ಹಾಸನಾಂಬ ತಾಯಿ ದರ್ಶನ ಪಡೆದ ಸಿಎಂ, ಡಿಸಿಎಂ: ಯಾರಿಗೆ ತಾಯಿ ಪ್ರಸಾದ?
ಬೆಂಗಳೂರು, ಅಕ್ಟೋಬರ್ 17: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಾಸನಾಂಬ ತಾಯಿಗೆ ಸಿಎಂ ಸ್ಥಾನದ ಪರೀಕ್ಷೆ ಒಡ್ಡಿದ್ದು, ಹಾಸನಾಂಬ ತಾಯಿ ಸಿದ್ದರಾಮಯ್ಯ ಅವರಿಗೆ ಸೊನ್ನೆ, ಡಿ.ಕೆ. ಶಿವಕುಮಾರ್ ಅವರಿಗೆ ಅಂಕದ ಪ್ರಸಾದ ನೀಡಿದ್ದಾಳೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ತಿಳಿಸಿದ್ದಾರೆ.
ಹಾಸನಾಂಬ ದರ್ಶನದಲ್ಲಿ ಡಿ.ಕೆ. ಶಿವಕುಮಾರ್ ಅವರಿಗೆ ಎರಡು ಹೂವುಗಳ ಪ್ರಸಾದ ಸಿಕ್ಕಿದೆ. ಒಂದು ಪ್ರಸಾದದಲ್ಲಿ ಕೆಂಪು ಹೂ ಬಂದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊರಗೆ ಎನ್ನುವ ಸಂದೇಶ ನೀಡಿದೆ. ಮತ್ತೊಂದು ಪ್ರಸಾದದಲ್ಲಿ ಹಳದಿ ಹೂ ಬಂದಿದ್ದು, ಅವರಿಗೆ ಮುಖ್ಯಮಂತ್ರಿ ಆಗುವುದಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ ಎಂದು ವಿವರಿಸಿದರು. ಸಿದ್ದರಾಮಯ್ಯ ಅವರು ಸ್ಪರ್ಧಿಸುವ ರೀತಿಯಲ್ಲಿ ಮರುದಿನವೇ ಹಾಸನಾಂಬ ದೇವರ ಬಳಿ ವರ ಕೇಳುವುದಕ್ಕೆ ಹೋಗಿದ್ದಾರೆ. ಆದರೆ ಸಿದ್ದರಾಮಯ್ಯ ಅವರಿಗೆ ವರ ನೀಡಿಲ್ಲ ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರ ಬಂದು ಎರಡೂವರೆ ವರ್ಷ ಆಗಿದ್ದು, ನವೆಂಬರ್ ಕ್ರಾಂತಿ ಶುರುವಾಗಿದೆ. ಡಿ.ಕೆ. ಶಿವಕುಮಾರ್ ಅವರು ಇಷ್ಟು ದಿನ ಹೇಳದ ಸತ್ಯವನ್ನು ಈ ಸಂದರ್ಭದಲ್ಲಿ ಪದೇ ಪದೇ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತು ಸಿದ್ದರಾಮಯ್ಯ ಅವರಿಗೆ ಬೆದರಿಕೆ ಹಾಕುವುದಕ್ಕೆ ಹೇಳುತ್ತಿದ್ದಾರೆಯೇ ಎಂದು ಪ್ರಶ್ನಿಸಿದರು. ಅವರ ಹೇಳಿಕೆ ನಿಜವಾಗಿದ್ದರೆ ಕರೆ ಮಾಡಿದವರು ಯಾರು, ಯಾವ ನಂಬರ್ನಿಂದ ಕರೆ ಬಂದಿತ್ತು ಮತ್ತು ಯಾವ ಕಾರಣಕ್ಕೆ ಕರೆ ಮಾಡಿದರು ಎಂದು ನಿಜ ಹೇಳಬೇಕು ಎಂದು ತಿಳಿಸಿದರು.
ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸವಾಲು ಹಾಕಿದ್ದಾರೆ. ಸಿಎಂ ಸ್ಥಾನ ನೀಡುವುದು ಕಾಂಗ್ರೆಸ್ ಪಕ್ಷಕ್ಕೆ ಬಿಟ್ಟಿದ್ದು, ಆದರೆ ಹೇಳಿಕೆ ನೀಡಿರುವ ಉದ್ದೇಶ ಅಧಿಕಾರ ಹಸ್ತಾಂತರ ಸಮಯ ಮತ್ತು ಕ್ರಾಂತಿ ಎಂಬುದು ನವೆಂಬರ್ನಲ್ಲಿ ಆಗಬೇಕು ಎಂದು ತಿಳಿಸಿದರು. ಶಿವಕುಮಾರ್ ಅವರು ನಿಷ್ಠಾವಂತ ಪಕ್ಷದ ಕಾರ್ಯಕರ್ತ ಎಂದು ಹೇಳುತ್ತಾರೆ. ಹಾಗಿದ್ದಲ್ಲಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷದ ನಕಲಿ ಕಾರ್ಯಕರ್ತರೇ ಎಂದು ಪ್ರಶ್ನಿಸಿದರು. ಜನರಿಗೆ ಸಿದ್ದರಾಮಯ್ಯ ಅವರು ನಕಲಿ ಕಾಂಗ್ರೆಸ್ ಕಾರ್ಯಕರ್ತ ಎಂದು ಡಿ.ಕೆ. ಶಿವಕುಮಾರ್ ಅವರು ಸಂದೇಶ ನೀಡುತ್ತಿದ್ದು, ಒಂದೇ ಕಲ್ಲಿನಲ್ಲಿ ಎರಡು ಹಕ್ಕಿಯನ್ನು ಹೊಡೆಯುವ ಉದ್ದೇಶ ಅವರದು ಎಂದು ತಿಳಿಸಿದರು.
