RCB ಫ್ಯಾನ್ಸ್ಗೆ ಗುಡ್ ನ್ಯೂಸ್: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿ: ಡಿ ಕೆ ಶಿವಕುಮಾರ್ ಹೇಳಿದ್ದೇನು?
ಬೆಳಗಾವಿ, ಡಿಸೆಂಬರ್ 10: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.
ಬೆಳಗಾವಿಯ ಸರ್ಕಿಟ್ ಹೌಸ್ ನಲ್ಲಿ ಕೆಎಸ್ ಸಿಎ ನೂತನ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಅವರು ತಮ್ಮನ್ನು ಭೇಟಿ ಮಾಡಿದ ನಂತರ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿ, ನಮಗೆ ಕ್ರಿಕೆಟ್ ಪಂದ್ಯಾವಳಿ ನಿಲ್ಲಿಸಬೇಕು ಎನ್ನುವ ಯಾವುದೇ ಉದ್ದೇಶವಿಲ್ಲ. ಆದರೆ ಜನಜಂಗುಳಿಯ ನಿಯಂತ್ರಣ ಕ್ರಮಗಳ ಬಗ್ಗೆ ಆಲೋಚಿಸಬೇಕು. ಜೊತೆಗೆ ಮೈಕಲ್ ಡಿ ಕುನ್ಹಾ ಸಮಿತಿ ನೀಡಿರುವ ಸಲಹೆಗಳನ್ನು ಹಂತ, ಹಂತವಾಗಿ ಪಾಲನೆ ಮಾಡುವುದು ನಮ್ಮ ಆಲೋಚನೆ. ಇದನ್ನು ವೆಂಕಟೇಶ್ ಪ್ರಸಾದ್ ಅವರು ಕೂಡ ಒಪ್ಪಿಕೊಂಡಿದ್ದಾರೆ ಎಂದರು.

ನಮ್ಮ ರಾಜ್ಯದ ಗೌರವ, ಸ್ವಾಭಿಮಾನಕ್ಕೆ ಯಾವುದೇ ಧಕ್ಕೆ ಆಗದ ರೀತಿಯಲ್ಲಿ ಕ್ರಿಕೆಟ್ ಅಭಿಮಾನಿಗಳ ಭಾವನೆಗಳಿಗೆ ಸ್ಪಂದಿಸಲು ನಮ್ಮ ಸರ್ಕಾರ ಬದ್ದವಾಗಿದೆ. ಐಪಿಎಲ್ ಸೇರಿದಂತೆ ಯಾವುದೇ ಪಂದ್ಯಗಳು ಬೆಂಗಳೂರಿನಿಂದ ಹೊರಗೆ ಹೋಗಲು ಬಿಡುವುದಿಲ್ಲ. ಒಗ್ಗೂಡಿ ಕೆಲಸ ಮಾಡೋಣ ಎಂದು ತಿಳಿಸಿದ್ದೇನೆ. ನೂತನ ಸ್ಟೇಡಿಯಂಗಳ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. ಇದರ ಬಗ್ಗೆಯೂ ಚರ್ಚೆ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಂದೆ ನಡೆಯುವ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಬೇಕು ಎಂದು ನೂತನವಾಗಿ ಕೆಎಸ್ ಸಿಎ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಮತ್ತು ತಂಡದವರು ಮುಖ್ಯಮಂತ್ರಿಯವರು ಹಾಗೂ ನನ್ನನ್ನು ಭೇಟಿ ಮಾಡಿ ಸರ್ಕಾರದ ಸಹಕಾರ ಕೋರಿದ್ದಾರೆ ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.
ಮಾಜಿ ಕ್ರಿಕೆಟಿಗರಾದ ಜಾವಗಲ್ ಶ್ರೀನಾಥ್, ಅನಿಲ್ ಕುಂಬ್ಳೆ ಅವರ ಬೆಂಬಲ ಹೊಂದಿರುವ ಹಾಗೂ ನೂತನ ಜವಾಬ್ದಾರಿ ಹೊತ್ತಿರುವ ವೆಂಕಟೇಶ್ ಪ್ರಸಾದ್ ಅವರ ತಂಡ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಲಿ ಎಂದು ಆಶಿಸುತ್ತೇನೆ. ಇವರಿಗೆ ಸರ್ಕಾರದ ಪರವಾಗಿ ಅಭಿನಂದನೆಗಳನ್ನು ತಿಳಿಸಿದ್ದೇನೆ ಎಂದರು.
