ಅಧಿಕಾರ ಇದ್ದಾಗ ಏನನ್ನೂ ಮಾಡದೆ, ಅಧಿಕಾರ ಹೋಗುವಾಗ ಮಾಡುತ್ತೇವೆ ಎನ್ನುತ್ತಿದ್ದಾರೆ: ಡಿ.ಕೆ.ಶಿವಕುಮಾರ್

ವಿಜಯನಗರ,ಜನವರಿ 18: ಅಧಿಕಾರ ಇದ್ದಾಗ ಏನನ್ನೂ ಮಾಡದೆ, ಅಧಿಕಾರ ಹೋಗುವಾಗ ಮಾಡುತ್ತೇವೆ ಎನ್ನುತ್ತಿದ್ದಾರೆ. ಇನ್ನು 60 ದಿನಗಳ ನಂತರ ನಮ್ಮ, ನಿಮ್ಮ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಈ ಕುರಿತು ಹೊಸಪೇಟೆ ಪ್ರಜಾಧ್ವನಿ ಯಾತ್ರೆ ಸಮಾವೇಶದಲ್ಲಿ ಮಾತನಾಡಿದ ಅವರು, ಕೊಟ್ಟ ಕುದುರೆ ಏರಲಾಗದೆ, ಮತ್ತೊಂದು ಕುದುರೆ ಏರಲು ಬಯಸುವವನು ವೀರನೂ ಅಲ್ಲ, ಶೂರನೂ ಅಲ್ಲ. ಅಧಿಕಾರ ಇದ್ದಾಗ ಏನನ್ನೂ ಮಾಡದೆ, ಅಧಿಕಾರ ಹೋಗುವಾಗ ಮಾಡುತ್ತೇವೆ ಎನ್ನುತ್ತಿದ್ದಾರೆ. ಇನ್ನು 60 ದಿನಗಳ ನಂತರ ನಮ್ಮ, ನಿಮ್ಮ ಸರ್ಕಾರ ಅಧಿಕಾರಕ್ಕೆ ಬರಲಿದೆ. ಇಲ್ಲಿರುವ ಶಾಸಕರು ವಿಧಾಧದ ನಸೌಮೂರನೇ ಮಹಡಿಗೆ ಹೋಗುತ್ತಾರೆ. ಇನ್ನೇನಿದ್ದರೂ ನಿಮ್ಮ ಓಡಾಟ ವಿಧಾನಸೌಧದಲ್ಲಿ ಎಂದು ಹೇಳಿದರು.

ಇಂದಿರಾಗಾಂಧಿ ಅವರು ಇಲ್ಲಿನ ಜನರಿಗೆ ಉದ್ಯೋಗ ಕೊಡಿಸಲು ವಿಜಯನಗರ ಸ್ಟೀಲ್ ಕಾರ್ಖಾನೆಯನ್ನು ಆರಂಭಿಸಿದರು. ಸೋನಿಯಾ ಗಾಂಧಿ ಅವರು ಇಲ್ಲಿನ ಸಂಸದರಾಗಿ ಆಯ್ಕೆಯಾದಾಗ ವಿದ್ಯುತ್ ಉತ್ಪಾದನೆ ಘಟಕ ಸ್ಥಾಪನೆ ಮಾಡಿದರು. ಕಾಂಗ್ರೆಸ್ ದೇಶದಲ್ಲಿ ಇಂತಹ ಅನೇಕ ಮಾದರಿ ಕೆಲಸ ಮಾಡಿಕೊಂಡು ಬಂದಿದೆ. ಖಾಸಗಿ, ಸರ್ಕಾರಿ ಇಲಾಖೆಗಳಲ್ಲಿ ಉದ್ಯೋಗ ಸೃಷ್ಟಿಸಿ, ರಾಜ್ಯದ ಜನರ ಬದುಕು ಹಸನಾಗಿಸಲು ಅನೇಕ ಕಾರ್ಯಕ್ರಮ ಮಾಡುತ್ತಾ ಬಂದಿದೆ. ಕಾಂಗ್ರೆಸ್ ನಿರ್ಮಿಸಿರುವ ಸಂಸ್ಥೆಗಳನ್ನು ಬಿಜೆಪಿ ಖಾಸಗಿಯವರಿಗೆ ಮಾರಾಟ ಮಾಡಿಕೊಂಡು ಬಂದಿದೆ. ಕಾಂಗ್ರೆಸ್ ರಾಷ್ಟ್ರೀಕರಣ ಮಾಡಿದರೆ, ಬಿಜೆಪಿ ಖಾಸಗೀಕರಣ ಮಾಡುತ್ತಿದೆ ಎಂದರು.

