E-Swattu and E-Katha: ಇ - ಸ್ವತ್ತು, ಇ ಖಾತಾ ಬಗ್ಗೆ ಬಿಗ್ ಗುಡ್ನ್ಯೂಸ್ ಕೊಟ್ಟ ಡಿ.ಕೆ ಶಿವಕುಮಾರ್!
E-Swattu and E-Katha: ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಇ - ಸ್ವತ್ತು ಹಾಗೂ ಇ -ಖಾತಾಗೆ ಸಂಬಂಧಿಸಿದಂತೆ ಭರ್ಜರಿ ಗುಡ್ನ್ಯೂಸ್ ಕೊಟ್ಟಿದ್ದಾರೆ. ಜನರ ಶಕ್ತಿಯೇ ನಮ್ಮ ಶಕ್ತಿ - ಅವರೇ ನಮ್ಮ ಆಸ್ತಿ ಎಂದು ಹೇಳಿರುವ ಅವರು ಕೆಲವೊಂದು ಪ್ರಮುಖ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಇ - ಸ್ವತ್ತು 2.0 ತಂತ್ರಾಂಶಕ್ಕೆ ಚಾಲನೆ ನೀಡಿ ಹಾಗೂ 2023 - 2024ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾದ ರಾಜ್ಯದ ಎಲ್ಲಾ ಜಿಲ್ಲಾವಾರು ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳೊಂದಿಗೆ ಸಾಂಕೇತಿಕವಾಗಿ ಪ್ರಶಸ್ತಿ ವಿತರಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದ್ದಾರೆ.

ಕಾಂಗ್ರೆಸ್ ಪಕ್ಷ ನಿಮ್ಮ ಹಿತಕ್ಕಾಗಿ ಕೆಲಸ ಮಾಡುತ್ತಿದೆ. ಭಾರತದ ಭವಿಷ್ಯ ಅಡಗಿರುವುದು ಹಳ್ಳಿಯಲ್ಲಿ ಎಂದು ಗಾಂಧೀಜಿ ಅವರು ದೇಶಕ್ಕೆ ದೊಡ್ಡ ಸಂದೇಶವನ್ನು ಕೊಟ್ಟಿದ್ದಾರೆ. ನಿಮ್ಮ ಮನೆ ಬಾಗಿಲಿಗೆ ಇ - ಸ್ವತ್ತು ಮೂಲಕ ದಾಖಲೆಗಳನ್ನು ತಲುಪಿಸುವ ವ್ಯವಸ್ಥೆಯನ್ನು ಸರ್ಕಾರ ರೂಪಿಸಿದೆ ಎಂದು ಅವರು ಹೇಳಿದ್ದಾರೆ.
15 ದಿನಗಳೊಳಗೆ ಇ - ಖಾತಾ
ಇನ್ನು ಇ - ಖಾತಾ ಸಿಗುವುದು ವಿಳಂಬವಾಗುತ್ತಿದೆ ಎನ್ನುವ ಆರೋಪದ ನಡುವೆಯೇ ಇ - ಖಾತಾಗೆ ಸಂಬಂಧಿಸಿದ ಅರ್ಜಿಗಳಿಗೆ ಕಾಲ ಮಿತಿ ನಿಗದಿ ಮಾಡಿರುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಆಸ್ತಿಗಳ ದಾಖಲೆಗಾಗಿ 'ಇ - ಸ್ವತ್ತು' ಯೋಜನೆಯಡಿ ಅರ್ಜಿ ಸಲ್ಲಿಸಿದ 15 ದಿನಗಳೊಳಗೆ ಇ - ಖಾತಾ ವಿತರಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರು ಅಲೆದಾಡುವುದನ್ನು ತಪ್ಪಿಸಲು ಆನ್ಲೈನ್ ಹಾಗೂ ಬಾಪೂಜಿ ಸೇವಾ ಕೇಂದ್ರದಲ್ಲಿ ಇ - ಖಾತಾಕ್ಕಾಗಿ ಅರ್ಜಿ ಸಲ್ಲಿಸುವ ಅವಕಾಶವನ್ನು ಮಾಡಿದ್ದೇವೆ. ದೇಶದಲ್ಲಿ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಸದಾ ಜನಪರ ಕಾರ್ಯಕ್ರಮವನ್ನು ರೂಪಿಸಿದ್ದೇವೆ.
ಪಂಚಾಯತಿಯಿಂದ ಪಾರ್ಲಿಮೆಂಟ್ವರೆಗೆ ಹೊಸ ನಾಯಕರನ್ನ ಬೆಳೆಸಬೇಕು ಎಂಬುದು ನಮ್ಮ ನಾಯಕರಾದ ಶ್ರೀ ರಾಜೀವ್ ಗಾಂಧಿ ಅವರ ಕಲ್ಪನೆಯಾಗಿತ್ತು. ವಿಜಯಪುರ ಜಿಲ್ಲೆಯ ಗ್ರಾಮ ಪಂಚಾಯಿತಿಯೊಂದರ ಅಧ್ಯಕ್ಷರಾಗಿದ್ದ ಬಿ.ಡಿ. ಜತ್ತಿ ಅವರು ದೇಶದ ಉಪ ರಾಷ್ಟ್ರಪತಿಯಾಗಿ, ಈ ರಾಜ್ಯದ ಮುಖ್ಯಮಂತ್ರಿಯಾಗಿ ಸೇವೆಯನ್ನು ಸಲ್ಲಿಸಿದ್ದರು. ಸ್ಥಳೀಯ ಸಂಸ್ಥೆಗಳೇ ಸರ್ಕಾರದ ಆಧಾರಸ್ತಂಭ. ಗ್ರಾಮೀಣ ಮಟ್ಟದಲ್ಲಿ ನೀವು ನಾಯಕರಾಗಿ ಬೆಳೆದು ಜನರ ಹೃದಯವನ್ನು ಗೆಲ್ಲಬೇಕು. ಈ ಸರ್ಕಾರ ನಿಮ್ಮ ಪರವಾಗಿ, ನಿಮ್ಮ ಕೈ'ಬಲಪಡಿಸಲು ಸದಾ ಜೊತೆಯಾಗಿರಲಿದೆ ಎಂದು ಹೇಳಿದ್ದಾರೆ.
-
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ












Click it and Unblock the Notifications