ಸಂಸದ ಡಿ. ಕೆ. ಸುರೇಶ್ಗೆ ಧನ್ಯವಾದ ಸಲ್ಲಿಸಿದ ಸಿ. ಟಿ. ರವಿ!
ಬೆಂಗಳೂರು, ಜನವರಿ 04; " ಕಾಂಗ್ರೆಸ್ ಸಂಸ್ಕೃತಿಯನ್ನು ರಾಜ್ಯದ ಜನರಿಗೆ ಪರಿಚಯಿಸಿದ ಕಾಂಗ್ರೆಸ್ ಸಂಸದ ಡಿ. ಕೆ. ಸುರೇಶ್ ರವರಿಗೆ ಧನ್ಯವಾದ" ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಹೇಳಿದ್ದಾರೆ.
ಮಂಗಳವಾರ ಸಿ. ಟಿ. ರವಿ ಈ ಕುರಿತು ಫೇಸ್ ಬುಕ್ ಪೋಸ್ಟ್ ಹಾಕಿದ್ದಾರೆ. "ಇಂದಿನ ಯುವಜನತೆ Indian National Congress ದ ಸಂಸ್ಕೃತಿ ಅಂದರೆ ಭ್ರಷ್ಟಾಚಾರ, ಹೊಣೆಗೇಡಿತನ ಅಂದುಕೊಂಡಿದ್ದರು, ರೌಡಿಸಂ ಕೂಡಾ ಅದರ ಅವಿಭಾಜ್ಯ ಅಂಗ ಅನ್ನುವುದು ಈಗ ಜಗಜ್ಜಾಹೀರಾಗಿದೆ" ಎಂದು ಟೀಕಿಸಿದ್ದಾರೆ.
ಕಾಂಗ್ರೆಸ್ ಸಂಸ್ಕೃತಿಯನ್ನು ರಾಜ್ಯದ ಜನರಿಗೆ ಪರಿಚಯಿಸಿದ ಕಾಂಗ್ರೆಸ್ ಸಂಸದ ಡಿ ಕೆ ಸುರೇಶ್ ರವರಿಗೆ ಧನ್ಯವಾದ.
— C T Ravi 🇮🇳 ಸಿ ಟಿ ರವಿ (@CTRavi_BJP) January 4, 2022
ಸಾರ್ವಜನಿಕವಾಗಿ ತೋಳೇರಿಸಿ ಸಚಿವರ ಕಡೆ ನುಗ್ಗುವ ನಿಮ್ಮ ರಾಜಕೀಯ ದಾರ್ಷ್ಟ್ಯ ಪ್ರಜಾಪ್ರಭುತ್ವಕ್ಕೆ ಸೂಕ್ತವೇ?#ಕಾಂಗ್ರೆಸ್ಗೂಂಡಾಗಿರಿ
"ಮುಜುಗರವಿಲ್ಲದೆ ಈ "ರಿಪಬ್ಲಿಕ್ ಆಫ್ ರೌಡಿಸಂ" ಅನ್ನು ಸಮರ್ಥಿಸಿಕ್ಕೊಳ್ಳುವ ವ್ಯಕ್ತಿಗಳು ಕೂಡಾ ಕಾಂಗ್ರೆಸ್ ಕುಸಂಸ್ಕೃತಿಯ ಪಾಲುದಾರರು. ನಮ್ಮ ರಕ್ತವೇ ಬೇರೆ ಅನ್ನುವ ಕೆಪಿಸಿಸಿ ಅಧ್ಯಕ್ಷರೇ, ನಿಮ್ಮ ರಕ್ತದ ಮಾದರಿ ಪರೀಕ್ಷೆಗೆ ಸಮಯ ವ್ಯಯ ಮಾಡಬೇಡಿ. ನಿಮ್ಮ ರಕ್ತದ ಗುಣ ನಿನ್ನೆ ನಿಮ್ಮ ಸಹೋದರ ಸಾರ್ವಜನಿಕವಾಗಿ ತೋರಿಸಿದ್ದಾರೆ. ನಿನ್ನೆಯೇ ಅದರ ಪರೀಕ್ಷೆ ಮತ್ತು ಫಲಿತಾಂಶ ರಾಜ್ಯದ ಜನತೆಗೆ ಸಿಕ್ಕಿದೆ" ಎಂದು ಟಾಂಗ್ ನೀಡಿದ್ದಾರೆ.

