ರಾಜ್ಯದಲ್ಲಿ ಮೈತ್ರಿ ಸರ್ಕಾರ ಅಧಿಕಾರಕ್ಕೆ; 'ಕುಮಾರಸ್ವಾಮಿಗೆ ಅಂಗಿ, ಪಂಚೆ, ಜುಬ್ಬಾ ಕಳುಹಿಸೋಣ'
ಬೆಂಗಳೂರು, ಜೂನ್ 18: ರಾಜ್ಯದಲ್ಲಿ ಮುಂದೆ ಬಿಜೆಪಿ- ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರ ಹೇಳಿಕೆ ಸದ್ಯ ರಾಜ್ಯ ರಾಜಕೀಯದಲ್ಲಿ ಹೆಚ್ಚು ಚರ್ಚೆಯಾಗುತ್ತಿದೆ. ಈ ಕುರಿತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಪ್ರತಿಕ್ರಿಯಿಸಿದ್ದು, ಕುಮಾರಸ್ವಾಮಿ ಅವರಿಗೆ ಯಾವ ರೀತಿಯ ಪಂಚೆ, ಅಂಗಿ, ಜುಬ್ಬಾ, ಪ್ಯಾಂಟ್, ಮೇಲಂಗಿ ಬೇಕು ಎಂಬುದನ್ನು ಕಳುಹಿಸಿ ಕೊಡೋಣ. ಮಾಧ್ಯಮದವರ ಕೈಗೆ ಇವೆಲ್ಲವನ್ನು ನೀಡುತ್ತೇನೆ. ನೀವೇ ಅವರಿಗೆ ತಲುಪಿಸಿಬಿಡಿ ಎಂದು ಕುಹಕವಾಡಿದರು.
ಕಮಲಹಾಸನ್ ನಟನೆಯ ಚಿತ್ರ ಕರ್ನಾಟಕದಲ್ಲಿ ಬಿಡುಗಡೆ ಸಂಬಂಧ 24 ಗಂಟೆಯೊಳಗೆ ಸರ್ಕಾರ ವಿವರಣೆ ನೀಡಬೇಕು ಎನ್ನುವ ಸುಪ್ರೀಂ ಕೋರ್ಟ್ ನಿರ್ದೇಶನದ ಕುರಿತು ಮಾತನಾಡಿ, ಕಮಲ ಹಾಸನ್ ವಿಚಾರದಲ್ಲಿ ನ್ಯಾಯಲಯ ನೀಡಿರುವ ಆದೇಶವನ್ನು ನಾವೆಲ್ಲರೂ ಗೌರವದಿಂದ ಪಾಲನೆ ಮಾಡಬೇಕು. ನಾವು ನಮ್ಮ ಮಿತಿಯನ್ನು ಮೀರಬಾರದು, ಶಾಂತಿಯಿಂದ ಇರಬೇಕು ಎಂದು ಕನ್ನಡಪರ ಸಂಘ- ಸಂಸ್ಥೆಗಳಲ್ಲಿ ನಾನು ಮನವಿ ಮಾಡಿಕೊಳ್ಳುತ್ತೇನೆ. ಯಾರೂ ಸಹ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ನಮ್ಮ ರಾಜ್ಯ ಶಾಂತಿ ಪ್ರಿಯ ರಾಜ್ಯ ಎಂದರು.

ಅವರ ಅಭಿಪ್ರಾಯ ಹೇಳುವುದು ತಪ್ಪಲ್ಲ. ಅವರ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಅವಕಾಶ ನೀಡಿದ್ದೇವೆ. ಎಲ್ಲಾ ಜಾತಿ, ಸಂಸ್ಕೃತಿ, ಧರ್ಮಗಳನ್ನು ಬೆಂಗಳೂರು ಅರಗಿಸಿಕೊಂಡಿದೆ. ಬೆಂಗಳೂರು ಅಂತರರಾಷ್ಟ್ರೀಯ ನಗರ, ಎಲ್ಲರಿಗೂ ಬೇಕಾದ ನಗರ. ಕನ್ನಡದ ಜನರು ಹೃದಯ ಶ್ರೀಮಂತಿಕೆ ತೋರಿಸಿಕೊಂಡು ಬಂದಿದ್ದಾರೆ. ನಮ್ಮ ಸ್ವಾಭಿಮಾನವನ್ನು ಯಾರೂ ಸಹ ಹಾಳು ಮಾಡಲು ಸಾಧ್ಯವಿಲ್ಲ. ಕನ್ನಡದ ಪರ ನಾವಿದ್ದೇವೆ. ಆದರೆ ನ್ಯಾಯಲಯದ ತೀರ್ಪಿಗೆ ಗೌರವ ನೀಡಲೇ ಬೇಕು ಎಂದು ತಿಳಿಸಿದರು.
