ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇಂದು (ಫೆ.14) ಡಿ.ಕೆ. ಶಿವಕುಮಾರ್ ಪುತ್ರಿ ಐಶ್ಚರ್ಯ ವಿವಾಹ

|
Google Oneindia Kannada News

ಬೆಂಗಳೂರು, ಫೆ. 13: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಹಿರಿಯ ಪುತ್ರಿ ಐಶ್ವರ್ಯ ಅವರ ವಿವಾಹ ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಅವರ ಅಳಿಯ, ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ದಾರ್ಥ ಹೆಗ್ಡೆ ಅವರ ಹಿರಿಯ ಪುತ್ರ ಅಮರ್ತ್ಯ ಹೆಗ್ಡೆ ಅವರೊಂದಿಗೆ ನಾಳೆ (ಫೆಬ್ರುವರಿ 14) ಬೆಂಗಳೂರಿನಲ್ಲಿ ನಡೆಯಲಿದೆ.

ಎರಡೂ ಕುಟುಂಬಗಳು ಮದುವೆ ಸಿದ್ಧತೆಯನ್ನು ಭರ್ಜರಿಯಾಗಿ ಆರಂಭಿಸಿದ್ದು, ವೆಲೆಂಟೈನ್ಸ್‌ ಡೇ ಅಂದೇ ಐಶ್ವರ್ಯ ಹಾಗೂ ಅಮರ್ತ್ಯ ಹೆಗ್ಡೆ ಅವರು ವಿವಾಹ ಬಂಧನಕ್ಕೆ ಒಳಗಾಗಲಿದ್ದಾರೆ. ಎಸ್‌.ಎಂ. ಕೃಷ್ಣ ಹಾಗೂ ಡಿ.ಕೆ. ಶಿವಕುಮಾರ್ ಅವರು ಕುಟುಂಬಗಳು ರಾಜ್ಯ ರಾಜಕೀಯದಲ್ಲಿ ಅತ್ಯಂತ ಪ್ರಭಾವಿಯಾಗಿವೆ. ಜೊತೆಗೆ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಗಣ್ಯರು ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದು, ಮದುವೆ ತಯಾರಿ ಜೋರಾಗಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯ ಮದುವೆ ತಯಾರಿ ಹೇಗಿದೆ ಗೊತ್ತಾ? ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯ ಮದುವೆ ತಯಾರಿ ಹೇಗಿದೆ ಗೊತ್ತಾ?

ಬೀಗರಾದ ಎಸ್‌.ಎಂ. ಕೃಷ್ಣ ಹಾಗೂ ಡಿ.ಕೆ. ಶಿವಕುಮಾರ್ ಅವರು ಖುದ್ದಾಗಿ ವಿವಾಹದ ಪ್ರತಿಯೊಂದು ಸಿದ್ಧತೆಗಳನ್ನು ನಡೆಸಿದ್ದಾರೆ. ಐಶ್ವರ್ಯ ಹಾಗೂ ಅಮರ್ತ್ಯ ಹೆಗ್ಡೆ ಅವರ ಮದುವೆ ಸಿದ್ಧತೆ ಪೂರ್ಣಗೊಂಡಿದ್ದು ನಾಳೆ ವಧು-ವರರು ವಿವಾಹ ಬಂಧನಕ್ಕೆ ಒಳಗಾಗಲಿದ್ದಾರೆ.

