ಚಂದ್ರಬಾಬು ನಾಯ್ಡು ಭೇಟಿ ಮಾಡಿದ ಡಿಕೆ ಶಿವಕುಮಾರ್, ಆಂಧ್ರದಲ್ಲೂ ತಂತ್ರಗಾರಿಕೆ ಆರಂಭವೇ?
ಬೆಂಗಳೂರು, ಡಿಸೆಂಬರ್ 29: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಪಿಸಿಸಿ ಅಧ್ಯಕ್ಷ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ನಡುವೆ ಭೇಟಿಯಾಗಿದೆ. ಇದು ಮುಂಬರುವ ಚುನಾವಣೆಗಳಲ್ಲಿ ಆಂಧ್ರಪ್ರದೇಶದಲ್ಲಿ ಹೊಂದಾಣಿಕೆ ಮಾತುಕತೆಯ ಚರ್ಚೆಯನ್ನು ಹುಟ್ಟುಹಾಕಿದೆ.
ಡಿಕೆ ಶಿವಕುಮಾರ್ ಮತ್ತು ಚಂದ್ರಬಾಬು ನಾಯ್ಡು ಅವರು ಬೆಂಗಳೂರು ಹಾಗೂ ಕುಪ್ಪಂನಲ್ಲಿ ಸರಣಿ ಕಾರ್ಯಕ್ರಮಗಳಿಗೆ ತೆರಳುವ ಮಾರ್ಗವಾಗಿ ಬೆಂಗಳೂರಿಗೆ ಆಗಮಿಸಿದಾಗ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಳಿಗ್ಗೆ ಭೇಟಿಯಾದರು.ಡಿಕೆ ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷದ ಸಂಸ್ಥಾಪನಾ ದಿನಾಚರಣೆಗಾಗಿ ನಾಗ್ಪುರಕ್ಕೆ ವಿಮಾನದಲ್ಲಿ ತೆರಳಲಿದ್ದರು.

ಆಗ ಹತ್ತಿರ ಬಂದ ಇಬ್ಬರು ನಾಯಕರು ಕೈಕುಲುಕಿದರು. ನಾಯ್ಡು ಶಿವಕುಮಾರ್ ನಾಯ್ಡು ಅವರನ್ನು ತೋಳು ಹಿಡಿದು ಪಕ್ಕಕ್ಕೆ ಎಳೆದರು, ಭದ್ರತಾ ಸಿಬ್ಬಂದಿ ಸೇರಿದಂತೆ ಅವರ ಜೊತೆಗಿದ್ದವರಿಂದ ದೂರ ಹೋದರು. ಇಬ್ಬರು ವ್ಯಕ್ತಿಗಳು ಕೆಲವು ನಿಮಿಷಗಳ ಕಾಲ ಮಾತನಾಡಿದರು. ಡಿಕೆ ಶಿವಕುಮಾರ್ ಹೆಚ್ಚಾಗಿ ಮಾತನಾಡಿದರು. ನಾಯ್ಡು ಗಮನವಿಟ್ಟು ಕೇಳಿಸಿಕೊಂಡು ತಲೆದೂಗುವ ಮೂಲಕ ಸರಿ ಎನ್ನವಂತೆ ಕಾಣುತ್ತಿತ್ತು.
ಭೇಟಿಯಾದದ್ದು ಹೇಗೆ:
ವಿಭಿನ್ನ ಪಕ್ಷಗಳ ಇಬ್ಬರು ರಾಜಕೀಯ ನಾಯಕರ ಭೇಟಿಯು ಆಕಸ್ಮಿಕ ಭೇಟಿಯಾಗಿತ್ತು. ಸೆಕ್ಯೂರಿಟಿ, ಸಹಾಯಕರಿಂದ ದೂರ ಸರಿದು ಅವರು ಸಲ್ಪ ದೂರ ಹೋಗಿ ಮಾತನಾಡಿದ್ದು, ಹಲವು ಊಹಾಪೋಹಗಳಿಗೆ ಕಾರಣವಾಯಿತು.