ಧರ್ಮಸ್ಥಳ ವಿಚಾರದಲ್ಲಿ ನೀವು ಷಡ್ಯಂತ್ರ ನಡೆದಿದೆ ಎಂದು ಈ ಹಿಂದೆ ಹೇಳಿದ್ದೀರಿ. ಈಗ ಸಿಕ್ಕಿರುವ ಚಾರ್ಜ್ ಶೀಟ್ ನಲ್ಲಿ ದೂರುದಾರರೇ ಆರೋಪಿಗಳು ಎನ್ನುವ ಮಾಹಿತಿ ಇದೆ ಎಂದು ಕೇಳಿದಾಗ, "ನನಗೆ ಧರ್ಮಸ್ಥಳದ ಇತಿಹಾಸ ಗೊತ್ತು ಹಾಗೂ ಅವರು ಯಾರೂ ಸಹ ಈ ರೀತಿ ಮಾಡುವುದಿಲ್ಲ ಎನ್ನುವುದೂ ಗೊತ್ತಿತ್ತು. ಆದ ಕಾರಣಕ್ಕೆ ನಾನು ಧೈರ್ಯದಿಂದ ಈ ವಿಚಾರವನ್ನು ಹೇಳಿದ್ದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.
ಚಾರ್ಜ್ ಶೀಟ್ ಪ್ರತಿಯಲ್ಲಿ ಏನಿದೆ ಎಂದು ನಾನು ಓದಿಲ್ಲ. ಸರ್ಕಾರ ಕಾನೂನಿನ ಅಡಿ ಏನು ಕ್ರಮ ತೆಗೆದುಕೊಳ್ಳಬೇಕು ಅದು ನಡೆಯುತ್ತದೆ. ಅಂತಿಮವಾಗಿ ಸತ್ಯ ಹೊರಗಡೆ ಬಂದಿದೆ. ಬಿಜೆಪಿ ಹಾಗೂ ಆರ್ ಎಸ್ ಎಸ್ ನಡುವಿನ ಆಳವಾದ ಭಿನ್ನಾಭಿಪ್ರಾಯಗಳ ಕಾರಣಕ್ಕೆ ಈ ಪಿತೂರಿ ನಡೆದಿದೆ ಎಂದರು.
ರೈತರ ವಿಚಾರಗಳನ್ನು ಸರ್ಕಾರ ಸರಿಯಾಗಿ ನಿಭಾಯಿಸಿಲ್ಲ ಎನ್ನುವ ವಿಪಕ್ಷಗಳ ಆರೋಪದ ಕುರಿತು ಮಾತನಾಡಿ, ಇದೆಲ್ಲವೂ ರಾಜಕೀಯ ಆರೋಪಗಳು. ನಮ್ಮ ಸರ್ಕಾರ ರೈತರ ಸಮಸ್ಯೆಗಳನ್ನು ಬಗೆಹರಿಸಿದೆ. ಕಬ್ಬು ಹಾಗೂ ಮೆಕ್ಕೆಜೋಳ ಖರೀದಿ ವಿಚಾರದಲ್ಲಿ ದೊಡ್ಡ ತೀರ್ಮಾನ ತೆಗೆದುಕೊಂಡಿದ್ದೇವೆ. ಬಿಜೆಪಿ ಈ ವಿಚಾರದಲ್ಲಿ ವಿಫಲವಾಗಿದೆ ಎಂದು ಡಿ ಕೆ ಶಿವಕುಮಾರ್ ಹೇಳಿದರು.
ದ್ವೇಷ ಭಾಷಣ ನಿಯಂತ್ರಣ ವಿಧೇಯಕ ವಿಚಾರವಾಗಿ ಕೇಳಿದಾಗ, ಇದು ನಮ್ಮ ಸರ್ಕಾರದ ಅಜೆಂಡಾ. ನಮ್ಮ ರಾಜ್ಯದಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡಬೇಕಿದೆ. ದ್ವೇಷ ಭಾಷಣವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದರು. ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆಯಲ್ಲಿ ಭಾಗಿಯಾಗಿರುವ ಭಜರಂಗದಳವನ್ನ ಬ್ಯಾನ್ ಮಾಡಬೇಕು ಎನ್ನುವ ಬಿ.ಕೆ.ಹರಿಪ್ರಸಾದ್ ಅವರ ಹೇಳಿಕೆ ಬಗ್ಗೆ ಮಾತನಾಡಿ, ನಮ್ಮ ಕಾರ್ಯಕರ್ತನ ಹತ್ಯೆಯಾಗಿರುವುದು ನನಗೆ ತಿಳಿದಿದೆ. ಬಿ.ಕೆ.ಹರಿಪ್ರಸಾದ್ ಅವರ ಹೇಳಿಕೆ ಗಮನಿಸಿಲ್ಲ. ಇದರ ಬಗ್ಗೆ ತಿಳಿದು ನಂತರ ಮಾತನಾಡುತ್ತೇನೆ ಎಂದರು.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ












Click it and Unblock the Notifications