ರಾಜೀನಾಮೆ ಬಗ್ಗೆ ಮಾತನಾಡಿದ ಡಿ.ಕೆ ಶಿವಕುಮಾರ್: ಕಾರಣವೇನು?
ಬೆಂಗಳೂರು, ಡಿಸೆಂಬರ್ 05: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ ಸುಳ್ಳು ಹೇಳಿದ್ದರೆ ಇಂದೇ ರಾಜೀನಾಮೆ ನೀಡುವೆ, ಇಲ್ಲವಾದರೆ ನಾರಾಯಣಸ್ವಾಮಿ ರಾಜೀನಾಮೆ ನೀಡುತ್ತಾರಾ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸವಾಲು ಹಾಕಿದ್ದಾರೆ.
ವಾಚ್ ಕದ್ದದ್ದೋ, ಕೊಂಡದ್ದೋ ಎಂಬ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಹೇಳಿಕೆ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಉತ್ತರಿಸಿದ್ದು, ನಾರಾಯಣಸ್ವಾಮಿ ಅವರಿಗೆ ಇನ್ನೂ ಅನುಭವವಿಲ್ಲ. ಯಾವುದಾದರೂ ವಿಚಾರದ ಬಗ್ಗೆ ಮಾತನಾಡಬೇಕಾದರೆ ಕನಿಷ್ಟ ಪರಿಜ್ಞಾನ ಇರಬೇಕು. ಬರೀ ಪ್ರಚಾರಕ್ಕೆ ಮಾತನಾಡುವುದಲ್ಲ. ಅವರಿಗಿಂತ ಹೆಚ್ಚು ಜವಾಬ್ದಾರಿಯಿಂದ ನಾನು ವರ್ತಿಸುತ್ತೇನೆ. ಅವರೂ ಜವಾಬ್ದಾರಿಯಿಂದ ಕೆಲಸ ಮಾಡುವುದನ್ನು ಕಲಿಯಬೇಕು. ನಾನು ಪ್ರದರ್ಶಿಸಿರುವ ದಾಖಲೆ ವಿಚಾರ ಒತ್ತಟ್ಟಿಗೆ ಇರಲಿ, ಅವರೇ ಹೋಗಿ ಲೋಕಾಯುಕ್ತದಲ್ಲಿ ಪರಿಶೀಲನೆ ಮಾಡಲಿ. ಅಲ್ಲಿ ಸಲ್ಲಿಸಿರುವ ಆದಾಯ ಅಫಿಡವಿಟ್ ಸಾರ್ವಜನಿಕ ದಾಖಲೆಯಾಗಿದ್ದು, ಅದನ್ನು ಅವರೂ ಪಡೆಯಬಹುದು.

ದುಬಾರಿ ವಾಚ್ ವಿಚಾರವನ್ನು ಸದನದಲ್ಲಿ ಪ್ರಸ್ತಾಪಿಸುತ್ತಾರಂತೆ ಎಂದು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ್ದು, ಸದನದಲ್ಲೂ ಪ್ರಸ್ತಾಪಿಸಲಿ, ಬೇರೆ ಎಲ್ಲಾದರೂ ಪ್ರಸ್ತಾಪಿಸಲಿ. ಯಾರು ಬೇಡ ಎನ್ನುತ್ತಾರೆ. ದೇಶದೆಲ್ಲೆಡೆ ಚರ್ಚೆ ಮಾಡಲಿ. ನನ್ನ ದಾಖಲೆ ಅವರಿಗೆ ತೋರಿಸುವ ಅಗತ್ಯವಿಲ್ಲವಾದರೂ ನಾನು ಆ ವಾಚ್ ಕದ್ದಿದ್ದೇನೆ ಎಂದು ಹೇಳಿದ್ದಾರಲ್ಲ ಅದಕ್ಕೆ ತೋರಿಸಿರುವೆ ಎಂದು ತಿರುಗೇಟು ನೀಡಿದರು.
ಇದಕ್ಕೂ ಮುನ್ನ ಗುರುವಾರ ಬೆಳಗ್ಗೆ ಟ್ವೀಟ್ ಮೂಲಕ ನಾರಾಯಣಸ್ವಾಮಿ ಅವರಿಗೆ ತಿರಗೇಟು ನೀಡಿದ ಶಿವಕುಮಾರ್ ಅವರು, ಮಿಸ್ಟರ್ ನಾರಾಯಣಸ್ವಾಮಿ, ಇಲ್ಲಿದೆ ನೋಡಿ ಲೋಕಾಯುಕ್ತಕ್ಕೆ ನಾನು ಸಲ್ಲಿಸಿರೋ ಅಫಿಡವಿಟ್! ಜವಾಬ್ದಾರಿಯುತ ಸ್ಥಾನದಲ್ಲಿರೋ ನೀವು ನಿಮ್ಮ ಬಾಯಿ ತೆವಲಿಗಾಗಿ ಮನಸ್ಸಿಗೆ ಬಂದಂತೆ ಸುಳ್ಳು ಹೇಳಬಾರದು. ಇದು ನಿಮಗೆ ಘನತೆ ತರುವುದಿಲ್ಲ. ನಾನು ಪಾರದರ್ಶಕ ವ್ಯಕ್ತಿ. ಏನನ್ನೂ ಮುಚ್ಚಿಟ್ಟುಕೊಳ್ಳಬಾರದು ಅಂತಲೇ ನಿಜ ಹೇಳಿದ್ದೇನೆ.
ನನಗೆ ಮತ್ತು ಸಿಎಂ ಸಿದ್ದರಾಮಯ್ಯ ಅವರಿಗೆ ನಮಗೆ ಇಷ್ಟವಾದ ವಾಚ್ ಕಟ್ಟಿಕೊಳ್ಳುವ ಯೋಗ್ಯತೆ ಇಲ್ಲವೇ? ಹಕ್ಕು ಇಲ್ಲವೇ..? "ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ" ಆಡಬೇಡಿ. ನಿಮಗಿರೋ ಸಾಂವಿಧಾನಿಕ ಅಧಿಕಾರ, ಜವಾಬ್ದಾರಿಯನ್ನು ವಿವೇಕದಿಂದ ನಿರ್ವಹಿಸಿ. ಅವಿವೇಕಿಯಂತೆ ಆಡಬೇಡಿ..! ಬೇಕಿದ್ದರೆ ಲೋಕಾಯುಕ್ತ ಕಚೇರಿಗೆ ಹೋಗಿ ನನ್ನ ಅಫಿಡವಿಟ್ ಚೆಕ್ ಮಾಡಿಕೊಳ್ಳಿ ಎಂದು ಹರಿಹಾಯ್ದರು.
-
ನೈರುತ್ಯ ರೈಲ್ವೆ: 194 ಗೂಡ್ಸ್ ರೈಲು ಮ್ಯಾನೇಜರ್ ಹುದ್ದೆ; ಕನ್ನಡಿಗರಿಗೆ ಅನ್ಯಾಯ, ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದೇನು -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ವಿವಿಧ ರಾಜ್ಯಗಳ ಚುನಾವಣೆ ಬಳಿಕ ಪ್ರಧಾನಿ ಭೇಟಿಗೆ ಸರ್ವಪಕ್ಷ ಸಂಸದರ ನಿಯೋಗ ತೀರ್ಮಾನ: ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ












Click it and Unblock the Notifications