ರಾಹುಲ್ ಗಾಂಧಿ ಅವರಿಗೆ ನೋಟಿಸ್ ನೀಡಲು ಚುನಾವಣಾ ಆಯೋಗದವರು ಯಾರು?: ಡಿ ಕೆ ಶಿವಕುಮಾರ್
ಬೆಂಗಳೂರು, ಆಗಸ್ಟ್11: ಲೋಕಸಭಾ ಚುನಾವಣೆಯಲ್ಲಿ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ 1 ಲಕ್ಷ ನಕಲಿ ಮತ ಚಲಾವಣೆಯಾಗಿದೆ ಎಂದು ನೀವು ಮಾಡಿರುವ ಆರೋಪಗಳಿಗೆ ದಾಖಲೆಗಳನ್ನು ನೀಡಿ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ರಾಜ್ಯ ಚುನಾವಣಾ ಆಯೋಗ ನೋಟಿಸ್ ನೀಡಿದೆ. ಈ ಕುರಿತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಇಂದು ಮಾಧ್ಯಮಗಳ ಜೊತೆಗೆ ಮಾತನಾಡಿ, ರಾಹುಲ್ ಗಾಂಧಿ ಅವರಿಗೆ ನೋಟಿಸ್ ಕೊಡಲಿ ಬಿಡಿ. ಅಷ್ಟಕ್ಕೂ ನೋಟಿಸ್ ನೀಡಲು ಅವರು ಯಾರು? ನಾವೇ ಅವರಿಗೆ ನೋಟಿಸ್ ನೀಡಿದ್ದೇವೆ. ನಮಗೆ ನೋಟಿಸ್ ನೀಡಲು ಅಧಿಕಾರವಿದೆಯೇ ಹೊರತು ಅವರಿಗಲ್ಲ. ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಯುತವಾಗಿ ಚುನಾವಣೆ ಗೆದ್ದಿದ್ದೇವೆ. ನ್ಯಾಯಯುತವಾಗಿ ಚುನಾವಣೆ ನಡೆಸಲು ಅವರಿಗೆ ಅವಕಾಶವಿದೆಯೇ ಹೊರತು ನೋಟಿಸ್ ನೀಡುವ ಹಕ್ಕಿಲ್ಲ. ಏನಿದ್ದರೂ ಕಾನೂನಾತ್ಮಕವಾಗಿ ಉತ್ತರ ನೀಡುತ್ತೇವೆ ಎಂದು ಖಡಕ್ಕಾಗಿ ಉತ್ತರಿಸಿದರು.

ಬಿಜೆಪಿಯಲ್ಲಿ ಕೆಲವೊಂದಷ್ಟು ಖಾಲಿ ಟ್ರಂಕುಗಳಿವೆ. ಅವು ಕೇವಲ ಶಬ್ದ ಮಾತ್ರ ಮಾಡುತ್ತವೆ. ಬರೀ ಶಬ್ದ ಮಾಡುವವರು ಸಂಸತ್ ನಲ್ಲಿ ಮಾತನಾಡಿ, ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿ ರಾಜ್ಯಕ್ಕೆ ಹತ್ತು ರೂಪಾಯಿಯಾದರೂ ಅನುದಾನ ತೆಗೆದುಕೊಂಡು ಬರಲಿಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಛೇಡಿಸಿದರು. ಬರೀ ಶಬ್ದ ಮಾಡುವವರಿಗೂ ನಾನು ಅನುದಾನದ ವಿಚಾರವಾಗಿ ಎಲ್ಲಾ ಮಾಹಿತಿಗಳನ್ನು ಕಳುಹಿಸಿ ಕೊಡುತ್ತಿದ್ದೇನೆ. ಏಕೆಂದರೆ ಇದುವರೆಗೂ ಯಾರೊಬ್ಬರು ಅನುದಾನ ತಂದಿಲ್ಲ, ತರಲು ಆಸಕ್ತಿಯನ್ನೂ ತೋರಿಲ್ಲ. ಪ್ರಧಾನಿಯವರನ್ನೂ ಭೇಟಿ ಮಾಡಿಲ್ಲ. ರಾಜ್ಯಕ್ಕೆ, ಅದರಲ್ಲೂ ಬೆಂಗಳೂರಿಗಂತೂ ಏನೇನೂ ತಂದಿಲ್ಲ ಎಂದರು.