ನಮ್ಮ ಪ್ರಶ್ನೆಗೆ ಸರ್ಕಾರದಿಂದ ಒಂದೇ ಒಂದು ಉತ್ತರವೂ ಬಂದಿಲ್ಲ.

ನಮ್ಮ ಪ್ರಶ್ನೆಗೆ ಸರ್ಕಾರದಿಂದ ಒಂದೇ ಒಂದು ಉತ್ತರವೂ ಬಂದಿಲ್ಲ.

ರಾಜ್ಯದಲ್ಲಿ ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರ ನಿಮಗೆ ಕೊಟ್ಟ ಮಾತು ಉಳಿಸಿಕೊಂಡಿದೆಯಾ ಎಂಬ ಪ್ರಶ್ನೆಯನ್ನು ನೀವು ಎಲ್ಲ ಮತದಾರರಿಗೆ ಕೇಳಬೇಕಿದೆ. ಹತ್ತು ದಿನಗಳ ಹಿಂದೆ ಕರ್ಲಾಣ ಕರ್ನಾಟಕ ಭಾಗದ ಶಾಸಕರೆಲ್ಲರೂ ಸೇರಿ ಬಿಜೆಪಿ ಸರ್ಕಾರದ ಪಾಪದ ಪುರಾಣ ಪಟ್ಟಿಯನ್ನು ಬಿಡುಗಡೆ ಮಾಡಿದೆವು. ಈ ಬಗ್ಗೆ ಬಿಜೆಪಿಯ ಒಬ್ಬ ಮಂತ್ರಿ, ಮುಖ್ಯಮಂತ್ರಿ ಉತ್ತರ ನೀಡಲು ಆಗಿಲ್ಲ. ಬಿಜೆಪಿ ಕಳೆದ ಚುನಾವಣೆಯಲ್ಲಿ ನೀಡಿದ್ದ 600 ಭರವಸೆಗಳ ಪೈಕಿ 550 ಅನ್ನು ಈಡೇರಿಸಿಲ್ಲ. ಈ ಬಗ್ಗೆ ನಾವು ದಿನನಿತ್ಯ ಪ್ರಶ್ನೆ ಹಾಕಿ ನಿಮ್ಮ ಹತ್ತಿರ ಇದೆಯಾ ಉತ್ತರ ಎಂದು ಕೇಳುತ್ತಿದ್ದು, ಸರ್ಕಾರದಿಂದ ಒಂದೇ ಒಂದು ಉತ್ತರವೂ ಬಂದಿಲ್ಲ.

ಬಿಜೆಪಿ ರೈತರ ಆದಾಯ ಡಬಲ್ ಮಾಡುತ್ತೇವೆ ಎಂದಿತ್ತು. ನಿಮ್ಮ ಆದಾಯ ಡಬಲ್ ಆಗಿದೆಯಾ? ನಿಮ್ಮ ಖಾತೆಗೆ 15 ಲಕ್ಷ ರು. ಹಣ ಬಂದಿದೆಯಾ? ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇವೆ ಎಂದಿದ್ದರು, ನಿಮ್ಮ ಕುಟುಂಬದವರಿಗೆ ಯಾರಿಗಾಗದರೂ ಕೆಲಸ ಸಿಕ್ಕಿದೆಯಾ? ಯಾವುದೂ ಇಲ್ಲ.


