ಪ್ರಧಾನಿಗಾಗಿ ಶಾಲೆ ಕಾಲೇಜುಗಳಿಗೆ ರಜೆ ಏಕೆ? ವಿದ್ಯಾರ್ಥಿಗಳೇನು ಭಯೋತ್ಪಾದಕರೆ?

ಬೆಂಗಳೂರು, ಜೂ. 19: ಪ್ರಧಾನಮಂತ್ರಿಗಳು ಪ್ರಯಾಣ ಮಾಡುವ ದಾರಿಯಲ್ಲಿನ ಕಾಲೇಜುಗಳಿಗೆ ರಜೆ ಕೊಟ್ಟಿದ್ದಾರೆ. ಯಾಕೆ ಕೊಡಬೇಕು? ನಮ್ಮ ವಿದ್ಯಾರ್ಥಿಗಳು ಭಯೋತ್ಪಾದಕರೇ? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.

Recommended Video

      ಮೋದಿ ಆಗಮಿಸಿದ್ರೆ ಶಾಲಾ ಕಾಲೇಜುಗಳಿಗ್ಯಾಕೆ ರಜೆ? ವಿದ್ಯಾರ್ಥಿಗಳು ಭಯೋತ್ಪಾದಕರಾ?ಡಿಕೆಶಿ ಗರಂ | Oneindia Kannada

      ಬಿಜೆಪಿ ಸರ್ಕಾರಕ್ಕೆ ಎಷ್ಟು ಭಯ ಇದೇ ಎಂದರೆ ಪ್ರಧಾನಮಂತ್ರಿಗಳು ಪ್ರಯಾಣ ಮಾಡುವ ದಾರಿಯಲ್ಲಿನ ಕಾಲೇಜುಗಳಿಗೆ ರಜೆ ಕೊಟ್ಟಿದ್ದಾರೆ. ಯಾಕೆ ಕೊಡಬೇಕು? ನಮ್ಮ ವಿದ್ಯಾರ್ಥಿಗಳು ಭಯೋತ್ಪಾದಕರೇ? ಅವರೇನು ಗಲಾಟೆ ಮಾಡುತ್ತಾರಾ? ಕರ್ನಾಟಕದ ವಿದ್ಯಾರ್ಥಿಗಳಲ್ಲಿ ಆ ಸಂಸ್ಕೃತಿ ಇಲ್ಲ. ಪ್ರಧಾನಿಗಳು ಬರುತ್ತಾರೆ, ಹೋಗುತ್ತಾರೆ. ಅವರಿಗೆ ಅಗತ್ಯವಿರುವ ಭದ್ರತೆ ನೀಡಿ ಎಂದು ಭಾನುವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು

      ಪ್ರಧಾನಿಗಳು ಬರಲಿ, ಯೋಗ ಮಾಡಲಿ, ರಾಜಕೀಯವಾಗಿ ಬಳಸಿಕೊಳ್ಳಲಿ. ಆದರೆ ಮಕ್ಕಳಿಗೆ ರಜೆ ಕೊಟ್ಟಿರುವುದು ಏಕೆ? ಅವರ ಮೇಲೆ ಅನುಮಾನ ಯಾಕೆ? ಸರ್ಕಾರವೇ ತಾವು ತಪ್ಪು ಮಾಡಿದ್ದೇವೆ ಎಂದು ಇಂತಹ ತೀರ್ಮಾನಗಳ ಮೂಲಕ ಒಪ್ಪಿಕೊಳ್ಳುತ್ತಿದೆ' ಎಂದು ಉತ್ತರಿಸಿದರು.

      ಪ್ರಧಾನಿ ಬರುತ್ತಿದ್ದಾರೆ ಎಂದು ರಸ್ತೆ ಗುಂಡಿ ಮುಚ್ಚಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ' ಅವರು ಜನರಿಗಾಗಿ ಕೆಲಸ ಮಾಡುತ್ತಿಲ್ಲ, ನಾಯಕರ ಅನುಕೂಲಕ್ಕೆ ಕೆಲಸ ಮಾಡುತ್ತಿದ್ದಾರೆ. ನಮ್ಮ ರಾಮಲಿಂಗಾರೆಡ್ಡಿ ಅವರು ಪ್ರಶ್ನೆ ಕೇಳಿರುವಂತೆ ಪ್ರಧಾನಮಂತ್ರಿಗಳು 40% ಕಮಿಷನ್ ಸರ್ಕಾರದ ಬಗ್ಗೆ ತಮ್ಮ ನಿಲುವು ತಿಳಿಸಲಿ. ಅವರು ಕೇಳಿರುವ ಪ್ರಶ್ನೆಗಳಿಗೆ ಪ್ರಧಾನಿಗಳು ಉತ್ತರಿಸಲಿ ' ಎಂದು ಹೇಳಿದರು.

