DK Shivakumar: ಎಸ್ಐಆರ್ನಲ್ಲಿ ತಪ್ಪು ಮಾಡಿದರೆ ಗೃಹಲಕ್ಷ್ಮೀ ಸೇರಿ ಪಂಚ ಗ್ಯಾರಂಟಿ ಸಿಗಲ್ಲ: ಡಿಕೆಶಿ ಎಚ್ಚರಿಕೆ
DK Shivakumar: ಕರ್ನಾಟಕದಲ್ಲಿ ಇಂದಿನಿಂದ ವಿಶೇಷ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪ್ರಾರಂಭವಾಗಿದೆ. ಇದರ ಬೆನ್ನಲ್ಲೇ ಕರ್ನಾಟಕದ ಸಿಎಂ ಡಿ.ಕೆ ಶಿವಕುಮಾರ್ ಅವರು ಕರ್ನಾಟಕದ ಜನತೆಗೆ ಗ್ಯಾರಂಟಿ ಯೋಜನೆ ಹಾಗೂ ಪಿಂಚಣಿ ಸೇರಿದಂತೆ ವಿವಿಧ ವಿಚಾರಗಳಿಗೆ ಸಂಬಂಧಿಸಿದಂತೆ ಮಹತ್ವದ ಎಚ್ಚರಿಕೆಯನ್ನು ನೀಡಿದ್ದಾರೆ.
SIR ಪ್ರಕ್ರಿಯೆಯಲ್ಲಿ ಸರಿಯಾಗಿ ಪಾಲ್ಗೊಳದೆ ಅಥವಾ ಮತದಾರರ ಹಕ್ಕು ಕಳೆದುಕೊಂಡರೆ ಪಂಚ ಗ್ಯಾರಂಟಿ ಯೋಜನೆಗಳು ಕೈತಪ್ಪುವ ಸಾಧ್ಯತೆ ಇದೆ. ಮುಖ್ಯವಾಗಿ ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿದಂತೆ ಪಂಚ ಗ್ಯಾರಂಟಿ ಯೋಜನೆಗಳು ಹಾಗೂ ಸಾಮಾಜಿಕ ಭದ್ರತಾ ಯೋಜನೆಯಡಿ ಪಡೆಯುತ್ತಿರುವ ವಿವಿಧ ಪಿಂಚಣಿ ಸೌಲಭ್ಯ, ಸರ್ಕಾರಿ ಮನೆ ಹಾಗೂ ನಿವೇಶನ ಸೇರಿದಂತೆ ಸರ್ಕಾರದಿಂದ ಈಗ ಸಿಗುತ್ತಿರುವ ಯಾವ ರೀತಿಯ ಸೌಲಭ್ಯಗಳು ಸಹ ಸಿಗುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ.

ವಿವಿಧ ರಾಜ್ಯಗಳಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆಯ ನಂತರ ಕರ್ನಾಟಕದಲ್ಲೂ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಮತ್ತೆ ಪ್ರಾರಂಭವಾಗಿದೆ. ಬೆಂಗಳೂರಿನ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ಪಾಲಿಕೆಗಳ ಚುನಾವಣೆ ಹಿನ್ನೆಲೆಯಲ್ಲಿ ಎಸ್ಐಆರ್ ಪ್ರಕ್ರಿಯೆ ವೇಗ ಪಡೆದುಕೊಂಡಿದೆ. ಬೆಂಗಳೂರು ಹಾಗೂ ಕರ್ನಾಟಕದಲ್ಲಿ ಎಸ್ಐಆರ್ ಪ್ರಕ್ರಿಯೆ ಪ್ರಾರಂಭವಾದ ಬೆನ್ನಲ್ಲೇ ಗ್ಯಾರಂಟಿ ಯೋಜನೆಗಳು ಹಾಗೂ ವಿವಿಧ ಪಿಂಚಣಿ ಸೌಲಭ್ಯಗಳಿಗೆ ಸಂಬಂಧಿಸಿದಂತೆ ಡಿ.ಕೆ ಶಿವಕುಮಾರ್ ಅವರು ಮತದಾರರಿಗೆ ಎಚ್ಚರಿಕೆ ಕೊಟ್ಟಿದ್ದಾರೆ. ಒಂದೊಮ್ಮೆ ನಿಮ್ಮ ಮತದಾರರ ಹಕ್ಕು ಹೋದರೆ, ಗ್ಯಾರಂಟಿ, ವೃದ್ಯಾಪ್ಯ ವೇತನ, ಪಿಂಚಣಿ ಹಾಗೂ ಸರ್ಕಾರಿ ಮನೆ - ಸೈಟ್ಗಳೂ ಸಹ ಸಿಗುವುದಿಲ್ಲ. ಹೀಗಾಗಿ, ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ವಿಚಾರದಲ್ಲಿ ಎಚ್ಚರದಿಂದ ಇರಿ, ಮತದಾರರ ಗುರುತಿನ ಚೀಟಿ ಕೈ ತಪ್ಪದಂತೆ ಎಚ್ಚರಿಕೆ ವಹಿಸಿ ಎಂದು ಎಚ್ಚರಿಕೆ ನೀಡಲಾಗಿದೆ.
ಅಕ್ಕಿ ಸೌಭಲ್ಯ ಈಗಾಗಲೇ ಕಡಿತ ಮಾಡಲಾಗಿದೆ
ಇನ್ನು ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೂ ಮುಂಚೆ ಈ ರಾಜ್ಯದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ನಡೆಸಲಾಗಿತ್ತು. ಇದಾದ ನಂತರ ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದೆ ಇರುವವರಿಗೆ ಪಶ್ಚಿಮ ಬಂಗಾಳದಲ್ಲಿ ಸರ್ಕಾರದಿಂದ ಈಗ ಅಕ್ಕಿ ಕೊಡುತ್ತಿಲ್ಲ. ಅದೇ ರೀತಿ ಕರ್ನಾಟಕದಲ್ಲೂ ಯಾರಾದರೂ ಮತದಾನ ಹಕ್ಕು ಕಳೆದುಕೊಂಡರೆ, ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಸೇರಿದಂತೆ ಪಂಚ ಗ್ಯಾರಂಟಿ ಯೋಜನೆಗಳು, ಸರ್ಕಾರಿ ಮನೆ ಹಾಗೂ ಸರ್ಕಾರಿ ನಿವೇಶನ ಸೇರಿದಂತೆ ಹಲವು ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗಲಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಕರ್ನಾಟಕದ ಮತದಾರರಿಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ.












Click it and Unblock the Notifications