ಲಂಚ ಪ್ರಕರಣದಲ್ಲಿ ಈಶ್ವರಪ್ಪ ಸೇರಿ ಯಾವುದೇ ಮಂತ್ರಿಗಳ, ಕನಕಗಿರಿ ಶಾಸಕನ ಹೆಸರು ಬಂದರೂ ಎಲ್ಲ ಪ್ರಕರಣದಲ್ಲಿ ಬಿ ರಿಪೋರ್ಟ್ ಹಾಕಲಾಗುತ್ತಿದೆ. ಇದೊಂದು ಬಿ ರಿಪೋರ್ಟ್ ಸರ್ಕಾರ. ಅಕ್ರಮ, ನೇಮಕಾತಿ, ಗುತ್ತಿಗೆ ಕಮಿಷನ್, ಅಂದಾಜು, ಸಂಸದರು ಹೇಳಿರುವಂತೆ ಕುಲಪತಿ ಹುದ್ದೆಗೆ ಕಾಸು ಸೇರಿದಂತೆ ಎಲ್ಲ ಪ್ರಕರಣದಲ್ಲೂ ಕೇಸ್ ದಾಖಲಿಸಿ ನಾವು ಮರು ತನಿಖೆ ಮಾಡುತ್ತೇವೆ.

ಪ್ರತಿ ಕುಟುಂಬಕ್ಕೆ 200 ಯುನಿಟ್ ಉಚಿತ ವಿದ್ಯುತ್ ನೀಡಲು ಬದ್ಧರಗಿದ್ದೇವೆ

ಪ್ರತಿ ಕುಟುಂಬಕ್ಕೆ 200 ಯುನಿಟ್ ಉಚಿತ ವಿದ್ಯುತ್ ನೀಡಲು ಬದ್ಧರಗಿದ್ದೇವೆ

ನಮಗೆ ನಿಮ್ಮ ಮೇಲೆ ವಿಶ್ವಾಸವಿದೆ. ನೀವು ನೋವು ನಮಗೆ ಅರ್ಥವಾಗಿದೆ. ನಿಮ್ಮ ಬದುಕಿನಲ್ಲಿ ಬದಲಾವಣೆ ತರಲು ನಾವು ಈ ಯಾತ್ರೆ ಮೂಲಕ ನಿಮ್ಮ ಮುಂದೆ ಬಂದಿದ್ದೇವೆ. ಗಾಂಧಿಜೀ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬೆಳಗಾವಿಯಿಂದ ಆರಂಭಿಸಿದ್ದೇವೆ. ಅಲ್ಲಿ ನಾವು ಪಕ್ಷದ ಮೊದಲ ಗ್ಯಾರೆಂಟಿ ಯೋಜನೆ ಪ್ರಕಟಿಸಿದೆವು. ಗೃಹಜ್ಯೋತಿ ಯೋಜನೆ ಮೂಲಕ ನಿಮ್ಮ ಮನೆಯಲ್ಲಿ ಬೆಳಕು, ಉದ್ಯೋಗ, ಉತ್ತಮ ಬದುಕು ನೀಡಲು ಪ್ರತಿ ಕುಟುಂಬಕ್ಕೆ 200 ಯುನಿಟ್ ಉಚಿತ ವಿದ್ಯುತ್ ನೀಡಲು ಬದ್ಧರಗಿದ್ದೇವೆ.

ಈಗ ಪ್ರತಿ ಯುನಿಟ್ ವಿದ್ಯುತ್ ಬೆಲೆ 7.20 ಆಗಿದ್ದು, ನಮ್ಮ ಯೋಜನೆಯಿಂದ ಪ್ರತಿ ಕುಟುಂಬಕ್ಕೆ ಸುಮಾರು 1500 ರೂ. ವೆಚ್ಚ ಉಳಿಯುತ್ತದೆ. ವರ್ಷಕ್ಕೆ 18 ಸಾವಿರ ಉಳಿತಾಯವಾಗುತ್ತದೆ. ಇನ್ನು ಮಹಿಳೆಯರಿಗೆ ಬೆಲೆ ಏರಿಕೆಯಿಂದ ಮನೆ ನಡೆಸಲು ಆಗುತ್ತಿಲ್ಲ. ಪ್ರತಿನಿತ್ಯ ನಿಮ್ಮೆಲ್ಲರ ಜೇಬಿಗೆ ಕತ್ತರಿ ಹಾಕಲಾಗುತ್ತಿದೆ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಬೆಲೆ ಹೆಚ್ಚಾಗಿದೆ. ಅಡುಗೆ ಎಣ್ಣೆ 90-250 ರೂ. ಹೆಚ್ಚಳ ಆಗಿದೆ. ಕಬ್ಬಿಣ್, ಸೀಮೆಂಟ್, ಹಾಲು, ಮೊಸರಿನ ಮೇಲೆ ಜಿಎಸ್ ಟಿ ಹಾಕಿ ಎಲ್ಲ ವಸ್ತುಗಳ ಬೆಲೆ ಹೆಚ್ಚಿಸಿದ್ದಾರೆ.