      ತಮ್ಮ ಮಕ್ಕಳನ್ನು ಆಗ್ನಿಪಥ್‌ಗೆ ಸೇರಿಸುತ್ತಾರಾ?

      ತಮ್ಮ ಮಕ್ಕಳನ್ನು ಆಗ್ನಿಪಥ್‌ಗೆ ಸೇರಿಸುತ್ತಾರಾ?

      ಸಚಿವರೊಬ್ಬರು ಅಗ್ನಿಪಥ್ ಯೋಜನೆ ಕುರಿತು, ಸೆಕ್ಯೂರಿಟಿ ಗಾರ್ಡ್, ಫೈರ್ ಫೋರ್ಸ್ ಎಂದು ಹೇಳುತ್ತಿದ್ದಾರೆ. ನಮ್ಮ ಹುಡುಗರು ವಿದ್ಯಾಭ್ಯಾಸ ಮಾಡುವುದು ಬೇಡವೇ? ಪದವಿ ಶಿಕ್ಷಣ ಪಡೆಯುವುದು ಬೇಡವೇ? ಮಕ್ಕಳಿಗೆ ಉಚಿತ ಶಿಕ್ಷಣ ನೀಡಬೇಕು ಎಂದು ನಾವು ಹೋರಾಟ ಮಾಡುತ್ತಿದ್ದು, ಇವರು 17 ವರ್ಷಕ್ಕೆ ಯುವಕರನ್ನು ಸೇನೆಗೆ ಆಯ್ಕೆ ಮಾಡಿ ನಾಲ್ಕು ವರ್ಷಗಳ ನಂತರ ಗಾರ್ಡ್ ಕೆಲಸಕ್ಕೆ ಹಾಕುತ್ತಾರಂತೆ. ಇಷ್ಟು ವರ್ಷಗಳ ಕಾಲ ನಮ್ಮ ಯುವಕರು ತರಬೇತಿ ಪಡೆದು ಕಷ್ಟ ಕಾಲದಲ್ಲಿ ದೇಶ ರಕ್ಷಣೆ ಮಾಡಿದ್ದಾರಲ್ಲವೆ? ಅವರಿಗೆ ಈ ರೀತಿ ಅಪಮಾನ ಮಾಡಬಹುದೇ?

      ಇದನ್ನು ಸಮರ್ಥಿಸಿಕೊಳ್ಳುತ್ತಿರುವ ಮಂತ್ರಿಗಳು ತಮ್ಮ ಮಕ್ಕಳನ್ನು ಇದಕ್ಕೆ ಸೇರಿಸುತ್ತಾರೆಯೇ? ನಿಮ್ಮ ಶಾಸಕರ ಮಕ್ಕಳನ್ನು ಕಳುಹಿಸಿ. ನಿಮ್ಮ ಮಕ್ಕಳು ಮಾತ್ರ ಡಾಕ್ಟರ್, ಇಂಜಿನಿಯರ್, ಪ್ರೊಫೆಸರ್ ಗಳಾಗ ಬೇಕು. ಬೇರೆ ಬಡವರ ಮಕ್ಕಳು ಗಾರ್ಡ್ ಕೆಲಸ ಮಾಡಬೇಕಾ? ಇದಕ್ಕೆ ನಮ್ಮ ವಿರೋಧವಿದೆ. ಯುವಕರು ನಮ್ಮ ಆಸ್ತಿ. ವಿಶ್ವದಲ್ಲೇ ಅತ್ಯಂತ ಪ್ರತಿಭಾವಂತರೇನಿಸಿದ್ದಾರೆ. ಬೇರೆ ದೇಶಗಳು ನಮ್ಮ ಯುವಕರನ್ನು ಗುರುತಿಸಿ ಕೆಲಸ ಕೊಡುತ್ತಿದ್ದಾರೆ. ನೀವು ನಮ್ಮ ಯುವಕರನ್ನು ಈ ರೀತಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದೀರಾ? ನಮ್ಮ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಿ, ಉದ್ಯೋಗ ನೀಡಿ. ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುವುದಾಗಿ ಹೇಳಿದ್ದಿರಿ ನೀವು ಆ ವಿಚಾರದಲ್ಲಿ ಬದ್ಧತೆ ಪ್ರದರ್ಶಿಸಿ ಎಂದರು.

