Karnataka CM: ಸಿಎಂ ಕುರ್ಚಿ ಗಿಟ್ಟಿಸಿಕೊಳ್ಳಲು ಹೈಕಮಾಂಡ್ ಮೇಲೆ ಡಿ.ಕೆ.ಶಿವಕುಮಾರ್ ಹೊಸ ಅಸ್ತ್ರ
ರಾಜ್ಯ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರವು ಬೂದಿಮುಚ್ಚಿದ ಕೆಂಡದಂತೆ ಇದೆ. ಇತ್ತೀಚಿಗಷ್ಟೇ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರ ದೆಹಲಿ ಭೇಟಿಯು ಭಾರೀ ಕುತೂಹಲ ಮೂಡಿಸಿದ್ದು, ಸಿಎಂ ಕುರ್ಚಿ ಗಿಟ್ಟಿಸಿಕೊಳ್ಳಲು ಡಿ.ಕೆ.ಶಿವಕುಮಾರ್ ಅವರು ಹೊಸ ಅಸ್ತ್ರ ಪ್ರಯೋಗಿಸಲು ಮುಂದಾಗಿದ್ದಾರೆ. ಅತ್ತ ಐದು ವರ್ಷವೂ ನಾನೇ ಸಿಎಂ ಎಂದು ಸಿದ್ದರಾಮಯ್ಯ ಘೋಷಣೆ ಮಾಡುತ್ತಿರುವ ಹಿನ್ನೆಲೆ ಡಿಕೆಶಿ ತನ್ನದೇ ಆದ ತಂತ್ರ ರೂಪಿಸಿ, ಹೈಕಮಾಂಡ್ಗೆ ತನ್ನ ಪವರ್ ತೋರಿಸಲು ಮುಂದಾಗಿದ್ದಾರೆ.
ಹೌದು, ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ನಿನ್ನೆ, ಮೊನ್ನೆಯದಲ್ಲ. ಈ ಸರ್ಕಾರ ರಚನೆಯಾದಾಗಿನಿಂದಲೂ ಅಧಿಕಾರದ ಹಂಚಿಕೆ ಗುಸುಗುಸು ಇದ್ದೇ ಇದೆ. ಈ ಬಾರಿಯ ಕಾಂಗ್ರೆಸ್ ಸರ್ಕಾರದಲ್ಲಿ ಇಬ್ಬರು ಮುಖ್ಯಮಂತ್ರಿಗಳಾಗಿ ಅಧಿಕಾರ ಪಡೆಯಲಿದ್ದಾರೆ ಎಂಬ ಚರ್ಚೆಗಳು ನಡೆಯುತ್ತಲೇ ಇವೆ. ಆಗಾಗ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರ ನಡುವೆ ಅಧಿಕಾರದ ಒಪ್ಪಂದವೂ ನಡೆದಿದೆ ಎಂದೆಲ್ಲ ಸುದ್ದಿ ಸದ್ದು ಮಾಡಿತ್ತು. ಆದರೆ ಹೈಕಮಾಂಡ್ ಈ ವಿಚಾರದಲ್ಲಿ ಸೈಲೆಂಟಾಗಿ ಇರುವಂತೆ ಎಲ್ಲರ ಬಾಯಿಗೆ ಬೀಗ ಹಾಕಿತ್ತು.

ಇತ್ತೀಚೆಗೆ ಸೆಪ್ಟೆಂಬರ್ ಕ್ರಾಂತಿ, ನವೆಂಬರ್ ಕ್ರಾಂತಿ ಎಂದೆಲ್ಲ ಚರ್ಚೆಗಳು ನಡೆಯುತ್ತಿವೆ. ಸೆಪ್ಟೆಂಬರ್ ಮುಗಿಯಿತು, ಯಾವುದೇ ಕ್ರಾಂತಿಯಾಗಲಿಲ್ಲ. ಈಗ ನವೆಂಬರ್ ಕ್ರಾಂತಿ ಮುನ್ನೆಲೆಯಲ್ಲಿದೆ. ಇದಕ್ಕೆ ಪುಷ್ಟಿ ನೀಡುವಂತೆ ರಾಜ್ಯ ಕಾಂಗ್ರೆಸ್ನಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಇತ್ತೀಚೆಗೆ ಹೈಕಮಾಂಡ್ ನಾಯಕರನ್ನು ಭೇಟಿಯಾಗಿರುವ ಡಿಕೆಶಿ, ಸಿದ್ದರಾಮಯ್ಯ ಇದೇ ವಿಚಾರವಾಗಿ ಚರ್ಚೆ ನಡೆಸಿಬಂದಿದ್ದಾರೆ. ಆದರೆ ಡಿಕೆಶಿ ಅವರ ಕನಸಿಗೆ ಹೈಕಮಾಂಡ್ ರೆಡ್ಸಿಗ್ನಲ್ ನೀಡಿದೆ ಎನ್ನುವುದು ರಾಜಕೀಯ ವಲಯಲ್ಲಿದ ಚರ್ಚೆ.
