ರಾಜ್ಯಸಭೆಗೆ ಮಲ್ಲಿಕಾರ್ಜುನ ಖರ್ಗೆ ಆಯ್ಕೆ ಮಾಡಲು ಒತ್ತಡವಿತ್ತು: ಡಿ.ಕೆ. ಶಿವಕುಮಾರ್
ಬೆಂಗಳೂರು, ಜೂ. 09: ರಾಜ್ಯಸಭೆ ಚುನಾವಣೆಯಲ್ಲಿ ಎಲ್ಲ ನಾಲ್ಕೂ ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗುವುದು ಖಚಿತವಾಗಿದೆ. ನಾಲ್ಕು ಸ್ಥಾನಗಳ ಆಯ್ಕೆಗೆ ನಡೆಯಲಿರುವ ಚುನಾವಣೆಗೆ ಮಾಜಿ ಪ್ರಧಾನಿ ದೇವೇಗೌಡರು ಸೇರಿದಂತೆ ನಾಲ್ಕು ಜನರು ಮಾತ್ರ ಸ್ಪರ್ಧೆ ಮಾಡುತ್ತಿದ್ದಾರೆ. ಹೀಗಾಗಿ ರಾಜ್ಯಸಭೆ ಸದಸ್ಯರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗುತ್ತಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಅವರು ನಾಮಪತ್ರವನ್ನೂ ಸಲ್ಲಿಸಿದ್ದಾರೆ.
ಮಲ್ಲಿಕಾರ್ಜುನ್ ಖರ್ಗೆ ನಾಮಪತ್ರ ಸಲ್ಲಿಸುವಾಗ ಕಾಂಗ್ರೆಸ್ ನಾಯಕರು ಇನ್ನಿಲ್ಲದ ಒಗ್ಗಟ್ಟನ್ನು ಪ್ರದರ್ಶನ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷದ ಸಿದ್ದರಾಮಯ್ಯ, ಮಾಜಿ ಸಚಿವರಾದ ಡಾ. ಜಿ. ಪರಮಶ್ವರ್, ಈಶ್ವರ್ ಖಂಡ್ರೆ, ಸಲೀಂ ಅಹಮ್ಮದ್ ಸೇರಿದಂತೆ ಬಹುತೇಕ ಎಲ್ಲ ನಾಯಕರೊಂದಿಗೆ ಜೊತೆಗೂಡಿ ಖರ್ಗೆ ನಾಮಪತ್ರ ಸಲ್ಲಿಸಿದ್ದಾರೆ. ಇದೇ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಲ್ಲಿಕಾರ್ಜುನ ಖರ್ಗೆ ಆಯ್ಕೆ ಮಾಡಲು ಒತ್ತಡವಿತ್ತು ಎಂಬ ಸ್ಪೋಟಕ ಹೇಳಿಕೆ ಕೊಟ್ಟಿದ್ದಾರೆ. ಎಲ್ಲರೂ ಅವಿರೋಧ ಆಯ್ಕೆಯಾಗುವಾಗ ರಾಜ್ಯ ಕಾಂಗ್ರೆಸ್ ಪಕ್ಷದ ಮೇಲೆ ಇದ್ದ ಒತ್ತಡವಾದರೂ ಯಾರದ್ದು? ಎಂಬ ಜಿಜ್ಞಾಸೆ ಮೂಡಿದೆ.

ಖರ್ಗೆ ನಾಮಪತ್ರ ಸಲ್ಲಿಕೆ
ಮಾಜಿ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಇಬ್ಬರು ಅಭ್ಯರ್ಥಿಗಳನ್ನು ಕಳಣಕ್ಕಿಳಿಸುತ್ತಾರೆ ಎನ್ನಲಾಗಿತ್ತು. ಆದರೆ ನಿರ್ಧಾರ ಬದಲಿಸಿದ ಕಾಂಗ್ರೆಸ್ ಹೈಕಮಾಂಡ್ ರಾಜ್ಯಸಭಾ ಚುನಾವಣೆಗೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮಾತ್ರ ಅಭ್ಯರ್ಥಿಯಾಗಿ ಘೋಷಣೆ ಮಾಡಿತು.
ಜೊತೆಗೆ ಕ್ರಾಸ್ ವೋಟಿಂಗ್ ಆತಂಕದಿಂದ ಎರಡನೇ ಅಭ್ಯರ್ಥಿ ಹಾಕದಿರಲು ಕಾಂಗ್ರೆಸ್ ಪಕ್ಷ ತೀರ್ಮಾನ ಮಾಡಿತ್ತು. ಯಾವುದೇ ಕಾರಣಕ್ಕೂ ಖರ್ಗೆ ಅವರ ರಾಜ್ಯಸಭೆ ಪ್ರವೇಶಕ್ಕೆ ಸಣ್ಣ ತೊಂದರೆಯೂ ಬರದಂತೆ ಸೂಚನೆ ಕೊಡಲಾಗಿತ್ತು.