      ಸಮಾಜ ಉಳಿಸುವ ಪ್ರಯತ್ನ ಮಾಡುತ್ತಿದ್ದಾರೆ

      ಸಮಾಜ ಉಳಿಸುವ ಪ್ರಯತ್ನ ಮಾಡುತ್ತಿದ್ದಾರೆ

      ರಾಜ್ಯ ಬಿಜೆಪಿ ಸರಕಾರ ಪರಿಷ್ಕರಸಿರುವ ಪಠ್ಯದಲ್ಲಿ ಬಾಲಗಂಗಧರನಾಥ ಸ್ವಾಮೀಜಿ, ಶಿವಕುಮಾರ ಸ್ವಾಮೀಜಿ, ಕುವೆಂಪು, ನಾರಾಯಣಗುರುಗಳ ಇತಿಹಾಸ ಸೇರಿದಂತೆ ಅನೇಕ ಗಣ್ಯರ ವಿಚಾರ ತಿರುಚಿ ಅಪಮಾನ ಮಾಡಲಾಗಿದೆ. ಸಿದ್ದಗಂಗಾ ಶ್ರೀಗಳು, ಮುರುಘಾ ಮಠದ ಶ್ರೀಗಳು, ಆದಿಚುಂಚನಗಿರಿ ಶ್ರೀಗಳು ಸೇರಿದಂತೆ ಹಲವಾರು ಸ್ವಾಮೀಜಿಗಳು ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಪರಿಷ್ಕರಣೆ ಮಾಡಿದ ಪಠ್ಯಕ್ಕೆ ವಿರೋಧ ಎಂದರೆ ಅದು ನಮ್ಮ ರಾಜಕಾರಣಕ್ಕೆ ಬೆಂಬಲ ನೀಡುವ ವಿಚಾರವಲ್ಲ. ಅಥವಾ ಕೇವಲ ಹೇಳಿಕೆಯ ವಿಚಾರವಲ್ಲ. ಸ್ವಾಮೀಜಿಗಳು ಇರುವುದೇ ಈ ದೇಶದ ಧರ್ಮ, ಸಂಸ್ಕೃತಿ, ನ್ಯಾಯ, ನೀತಿ ಉಳಿಸಲು. ಎಲ್ಲವನ್ನೂ ತ್ಯಾಗ ಮಾಡಿ, ಮಠಗಳನ್ನು ಆರಂಭಿಸಿ ಸಮಾಜ ಉಳಿಸುವ ಪ್ರಯತ್ನ ಮಾಡುತ್ತಿದ್ದಾರೆ.

      ಆದರೆ ಇಂತಹ ವಿಚಾರಗಳು ಬಂದಾಗ ಸರ್ಕಾರಕ್ಕೆ ಹೆದರಿ ಕೂರಬಾರದು. ಸರ್ಕಾರ ಏನು ಮಾಡುತ್ತದೆ? ಏನು ಮಾಡಲು ಸಾಧ್ಯ? ಹೀಗಾಗಿ ಸ್ವಾಮೀಜಿಗಳು ಈ ವಿಚಾರದಲ್ಲಿ ಧ್ವನಿ ಎತ್ತಬೇಕು. ಅವರಿಗೆ ಹಾಗೂ ಈ ಸಮಾಜಕ್ಕೆ ಆಗಿರುವ ಅನ್ಯಾಯವನ್ನು ಪ್ರಶ್ನಿಸಬೇಕು. ಇದು ಒಂದು ಜಾತಿ, ಸಮುದಾಯದ ವಿಚಾರವಲ್ಲ. ಒಟ್ಟು ಸಮಾಜದ ವಿಚಾರ. ಎಲ್ಲರೂ ಸಂವಿಧಾನ ಒಪ್ಪಿ ಶಾಂತಿಯಿಂದ ಇರಬೇಕು. ಆದರೆ ಸರ್ಕಾರ ಈಗ ಶಾಂತಿಗೆ ಭಂಗ ತರುವ ಕೆಲಸ ಮಾಡುತ್ತಿದೆ. ಇದರ ವಿರುದ್ಧ ಹೋರಾಟ ಮಾಡಬೇಕು ಎಂದರು.

