Get Updates
Get notified of breaking news, exclusive insights, and must-see stories!

'ಸಿದ್ದರಾಮಯ್ಯ ಬೆಂಬಲಿಗರನ್ನ ಡಿ.ಕೆ.‌ಶಿವಕುಮಾರ್ ಸದ್ದಿಲ್ಲದೆ ಹಣಿಯುತ್ತಿದ್ದಾರೆ'

ರಾಜ್ಯ ರಾಜಕಾರಣದಲ್ಲಿ ಹಲವು ದಿನಗಳಿಂದ ಸಿಎಂ ಬದಲಾವಣೆ ಹಾಗೂ ಅಧಿಕಾರ ಹಂಚಿಕೆಯ ಒಪ್ಪಂದದ ವಿಚಾರ ಕೇಳಿಬರುತ್ತಿದೆ. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಅವರ ನಡುವೆ ಇದೇ ಕಾರಣಕ್ಕೆ ಶೀತಲ ಸಮರ ಉಂಟಾಗಿದೆ ಎಂಬ ಚರ್ಚೆಗಳು ಕೂಡ ಜೋರಾಗಿದೆ. ಸಿದ್ದರಾಮಯ್ಯ ಮತ್ತು ಡಿಕೆಶಿ ನಡುವಿನ ಅಧಿಕಾರ ಹಂಚಿಕೆಯ ಅವಧಿ ಹತ್ತಿರದಲ್ಲಿದೆ. ಅದಕ್ಕೆ ಪೂರಕವಾಗಿ ಕಾಂಗ್ರೆಸ್‌ ಪಾಳಯದಲ್ಲಿ ಈಗಿನಿಂದಲೇ ಶೀತಲ ಸಮರ ಆರಂಭವಾಗಿದೆ. ಮುಖ್ಯಮಂತ್ರಿ ಬದಲಾವಣೆ ಮತ್ತು ಸಚಿವ ಸಂಪುಟ ಪುನರ್‌ರಚನೆ ಬಗ್ಗೆ ಕಸರತ್ತು ಆರಂಭವಾಗಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

ಇವರ ಈ ಕುರ್ಚಿ ಕಿತ್ತಾಟದ ನಡುವೆ ರಾಜ್ಯದ ಪರಿಸ್ಥಿತಿ ಅಧೋಗತಿಯಾಗಿದೆ. ನೆರೆಯಿಂದ ಜನರು ತತ್ತರಿಸಿದ್ದರೂ ರಾಜ್ಯ ಸರ್ಕಾರ ಕುರ್ಚಿ ಕಿತ್ತಾಟದಲ್ಲಿ ತೊಡಗಿರುವುದು ಖಂಡನೀಯ ಎಂದು ಹೇಳಿದೆ. ಮುಖ್ಯಮಂತ್ರಿ ಕುರ್ಚಿ ಕಳೆದುಕೊಳ್ಳುವ ಭಯಕ್ಕೆ ಬಿದ್ದಿರುವ ಸಿದ್ದರಾಮಯ್ಯ ಅವರು ಜಾತಿ ಗಣತಿಯನ್ನು ಆಸರೆಯಾಗಿಸಿಕೊಂಡಿದ್ದಾರೆ. ಹೇಗಾದರೂ ಸಿಎಂ ಪದವಿ ಪಡೆಯಲೇಬೇಕು ಎಂದು ಜಿದ್ದಿಗೆ ಬಿದ್ದಿರುವ ಡಿ.ಕೆ.ಶಿವಕುಮಾರ್ ಅವರು ಸಿದ್ದರಾಮಯ್ಯ ಅವರ ಬೆಂಬಲಿಗರನ್ನು ಸದ್ದಿಲ್ಲದೆ ಹಣಿಯುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದೆ.

