ತೆಲಂಗಾಣ: ಹೈಕಮಾಂಡ್ ಟಾಸ್ಕ್ ಗೆದ್ದ ಡಿಕೆಶಿ- ಸುನಿಲ್ ಕನುಗೋಲು ಸ್ಟ್ಯಾಟರ್ಜಿ ವರ್ಕ್ ಆಗಿದ್ದು ಹೇಗೆ?
ನವದೆಹಲಿ, ಡಿಸೆಂಬರ್ 03: ತೆಲಂಗಾಣದಲ್ಲಿ ಕೆ ಚಂದ್ರಶೇಖರ್ ರಾವ್ ಅವರ ಪ್ರಬಲ ಕೋಟೆಯನ್ನು ಕಾಂಗ್ರೆಸ್ ಭೇದಿಸಿ, ಗೆಲುವು ಸಾಧಿಸಿದೆ. 118 ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಪಕ್ಷ 65 ಸ್ಥಾನಗಳಲ್ಲಿ ಮುನ್ನಡೆ ಗಳಿಸಿದೆ.
ಹೌದು, ತೆಲಂಗಾಣ ರಚನೆ ಆದಾಗಿನಿಂದ ಕಾಂಗ್ರೆಸ್ ಮೊದಲ ಬಾರಿಗೆ ಅಧಿಕಾರದ ಗದ್ದುಗೆ ಹಿಡಿಯುವ ಉಮೇದಿನಲ್ಲಿದೆ. ಈಗಾಗಲೇ ಕರ್ನಾಟಕದಲ್ಲಿ ಬರೋಬ್ಬರಿ 224 ಕ್ಷೇತ್ರಗಳ ಪೈಕಿ 135 ಸ್ಥಾನಗಳನ್ನ ಗೆದ್ದು ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರ ಗದ್ದುಗೆಯಲ್ಲಿ ಕೂರಿಸಿದ ಚುನಾವಣಾ ತಂತ್ರಗಾರ ಸುನಿಲ್ ಕನುಗೋಲು ಅವರ ಚಾಣಕ್ಷತನ ಹಾಗೂ ಕರ್ನಾಟಕ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಕೊಟ್ಟ ಟಾಸ್ಕ್ ಗೆದ್ದು, ಮತ್ತೊಮ್ಮೆ ತಮ್ಮ ಚಾಣಕ್ಷತನವನ್ನ ಸಾಭೀತು ಪಡಿಸಿಕೊಂಡಿದ್ದಾರೆ.

ಕರ್ನಾಟಕ ಮಾದರಿಯಲ್ಲೆ ಮತದಾರರಿಗೆ ಕಾಂಗ್ರೆಸ್ ಪಕ್ಷ ನೀಡಿದ 5 ಗ್ಯಾರೆಂಟಿ ಹೇಗೆ ಕೆಲಸ ಮಾಡಿವೇಯೋ ಅದೇ ರೀತಿ ತೆಲಂಗಾಣದಲ್ಲೂ ಆರು ಗ್ಯಾರಂಟಿಗಳ ಆಸರೆ ವರ್ಕೌಟ್ ಆಗಿದೆ ಎನ್ನಲಾಗಿದೆ. ಮಹಿಳೆಯರ ಕಲ್ಯಾಣಕ್ಕಾಗಿ ಮಹಾಲಕ್ಷ್ಮೀ ಯೋಜನೆ, ರೈತರು ಮತ್ತು ಕೃಷಿ ಕಾರ್ಮಿಕರಿಗೆ ರೈತು ಭರೋಸಾ, ಬಡವರಿಗೆ ವಸತಿ ಕಲ್ಪಿಸುವ ಇಂದಿರಮ್ಮ ಯೋಜನೆ, ವಿದ್ಯುತ್ ಬಿಲ್ಗೆ ಸಬ್ಸಿಡಿ ಕೊಡುವ ಗೃಹಜ್ಯೋತಿ, ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬದವರ ಮಕ್ಕಳಿಗೆ ನೆರವು ನೀಡುವ ಯುವ ವಿಕಾಸಂ, ಆರೋಗ್ಯ ಇನ್ಷೂರೆನ್ಸ್, ಪಿಂಚಣಿ ಒದಗಿಸುವ ಚೇಯುತ ಯೋಜನೆ, ಈ ಆರು ಗ್ಯಾರಂಟಿಗಳನ್ನು ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ನೀಡಿದ್ದು, ಈ ಆರು ಗ್ಯಾರಂಟಿಗಳು ಆಸರೆಯಾಗಿದೆ.
