RCB: ಆರ್‌ಸಿಬಿ ಫೈನಲ್ ಪಂದ್ಯದ ವಿಚಾರದಲ್ಲಿ ಬೆಂಗಳೂರಿಗೆ ಅನ್ಯಾಯ: ಡಿ.ಕೆ.ಶಿವಕುಮಾರ್

ಬೆಂಗಳೂರು, ಜೂನ್‌ 1: ಐಪಿಎಲ್ 2026ರ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫೈನಲ್‌ನಲ್ಲಿ ಭರ್ಜರಿ ಗೆಲುವು ಸಾಧಿಸಿ ಸತತ ಎರಡನೇ ಟ್ರೋಫಿಗೆ ಮುತ್ತಿಟ್ಟಿದೆ. ಆದರೆ ಈ ಮಹತ್ವದ ಸಂದರ್ಭದಲ್ಲಿ ಆರ್‌ಸಿಬಿ ಫೈನಲ್‌ ಪಂದ್ಯವನ್ನು ಸ್ಥಳಾಂತರಿಸಿದ ಕುರಿತು ಕರ್ನಾಟಕದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬಿಸಿಸಿಐ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಆರ್‌ಸಿಬಿ ಆಡಬೇಕಿದ್ದ ಮಹತ್ವದ ಫೈನಲ್ ಪಂದ್ಯವನ್ನು ಬೆಂಗಳೂರಿನಲ್ಲಿ ನಡೆಸದೆ ಅಹಮದಾಬಾದ್‌ಗೆ ಸ್ಥಳಾಂತರಿಸಿರುವುದು ಕರ್ನಾಟಕದ ಯುವಕರು ಹಾಗೂ ಕ್ರೀಡಾಭಿಮಾನಿಗಳಿಗೆ ಮಾಡಿದ ದೊಡ್ಡ ಅನ್ಯಾಯವಾಗಿದೆ. ಜೊತೆಗೆ ಬೆಂಗಳೂರಿಗೂ ಅನ್ಯಾಯ ಮಾಡಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದರು.

DK Shivakumar Slams IPL 2026 Final Shift to Ahmedabad Says Bengaluru Was Denied Hosting Rights

ಐಪಿಎಲ್‌ ಫೈನಲ್ ಪಂದ್ಯ ಅಹಮದಾಬಾದ್‌ಗೆ ಶಿಫ್ಟ್

ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, 'ಐಪಿಎಲ್‌ನ ಈ ಬಾರಿಯ ಫೈನಲ್ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ ನಡೆಯಬೇಕಾಗಿತ್ತು. ರಾಜಕೀಯ ಕಾರಣಗಳಿಗಾಗಿ ಈ ಹೈವೋಲ್ಟೇಜ್ ಪಂದ್ಯವನ್ನು ಗುಜರಾತ್‌ನ ಅಹಮದಾಬಾದ್‌ಗೆ ವರ್ಗಾಹಿಸಲಾಗಿದೆ. ಇದರಿಂದಾಗಿ ನಮ್ಮ ಬೆಂಗಳೂರು ಮತ್ತು ಇಡೀ ಕರ್ನಾಟಕದ ಕ್ರಿಕೆಟ್ ಪ್ರೇಮಿಗಳಿಗೆ ತೀವ್ರ ನಿರಾಶೆಯಾಗಿದೆ. ನಮ್ಮ ಕಣ್ಣೆದುರೇ ತಮ್ಮ ನೆಚ್ಚಿನ ತಂಡ ಆಡುವುದನ್ನು ನೋಡುವ ಅವಕಾಶವನ್ನು ಕರ್ನಾಟಕದ ಯುವಕರು ಕಳೆದುಕೊಳ್ಳುವಂತಾಗಿದೆ,' ಎಂದು ಬೇಸರ ವ್ಯಕ್ತಪಡಿಸಿದರು.