ಈ ಸಂಭಾಷಣೆಯಲ್ಲಿ ಡಿಕೆ ಶಿವಕುಮಾರ್ ನಾಯ್ಡು ಅವರಿಗೆ ಬಿಜೆಪಿ ವಿರುದ್ಧ ಟಿಡಿಪಿ ತಮ್ಮೊಂದಿಗೆ ಸಹಕರಿಸಬೇಕು ಎಂದು ಹೇಳಿದಂತಿತ್ತು. ವೈಎಸ್ಆರ್ಸಿಪಿ ವಿರುದ್ಧ ಟಿಡಿಪಿ-ಜನಸೇನಾ ಮೈತ್ರಿಕೂಟಕ್ಕೆ ಸೇರಲು ಬಿಜೆಪಿ ಇಷ್ಟವಿರಲಿಲ್ಲ, ವೈಎಸ್ಆರ್ಸಿಪಿ ನಾಯಕ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು ಬಿಜೆಪಿಯೊಂದಿಗೆ ಸ್ನೇಹ ಸಂಬಂಧವನ್ನು ಹೊಂದಿರುವ ಕಾರಣ ಅನೇಕರು ಇಂತಹ ತೀರ್ಮಾನಕ್ಕೆ ಬಂದಿದ್ದಾರೆ.
#WATCH | DK Shivakumar, Karnataka Deputy CM met former CM of Andhra Pradesh and TDP chief N Chandrababu Naidu at HAL airport in Bengaluru, earlier today pic.twitter.com/dLamRjf0I9
— ANI (@ANI) December 28, 2023
ಅದೇ ಸಮಯದಲ್ಲಿ ತೆಲಂಗಾಣದಲ್ಲಿ ತನ್ನ ಗೆಲುವಿನ ನಂತರ ಕಾಂಗ್ರೆಸ್ ದಕ್ಷಿಣದಲ್ಲಿ ಮುಂಚೂಣಿಯಲ್ಲಿದೆ. ಆಂಧ್ರಪ್ರದೇಶದಲ್ಲೂ ಆ ಗೆಲುವನ್ನು ಸಾಧಿಸಲು ಉತ್ಸುಕವಾಗಿದೆ, ಪಕ್ಷವನ್ನು ಪುನರುಜ್ಜೀವನಗೊಳಿಸುವ ಮೂಲಕ ಮತ್ತು ಉಳಿದಿರುವ ತೆಲುಗು ರಾಜ್ಯದಲ್ಲಿ ಚುನಾವಣಾ ಸ್ಪರ್ಧೆಗೆ ಸಿದ್ಧವಾಗುತ್ತಿದೆ.
ಆಂಧ್ರಪ್ರದೇಶದಲ್ಲಿ ಕಾಂಗ್ರೆಸ್ ಗುರಿ:
ವೈಎಸ್ಆರ್ಸಿಪಿಯಿಂದ ತನ್ನ ಪ್ರಾಬಲ್ಯವನ್ನು ಸಾಧಿಸುವುದು ಮತ್ತು ರಾಜ್ಯದಲ್ಲಿ ಜಗನ್ ಅವರನ್ನು ಸೋಲಿಸುವುದು ಕಾಂಗ್ರೆಸ್ ತಕ್ಷಣದ ಗುರಿಯಾಗಿದೆ. ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಗೆ ಟಿಡಿಪಿ- ಜನಸೇನೆ ಮತ್ತು ಕಾಂಗ್ರೆಸ್ ನಡುವೆ ಹೊಂದಾಣಿಕೆ ಬಗ್ಗೆ ಚರ್ಚೆ ನಡೆದಿದೆ.
ಆದರೆ ಎರಡೂ ಪಕ್ಷಗಳು ವೈಎಸ್ಆರ್ಸಿಪಿ ವಿರುದ್ಧ ಹೋರಾಡಲು ಬಿಜೆಪಿಯನ್ನು ಸೇರಲು ಉತ್ಸುಕವಾಗಿವೆ. ಮೈತ್ರಿಕೂಟವನ್ನು ಸೇರುವುದರಿಂದ ಬಿಜೆಪಿಗೆ ಸ್ವಲ್ಪ ಲಾಭವಿದೆ. ಬಿಜೆಪಿ ಇಲ್ಲಿ ಯಾವುದೇ ಅಸ್ತಿತ್ವವನ್ನು ಹೊಂದಿಲ್ಲ, ಜಗನ್ ಅವರು ಸಂಸತ್ತಿನಲ್ಲಿ ರಾಷ್ಟ್ರೀಯ ಪಕ್ಷಕ್ಕೆ ಸಹಾಯ ಮಾಡುತ್ತಿದ್ದಾರೆ. ಎಲ್ಲಾ ವಿಧೇಯಕಗಳಲ್ಲಿ ಸರ್ಕಾರದೊಂದಿಗೆ ಮತ ಚಲಾಯಿಸುವ ಸಂಸದರನ್ನು ಅವರು ಹೊಂದಿದ್ದಾರೆ.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ












Click it and Unblock the Notifications