dk-shivakumar-silently-targeting-siddaramaiah-supporters-bjp-attacks-congress

ಕಲೆಕ್ಷನ್-ಕಮಿಷನ್-ಕರಪ್ಷನ್‌

ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಬಳಿಕ ಕಮಿಷನ್ ಪಿಡುಗಿನಿಂದಾಗಿ ಗುತ್ತಿಗೆದಾರರ ಪರಿಸ್ಥಿತಿ ಅಯೋಮಯವಾಗಿದೆ. ಶೇ 40ರಷ್ಟು ಕಮಿಷನ್ ಸುಳ್ಳು ನರೇಟಿವ್ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರದಡಿಯಿಂದ ಕಮಿಷನ್ ಹಾಗೂ ಕಲೆಕ್ಷನ್ ಇಲ್ಲದೆ ಯಾವುದೇ ಅನುದಾನ, ಬಾಕಿ ಬಿಲ್ ಬಿಡುಗಡೆಯಾಗುತ್ತಿಲ್ಲ ಎಂದು ಆರೋಪ ಮಾಡಿದೆ. ಕಲೆಕ್ಷನ್-ಕಮಿಷನ್-ಕರಪ್ಷನ್‌ನಲ್ಲಿ ನಿರತವಾಗಿರುವ ಕಾಂಗ್ರೆಸ್ ಸರ್ಕಾರ ರಾಜ್ಯದ ಪಾಲಿಗೆ ಶಾಪವಾಗಿದೆ ಎಂದು ಆಕ್ರೋಶ ಹೊರಹಾಕಿದೆ.

60 ಪರ್ಸೆಂಟ್‌ ಕಾಂಗ್ರೆಸ್‌ ಸರ್ಕಾರದ ದುರಾಡಳಿತದಲ್ಲಿ ಬೆಂಗಳೂರು ಸೇರಿ ರಾಜ್ಯದ ರಸ್ತೆಗಳು ಮೃತ್ಯುಕೂಪಗಳಾಗಿ ಮಾರ್ಪಟ್ಟಿವೆ. ಸಿಲಿಕಾನ್‌ ಸಿಟಿಯ ರಸ್ತೆ ಗುಂಡಿಗೆ ವಿದ್ಯಾರ್ಥಿನಿ ಬಲಿಯಾಗಿರುವುದು ದುರದೃಷ್ಟಕರ. ಸುಗಮ ಸಂಚಾರಕ್ಕೆ ಅನುಕೂಲವಾಗಬೇಕಿದ್ದ ಬೆಂಗಳೂರಿನ ರಸ್ತೆಗಳು ಪ್ರತಿನಿತ್ಯ ಪ್ರಯಾಣಿಕರ ಪ್ರಾಣಕ್ಕೆ ಸಂಚಕಾರ ತರುತ್ತಿರುವುದು ಡೆಡ್‌ಲೈನ್‌ ಡಿಸಿಎಂ ಡಿಕೆ.ಶಿವಕುಮಾರ್ ಅವರ ಕಳಪೆ ಕಾರ್ಯವೈಖರಿಯನ್ನು ಎತ್ತಿ ತೋರಿಸುತ್ತದೆ. ಅಧಿಕಾರಿಗಳಿಗೆ ತಾವು ನೀಡಿದ್ದ ಡೆಡ್‌ಲೈನ್‌ ಎಲ್ಲಿಗೆ ಬಂತು? ಗುಂಡಿ ಮುಚ್ಚಲು ಬಿಡುಗಡೆ ಮಾಡಿದ್ದ 750 ಕೋಟಿ ರೂಪಾಯಿ ಯಾರ ಜೇಬು ಸೇರಿದೆ? ತಮ್ಮ ಸರ್ಕಾರಕ್ಕೆ ಇನ್ನೆಷ್ಟು ಅಮಾಯಕರ ಬಲಿಬೇಕು? ಎಂದು ಬಿಜೆಪಿ ತರಾಟೆಗೆ ತೆಗೆದುಕೊಂಡಿದೆ.

ಉತ್ತರ ಕರ್ನಾಟಕ ನೆರೆ ಸಂತ್ರಸ್ತರನ್ನು ಕಾಂಗ್ರೆಸ್ ಸರ್ಕಾರ ಸಂಪೂರ್ಣ ಕಡೆಗಣಿಸಿ ಕುಂಭಕರ್ಣ ನಿದ್ರೆಗೆ ಜಾರಿದೆ. ಸಿಎಂ ಸಿದ್ದರಾಮಯ್ಯನವರು ಎಚ್ಚೆತ್ತುಕೊಂಡು ಕೂಡಲೇ ಸಂತ್ರಸ್ತರಿಗೆ ಪರಿಹಾರ ನೀಡಬೇಕು. ಕೇಂದ್ರದ ಮೇಲೆ ಜವಾಬ್ದಾರಿ ಹೊರಿಸಿ ರಾಜ್ಯ ಸರ್ಕಾರ ನುಣುಚಿಕೊಳ್ಳದೇ ನೆರೆ ಸಂಕಷ್ಟಿತರ ನೆರವಿಗೆ ಧಾವಿಸಲಿ ಎಂದು ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+