ನಾಳೆ (ಫೆ.14) ಅಮರ್ತ್ಯ-ಐಶ್ವರ್ಯ ವಿವಾಹ

ನಾಳೆ (ಫೆ.14) ಅಮರ್ತ್ಯ-ಐಶ್ವರ್ಯ ವಿವಾಹ

ಅಮರ್ತ್ಯ ಹೆಗ್ಡೆ ಹಾಗೂ ಐಶ್ವರ್ಯಾ ಅವರ ವಿವಾಹ ವ್ಯಾಲೆಂಟೇನ್ ಡೇಯಂದು ನಡೆಯಲಿದೆ. ಬೆಂಗಳೂರಿನ ಶೇರಟಾನ್ ಹೊಟೇಲ್‌ನಲ್ಲಿ ನಾಳೆ (ಫೆಬ್ರವರಿ 14) ವಿವಾಹ ನಡೆಯಲಿದೆ. ಈಗಾಗಲೇ ವಧು-ವರರಿಗೆ ಎಣ್ಣೆ ಶಾಸ್ತ್ರ, ಅರಿಶಿಣ ಶಾಸ್ತ್ರ ಸೇರಿದಂತೆ ಸಾಂಪ್ರದಾಯಿಕ ಕಾರ್ಯಕ್ರಮಗಳು ನಡೆದಿವೆ. ಇವತ್ತು (ಫೆಬ್ರುವರಿ 13) ಸದಾಶಿವನಗರದ ಡಿಕೆಶಿ ಅವರ ನಿವಾಸದಲ್ಲಿ ಮೆಹಂದಿ ಕಾರ್ಯಕ್ರಮ ನಡೆದಿದೆ. ನಾಳೆ ವಿವಾಹದ ಬಳಿಕ ಫೆಬ್ರುವರಿ 17 ರಂದು ಪ್ರೆಸ್ಟೀಜ್ ಗಾಲ್ಫ್‌ಶೈರ್ ರೇಸಾರ್ಟ್‌ನಲ್ಲಿ ಮದುವೆ ಆರತಕ್ಷತೆ ನಡೆಯಲಿದ್ದು, ಫೆ. 28 ರಂದು ಅರಮನೆ ಮೈದಾನದಲ್ಲಿ ಬೀಗರ ಊಟ ಏರ್ಪಡಿಸಲಾಗಿದೆ.

ಸಂಗೀತ ರಸಸಂಜೆ ಕಾರ್ಯಕ್ರಮ

ಸಂಗೀತ ರಸಸಂಜೆ ಕಾರ್ಯಕ್ರಮ

ಅಮರ್ತ್ಯ ಹೆಗ್ಡೆ ಹಾಗೂ ಐಶ್ವರ್ಯಾ ಅವರ ವಿವಾಹ ಹಿನ್ನೆಲೆಯಲ್ಲಿ ಫೆಬ್ರವರಿ 5ರಂದು ಭರ್ಜರಿ ಸಂಗೀತ ರಸ ಸಂಜೆ ಕಾರ್ಯಕ್ರಮ ನಡೆದಿದೆ. ಎರಡು ಕುಟುಂಬಗಳ ಸದಸ್ಯರು ಮಾತ್ರ ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶವಿತ್ತು. ಜೊತೆಗೆ ಮದುವೆ ಗಂಡು ಅಮರ್ತ್ಯ ಹೆಗ್ಡೆ ಅವರು ತಮ್ಮ ಸಹೋದರನೊಂದಿಗೆ ಕಾದಲನ್ ಸಿನಿಮಾದ ಹಾಡಿಗೆ ಭರ್ಜರಿ ಸ್ಟೆಪ್ಸ್ ಹಾಕಿರುವುದು ವಿಶೇಷ. ಆ ಸಂದರ್ಭದಲ್ಲಿ ಮಾಜಿ ಸಿಎಂ ಎಸ್‌.ಎಂ. ಕೃಷ್ಣ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೂ ಉಪಸ್ಥಿತರಿದ್ದರು.

ಇಂದು ನಡೆದ ಮೆಹಂದಿ ಕಾರ್ಯಕ್ರಮ

ಇಂದು ನಡೆದ ಮೆಹಂದಿ ಕಾರ್ಯಕ್ರಮ

ಫೆಬ್ರುವರಿ 10ರಂದು ಅರಿಶಿಣ ಕಾರ್ಯಕ್ರಮ ಮುಗಿದಿದೆ. ಇಂದು ಬೆಂಗಳೂರಿನ ಸದಾಶಿವನಗರದ ಡಿ.ಕೆ. ಶಿವಕುಮಾರ್ ಅವರ ನಿವಾಸದಲ್ಲಿ ಮೆಹಂದಿ ಕಾರ್ಯಕ್ರಮ ನಡೆದಿದ್ದು, ಆಯ್ದ ಸಂಬಂಧಿಕರಿಗೆ ಮಾತ್ರ ಆಹ್ವಾನ ನೀಡಲಾಗಿದೆ ಎನ್ನಲಾಗಿತ್ತು. ಮೆಹಂದಿ ಕಾರ್ಯಕ್ರಮವನ್ನು ಸಾಂಪ್ರದಾಯಿಕವಾಗಿ ವಿಶೇಷವಾಗಿ ಎರಡೂ ಕುಟುಂಬಗಳು ಮಾಡಿ ಮುಗಿಸಿವೆ.