'ಆರ್‌ಸಿಬಿಗೆ ನಮ್ಮ ಸಂಪೂರ್ಣ ಬೆಂಬಲವಿದೆ'

ಪಂದ್ಯದ ಸ್ಥಳ ಬದಲಾವಣೆಯ ಕುರಿತು ಅಸಮಾಧಾನವಿದ್ದರೂ ಆರ್‌ಸಿಬಿ ತಂಡದ ಪ್ರದರ್ಶನವನ್ನು ಡಿ.ಕೆ.ಶಿವಕುಮಾರ್ ಅವರು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. 'ಕಳೆದ ಸೀಸನ್‌ನಲ್ಲಿಯೂ ಆರ್‌ಸಿಬಿ ಅದ್ಭುತವಾಗಿ ಆಡಿ ಗೆದ್ದಿತ್ತು. ಈ ವರ್ಷವೂ ಕೂಡ ಆಟಗಾರರು ಅದ್ಭುತ ಹೋರಾಟದ ಮೂಲಕ ಫೈನಲ್ ತಲುಪಿದ್ದಾರೆ. ಪಂದ್ಯದ ಸ್ಥಳವನ್ನು ಬದಲಾಯಿಸಿ ನಮಗೆ ಅನ್ಯಾಯ ಮಾಡಿರಬಹುದು, ಆದರೆ ನಮ್ಮ ತಂಡದ ಹೋರಾಟದ ಕಿಚ್ಚನ್ನು ಕಮ್ಮಿ ಮಾಡಲು ಸಾಧ್ಯವಿಲ್ಲ. ಒಬ್ಬ ನಾಯಕ ಯಾವಾಗಲೂ ನಾಯಕನೇ. ಆರ್‌ಸಿಬಿ ಆಟಗಾರರು ಮೈದಾನದಲ್ಲಿ ಸಿಂಹದಂತೆ ಹೋರಾಡಿದ್ದಾರೆ,' ಎಂದು ಶ್ಲಾಘಿಸಿದರು.

'ಕರ್ನಾಟಕ ಸರ್ಕಾರದ ಪರವಾಗಿ, ರಾಜ್ಯದ ಕೋಟ್ಯಂತರ ಆರ್‌ಸಿಬಿ ಅಭಿಮಾನಿಗಳ ಪರವಾಗಿ ನಾನು ಇಡೀ ತಂಡಕ್ಕೆ ಹೃದಯಪೂರ್ವಕ ಶುಭ ಹಾರೈಕೆಗಳನ್ನು ತಿಳಿಸುತ್ತೇನೆ. ಈ ಬಾರಿಯೂ ನಮ್ಮ ತಂಡಕ್ಕೆ ಜಯ ಸಿಗಲಿ ಎಂದು ಆಶಿಸುತ್ತೇನೆ,' ಎಂದು ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಸಿದ್ದರಾಮಯ್ಯ ಭೇಟಿ ಕುರಿತು ಡಿಕೆಶಿ ಹೇಳಿದ್ದೇನು?

ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗಿನ ಇತ್ತೀಚಿನ ಭೇಟಿಯ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, 'ಸಿದ್ದರಾಮಯ್ಯ ಅವರು ನನ್ನ ಆಪ್ತರು. ನಾವು ಪಕ್ಷ ಮತ್ತು ಸರ್ಕಾರದಲ್ಲಿ ಹಿಂದೆ ಒಟ್ಟಿಗೆ ಕೆಲಸ ಮಾಡಿದ್ದೇವೆ, ಮುಂದೆಯೂ ಒಟ್ಟಾಗಿ ರಾಜ್ಯದ ಅಭಿವೃದ್ಧಿಗಾಗಿ ಕೆಲಸ ಮಾಡಲಿದ್ದೇವೆ,' ಎಂದು ರಾಜಕೀಯ ವದಂತಿಗಳಿಗೆ ತೆರೆ ಎಳೆದರು. ಒಟ್ಟಿನಲ್ಲಿ ಆರ್‌ಸಿಬಿ ಫೈನಲ್ ಪಂದ್ಯದ ಸುತ್ತ ಈಗ ರಾಜಕೀಯದ ಚರ್ಚೆಗಳು ಜೋರಾಗಿ ಆರಂಭವಾಗಿರುವಂತೂ ನಿಜ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+