CM vs DCM: 5 ವರ್ಷ ಸಿದ್ದರಾಮಯ್ಯನವರೇ ಸಿಎಂ ಎಂದ ಯತೀಂದ್ರ: ಮಾರ್ಮಿಕವಾಗಿ ಉತ್ತರ ಕೊಟ್ಟ ಡಿ.ಕೆ. ಶಿವಕುಮಾರ್
ಬೆಳಗಾವಿ, ಡಿಸೆಂಬರ್ 11: ಸಿದ್ದರಾಮಯ್ಯ ಅವರು ಪೂರ್ಣ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿರುತ್ತಾರೆ ಎಂಬ ವಿಧಾನ ಪರಿಷತ್ ಸದಸ್ಯ ಯತೀಂದ್ರ ಅವರ ಹೇಳಿಕೆಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾರ್ಮಿಕವಾಗಿ ಪ್ರತಿಕ್ರಿಯಿಸಿದ್ದಾರೆ. ನಾಯಕತ್ವ ವಿಚಾರವಾಗಿ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಮುಖ್ಯಮಂತ್ರಿಗಳು ಉತ್ತರ ನೀಡುತ್ತಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೇಳಿದರು.
ಬೆಳಗಾವಿಯ ಸುವರ್ಣ ವಿಧಾನಸೌಧ ಹಾಗೂ ಸರ್ಕಿಟ್ ಹೌಸ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮಾತನಾಡಿ, ದ್ವೇಷ ಭಾಷಣ ತಡೆ ವಿಧೇಯಕ ಮಂಡನೆಗೆ ಬಿಜೆಪಿ ವಿರೋಧ ಮಾಡುತ್ತಿದೆ. ಜಾತಿ-ಜಾತಿಗಳು, ಧರ್ಮ-ಧರ್ಮಗಳ ಮಧ್ಯೆ ದ್ವೇಷ ಬಿತ್ತುವ, ವೈಯಕ್ತಿಕ ನಿಂದನೆಯ ಪಿತಾಮಹರು ಈ ಬಿಜೆಪಿವವರು. ಸಂವಿಧಾನದ ಆಶಯಗಳ ಪ್ರಕಾರ ಅವರು ನಡೆದುಕೊಳ್ಳಲಿ. ಸಂವಿಧಾನಕ್ಕೆ ಗೌರವ ಕೊಡುವ ಇಚ್ಛೆ ಅವರಿಗಿದ್ದರೆ, ಅದನ್ನು ಪಾಲಿಸಲಿ ಎಂದು ಹೇಳಿದರು. ದ್ವೇಷ ಮಾಡಣ ಮಾಡದೇ ಹೋದರೆ ಸಮಸ್ಯೆಯೇ ಇರುವುದಿಲ್ಲವಲ್ಲ. ಸಂವಿಧಾನದ ರಕ್ಷಣೆಗೆ ನಾವು ಈ ಕ್ರಮ ಕೈಗೊಂಡಿದ್ದೇವೆ ಎಂದು ತಿಳಿಸಿದರು.

ನೆಹರು ಹಾಗೂ ಇಂದಿರಾ ಗಾಂಧಿ ಅವರು ಮತ ಕಳ್ಳತನ ಮಾಡಿದ್ದರು ಎಂಬ ಅಮಿತ್ ಶಾ ಹೇಳಿಕೆ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ್ದು, ಅಮಿತ್ ಶಾ ಅವರು ಈ ಬಗ್ಗೆ ಕನಿಷ್ಟ ಜ್ಞಾನ ಹೊಂದಿರಬೇಕು. ಅವರ ಕಾಲದಲ್ಲಿ ಬ್ಯಾಲೆಟ್ ಪೇಪರ್ ಬಳಸಲಾಗುತ್ತಿತ್ತು. ಹೀಗಿರುವಾಗ ಮತ ಕಳ್ಳತನ ಹೇಗೆ ಸಾಧ್ಯ? ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಪ್ರಶ್ನಿಸಿದರು.
ಕೆಎಸ್ ಸಿಎ ಅಧ್ಯಕ್ಷರಾದ ವೆಂಕಟೇಶ್ ಪ್ರಸಾದ್ ಅವರು ನಿಮ್ಮನ್ನು ಭೇಟಿಯಾಗಿ ಸಲ್ಲಿಸಿರುವ ಮನವಿಯನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡುತ್ತೀರಾ ಎಂದು ಕೇಳಿದಾಗ, "ಕೆಎಸ್ ಸಿಎ ನೂತನ ಅಧ್ಯಕ್ಷರಾದ ವೆಂಕಟೇಶ್ ಪ್ರಸಾದ್ ಅವರು ನನ್ನನ್ನು ಹಾಗೂ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದಾರೆ. ಅವರು ಮನವಿ ನೀಡಿದ್ದು, ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡುತ್ತೇವೆ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ದುರ್ಘಟನೆ ಆಗಬಾರದಿತ್ತು. ಆದರೂ ಆಗಿದೆ. ಅನೇಕ ತಪ್ಪುಗಳು ನಡೆದಿವೆ. ಇವುಗಳನ್ನು ಸರಿಪಡಿಸಿಕೊಂಡು, ಪ್ರತ್ಯೇಕ ಮಾರ್ಗಸೂಚಿ ಅನುಸಾರ ಜನ ಸಂದಣಿ ನಿಯಂತ್ರಣ ಮಾಡಬೇಕಾಗುತ್ತದೆ ಎಂದರು.
ಈ ವಿಚಾರದಲ್ಲಿ ನಾನು ವೈಯಕ್ತಿಕವಾಗಿ ಮುಕ್ತ ಮನಸ್ಸಿನಿಂದ ಇದ್ದೇನೆ. ನಮ್ಮ ರಾಜ್ಯದ ಗೌರವ ಹಾಳು ಮಾಡಿಕೊಳ್ಳುವುದು ಬೇಡ. ಈ ವಿಚಾರವನ್ನು ಸಚಿವ ಸಂಪುಟ ಸಭೆಯ ಮುಂದಿಟ್ಟು ನಂತರ ನಿರ್ಧಾರ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಹೇಳಿದರು.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications