ಡಿಕೆಶಿ 2 ದಿನ ಮೈಸೂರು, ಮಂಡ್ಯದಲ್ಲಿ ಟೆಂಪಲ್ ರನ್: ಟಿಪ್ಪು ಮಸೀದಿಗೂ ಭೇಟಿ
ಬೆಂಗಳೂರು, ನವೆಂಬರ್ 6: ಟಿಪ್ಪು ಸುಲ್ತಾನ್ ಸಂಬಂಧಿತ ವಿಚಾರವನ್ನು ಪಠ್ಯದಿಂದ ತೆಗೆಯುತ್ತಿರುವ ಹೊತ್ತಿನಲ್ಲಿ ಡಿಕೆ ಶಿವಕುಮಾರ್ ಟಿಪ್ಪು ಮಸೀದಿಗೆ ಭೇಟಿ ನೀಡುತ್ತಿರುವುದು ಕೆಲವರ ಕೆಂಗಣ್ಣಿಗೆ ಕಾರಣವಾಗಿದೆ.
ಅಕ್ರಮ ಹಣ ವರ್ಗಾವಣೆ ಆರೋಪ ಹೊತ್ತಿರುವ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಎರಡು ದಿನ ಮೈಸೂರು, ಮಂಡ್ಯದ ದೇವಸ್ಥಾನಗಳಿಗೆ ಭೇಟಿ ನೀಡಲಿದ್ದಾರೆ. ಇದೇ ಸಮಯದಲ್ಲಿ ಶ್ರೀರಂಗಪಟ್ಟಣದಲ್ಲಿರುವ ಟಿಪ್ಪು ಮಸೀದಿಗೂ ಭೇಟಿ ನೀಡಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಎರಡು ದಿನದ ಪ್ರವಾಸದಲ್ಲಿ ಏಳು ದೇವಸ್ಥಾನಗಳಿಗೆ ಭೇಟಿ
ಮಾಜಿ ಸಚಿವ ಡಿಕೆ ಶಿವಕುಮಾರ್ ಎರಡು ದಿನದ ಪ್ರವಾಸದಲ್ಲಿ ಏಳು ದೇವಸ್ಥಾನಗಳಿಗೆ ಭೇಟಿ ನೀಡಲಿದ್ದಾರೆ. ಜಾಮೀನು ದೊರೆತ ಬಳಿಕ ಎರಡು ದಿನಗಳ ದೇವಸ್ಥಾನ ಪ್ರವಾಸವನ್ನು ಹಮ್ಮಿಕೊಂಡಿದ್ದಾರೆ. ಕೇವಲ ಡಿಕೆ ಶಿವಕುಮಾರ್ ಮಾತ್ರವಲ್ಲ ಐಟಿ ಕಂಟಕ ಅವರ ಇಡೀ ಕುಟುಂಬಕ್ಕೆ ಆವರಿಸಿದಂತಿದೆ.
ಹಾಗಾಗಿ ಕುಟುಂಬ ಸಮೇತರಾಗಿ ದೇವಸ್ಥಾನಗಳಿಗೆ ಭೇಟಿ ನೀಡಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಯಾವ್ಯಾವ ದೇವಸ್ಥಾನಗಳಿಗೆ ಭೇಟಿ
ನಂಜನಗೂಡು ನಂಜುಂಡೇಶ್ವರ ದೇವಸ್ಥಾನ, ಸುತ್ತೂರು ಮಠ, ಚಾಮುಂಡಿ ಬೆಟ್ಟ, ರಂಗನಾಥ ಸ್ವಾಮಿ ದೇವಸ್ಥಾನ, ನಿಮಿಷಾಂಬ ದೇವಸ್ಥಾನ, ಮಂಡ್ಯ ಕಾಳಿಕಾಂಬ ದೇವಸ್ಥಾನ, ಮದ್ದೂರಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ.

ಶ್ರೀರಂಗಪಟ್ಟಣದ ಟಿಪ್ಪು ಮಸೀದಿಗೆ ಭೇಟಿ
ಡಿಕೆ ಶಿವಕುಮಾರ್ ಶ್ರೀರಂಗಪಟ್ಟದಲ್ಲಿರುವ ಟಿಪ್ಪು ಮಸೀದಿಗೂ ಭೇಟಿ ನೀಡಲಿದ್ದಾರೆ. ಇದೀಗ ಟಿಪ್ಪು ಬಗ್ಗೆ ಚರ್ಚೆ ವಿಪರೀತವಾಗುತ್ತಿದ್ದು, ಬಿಜೆಪಿ ನಾಯಕರು ಟಿಪ್ಪು ವಿಚಾರವನ್ನು ಪಠ್ಯದಿಂದ ತೆಗದು ಹಾಕುವ ಕುರಿತು ಚರ್ಚೆ ಆರಂಭಿಸಿರುವ ಬೆನ್ನಲ್ಲೇ ಅದಕ್ಕೆ ವಿರುದ್ಧವೆಂಬಂತೆ ಡಿಕೆ ಶಿವಕುಮಾರ್ ಮಸೀದಿಗೆ ಭೇಟಿ ನೀಡಲಿದ್ದಾರೆಯೇ ಎಂಬ ಚರ್ಚೆ ಆರಂಭವಾಗಿದೆ.

ಡಿಕೆ ಶಿವಕುಮಾರ್ಗೆ ಜಾಮೀನು
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಒಂದೂವರೆ ತಿಂಗಳಿನಿಂದ ಜೈಲಿನಲ್ಲಿದ್ದ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರಿಗೆ ಕೊನೆಗೂ ಜಾಮೀನು ಸಿಕ್ಕಿದೆ. ಡಿಕೆ ಶಿವಕುಮಾರ್ ತಿಹಾರ್ ಜೈಲಿನಿಂದ ಹೊರ ಬರುತ್ತಾರೆ ಎಂಬ ಸುದ್ದಿ ತಿಳಿದ ಕೂಡಲೇ ಅವರ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ಮುಳುಗಿದ್ದರು.ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಅವರಿಗೆ ಜಾಮೀನು ದೊರೆತಿದ್ದನ್ನು ಸ್ವಾಗತಿಸಿದ್ದವು.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ












Click it and Unblock the Notifications