ಐಶ್ವರ್ಯಾ ಗೌಡ ಅವರ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ. ಸುರೇಶ್ ಅವರಿಗೆ ಇಡಿ ಸಮನ್ಸ್ ನೀಡಿರುವ ಕುರಿತು ಡಿ ಕೆ ಶಿವಕುಮಾರ್ ಅವರು ಮಾತನಾಡಿ, ಡಿ.ಕೆ.ಸುರೇಶ್ ಇಡಿ ತನಿಖೆಗೆ ಸಹಕಾರ ನೀಡಲಿದ್ದಾರೆ ಹಾಗೂ ತಮ್ಮ ಹೇಳಿಕೆಯನ್ನು ಸಲ್ಲಿಸಲಿದ್ದಾರೆ. ನಮ್ಮ ಹೆಸರನ್ನು ಅಪರಿಚಿತರು ದುರುಪಯೋಗ ಮಾಡಿಕೊಳ್ಳುತ್ತಾ ಇದ್ದಾರೆ ಎಂದು ಅವರು ಪೊಲೀಸರಿಗೆ ದೂರು ನೀಡಿದ್ದರು. ಶಿವಕುಮಾರ್ ತಂಗಿ ಎಂದೇಳಿಕೊಂಡು ಮೋಸ ಮಾಡಿರುವ ಬಗ್ಗೆ ವಂಚನೆಗೆ ಒಳಗಾಗಿರುವ ಮೂರು ನಾಲ್ಕು ಜನರು ನನ್ನ ಬಳಿ ಬಂದು ಹೇಳಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ಎಂದು ನಾವೂ ಸಹ ಹೇಳಿದ್ದೇವೆ. ಆದ ಕಾರಣ ನಾವು ಇಡಿಗೆ ಎಲ್ಲಾ ರೀತಿಯ ಸಹಕಾರ ನೀಡುತ್ತೇವೆ" ಎಂದು ಹೇಳಿದರು.
ಸುರೇಶ್ ಅವರು ವಿಚಾರಣೆಗೆ ಹಾಜರಾಗುತ್ತಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ್ದು, ಈ ದೇಶದ ಕಾನೂನಿಗೆ, ವಿಚಾರಣೆಗಳಿಗೆ ನಾವು ಗೌರವ ನೀಡುತ್ತೇವೆ. ಮೋಸ ಮಾಡುವ ವ್ಯಕ್ತಿಗಳ ವಿರುದ್ಧದ ತನಿಖೆಗೆ ನಾವು ಸಹಕಾರ ನೀಡಲು ಬದ್ದರಾಗಿದ್ದೇವೆ. ಜನರಿಗೆ ನ್ಯಾಯ ಒದಗಿಸಿಕೊಡುವ ಕೆಲಸವನ್ನು ಡಿ.ಕೆ.ಸುರೇಶ್ ಹಾಗೂ ಶಿವಕುಮಾರ್ ಮಾಡುತ್ತಾರೆ. ಸಹೋದರ ಡಿ.ಕೆ.ಸುರೇಶ್ ಅವರ ಮನೆ ಬಾಗಿಲಿಗೆ ಇಡಿಯವರು ಸಮನ್ಸ್ ಅನ್ನು ಅಂಟಿಸಿ ಹೋಗುತ್ತೇವೆ ಎಂದರಂತೆ. ಅದಕ್ಕೆ ನಾನು ಸ್ವೀಕರಿಸಿ ಎಂದು ಹೇಳಿದ್ದೇನೆ. ಸಮನ್ಸ್ ನೀಡಲು ಬಂದಾಗ ಸಹೋದರ ಮನೆಯಲ್ಲಿ ಇರಲಿಲ್ಲ ಎಂದು ತಿಳಿಸಿದರು.
-
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್












Click it and Unblock the Notifications