ನಾವು ಈ ಘೋಷಣೆ ಮಾಡುತ್ತಿದ್ದಂತೆ ಬಿಜೆಪಿ ಅವರು ಜಾಹೀರಾತು ನೀಡುತ್ತಿದ್ದಾರೆ. ಸಂಕ್ರಾಂತಿ ಮುಗಿದ ಮೇಲೆ ಸಂಕ್ರಾಂತಿ ಶುಭಾಶಯ ಕೋರಿದ್ದಾರೆ. ಜತೆಗೆ ನಾವು ಮಹಿಳೆಯರಿಗೆ ಹೊಸ ಯೋಜನೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ನಿಮಗೆ ಕಳೆದ ಮೂರುವರೆ ವರ್ಷಗಳಿಂದ ಅಧಿಕಾರ ಇತ್ತಲ್ಲ ಆಗ ಯಾಕೆ ಯಾವುದೇ ಯೋಜನೆ ನೀಡಲಿಲ್ಲ? ಎಂದು ಪ್ರಶ್ನಿಸಿದ್ದಾರೆ.

ಬಡವರ ಮನೆ ಬೆಳಕನ್ನು ಹೇಗೆ ಹಚ್ಚುತ್ತೇವೆ ಎಂದು ಚರ್ಚೆ ಮಾಡಲು ಸಿದ್ದನಿದ್ದೇನೆ.

ಬಡವರ ಮನೆ ಬೆಳಕನ್ನು ಹೇಗೆ ಹಚ್ಚುತ್ತೇವೆ ಎಂದು ಚರ್ಚೆ ಮಾಡಲು ಸಿದ್ದನಿದ್ದೇನೆ.

ಮಲ್ಲಿಕಾರ್ಜುನ ಖರ್ಗೆ ಹಾಗೂ ಧರಂಸಿಂಗ್ ಅವರ ಶ್ರಮದಿಂದ ಕಾಂಗ್ರೆಸ್ ಪಕ್ಷ 371ಜೆ ಮೂಲಕ ವಿಶೇಷ ಸ್ಥಾನಮಾನ ನೀಡಿ ನಿಮಗೆ ಶಕ್ತಿ ನೀಡಿದೆ. ಆ ಮೂಲಕ ನಿಮ್ಮ ಜೀವನದಲ್ಲಿ ಬದಲಾವಣೆ ತಂದಿದ್ದೇವೆ. ಬಿಜೆಪಿ ಸರ್ಕಾರದಿಂದ ಇದು ಸಾಧ್ಯವೇ? ಇದು ಕಾಂಗ್ರೆಸ್ ಸರ್ಕಾರದಲ್ಲಿ, ಸೋನಿಯಾ ಗಾಂಧಿ ಅವರ ಮುಖಂಡತ್ವದಲ್ಲಿ ಮನಮೋಹನ್ ಸಿಂಗ್ ಅವರ ಸರ್ಕಾರದಲ್ಲಿ ಆಯಿತು. ಇದು ಕಲ್ಯಾಣ ಕರ್ನಾಟಕಕ್ಕೆ ಕಾಂಗ್ರೆಸ್ ಕೊಟ್ಟಿರುವ ಭಾಗ್ಯ. ಇದನ್ನು ನೀವು ಉಳಿಸಿಕೊಳ್ಳಬೇಕು.