ಇನ್ನೂ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಗೆಲ್ಲಲು ಇದ್ದ ಕಾರಣಗಳಲ್ಲಿ ಒಂದು ಅಲ್ಪಸಂಖ್ಯಾತರ ವೋಟು. ಬಹುಸಂಖ್ಯೆಯ ಮುಸ್ಲಿಮ್ ಮತಗಳು ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವಿಗೆ ಕಾರಣವಾಗಿದ್ದು, ಅದೇ ರೀತಿ ತೆಲಂಗಾಣದಲ್ಲೂ ಹೆಚ್ಚಿನ ಮುಸ್ಲಿಮ್ ಮತಗಳು ಕಾಂಗ್ರೆಸ್ಗೆ ಬಂದಿದೆ ಎನ್ನಲಾಗಿದೆ. ಎಐಎಂಐಎಂ ಪಕ್ಷಕ್ಕೆ ಬಹಳ ಕಡಿಮೆ ಸ್ಥಾನಗಳು ಸಿಕ್ಕಿರುವುದು ಇದಕ್ಕೆ ಸಾಕ್ಷಿ. ಮುಸ್ಲಿಮ್ ಮತಗಳು ಕಾಂಗ್ರೆಸ್ ಪರವಾಗಿ ಧ್ರುವೀಕರಣ ಆಗಿರುವುದು ಸ್ಪಷ್ಟವಾಗಿದೆ.
ಇನ್ನೂ ಕಾಂಗ್ರೆಸ್ ಸಿದ್ಧಾಂತ ಮತ್ತು ರಾಜಕೀಯ ತಂತ್ರಗಾರಿಕೆಯಲ್ಲಿ ಸುನಿಲ್ ಕನಗೋಲು ಅವರಿಗೆ ಇರುವ ಪರಿಣತಿಯನ್ನು ಕಾಂಗ್ರೆಸ್ ಪೂರ್ಣ ಪ್ರಮಾಣದಲ್ಲಿ ಬಳಸಿಕೊಂಡಿದೆ. ಹೀಗಾಗಿ ಪಕ್ಷದ ಅತಿಮುಖ್ಯ ಸಭೆ ಮತ್ತು ಅಭ್ಯರ್ಥಿಗಳ ಆಯ್ಕೆ ಸಂದರ್ಭದಲ್ಲೂ ಸುನಿಲ್ ಅವರ ಭಾಗಿಯಾಗಿ, ಅಭ್ಯರ್ಥಿಗಳ ಆಯ್ಕೆ ಹಾಗೂ ತಂತ್ರಗಾರಿಕೆಯನ್ನ ನಡೆಸಿದ್ದಾರೆ. ಇನ್ನೂ ಕರ್ನಾಟಕ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ 100 ಕ್ಕೂ ಹೆಚ್ಚು ಜನ ತೆಲಂಗಾಣ ಕಾಂಗ್ರೆಸ್ ನಾಯಕರು ಕೆಲಸ ನಿರ್ವಹಿಸಿದ್ದು, ಅದರಂತೆ ತೆಲಂಗಾಣ ಚುನಾವಣೆಯ ಸಂದರ್ಭದಲ್ಲಿ ಕರ್ನಾಟಕ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್, ಜಮೀರ್ ಅಹಮದ್, ಬಿ ನಾಗೇಂದ್ರ ಸೇರಿದಂತೆ 100 ಕ್ಕೂ ಹೆಚ್ಚು ಜನ ಕಾಂಗ್ರೆಸ್ ನಾಯಕರು ಶ್ರಮವಹಿಸಿದ್ದಾರೆ.
-
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ












Click it and Unblock the Notifications