      ಸ್ವಾಮೀಜಿಗಳನ್ನೇ ಕೇಳಿ

      ಸ್ವಾಮೀಜಿಗಳನ್ನೇ ಕೇಳಿ

      ಸರ್ಕಾರ ಸ್ವಾಮೀಜಿಗಳನ್ನು ಹೆದರಿಸುತ್ತಿದೆಯೆ ಅಥವಾ ಸ್ವಾಮೀಜಿಗಳು ಸರ್ಕಾರವನ್ನು ಹೆದರಿಸುತ್ತಿದ್ದಾರೆಯೇ ಎಂಬ ಪ್ರಶ್ನೆಗೆ, "ನೀವು ಸ್ವಾಮೀಜಿಗಳನ್ನೇ ಕೇಳಿ. ಬುದ್ಧ, ಬಸವಣ್ಣ, ಕುವೆಂಪು, ಅಂಬೇಡ್ಕರ್, ನಾರಾಯಣಗುರುಗಳಿಗೆ ಅಪಮಾನ ಆಗಿರುವ ಬಗ್ಗೆ ಅವರನ್ನು ಕೇಳಬೇಕು. ಬಾಲಗಗಾಧರನಾಥ ಸ್ವಾಮೀಜಿ, ಶಿವಕುಮಾರ ಸ್ವಾಮೀಜಿಗಳನ್ನು ನಡೆದಾಡುವ ದೇವರು ಎಂದು ಆರಾಧಿಸುತ್ತೇವೆ. ಅಂತವರಿಗೆ ಈ ರೀತಿ ಅಪಮಾನ ಮಾಡಿರುವಾಗ ಸಂಬಂಧಪಟ್ಟ ಸಮುದಾಯದ ಸಂಘಟನೆಗಳಿಗೆ ಏನಾಗಿದೆ? ಒಕ್ಕಲಿಗರ ಸಂಘ ಇರಲಿ, ವೀರಶೈವ ಸಂಘ ಇರಲಿ, ಇತರ ಸಂಘಗಳಿಗೆ ಏನಾಗಿದೆ? ಅವರೇಕೆ ಧ್ವನಿ ಎತ್ತುತ್ತಿಲ್ಲ? ರಾಜಕೀಯ ನಾಯಕರ ವಿಚಾರ ಬಿಡಿ. ಕೆಲವರು ಒಪ್ಪಂದ ಮಾಡಿಕೊಂಡು ಅವರವರ ರಾಜಕಾರಣ ಮಾಡುತ್ತಾರೆ. ಅವರ ಬಗ್ಗೆ ನಾನು ಮಾತನಾಡುವುದಿಲ್ಲ. ಆದರೆ ಮಠಗಳು ಆ ರೀತಿ ಆಗಬಾರದು. ನಮಗೆ ರಾಜಕೀಯ ಬೆಂಬಲ ನೀಡಿ ಎಂದು ನಾನು ಮಠಗಳನ್ನು ಕೇಳುತ್ತಿಲ್ಲ. ವಿವಿಧ ಕನ್ನಡ ಸಂಘಟನೆಗಳು ನಿನ್ನೆ ಪ್ರತಿಭಟನೆ ಹಮ್ಮಿಕೊಂಡಿದ್ದವು. ಅವರಿಗೆ ಯಾವುದೇ ರಾಜಕೀಯದ ಅಗತ್ಯವಿಲ್ಲ. ಅದೇ ರೀತಿ ಸ್ವಾಮೀಜಿಗಳು ಈ ವಿಚಾರವಾಗಿ ಧ್ವನಿ ಎತ್ತಬೇಕು ಎಂದು ಅವರ ಪಾದಕ್ಕೆ ನಮಸ್ಕರಿಸುತ್ತಾ ನಮ್ರತೆಯಿಂದ ಮನವಿ ಮಾಡಿಕೊಳ್ಳುತ್ತೇನೆ," ಎಂದರು.

      ದೇವಾಲಯಗಳ ಜೀರ್ಣದ್ಧಾರ ಮಾಡಿಸಿದ್ದೇನೆ

      ದೇವಾಲಯಗಳ ಜೀರ್ಣದ್ಧಾರ ಮಾಡಿಸಿದ್ದೇನೆ

      ಹಿಂದೂ ವಿರೋಧಿ ಎಂಬ ಬಿಜೆಪಿ ಅವರ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ, "ನಾನು ನನ್ನ ಕ್ಷೇತ್ರದಲ್ಲಿ 350ರಿಂದ 400 ದೇವಾಲಯ ಜೀರ್ಣದ್ಧಾರ ಮಾಡಿಸಿದ್ದೇನೆ. ಬಂದು ನೋಡಲಿ. ನಾನು ಒಬ್ಬ ಹಿಂದೂ. ನಾವು ಎಲ್ಲರಿಗೂ ಗೌರವ ನೀಡುತ್ತೇವೆ. ನಾವು ಯಾರಿಗಾದರೂ ಅಧಿಕಾರ ನೀಡುತ್ತೇವೆ ಅವರಿಗೇನು? ನಮ್ಮ ಯುವಕರ ಸಂಘಟನೆ ಬಗ್ಗೆ ಇವರಿಗೆ ಭಯ ಇದೇ ಎಂಬುದು ಸ್ಪಷ್ಟವಾಗಿದೆ," ಎಂದು ತಿರುಗೇಟು ಕೊಟ್ಟರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+