ಮೇಕೆದಾಟು ಪಾದಯಾತ್ರೆಯಲ್ಲಿ ಡಿಕೆಶಿ ಕುಡಿದು ತೂರಾಡಿದ್ರು- ಎಚ್ಡಿಕೆ ಲೇವಡಿ
ಬೆಂಗಳೂರು ಏಪ್ರಿಲ್ 10: ಮೇಕೆದಾಟು ಪಾದಯಾತ್ರೆಯಲ್ಲಿ ಡಿಕೆ ಶಿವಕುಮಾರ್ ಅವರು ಕುಡಿದು ತೂರಾಡಿದ್ರಲ್ಲಾ ಆ ರೀತಿ ನಾವೇನ್ ತೂರಾಡಿಲ್ಲ ಎಂದು ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ವಾಗ್ದಾಳಿ ಮಾಡಿದ್ದಾರೆ.
ಲೋಕಸಭಾ ಚುನಾವಣೆಗೆ ದಿನಾಂಕ ಹತ್ತಿರವಾಗುತ್ತಿದ್ದಂತೆ ಎಣ್ಣೆ, ಹಣ, ಬಟ್ಟೆ ಎಲ್ಲವೂ ಹರಿದಾಡತೊಗಿವೆ. ಈ ನಡುವೆ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ತೋಟದ ಮನೆಯಲ್ಲಿ ಮದ್ಯ ಹಾಗೂ ಬಾಡೂಟದ ವಾಸನೆ ಬರುತ್ತಿದೆ ಎಂದು ಕಾಂಗ್ರೆಸ್ ಎಕ್ಸ್ ಮೂಲಕ ಕಾಲೆಳೆದಿದೆ. ಇದಕ್ಕೆ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಮೇಕೆದಾಟು ಪಾದಯಾತ್ರೆಯಲ್ಲಿ ಡಿಕೆ ಶಿವಕುಮಾರ್ ಕುಡಿದು ತೂರಾಡಿದ್ರು ನಾವೇನು ಅವರ ರೀತಿ ತೂರಾಡಿಲ್ಲ ಅಂತ ಎಚ್ಡಿ ಕುಮಾರಸ್ವಾಮಿ ಲೇವಾಡಿ ಮಾಡಿದ್ದಾರೆ. ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್ಡಿ ಕುಮಾರಸ್ವಾಮಿ, 'ಮೇಕೆದಾಟು ಪಾದಯಾತ್ರೆ ಸಮಯದಲ್ಲಿ ಏನಾಯಿತು ಅಂತ ಗೊತ್ತಿದೆ. ನಾನೇನು ಆ ರೀತಿ ತೂರಾಡಿಲ್ಲ. ನಾನು ನನ್ನ ತೋಟದಲ್ಲಿ ಊಟ ಹಾಕಿದರೆ ಇವರಿಗೇನು? ರಾಜ್ಯಕ್ಕೆ ಎರಡು ಕೋಟಿ ಬರ ಪರಿಹಾರ ಬಿಡುಗಡೆ ಮಾಡಿದೆ. ರಾಜ್ಯದ ಜನರನ್ನು ಕಾಂಗ್ರೆಸ್ ದಾರಿ ತಪ್ಪಿಸುತ್ತಿದೆ'' ಅಂತ ಗುಡುಗಿದ್ದಾರೆ.
ಕುಮಾರಸ್ವಾಮಿ ಮಾತಿಗೆ ತಿರುಗೇಟು ನೀಡಿ, ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಡಿಕೆ ಶಿವಕುಮಾರ್, 'ನಾನು 500 ಜನಕ್ಕೆ ಊಟ ಹಾಕಿಸಲು ಪರ್ಮಿಷನ್ ತೆಗೆದುಕೊಂಡಿದ್ದೆ. ಆಗ ಇವರು ಮಾತನಾಡಿದ್ದರು. ಈಗ ಅವರೇ ಊಟ ಹಾಕಿಸುತ್ತಿದ್ದಾರೆ. ಇದೆಲ್ಲಾ ಯಾಕೆ ನಾವು ಮುಂದೆ ಮಾತನಾಡೋಣ ಬಿಡಿ' ಎಂದರು.
'ನಾನೇನು ಕುಡಿದು ತೂರಾಡಿಲ್ಲ. ನಾನು ಸುಸ್ತಾಗಿ ತೂರಾಡಿದೆ. ಪಾದಯಾತ್ರೆ ಮಾಡಿದ್ವಿ ತಾನೇ. ಅವರೇನು ಮೇಕೆದಾಟು ಪಾದಯಾತ್ರೆ ಮಾಡಿದ್ರಾ? ನಾನು ಮಾಡಿದೆ ಅಷ್ಟು ಸಾಕು ನನಗೆ' ಎಂದು ಡಿಕೆ ಶಿವಕುಮಾರ್ ಎಚ್ಡಿ ಕುಮಾರಸ್ವಾಮಿಗೆ ತಿರುಗೇಟು ನೀಡಿದರು.
'ಶೊಭಾಕ್ಕ, ನಿರ್ಮಲಾ ಸೀತಾರಾಮನ್ ಏನ್ ಮಾಡಿದ್ರು ಬರಗಾಲಕ್ಕೆ? ಏನು ಮಾಡಿಲ್ಲ? ಒಂದು ದಿನಕ್ಕೆ ಅವರು ಈ ಬಗ್ಗೆ ಮಾತನಾಡಿಲ್ಲ. ಬರಗಾಲಕ್ಕೆ ಶೋಬಕ್ಕೆ ಏನ್ ಮಾಡಿದ್ರು? ಮಹದಾಯಿ ಮೇಕೇದಾಟಿಗೆ ಪರ್ಮಿಷನ್ ಕೊಡಿಸಲಿ' ಎಂದು ಇದೇ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಗುಡುಗಿದರು.
-
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
IPL 2026 Free Ticket: ರಾಜ್ಯದ ಶಾಸಕರಿಗೆ ಪ್ರತಿ ಪಂದ್ಯಕ್ಕೂ 3 ಟಿಕೆಟ್ ಉಚಿತ; ಡಿ.ಕೆ.ಶಿವಕುಮಾರ್ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ












Click it and Unblock the Notifications