ಇಂಧನ ಸಚಿವರು ಹಾಗೂ ಸಚಿವ ಅಶೋಕ್ ಅವರು ಡಿ.ಕೆ. ಶಿವಕುಮಾರ್ ಇಂಧನ ಸಚಿವನಾಗಿದ್ದಾಗ ಏನು ಮಾಡಿದ್ದ ಎಂದು ಕೇಳಿದ್ದಾರೆ. ನಾನು ಏನು ಮಾಡಿದ್ದೇನೆ ಎಂದು ನಿಮ್ಮ ಕೇಂದ್ರದ ಇಂಧನ ಸಚಿವರನ್ನು ಕೇಳಿ. ಈ ದೇಶದ ಪ್ರಧಾನಿಗಳು ಡಿ.ಕೆ. ಶಿವಕುಮಾರ್ ಅವರನ್ನು ಕರೆಸಿ ಪ್ರಶಸ್ತಿ ಪತ್ರ ನೀಡಿರುವ ಚಿತ್ರವನ್ನು ನಾನು ಬಿಡುಗಡೆ ಮಾಡಲು ಸಿದ್ಧ. 10 ಸಾವಿರ ಮೆ.ವ್ಯಾಟ್ ಪವರ್ ಇತ್ತು. ಸಿದ್ದರಾಮಯ್ಯ ಅವರು ನನ್ನನ್ನು ಸಚಿವನನ್ನಾಗಿ ಮಾಡಿದ ನಂತರ ಅಧಿಕಾರದಿಂದ ಕೆಳಗಿಳಿಯುವ ಮುನ್ನ ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಯನ್ನು 21 ಸಾವಿರ ಮೆ.ವ್ಯಾ ಗೆ ಏರಿಸಿ ದೇಶಕ್ಕೆ ಮಾದರಿ ಕೆಲಸ ಮಾಡಿದ್ದೆ. ನಾನು ಎಷ್ಟು ದಿನ ಬದುಕಿರುತ್ತೇನೆ ಗೊತ್ತಿಲ್ಲ. ಆದರೆ ದೇಶದ ಇತಿಹಾಸದಲ್ಲಿ ಒಂದೇ ಜಾಗದಲ್ಲಿ 14 ಸಾವಿರ ಎಕರೆಯಲ್ಲಿ ವಿಶ್ವದ ಅತಿ ದೊಡ್ಡ ಸೋಲಾರ್ ಪಾರ್ಕ್ ಮಾಡಿ ಇತಿಹಾಸ ನಿರ್ಮಿಸಿದ್ದೇನೆ.

ಪ್ರತಿ ತಾಲೂಕಿಗೂ 20 ಮೆ.ವ್ಯಾ ಉತ್ಪಾದನೆ ಮಾಡಬಹುದು. ನನಗೆ ವಿದ್ಯುತ್ ಬಗ್ಗೆ ಏನು ಗೊತ್ತು ಎಂದು ಕೇಳುವ ಅಶೋಕ್ ಅವರೇ, ಸುನೀಲ್ ಅವರೇ, ನೀವು ಬೇಕಾದರೂ ಬನ್ನಿ, ನಿಮ್ಮ ಮುಖ್ಯಮಂತ್ರಿಯನ್ನಾದರೂ ಕಳಿಸಿ, ನಾವು ಈ ಯೋಜನೆಗಳಿಗೆ ಹೇಗೆ ಹಣ ತರುತ್ತೇವೆ, ಹೇಗೆ ನೀಡುತ್ತೇವೆ, ಬಡವರ ಮನೆ ಬೆಳಕನ್ನು ಹೇಗೆ ಹಚ್ಚುತ್ತೇವೆ ಎಂದು ಚರ್ಚೆ ಮಾಡಲು ಸಿದ್ಧನಿದ್ದೇನೆ.

ನಿಮ್ಮ ಮತಗಳನ್ನು ಕಳ್ಳತನ ಮಾಡಲು ಬಿಜೆಪಿ ಮುಂದಾಗಿದೆ.

ನಿಮ್ಮ ಮತಗಳನ್ನು ಕಳ್ಳತನ ಮಾಡಲು ಬಿಜೆಪಿ ಮುಂದಾಗಿದೆ.