ಈ ಹಿನ್ನೆಲೆ ಕನಕಪುರದ ಬಂಡೆ ಹೈಕಮಾಂಡ್ಗೆ ತನ್ನ ಶಕ್ತಿ ಪ್ರದರ್ಶಿಸಲು ಹೊಸ ಮಾಸ್ಟರ್ಪ್ಲ್ಯಾನ್ ಮಾಡಿದ್ದಾರಂತೆ. ಕಾಂಗ್ರೆಸ್ ಸರ್ಕಾರವು ಈಗಾಗಲೇ ತನ್ನ ಅಧಿಕಾರದ ಅರ್ಧ ಅವಧಿಯನ್ನು ಪೂರೈಸಿದೆ. ಇನ್ನು ಎರಡೂವರೆ ವರ್ಷವಷ್ಟೇ ಬಾಕಿ ಇದೆ. ಈ ಹಿನ್ನೆಲೆ ಡಿ.ಕೆ.ಶಿವಕುಮಾರ್ ಅವರ ಬಣದ ಶಾಸಕರು ದೆಹಲಿಗೆ ತೆರಳಿ, ಹೈಕಮಾಂಡ್ ಭೇಟಿಗೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.
ವರದಿಗಳ ಪ್ರಕಾರ ಡಿ.ಕೆ.ಶಿವಕುಮಾರ್ ಬಣದ ಹತ್ತು ಕಾಂಗ್ರೆಸ್ ಶಾಸಕರು ಈಗಾಗಲೇ ದೆಹಲಿಗೆ ತೆರಳಿದ್ದಾರೆ. ಡಿ.ಕೆ.ಶಿವಕುಮಾರ್ ಅವರನ್ನು ತಕ್ಷಣವೇ ಮುಖ್ಯಮಂತ್ರಿಯಾಗಿ ಘೋಷಿಸಬೇಕು ಎಂದು ಹೈಕಮಾಂಡ್ ಮೇಲೆ ಒತ್ತಡ ಹೇರಲು ಮುಂದಾಗಿದ್ದಾರೆ ಎನ್ನಲಾಗಿದೆ. ಇತ್ತೀಚಿನ ದೆಹಲಿ ಭೇಟಿಯು ಡಿಕೆಶಿಗೆ ಯಶಸ್ವಿಯಾಗದ ಹಿನ್ನೆಲೆ ಇದೀಗ ಶಾಸಕರ ಮೂಲಕ ತಮ್ಮ ಬೇಡಿಕೆ ಈಡೇರಿಸಿಕೊಳ್ಳಲು ಅವರು ತಂತ್ರ ರೂಪಿಸಿದ್ದಾರೆ ಎನ್ನಲಾಗಿದೆ.
ಹಲವು ವೇದಿಕೆಗಳಲ್ಲಿ ಸಿದ್ದರಾಮಯ್ಯ ಅವರು ಐದು ವರ್ಷವೂ ನಾನೇ ಸಿಎಂ ಎಂದು ಹೇಳಿಕೊಂಡಿದ್ದಾರೆ. ಹೀಗಾಗಿ ಸಿಎಂ ಆಗುವ ಅವಕಾಶ ಕೈತಪ್ಪುವ ಭೀತಿಯಲ್ಲಿ ಡಿ.ಕೆ.ಶಿವಕುಮಾರ್ ಅವರು ತಮ್ಮ ಶಾಸಕರು ದೆಹಲಿಗೆ ಕಳಿಸಿದ್ದಾರೆ ಎಂಬ ಗುಸುಗುಸು ಕೇಳಿಬರುತ್ತಿದೆ. ನಾನು ಪಕ್ಷದ ನಿಷ್ಠಾವಂತ ಎನ್ನುತ್ತಿರುವ ಡಿಕೆ ಶಿವಕುಮಾರ್ ಅವರಿಗೆ ಸಿಎಂ ಪಟ್ಟ ಸಿಗುತ್ತಾ ಕಾದು ನೋಡಬೇಕಿದೆ.
-
ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಕೈ ಹಿಡಿಯುತ್ತವೆ: ಸಿದ್ದರಾಮಯ್ಯ ಹೇಳಿಕೆ -
Vijay Thalapathi: ಟಿವಿಕೆ ಸಂಸ್ಥಾಪಕ, ನಟ ವಿಜಯ್ ದಳಪತಿ ವಿರುದ್ಧ ಪ್ರಕರಣ ದಾಖಲು -
IPL 2026 Free Ticket: ರಾಜ್ಯದ ಶಾಸಕರಿಗೆ ಪ್ರತಿ ಪಂದ್ಯಕ್ಕೂ 3 ಟಿಕೆಟ್ ಉಚಿತ; ಡಿ.ಕೆ.ಶಿವಕುಮಾರ್ -
ತಮಿಳುನಾಡಿನಲ್ಲಿ ರಂಗೇರಿದ ಅಖಾಡ: ಹೊಸ ಶಕ್ತಿಯಾಗಿ ವಿಜಯ್ ಪ್ರವೇಶ, ಪ್ರಮುಖ ಪಕ್ಷಗಳು, ಚರ್ಚೆಯ ವಿಷಯಗಳು -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ











Click it and Unblock the Notifications