Get Updates
Get notified of breaking news, exclusive insights, and must-see stories!

ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ಡಿ ಕೆ ಶಿವಕುಮಾರ್ ಏನಂದ್ರು?

ಬೆಂಗಳೂರು, ಜೂನ್‌ 22: ಮಾಜಿ ಸಚಿವ ಹೆಚ್‌ ಡಿ ರೇವಣ್ಣ ಅವರ ಪುತ್ರ ಹಾಗೂ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರ ಮೇಲಿನ ಆರೋಪಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಪ್ರತಿಕ್ರಿಯಿಸಿದ್ದಾರೆ. ಸೂರಜ್ ರೇವಣ್ಣ ಅವರ ಕುಟುಂಬದಲ್ಲಿ ದೊಡ್ಡವರಿದ್ದಾರೆ. ಅವರು ಉತ್ತರ ನೀಡುತ್ತಾರೆ. ನಮಗೆ ಆ ವಿಚಾರ ಬೇಡ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಕಚೇರಿಯ ಇಂದಿರಾ ಗಾಂಧಿ ಭವನದಲ್ಲಿ ಕಾಂಗ್ರೆಸ್ ಪಕ್ಷದ ಬೆಂಗಳೂರು ಮಾಜಿ ಮೇಯರ್ ಹಾಗೂ ಉಪಮೇಯರ್ ಗಳ ಜತೆ ಸಭೆ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, ಇಂದು ಮಾಜಿ ಮೇಯರ್ ಹಾಗೂ ಉಪಮೇಯರ್ ಗಳ ಜತೆ ಸಭೆ ಮಾಡಿ ಬೆಂಗಳೂರಿನ ಆಚಾರ ವಿಚಾರಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ನಮ್ಮ ನಾಯಕರ ಅಭಿಪ್ರಾಯ ಕೇಳಿದ್ದೇವೆ. ಚುನಾವಣೆ ತಯಾರಿ ಬಗ್ಗೆ ಅನೇಕ ಸಲಹೆ ನೀಡಿದ್ದಾರೆ.

DK Shivakumar s reaction to the sexual assault allegations against Suraj Revanna

ಮಾಜಿ ಮೇಯರ್ ಗಳ ಮಟ್ಟದಲ್ಲಿ ಸಮಿತಿ ರಚಿಸಲಾಗಿದ್ದು, ಎ ಖಾತೆ, ಬಿ ಖಾತೆ ಸೇರಿದಂತೆ ಅನೇಕ ಸಾರ್ವಜನಿಕ ಸಮಸ್ಯೆಗಳು ಹಾಗೂ ಆಡಳಿತಕ್ಕೆ ಸಂಬಂಧ ಪಟ್ಟ ಸಮಸ್ಯೆಗಳ ಬಗ್ಗೆ ಈ ಸಮಿತಿ ಅಧ್ಯಯನ ಮಾಡಿ ವರದಿ ನೀಡಲಿದೆ. ಮುಂದಿನ ಎಂಟು ಹತ್ತು ದಿನಗಳಲ್ಲಿ ಮತ್ತೊಮ್ಮೆ ಸಭೆ ಮಾಡುತ್ತೇವೆ. ಸಮಿತಿ ವರದಿ ಮೇಲೆ ಮುಖ್ಯಮಂತ್ರಿಗಳು ಹಾಗೂ ಶಾಸಕರ ಜತೆ ಚರ್ಚೆ ಮಾಡುತ್ತೇವೆ. ನಂತರ ನಮ್ಮ ಕಾರ್ಯಯೋಜನೆ ರೂಪಿಸುತ್ತೇವೆ. ಬಿಬಿಎಂಪಿ ಚುನಾವಣೆಯನ್ನ ಖಂಡಿತವಾಗಿ ಅದನ್ನು ಮಾಡಲೇಬೇಕು. ಅದನ್ನು ನಿರ್ಲಕ್ಷ್ಯ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ಆದಾಯ ಮೂಲಗಳ ಕುರಿತ ಸಲಹೆಗೆ ವಿದೇಶಿ ಕಂಪೆನಿಗಳನ್ನು ನೇಮಿಸಿರುವ ಬಗ್ಗೆ ಬಿಜೆಪಿ ಟೀಕೆ ಬಗ್ಗೆ ಮಾತನಾಡಿ, ಕೇಂದ್ರ ಸರ್ಕಾರ ಹಾಗೂ ಬೇರೆ ರಾಜ್ಯ ಸರ್ಕಾರಗಳಂತೆ ನಾವು ಕೂಡ ಆದಾಯದ ಮೂಲಗಳ ಬಗ್ಗೆ ಖಾಸಗಿ ಕಂಪನಿಗಳ ಸಲಹೆ ಕೇಳಿದ್ದೇವೆ. ಇದರಲ್ಲಿ ತಪ್ಪೇನಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ.

"ರಾಜ್ಯ ಸರ್ಕಾರ ಸಂಪನ್ಮೂಲ ಕ್ರೂಢೀಕರಣಗಳತ್ತ ಹೆಚ್ಚು ಗಮನಹರಿಸುತ್ತಿದ್ದು, ಬೇರೆಯವರಂತೆ ನಾವು ಕೂಡ ಅನೇಕರ ಸಲಹೆ ಕೇಳಿದ್ದೇವೆ. ನಾವು ಬಿಜೆಪಿಯವರಂತೆ ಹಣಕಾಸಿಗಾಗಿ ಸರ್ಕಾರಿ ಆಸ್ತಿಗಳನ್ನು ಅಡಮಾನ ಇಡುತ್ತಿಲ್ಲ. ಸರ್ಕಾರದ ಹಾಗೂ ರಾಜ್ಯದ ಹಿತವನ್ನು ಗಮನದಲ್ಲಿಟ್ಟುಕೊಂಡು ಏನು ಕ್ರಮ ಕೈಗೊಳ್ಳಬೇಕೋ ಅದನ್ನು ಮಾಡುತ್ತೇವೆ" ಎಂದು ತಿಳಿಸಿದರು.

ಚನ್ನಪಟ್ಟದಲ್ಲಿ ನೀವೆ ಸ್ಪರ್ಧೆ ಮಾಡುವಂತೆ ಜನ ನಿರೀಕ್ಷೆ ಮಾಡುತ್ತಿದ್ದಾರೆ ಎಂದು ಕೇಳಿದಾಗ, "ಚನ್ನಪಟ್ಟಣ ನನ್ನ ಊರು. ಅಲ್ಲಿ ಯಾರೇ ನಿಂತರೂ ನಾನೇ ಅಭ್ಯರ್ಥಿ" ಎಂದು ತಿಳಿಸಿದರು. ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಮ್ಮ ಸ್ಪರ್ಧೆ ಬಗ್ಗೆ ಬೇರೆ ಬೇರೆ ಅಭಿಪ್ರಾಯ ವ್ಯಕ್ತವಾಗುತ್ತಿದೆ ಎಂದು ಕೇಳಿದಾಗ, "ಯಾರು ಏನೇ ಅಭಿಪ್ರಾಯ ಹೇಳಲಿ. ಜನರ ಜತೆ ಚರ್ಚೆ ಮಾಡಿದ ಬಳಿಕ ನನ್ನ ಅಭಿಪ್ರಾಯ ತೀರ್ಮಾನಿಸುತ್ತೇನೆ" ಎಂದರು.

ಬೆಲೆ ಏರಿಕೆಗೆ ಗ್ಯಾರಂಟಿ ಯೋಜನೆಗಳೇ ಕಾರಣ ಎಂಬ ಎನ್ ಡಿಎ ಸಂಸದರ ಆರೋಪದ ಬಗ್ಗೆ ಉತ್ತರಿಸಿ, "ಯಾರು ಏನಾದರೂ ಆರೋಪ ಮಾಡಲಿ. ಗ್ಯಾರಂಟಿ ಯೋಜನೆಗೂ ಬೆಲೆ ಏರಿಕೆಗೂ ಸಂಬಂಧವಿಲ್ಲ. ಕಾಲಕಾಲಕ್ಕೆ ಆಗಬೇಕಿರುವ ಬೆಲೆ ಏರಿಕೆ ನಾವು ಮಾಡಿದ್ದೇವೆ. ನಾವು ಬಿಜೆಪಿಯವರಂತೆ ಎಲ್ಲಾ ವಸ್ತುಗಳ ಬೆಲೆ ಏರಿಕೆ ಮಾಡಿಲ್ಲ. ಬಿಜೆಪಿ ಕಚ್ಛಾತೈಲ ಬೆಲೆ ಕುಸಿದಾಗಲೂ ಬೆಲೆ ಏರಿಕೆ ಮಾಡಿದ್ದಾರೆ. ನಾವು ಬಹಳ ಕಡಿಮೆ ಪ್ರಮಾಣದಲ್ಲಿ ನೆರೆ ರಾಜ್ಯಗಳ ಬೆಲೆ ಪ್ರಮಾಣವನ್ನು ಗಮನದಲ್ಲಿಟ್ಟುಕೊಂಡು ಇಂಧನ ತೈಲ ಬೆಲೆ ಏರಿಕೆ ಮಾಡಿದ್ದೇವೆ. ನಮ್ಮ ಗ್ಯಾರಂಟಿಗಳು ಮುಂದುವರಿಯಲಿದೆ. ರಾಜ್ಯದ ಅಭಿವೃದ್ಧಿಗೆ ಏನು ಮಾಡಬೇಕೋ ಆ ಕೆಲಸ ಮಾಡುತ್ತೇವೆ" ಎಂದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+