ಶಿವಕುಮಾರ್ ಅವರು ಭ್ರಷ್ಟಾಚಾರದ ಪ್ರಕರಣದಲ್ಲಿ ಜೈಲಿಗೆ ಹೋಗಿಬಂದಿರುವುದು ಎಲ್ಲರಿಗೂ ತಿಳಿದಿರುವ ವಿಷಯ. ಆದರೆ ಈ ಸಂದರ್ಭದಲ್ಲಿ ಹೇಳುತ್ತಿದ್ದಾರೆ ಎಂದರೆ, ಅವರಿಗೆ ಸಿಎಂ ಸ್ಥಾನವನ್ನು ನೀಡಿದರೆ ಹಸಿರು ಬಣ್ಣದ ಬಸ್ ಹತ್ತುತ್ತೇನೆ; ಕೊಡದಿದ್ದರೆ ಕೆಂಪು ಬಸ್ ಹತ್ತುತ್ತೇನೆ ಎಂದು ಕಾಂಗ್ರೆಸ್ ಹೈಕಮಾಂಡಿಗೆ ಸಂದೇಶ ನೀಡುತ್ತಿದ್ದಾರೆ ಎಂದು ವಿಶ್ಲೇಷಿಸಿದರು. ಶಿವಕುಮಾರ್ ಅವರು ನವೆಂಬರ್ ಕ್ರಾಂತಿಯ ಮುನ್ಸೂಚನೆ ನೀಡುತ್ತಿದ್ದು, ಸಿಎಂ ಸ್ಥಾನ ಸಿಗದಿದ್ದರೆ ಅವರಿಗೆ ಕರೆ ಮಾಡಿರುವವರ ಬಳಿ ಹೋಗುತ್ತೇನೆ ಎಂದು ಕಾಂಗ್ರೆಸ್ ಹೈಕಮಾಂಡಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿದರು.
ರಾಜ್ಯದ ಪಾಲಾಗಬೇಕಿದ್ದ ಎಐ ಕಂಪನಿಯು ಆಂಧ್ರದ ಪಾಲಾಗಿದೆ. ಇದರಿಂದ 30 ಸಾವಿರ ಉದ್ಯೋಗಗಳು ಕೈತಪ್ಪಿವೆ. ಕರ್ನಾಟಕದಲ್ಲಿನ ರಸ್ತೆ ಗುಂಡಿಗಳು ಮತ್ತು ಬೆಂಗಳೂರಿನ ಕಸದ ರಾಶಿಗೆ ಯಾವ ಉದ್ಯಮಿಗಳೂ ಬರುವುದಿಲ್ಲ. ಇದನ್ನು ಮುಚ್ಚಿಹಾಕಲು ಸಿದ್ದರಾಮಯ್ಯ ಅವರು ಆರ್.ಎಸ್.ಎಸ್ ವಿಚಾರವನ್ನು ಪ್ರಿಯಾಂಕ್ ಖರ್ಗೆ ಅವರ ಕೈಯಲ್ಲಿ ಹೇಳಿಸುತ್ತಿದ್ದು, ಅವರನ್ನು ಬಲಿಪಶು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಆರ್.ಎಸ್.ಎಸ್. ಸಂಘಟನೆಯ ಬಗ್ಗೆ ಮಾತನಾಡುವುದನ್ನು ಬಿಟ್ಟು ಸರ್ಕಾರ ರಾಜ್ಯದ ಅಭಿವೃದ್ಧಿ ಕಡೆ ಗಮನ ಕೊಡಬೇಕು ಮತ್ತು ರಾಜ್ಯದ ಯುವಕರಿಗೆ ಉದ್ಯೋಗ ಅವಕಾಶಗಳನ್ನು ಸೃಷ್ಟಿಸಬೇಕು ಎಂದು ಅವರು ಆಗ್ರಹಿಸಿದರು.
-
ಬೆಂಗಳೂರಲ್ಲಿ 'ಹೊಸ ಪಾದಚಾರಿ ನೀತಿ': ನೋಂದಣಿ ಆಗದವರ ವ್ಯಾಪಾರಕ್ಕಿಲ್ಲ ಅವಕಾಶ: ಡಿಕೆ ಶಿವಕುಮಾರ್ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ?












Click it and Unblock the Notifications