ಬೆಂಗಳೂರು ಅಭಿವೃದ್ಧಿಗೆ ಅನುದಾನ ನೀಡುವ ಬಗ್ಗೆ ಪ್ರಧಾನಿಯವರ ಬಳಿ ಮಾತನಾಡಿದೆ. ಅವರು ನಮ್ಮ ಮನವಿಯನ್ನು ಗಮನಿಸುವುದಾಗಿ ತಿಳಿಸಿದ್ದಾರೆ. ಅವರು ಮಾತನಾಡಿದ ಶೈಲಿ ನೋಡಿದರೆ ನನಗೆ ಅವರ ಮಾತಿನ ಮೇಲೆ ಭರವಸೆಯಿದೆ. ಬೆಂಗಳೂರು ಜಾಗತಿಕ ನಗರ ಎನ್ನುವುದನ್ನು ಅವರು ಒಪ್ಪಿಕೊಂಡಿದ್ದಾರೆ. ಬೆಂಗಳೂರು ಭಾರತವನ್ನು ಪ್ರತಿನಿಧಿಸುತ್ತದೆ ಎಂದು ಹೇಳಿದರು.
ಬೆಂಗಳೂರು ಅಭಿವೃದ್ಧಿಗೆ ಎಲ್ಲಾ ಪಕ್ಷಗಳು ಕೊಡುಗೆ ನೀಡಿವೆ. ನಾನು ಒಬ್ಬನೇ ಅಥವಾ ನಮ್ಮ ಸರ್ಕಾರದಿಂದಲೇ ಎಲ್ಲಾ ಆಗಿದೆ ಎಂದು ಹೇಳುವುದಿಲ್ಲ. ಬೆಂಗಳೂರು ದೇಶದಲ್ಲಿಯೇ ಪ್ರಮುಖ ನಗರವಾಗಿದೆ. ಇದನ್ನು ಇನ್ನೂ ಅತ್ಯುತ್ತಮ ನಗರವನ್ನಾಗಿ ಮಾಡುವುದು ನಮ್ಮೆಲ್ಲರ ಜವಾಬ್ದಾರಿ. ಇಲ್ಲಿ ರಾಜಕೀಯಕ್ಕಿಂತ ರಾಜ್ಯದ ಹಿತಾಸಕ್ತಿ ಮುಖ್ಯ ಎಂದು ಹೇಳಿದರು.
ನಾವು ಕರ್ನಾಟಕದ ಅಭಿವೃದ್ಧಿಗೆ ಕೆಲಸ ಮಾಡುತ್ತಿದ್ದೇವೆ, ರಾಜಕೀಯಕ್ಕಾಗಿ ಕೆಲಸ ಮಾಡುತ್ತಿಲ್ಲ. ಉದಾಹರಣೆಗೆ ಶಕ್ತಿ ಯೋಜನೆಯಡಿ ಕೇವಲ ಕಾಂಗ್ರೆಸ್ ಗೆ ಮತ ಹಾಕಿದ ಮಹಿಳೆಯರು ಮಾತ್ರ ಪ್ರಯಾಣ ಮಾಡುತ್ತಿಲ್ಲ. ಎಲ್ಲರೂ ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾರೆ. ಐದು ಗ್ಯಾರಂಟಿಗಳು ಸಮಾಜದ ಎಲ್ಲಾ ವರ್ಗದವರನ್ನು ತಲುಪಿವೆ. ಇದರಿಂದ ರಾಜ್ಯದ ಜಿಡಿಪಿ ಹಾಗೂ ಜೀವನ ಅತ್ಯುತ್ತಮ ಮಟ್ಟ ತಲುಪಿದೆ ಎಂದರು.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications