"ಡಿ ಕೆ ಶಿವಕುಮಾರ್ಗೆ RSS ಬಗ್ಗೆ ಪ್ರೀತಿ, ಸಿಂಪತಿ, ಬದಲಾವಣೆ"
ಬೆಂಗಳೂರು, ಆಗಸ್ಟ್ 26: ವಿಧಾನಸಭೆಯ ಸದನದಲ್ಲಿ ನಿಂತು ಆರ್ಎಸ್ಎಸ್ ಗೀತೆ ಹಾಡಿದ ಡಿಸಿಎಂ ಡಿಕೆ ಶಿವಕುಮಾರ್ ನಡೆ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಅಲ್ಲದೇ ಕಾಂಗ್ರೆಸ್ ವಲಯದಲ್ಲೂ ಕಿಚ್ಚು ಹಚ್ಚಿತ್ತು. ಡಿ ಕೆ ಶಿವಕುಮಾರ್ ಅವರು ಆರ್ಎಸ್ಎಸ್ ಗುಣಗಾನವನ್ನ ಕೈ ನಾಯಕರು ಕೂಡ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಡಿ ಕೆ ಶಿವಕುಮಾರ್ ಆರ್ ಎಸ್ ಎಸ್ ಪ್ರೇಮದ ಕುರಿತು ಬಿಜೆಪಿ ನಾಯಕ ಹಾಗೂ ವಿಧಾನ ಪರಿಷತ್ ಸದದ್ಯರಾದ ಛಲವಾದಿ ನಾರಾಯಣಸ್ವಾಮಿ ಅವರು ಪ್ರತಿಕ್ರಿಯಿಸಿದ್ದಾರೆ.
ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ಗೆ ಆರ್.ಎಸ್.ಎಸ್ ಬಗ್ಗೆ ಪ್ರೀತಿ, ಸಿಂಪತಿ ಹಾಗೂ ಬದಲಾವಣೆ ಬಂದಿದೆ. ಕೆಲವರಿಗೆ ಸಂಘದ ಗಾಳಿಯೆ ಬಡಿಯಬಾರದು ಎಂದು ಹೇಳಿದ್ದಾರೆ. ಸಂಘ ದೇಶದ ಸರ್ವವ್ಯಾಪ್ತಿಯಾಗಿದ್ದು ಅದರ ಗಾಳಿ ಬಡಿಯಬಾರದು ಎಂದರೆ ದೇಶ ಬಿಟ್ಟು ಹೋಗಬೇಕಾಗುತ್ತದೆ ಎಂದು ಖಾರವಾಗಿ ಹೇಳಿದರು. ಮನುವಾದಿಗಳೆಂದು ಜರಿಯುವ ನೀವು ಅವರನ್ನೆ ಮನೆ ತುಂಬಿಸಿಕೊಂಡಿದ್ದಿರಿ, ಅವರ ಮನೆ ತುಂಬಿದ್ದೀರಿ. ನಿಮ್ಮ ರಕ್ಷಣೆಗೆ ಇಟ್ಟುಕೊಂಡಿದ್ದೀರಿ.

ನಿಮ್ಮ ಬೂಟಾಟಿಕೆ ಮಾತುಗಳನ್ನು ನಿಲ್ಲಿಸಿ. ಸಂಘದ ಗೀತೆ ಹಾಡಲು ಸರ್ವರು ಸ್ವತಂತ್ರರು. ನಿಮ್ಮ ಪಕ್ಷದ ಡಿಕೆಶಿ ಹಾಗೂ ಕುಣಿಗಲ್ ಶಾಸಕರು ಹಾಡಿರುವುದನ್ನು ನಿಮ್ಮ ಕೈಯಿಂದ ನಿಲ್ಲಿಸಲು ಸಾಧ್ಯವೇ? ಎಂದು ಕೇಳಿದರು. ಆರ್.ಎಸ್.ಎಸ್. ಬಗ್ಗೆ ಮಾತನಾಡುವುದೆಂದರೆ ಬಿಟ್ಟಿ ಪ್ರಚಾರಕ್ಕಾಗಿ ಬಾಯಿ ಚಪಲಕ್ಕಾಗಿ ಮಾತನಾಡುವ ನಿಮ್ಮ ಕೀಳುಮಟ್ಟದ ಪ್ರಚಾರ ಬಿಡಿ ಎಂದು ಪರೋಕ್ಷವಾಗಿ ಕಾಂಗ್ರೆಸ್ ಮುಖಂಡರನ್ನು ತರಾಟೆಗೆ ತೆಗೆದುಕೊಂಡರು.
ಕಾಡಗೋಡಿ ದಿಣ್ಣೂರಿನಲ್ಲಿ ಸ್ವಯಂ ಕ್ರಮ ಕೈಗೊಂಡು ಬಡ ದಲಿತರ ಮನೆ ಧ್ವಂಸ ಮಾಡಿದ ಅರಣ್ಯ ಇಲಾಖೆಯ ಅಧಿಕಾರಿಗಳ ಮೇಲೆ ಕೇಸ್ ದಾಖಲಿಸಲು ಮುಖ್ಯಮಂತ್ರಿಗೆ ಮನವಿ ಮಾಡಿದ್ದೆ. ಅದನ್ನು ಮುಖ್ಯಮಂತ್ರಿಯವರು ಒಪ್ಪಿಕೊಂಡು ಪೊಲೀಸ್ ಮಹಾನಿರೀಕ್ಷಕರಿಗೆ ಕೇಸ್ ದಾಖಲಿಸಲು ಸೂಚನೆ ನೀಡಿದ್ದಾರೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.
1952ರಲ್ಲಿ ಕಾಡುಗೋಡಿ ದಿಣ್ಣೂರಿನ 711 ಎಕರೆ ಜಮೀನು ದಲಿತರ ಕುಟುಂಬಕ್ಕೆ ನೀಡಲಾಗಿದೆ. ಇದರಲ್ಲಿ 250 ಎಕರೆ ಕೆಐಡಿಬಿ ಪ್ರತಿ ಎಕರೆಗೆ 30 ಸಾವಿರ ರೂಪಾಯಿ ಪರಿಹಾರ ನೀಡಿ ಭೂಸ್ವಾಧೀನ ಮಾಡಿದೆ. ರೈಲ್ವೇ, ಮೆಟ್ರೋ ಹಾಗೂ ಪೋಲಿಸ್ ಠಾಣೆ ಕಟ್ಟಲು ಭೂಸ್ವಾಧೀನವಾಗಿರುವ ಇಲ್ಲಿ ಕೆಲ ಬಡ ದಲಿತರು ಕಟ್ಟಿಕೊಂಡಿದ್ದ ಮನೆಗಳನ್ನು ಸುಪ್ರೀಂ ಕೋರ್ಟ್ನಲ್ಲಿ ಒಂದು ಯಾವುದೇ ಆದೇಶ ಪ್ರತಿ ಹಿಡಿದುಕೊಂಡು ಮನೆಗಳನ್ನು ಧ್ವಂಸ ಮಾಡಿದ್ದರು. ಇದು ದಮನಕಾರಿ ನೀತಿಯಾಗಿದೆ; ಇದಕ್ಕೆ ಕಾರಣರಾದ ಅಧಿಕಾರಿಗಳ ಮೇಲೆ ಪ್ರಕರಣ ದಾಖಲಾಗಲಿದೆ ಎಂದರು.
ಸುಳ್ಳು ಜಾತಿ ಪ್ರಮಾಣಪತ್ರದ ಬಗ್ಗೆ ಚರ್ಚಿಸಲಾಗಿ ಸುಳ್ಳು ಪ್ರಮಾಣ ಪತ್ರ ಹೊಂದಿದವರು ಅನೇಕರು ಸರ್ಕಾರ ನೌಕರಿಯಲ್ಲಿದ್ದಾರೆ, ಕೆಲವರು ನಿವೃತ್ತಿ ಹೊಂದಿ ಪಿಂಚಣಿ ಪಡೆಯುತಿದ್ದಾರೆ. ಇದರ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡುವಂತೆ ಸಭೆಯಲ್ಲಿ ನಿರ್ಣಯಿಸಲಾಯಿತು ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ತಿಳಿಸಿದರು.
-
Upendra: ನಟ ಉಪೇಂದ್ರ ಅವರ "ಪ್ರಜಾಕೀಯ" ಪಕ್ಷದ ವೆಬ್ಸೈಟ್ ಲೋಕಾರ್ಪಣೆ, ಟಿಕೆಟ್ ಆಕಾಂಕ್ಷಿಗಳಿಗೆ ಹೊಸ ರೂಲ್ಸ್ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Vijay: ಪ್ರಚಾರದ ವೇಳೆ ಹೂವಿನ ಚೆಂಡು ಎಸೆದ ಅಭಿಮಾನಿ; ಸೈಕಲ್ನಿಂದ ಇಳಿದು ಗಾಡಿ ಹತ್ತಿದ ದಳಪತಿ ವಿಜಯ್, ವಿಡಿಯೋ ವೈರಲ್ -
ಧಾರವಾಡ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: 1 ಲಕ್ಷ ಬಾಂಡ್ಗೆ ಆಗ್ರಹಿಸಿದ ಪೊಲೀಸರ ವಿರುದ್ಧ ಯತ್ನಾಳ್ ಗರಂ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
Bihar: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ, ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಆಯ್ಕೆ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ.











Click it and Unblock the Notifications