. ಅಂದರೆ ಪ್ರಕೃತಿಯಲ್ಲಿರುವ ಮರ, ನದಿ, ಹಸು ಪರೋಪಕಾರಕ್ಕಾಗಿಯೇ ಇದ್ದು, ನಮ್ಮ ದೇಹ ಕೂಡ ಬೇರೆಯವರ ಉಪಕಾರಕ್ಕೆ ಮೀಸಲಾಗಿರಬೇಕು ಎಂದರ್ಥ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+