ಒತ್ತಡದ ಹಿನ್ನೆಲೆಯಲ್ಲಿ ಸಭೆ
ಮಲ್ಲಿಕಾರ್ಜುನ ಖರ್ಗೆ ಅವರ ಆಯ್ಕೆಗೆ ಒತ್ತಡ ಇತ್ತು. ಈ ಹಿನ್ನೆಲೆಯಲ್ಲಿ ಪಕ್ಷದ ನಾಯಕರೆಲ್ಲರೂ ಕೂತು ಚರ್ಚೆ ನಡೆಸಿ ಒಮ್ಮತದ ನಿರ್ಧಾರಕ್ಕೆ ಬಂದೆವು. ನಮ್ಮ ಒಮ್ಮತದ ನಿರ್ಧಾರಕ್ಕೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರೂ ಖುಷಿಪಟ್ಟು ಎರಡನೇ ಮಾತಿಗೆ ಅವಕಾಶ ನೀಡದೇ ಖರ್ಗೆ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿತು. ಇದರಿಂದ ದೇಶದ ಎಲ್ಲ ಕಾರ್ಯಕರ್ತರಿಗೆ ಸಂತೋಷ ತಂದಿದೆ ಎಂದು ಡಿಕೆಶಿ ಹೇಳಿದ್ದಾರೆ.

ಕಾಶ್ಮೀರದಿಂದ ಒತ್ತಡ
ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ರಾಜ್ಯಸಭೆಗೆ ಆರಿಸಿ ಕಳುಹಿಸಬೇಕು ಎಂದು ಕಾಶ್ಮೀರದಿಂದ ಹಿಡಿದು ಕನ್ಯಾಕುಮಾರಿವರೆಗೂ ಒತ್ತಡವಿತ್ತು. ಕಾಂಗ್ರೆಸ್ ನಾಯಕರು ಮಾತ್ರವಲ್ಲ ಬೇರೆ ಪಕ್ಷದ ನಾಯಕರೂ ನಮಗೆ ಒತ್ತಡ ಹೇರಿದ್ದರು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಅವರು ಕೇವಲ ರಾಜ್ಯಕ್ಕೆ ಸೀಮಿತವಾದ ನಾಯಕರಲ್ಲ. ರಾಷ್ಟ್ರಕ್ಕೆ ಸೀಮಿತವಾದ ನಾಯಕ. ಅರಲ್ಲಿ ರಾಷ್ಟ್ರ ನಾಯಕನ ಗುಣಗಳಿವೆ. ಹೀಗಾಗಿ ಅವರು ರಾಷ್ಟ್ರದ ಆಸ್ತಿ. ಕಳೆದ ಐದು ವರ್ಷಗಳ ಕಾಲ ಅವರು ವಿರೋಧ ಪಕ್ಷದಲ್ಲಿದ್ದು ಮಾಡಿದ ಕಾರ್ಯ ಹಾಗೂ ಅವರ ಅನುಭವ ಅತ್ಯುತ್ತಮವಾದುದು. ಅದಕ್ಕೆ ಪರ್ಯಾಯವಿಲ್ಲ. ಅವರ ಕಾರ್ಯ ನೋಡಿ ದೇಶದ ಮೂಲೆ ಮೂಲೆಯಿಂದ ಬೇರೆ ಪಕ್ಷಗಳ ನಾಯಕರೂ ಕೂಡ ಖರ್ಗೆ ಅವರನ್ನು ರಾಜ್ಯಸಭೆಯಿಂದ ಆರಿಸಿ ಸಂಸತ್ತಿಗೆ ಕಳುಹಿಸಬೇಕು ಎಂದು ಒತ್ತಡ ಹಾಕಿದ್ದರು ಎಂದಿದ್ದಾರೆ.

ಧನ್ಯವಾದ ಸಲ್ಲಿಸಿದ ಖರ್ಗೆ
ರಾಜ್ಯಸಭೆಗೆ ಆಯ್ಕೆ ಮಾಡಲು ನಿರ್ಧರಿಸಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ತುಂಬು ಹೃದಯದ ಧನ್ಯವಾದಗಳು ಹಾಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಮಾಜಿ ಸಂಸದೀಯ ನಾಯಕ, ಕಾಂಗ್ರೆಸ್ ಅಭ್ಯರ್ಥಿ ಹೇಳಿಕೆ ಕೊಟ್ಟಿದ್ದಾರೆ.
ಚುನಾವಣೆ ನಡೆದರೆ ಕರ್ನಾಟಕ ವಿಧಾನಸಭೆ ಎಲ್ಲ ಶಾಸಕರು ನನಗೆ ಮತ ಹಾಕಬೇಕು ಎಂದು ಮನವಿ ಮಾಡಿಕೊಳ್ಳುತ್ತೇನೆ. ನಮ್ಮ ನಾಯಕರು ನನ್ನ ಮೇಲೆ ಇಟ್ಟಿರುವ ನಂಬಿಕೆ ಹಾಗೂ ಅಪೇಕ್ಷೆ ಉಳಿಸಿಕೊಳ್ಳುವಂತೆ ಮುಂದಿನ ದಿನಗಳಲ್ಲಿ ನಡೆದುಕೊಳ್ಳುತ್ತೇನೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications