Get Updates
Get notified of breaking news, exclusive insights, and must-see stories!

ಹಾಸನಾಂಬ ತಾಯಿ ದರ್ಶನ ಪಡೆದ ಸಿಎಂ, ಡಿಸಿಎಂ: ಯಾರಿಗೆ ತಾಯಿ ಪ್ರಸಾದ?

ಬೆಂಗಳೂರು, ಅಕ್ಟೋಬರ್‌ 17: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಾಸನಾಂಬ ತಾಯಿಗೆ ಸಿಎಂ ಸ್ಥಾನದ ಪರೀಕ್ಷೆ ಒಡ್ಡಿದ್ದು, ಹಾಸನಾಂಬ ತಾಯಿ ಸಿದ್ದರಾಮಯ್ಯ ಅವರಿಗೆ ಸೊನ್ನೆ, ಡಿ.ಕೆ. ಶಿವಕುಮಾರ್ ಅವರಿಗೆ ಅಂಕದ ಪ್ರಸಾದ ನೀಡಿದ್ದಾಳೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ತಿಳಿಸಿದ್ದಾರೆ.

ಹಾಸನಾಂಬ ದರ್ಶನದಲ್ಲಿ ಡಿ.ಕೆ. ಶಿವಕುಮಾರ್ ಅವರಿಗೆ ಎರಡು ಹೂವುಗಳ ಪ್ರಸಾದ ಸಿಕ್ಕಿದೆ. ಒಂದು ಪ್ರಸಾದದಲ್ಲಿ ಕೆಂಪು ಹೂ ಬಂದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊರಗೆ ಎನ್ನುವ ಸಂದೇಶ ನೀಡಿದೆ. ಮತ್ತೊಂದು ಪ್ರಸಾದದಲ್ಲಿ ಹಳದಿ ಹೂ ಬಂದಿದ್ದು, ಅವರಿಗೆ ಮುಖ್ಯಮಂತ್ರಿ ಆಗುವುದಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ ಎಂದು ವಿವರಿಸಿದರು. ಸಿದ್ದರಾಮಯ್ಯ ಅವರು ಸ್ಪರ್ಧಿಸುವ ರೀತಿಯಲ್ಲಿ ಮರುದಿನವೇ ಹಾಸನಾಂಬ ದೇವರ ಬಳಿ ವರ ಕೇಳುವುದಕ್ಕೆ ಹೋಗಿದ್ದಾರೆ. ಆದರೆ ಸಿದ್ದರಾಮಯ್ಯ ಅವರಿಗೆ ವರ ನೀಡಿಲ್ಲ ಎಂದು ಹೇಳಿದರು.

DK Shivakumar received two prasadams during his visit to Hassanamba R Ashok

ಕಾಂಗ್ರೆಸ್ ಸರ್ಕಾರ ಬಂದು ಎರಡೂವರೆ ವರ್ಷ ಆಗಿದ್ದು, ನವೆಂಬರ್ ಕ್ರಾಂತಿ ಶುರುವಾಗಿದೆ. ಡಿ.ಕೆ. ಶಿವಕುಮಾರ್ ಅವರು ಇಷ್ಟು ದಿನ ಹೇಳದ ಸತ್ಯವನ್ನು ಈ ಸಂದರ್ಭದಲ್ಲಿ ಪದೇ ಪದೇ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತು ಸಿದ್ದರಾಮಯ್ಯ ಅವರಿಗೆ ಬೆದರಿಕೆ ಹಾಕುವುದಕ್ಕೆ ಹೇಳುತ್ತಿದ್ದಾರೆಯೇ ಎಂದು ಪ್ರಶ್ನಿಸಿದರು. ಅವರ ಹೇಳಿಕೆ ನಿಜವಾಗಿದ್ದರೆ ಕರೆ ಮಾಡಿದವರು ಯಾರು, ಯಾವ ನಂಬರ್‍ನಿಂದ ಕರೆ ಬಂದಿತ್ತು ಮತ್ತು ಯಾವ ಕಾರಣಕ್ಕೆ ಕರೆ ಮಾಡಿದರು ಎಂದು ನಿಜ ಹೇಳಬೇಕು ಎಂದು ತಿಳಿಸಿದರು.

ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸವಾಲು ಹಾಕಿದ್ದಾರೆ. ಸಿಎಂ ಸ್ಥಾನ ನೀಡುವುದು ಕಾಂಗ್ರೆಸ್ ಪಕ್ಷಕ್ಕೆ ಬಿಟ್ಟಿದ್ದು, ಆದರೆ ಹೇಳಿಕೆ ನೀಡಿರುವ ಉದ್ದೇಶ ಅಧಿಕಾರ ಹಸ್ತಾಂತರ ಸಮಯ ಮತ್ತು ಕ್ರಾಂತಿ ಎಂಬುದು ನವೆಂಬರ್‍ನಲ್ಲಿ ಆಗಬೇಕು ಎಂದು ತಿಳಿಸಿದರು. ಶಿವಕುಮಾರ್ ಅವರು ನಿಷ್ಠಾವಂತ ಪಕ್ಷದ ಕಾರ್ಯಕರ್ತ ಎಂದು ಹೇಳುತ್ತಾರೆ. ಹಾಗಿದ್ದಲ್ಲಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷದ ನಕಲಿ ಕಾರ್ಯಕರ್ತರೇ ಎಂದು ಪ್ರಶ್ನಿಸಿದರು. ಜನರಿಗೆ ಸಿದ್ದರಾಮಯ್ಯ ಅವರು ನಕಲಿ ಕಾಂಗ್ರೆಸ್ ಕಾರ್ಯಕರ್ತ ಎಂದು ಡಿ.ಕೆ. ಶಿವಕುಮಾರ್ ಅವರು ಸಂದೇಶ ನೀಡುತ್ತಿದ್ದು, ಒಂದೇ ಕಲ್ಲಿನಲ್ಲಿ ಎರಡು ಹಕ್ಕಿಯನ್ನು ಹೊಡೆಯುವ ಉದ್ದೇಶ ಅವರದು ಎಂದು ತಿಳಿಸಿದರು.

ಶಿವಕುಮಾರ್ ಅವರು ಭ್ರಷ್ಟಾಚಾರದ ಪ್ರಕರಣದಲ್ಲಿ ಜೈಲಿಗೆ ಹೋಗಿಬಂದಿರುವುದು ಎಲ್ಲರಿಗೂ ತಿಳಿದಿರುವ ವಿಷಯ. ಆದರೆ ಈ ಸಂದರ್ಭದಲ್ಲಿ ಹೇಳುತ್ತಿದ್ದಾರೆ ಎಂದರೆ, ಅವರಿಗೆ ಸಿಎಂ ಸ್ಥಾನವನ್ನು ನೀಡಿದರೆ ಹಸಿರು ಬಣ್ಣದ ಬಸ್ ಹತ್ತುತ್ತೇನೆ; ಕೊಡದಿದ್ದರೆ ಕೆಂಪು ಬಸ್ ಹತ್ತುತ್ತೇನೆ ಎಂದು ಕಾಂಗ್ರೆಸ್ ಹೈಕಮಾಂಡಿಗೆ ಸಂದೇಶ ನೀಡುತ್ತಿದ್ದಾರೆ ಎಂದು ವಿಶ್ಲೇಷಿಸಿದರು. ಶಿವಕುಮಾರ್ ಅವರು ನವೆಂಬರ್ ಕ್ರಾಂತಿಯ ಮುನ್ಸೂಚನೆ ನೀಡುತ್ತಿದ್ದು, ಸಿಎಂ ಸ್ಥಾನ ಸಿಗದಿದ್ದರೆ ಅವರಿಗೆ ಕರೆ ಮಾಡಿರುವವರ ಬಳಿ ಹೋಗುತ್ತೇನೆ ಎಂದು ಕಾಂಗ್ರೆಸ್ ಹೈಕಮಾಂಡಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿದರು.

ರಾಜ್ಯದ ಪಾಲಾಗಬೇಕಿದ್ದ ಎಐ ಕಂಪನಿಯು ಆಂಧ್ರದ ಪಾಲಾಗಿದೆ. ಇದರಿಂದ 30 ಸಾವಿರ ಉದ್ಯೋಗಗಳು ಕೈತಪ್ಪಿವೆ. ಕರ್ನಾಟಕದಲ್ಲಿನ ರಸ್ತೆ ಗುಂಡಿಗಳು ಮತ್ತು ಬೆಂಗಳೂರಿನ ಕಸದ ರಾಶಿಗೆ ಯಾವ ಉದ್ಯಮಿಗಳೂ ಬರುವುದಿಲ್ಲ. ಇದನ್ನು ಮುಚ್ಚಿಹಾಕಲು ಸಿದ್ದರಾಮಯ್ಯ ಅವರು ಆರ್.ಎಸ್.ಎಸ್ ವಿಚಾರವನ್ನು ಪ್ರಿಯಾಂಕ್ ಖರ್ಗೆ ಅವರ ಕೈಯಲ್ಲಿ ಹೇಳಿಸುತ್ತಿದ್ದು, ಅವರನ್ನು ಬಲಿಪಶು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಆರ್.ಎಸ್.ಎಸ್. ಸಂಘಟನೆಯ ಬಗ್ಗೆ ಮಾತನಾಡುವುದನ್ನು ಬಿಟ್ಟು ಸರ್ಕಾರ ರಾಜ್ಯದ ಅಭಿವೃದ್ಧಿ ಕಡೆ ಗಮನ ಕೊಡಬೇಕು ಮತ್ತು ರಾಜ್ಯದ ಯುವಕರಿಗೆ ಉದ್ಯೋಗ ಅವಕಾಶಗಳನ್ನು ಸೃಷ್ಟಿಸಬೇಕು ಎಂದು ಅವರು ಆಗ್ರಹಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+