ಬಿಜೆಪಿ ಅಧ್ಯಕ್ಷರು, ಮುಖ್ಯಮಂತ್ರಿಗಳು, ನಾಯಕರ ಜತೆ ಎಲ್ಲಿ ಯಾವುದೇ ವೇದಿಕೆಯಲ್ಲಿ ಚರ್ಚೆ ಮಾಡಲು ಈ ಡಿ.ಕೆ. ಶಿವಕುಮಾರ್ ಸಿದ್ಧನಿದ್ದಾನೆ. ನೀವೆಲ್ಲರೂ ಮನೆ ಮನೆಗೂ ಹೋಗಿ, ಪಂಚಾಯ್ತಿ ಚುನಾವಣೆಯಲ್ಲಿ ಹೇಗೆ ಮತ ಕೇಳುತ್ತೀರೋ ಅದೇ ರೀತಿ, ಬಿಜೆಪಿಯ ಈ ಪಾಪದ ಪುರಾಣದ ಪಾಂಪ್ಲೇಟ್ ಹಿಡಿದು 200 ಯುನಿಟ್ ವಿದ್ಯುತ್ ಉಚಿತ, ಹಾಗೂ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ಯಾರಿಗೆಲ್ಲಾ ಬೇಕು ಎಂದು ಅರ್ಜಿ ಸ್ವೀಕಾರ ಮಾಡುವ ಕೆಲಸವನ್ನು ನಮ್ಮ ಕಾರ್ಯಕರ್ತರು ಒಂದು ತಿಂಗಳಲ್ಲಿ ಮಾಡಬೇಕು. ಯೂಥ್ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್, ಪರಿಶಿಷ್ಟ ಜಾತಿ ಪಂಗಡ, ರೈತ ಸಂಘ, ಅಲ್ಪಸಂಖ್ಯಾತ ಘಟಕಗಳು ಬೂತ್ ಗಳನ್ನು ಹಂಚಿಕೊಂಡು ಮನೆ ಮನೆಗೂ ಹೋಗಿ, ಕಾಂಗ್ರೆಸ್ ಪಕ್ಷದ ಆಶ್ವಾಸನೆಯನ್ನು ಪ್ರತಿ ಮತದಾರರಿಗೆ ತಿಳಿಸಬೇಕು. ಕಾಂಗ್ರೆಸ್ ಸದಸ್ಯತ್ವ ಮಾಡಿದ ರೀತಿ ಇದನ್ನು ಜನರಿಗೆ ತಲುಪಿಸಬೇಕು.

ನೀವು ಪಿಕ್ ಪಾಕೆಟ್ ಮಾಡುವವರನ್ನು ನೋಡಿದ್ದೀರಿ. ಚಿನ್ನ ಕದಿಯುವವರನ್ನು ನೋಡಿದ್ದೀರಿ, ಚಪ್ಪಲಿ ಕದಿಯುವವರನ್ನು ನೋಡಿದ್ದೀರಿ. ಆದರೆ ಈ ಮತಗಳನ್ನು ಕದಿಯುವ ಕಿಲಾಡಿಗಳ ಬಗ್ಗೆ ಎಚ್ಚರಿಕೆಯಿಂದ ಇರಿ. ಪರಿಶಿಷ್ಟರು, ಅಲ್ಪಸಂಖ್ಯಾತರು, ಹಿಂದುಳಿದವರು ನಿಮ್ಮ ಮತಗಳನ್ನು ಕಳ್ಳತನ ಮಾಡಲು ಬಿಜೆಪಿ ಮುಂದಾಗಿದೆ. ಅಧಿಕಾರಿಗಳು ಅಮಾನತುಗೊಂಡಿದ್ದಾರೆ, ಪ್ರಜಾಪ್ರಭುತ್ವದಲ್ಲಿ ನಿಮ್ಮ ಹಕ್ಕು ಉಳಿಸಿ, ಮುಕ್ತವಾದ ಮತದಾನ ಆಗಬೇಕು ಎಂದು ನಾವು ಹೋರಾಟ ಮಾಡಿದ್ದೇವೆ. ಹೀಗಾಗಿ ನೀವು ಈ ಪ್ರಜಾಧ್ವನಿಗೆ ಆಶೀರ್ವಾದ ಮಾಡಿ,ಕಾಂಗ್ರೆಸ್ ಸರ್ಕಾರವನ್ನು ತಂದೇ ತರುವ ವಿಶ್ವಾಸ ನನಗಿದೆ. ನಿಮ್ಮ ಆಶೀರ್ವಾದ ಮುಖ್ಯ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+