ಹೈ ಪ್ರೋಫೈಲ್ ವಿವಾಹ

ಹೈ ಪ್ರೋಫೈಲ್ ವಿವಾಹ

ಐಶ್ವರ್ಯಾ ಹಾಗೂ ಅಮರ್ತ್ಯ ಹೆಗ್ಡೆ ಅವರ ಮದುವೆ ಹೆಣ್ಣು ನೋಡುವ ಶಾಸ್ತ್ರದಿಂದ ಆರಂಭಿಸಿ ಪ್ರತಿಯೊಂದನ್ನು ಅತ್ಯಂತ ಸಾಂಪ್ರದಾಯಿಕವಾಗಿ ನಡೆಯುತ್ತಿದೆ. ವಿವಾಹದಲ್ಲಿನ ಪ್ರತಿಯೊಂದನ್ನು ಆಚರಣೆಯನ್ನು ತಮ್ಮ ಆಪ್ತ ಜ್ಯೋತಿಷಿ ಡಾ. ಬಿ.ಪಿ. ಆರಾಧ್ಯ ಅವರ ಸಲಹೆಯಂತೆಯೆ ಡಿ.ಕೆ. ಶಿವಕುಮಾರ್ ಅವರು ನೆರವೇರಿಸುತ್ತಿದ್ದಾರೆ.


ಕಳೆದ ಜೂನ್ 12, 2020ರಂದು ಡಿ.ಕೆ. ಶಿವಕುಮಾರ್ ಕುಟುಂಬದವರು ಸದಾಶಿವನಗರದ ಎಸ್.ಎಂ. ಕೃಷ್ಣ ನಿವಾಸಕ್ಕೆ ತೆರಳಿ ಮದುವೆ ಮಾತುಕತೆ ನಡೆಸಿದ್ದರು. ನಂತರ ನವೆಂಬರ್ 18, 2020ರಂದು ಐಶ್ವರ್ಯಾ ಹಾಗೂ ಅಮರ್ತ್ಯ ಹೆಗ್ಡೆ ಅವರ ಮದುವೆ ನಿಶ್ಚಿತಾರ್ಥ ಬೆಂಗಳೂರಿನ ಹೊರವಲಯದ ಹೋಟೆಲ್‌ನಲ್ಲಿ ನಡೆದಿತ್ತು. ಎಸ್‌ಎಂಕೆ ಅವರು ಬಿಜೆಪಿ ನಾಯಕರಿಗೆ ಆಹ್ವಾನ ನೀಡಿದ್ದರು.


ಇದೀಗ ವಿವಾಹಕ್ಕೆ ರಾಜ್ಯ ಹಾಗೂ ರಾಷ್ಟ್ರಮಟ್ಟದ ಗಣ್ಯರಿಗೆ ಎಸ್‌ಎಂಕೆ ಹಾಗೂ ಡಿಕೆಶಿ ಆಹ್ವಾನ ಕೊಟ್ಟಿದ್ದಾರೆ. ಹೀಗಾಗಿ ಫೆಬ್ರುವರಿ 14 ರಂದು ರಾಜ್ಯ ಹಾಗೂ ರಾಷ್ಟ್ರದ ರಾಜಕೀಯ ನಾಯಕರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ.

English summary
Aishwarya, the eldest daughter of KPCC president DK Shivakumar, is marrying to former chief minister SM Krishna Krishna's son-in-law, the late V.G. Siddhartha Hegde's eldest son Amartya Hegde will be in Bangalore on February 14. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X