DK Shivakumar Resignation: ರಾಜೀನಾಮೆ ಬಗ್ಗೆ ಡಿ.ಕೆ.ಶಿವಕುಮಾರ್ ದೆಹಲಿಯಲ್ಲಿ ಅಚ್ಚರಿ ಹೇಳಿಕೆ
ರಾಜ್ಯ ಕಾಂಗ್ರೆಸ್ನಲ್ಲಿ ಸಿಎಂ ಬದಲಾವಣೆ ಹಾಗೂ ಸಚಿವ ಸಂಪುಟ ಪುನರ್ರಚನೆ ವಿಚಾರವು ಸದ್ಯ ದೆಹಲಿ ಅಂಗಳದಲ್ಲಿದೆ. ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಇಬ್ಬರೂ ಹೈಕಮಾಂಡ್ ಭೇಟಿಗಾಗಿ ದೆಹಲಿಯಲ್ಲೇ ಬೀಡುಬಿಟ್ಟಿದ್ದಾರೆ. ಸಿದ್ದರಾಮಯ್ಯ ಅವರು ಈಗಾಗಲೇ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ. ಇದರ ನಡುವೆ ಡಿ.ಕೆ.ಶಿವಕುಮಾರ್ ಅವರು ರಾಜೀನಾಮೆ ವಿಚಾರವಾಗಿ ಅಚ್ಚರಿ ಹೇಳಿಕೆ ನೀಡಿದ್ದಾರೆ.
'ನಾನು ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡುತ್ತೇನೆ. ಜನವರಿಯೊಳಗೆ 100 ಕಾಂಗ್ರೆಸ್ ಕಚೇರಿಗಳಿಗೆ ನಾನು ಶಂಕುಸ್ಥಾಪನೆ ಮಾಡಬೇಕಾಗಿದೆ. 70-80 ಕಚೇರಿಗಳ ನಿರ್ಮಾಣಕ್ಕೆ ಭೂಮಿ ಸಿದ್ಧವಾಗಿದೆ. ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಈ ಕಾರ್ಯಕ್ರಮಕ್ಕೆ ಬರಬೇಕು. ಅದಕ್ಕಾಗಿಯೇ ನಾನು ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಲಿದ್ದೇನೆ' ಎಂದಿದ್ದಾರೆ. ಇದರೊಂದಿಗೆ ತಮ್ಮ ರಾಜೀನಾಮೆ ಬಗ್ಗೆಯೂ ಸ್ಪಷ್ಟನೆ ನೀಡಿದ್ದಾರೆ.

'ಸಚಿವ ಸಂಪುಟ ಪುನರ್ರಚನೆ ವಿಚಾರವಾಗಿ ಯಾವುದೇ ಚರ್ಚೆ ಇಲ್ಲ, ಪ್ರಶ್ನೆ ಇಲ್ಲ, ಮತ್ತು ಯಾರೂ ಏನನ್ನೂ ಮಾಡಲು ಆತುರಪಡುತ್ತಿಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಪಕ್ಷಕ್ಕೆ ಉತ್ತಮವಾದ ಯಾವುದೇ ನಿರ್ಧಾರವನ್ನು ಪಕ್ಷ ತೆಗೆದುಕೊಳ್ಳುತ್ತದೆ. ನಾವು 2028ರ ಚುನಾವಣೆಯ ಗುರಿಯನ್ನು ಹೊಂದಿದ್ದೇವೆ ಅಷ್ಟೇ' ಎಂದಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ರಾಜೀನಾಮೆ ಕೊಡಲಿದ್ದಾರೆ ಎಂಬ ಸುದ್ದಿ ರಾಜ್ಯ ರಾಜಕಾರಣದಲ್ಲಿ ಚರ್ಚೆಯಾಗುತ್ತಿದೆ. ಈ ಬಗ್ಗೆಯೂ ಸ್ಪಷ್ಟನೆ ನೀಡಿರುವ ಅವರು, 'ನನಗೆ ಮಾನಸಿಕ ಆರೋಗ್ಯ, ದೈಹಿಕ ಆರೋಗ್ಯ ಹಾಗೂ ರಾಜಕೀಯ ಆರೋಗ್ಯ ಎಲ್ಲವೂ ಸರಿಯಾಗಿದೆ. ನಾನು ಸದ್ಯ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಭೇಟಿಯಾಗಲು ಹೋಗುತ್ತಿದ್ದೇನೆ. ಡಿಸೆಂಬರ್ವೊಳಗೆ ಕಾಂಗ್ರೆಸ್ ಕಚೇರಿಗಳಿಗೆ ಭೂಮಿ ಪೂಜೆ ಮಾಡಬೇಕು. ಅದಕ್ಕೆ ನಾನು ದಿನಾಂಕ ಫಿಕ್ಸ್ ಮಾಡಬೇಕು ಎಂದಿದ್ದಾರೆ. ಇದೆಲ್ಲ ಕೆಲಸವೂ ನಾನೇ ಮಾಡಬೇಕು. ಹೀಗಿರುವಾಗ ನಾನೇಕೆ ರಾಜೀನಾಮೆ ಕೊಡಲಿ?' ಎಂದಿದ್ದಾರೆ.
'ನಾನು ಬ್ಲಾಕ್ಮೇಲ್ ಮಾಡಲ್ಲ'
'ಎಲ್ಲಿಯವರೆಗೂ ಕಾಂಗ್ರೆಸ್ನಲ್ಲಿ ಕೆಲಸ ಮಾಡು ಅಂತಾರೋ ಅಲ್ಲಿವರೆಗೂ ನಾನು ಶಿಸ್ತಿನ ಸಿಪಾಯಿಯಂತೆ ಇರ್ತೀನಿ. ನಾನು ಯಾವ ಕಾರಣಕ್ಕೂ ಕಾಂಗ್ರೆಸ್ ಪಕ್ಷಕ್ಕೆ ಬ್ಲಾಕ್ಮೇಲ್ ಮಾಡುವವನಲ್ಲ. ಹಗಲು ರಾತ್ರಿ ಎನ್ನದೆ ಪಕ್ಷ ಕಟ್ಟಿದವನು ನಾನು. ಪಕ್ಷಕ್ಕಾಗಿ ದುಡಿದಿದ್ದೀನಿ. ಮುಂದೆನೂ ಆ ಕೆಲಸ ಮಾಡ್ತೀನಿ. ಮುಂದೆಯೂ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ. ಬೇರೆ ಏನೇನೋ ಚಿಂತೆ ಮಾಡಬೇಡಿ' ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
'ಸಚಿವ ಸಂಪುಟ ಪುನರ್ರಚನೆ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಟ್ಟ ವಿಚಾರ. ಆ ಬಗ್ಗೆ ಅವರೇ ಹೈಕಮಾಂಡ್ ಜೊತೆ ಮಾತನಾಡಿಕೊಳ್ತಾರೆ. ಹೈಕಮಾಂಡ್ ನನ್ನನ್ನೂ ಕರೆದರೆ ಹೋಗ್ತೀನಿ. ನಾನು ಈಗ ಹೋಗುತ್ತಿರುವುದು ಆ ವಿಚಾರಕ್ಕಂತೂ ಅಲ್ಲ. ಕಾಂಗ್ರೆಸ್ ಕಚೇರಿ ಕಾರ್ಯಕ್ರಮದ ವಿಚಾರವಾಗಿ ಭೇಟಿಯಾಗುತ್ತಿದ್ದೇನೆ' ಎಂದು ಸ್ಪಷ್ಟಪಡಿಸಿದ್ದಾರೆ.
-
ಬಾಗಲಕೋಟೆಯಲ್ಲಿ ಕಾಂಗ್ರೆಸ್ಗೆ ಪೂರಕ ವಾತಾವರಣ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಸಿಎಂ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ












Click it and Unblock the Notifications