"ಕಾಂಗ್ರೆಸ್ ಸಂಸ್ಕೃತಿಯನ್ನು ರಾಜ್ಯದ ಜನರಿಗೆ ಪರಿಚಯಿಸಿದ ಕಾಂಗ್ರೆಸ್ ಸಂಸದ ಡಿ. ಕೆ. ಸುರೇಶ್ ರವರಿಗೆ ಧನ್ಯವಾದ. ಸಾರ್ವಜನಿಕವಾಗಿ ತೋಳೇರಿಸಿ ಸಚಿವರ ಕಡೆ ನುಗ್ಗುವ ನಿಮ್ಮ ರಾಜಕೀಯ ದಾರ್ಷ್ಟ್ಯ ಪ್ರಜಾಪ್ರಭುತ್ವಕ್ಕೆ ಸೂಕ್ತವೇ? ಸುಳ್ಳರೆಲ್ಲ ಸೇರಿ ಕಟ್ಟುತ್ತಿರುವ ಸಾಮ್ರಾಜ್ಯದ ಒಂದು ಮುಖ ಸಿದ್ದರಾಮಯ್ಯನವರ ರೂಪದಲ್ಲಿ ಮತಾಂತರ ನಿಷೇಧ ಕಾಯಿದೆಯ ಸಂದರ್ಭದಲ್ಲಿ ಹೊರಬಿತ್ತು" ಎಂದು ಸಿ. ಟಿ. ರವಿ ಪೋಸ್ಟ್ ಹಾಕಿದ್ದಾರೆ.
"ಸುಪ್ರೀಂಕೋರ್ಟ್ ಹಾಗೂ NGT ತೀರ್ಪಿಗಾಗಿ ಕಾಯುತ್ತಿರುವ ಮೇಕೆದಾಟು ಯೋಜನೆ ಪಾದಯಾತ್ರೆಯ ನಾಟಕದಲ್ಲಿ ಹೊರಬಿದ್ದದ್ದು ನಿಮ್ಮ ರಾಜಕೀಯ ಪಾದಯಾತ್ರೆ ಗಿಮಿಕ್ಕಿನ ಎರಡನೇ ಮುಖ. ನಿನ್ನೆ ನಿಮ್ಮ ತಮ್ಮನ ರೂಪದಲ್ಲಿ ಅನಾವಾರಣಗೊಂಡಿದ್ದು ನಿಮ್ಮ ಪಕ್ಷದ ರೌಡಿಸಂನ ಮೂರನೆಯ ಮುಖ. ಗೋಸುಂಬೆಗಿಂತ ಹೆಚ್ಚು ಬಾರಿ ಬಣ್ಣ ಬದಲಾವಣೆ ಮಾಡುತ್ತಿರುವ ಕಾಂಗ್ರೆಸ್ ಅನ್ನು ನೋಡಿ ಗೋಸುಂಬೆಯೂ ಮುಖಮುಚ್ಚಿಕೊಂಡಿದೆಯಂತೆ" ಎಂದು ಹೇಳಿದ್ದಾರೆ.
ಬಿಜೆಪಿ ಸರಣಿ ಟ್ವೀಟ್; ರಾಮನಗರದಲ್ಲಿ ನಡೆದ ಗಲಾಟೆ ಪ್ರಕರಣದ ಬಗ್ಗೆ ಕರ್ನಾಟಕ ಬಿಜೆಪಿ ಸರಣಿ ಟ್ವೀಟ್ ಮಾಡಿದೆ. ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದೆ. ಇಂದು ರಾಜ್ಯಾದ್ಯಂತ ಡಿ. ಕೆ. ಸುರೇಶ್ ವರ್ತನೆ ಖಂಡಿಸಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ.
'ಬಿಜೆಪಿ ಸರ್ಕಾರದ ಅಭಿವೃದ್ಧಿಪರ ರಾಜಕಾರಣದ ಮುಂದೆ ಕನಕಪುರದ ರೌಡಿ ಸಹೋದರರ ಧಮ್ಕಿ ರಾಜಕಾರಣ ನಡೆಯುವುದಿಲ್ಲ. ಗೂಂಡಾ ವರ್ತನೆ ತೋರಿ ಪ್ರಜಾಪ್ರಭುತ್ವದಲ್ಲಿ ಬಹಳ ಕಾಲ ಉಳಿಯಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷವೀಗ ಗೂಂಡಾಗಳನ್ನು ತಯಾರು ಮಾಡುವ ಫ್ಯಾಕ್ಟರಿಯಾಗಿದೆ. ಜನತೆ ಇದಕ್ಕೆ ತಕ್ಕ ಉತ್ತರ ನೀಡಲಿದ್ದಾರೆ' ಎಂದು ಬಿಜೆಪಿ ಟ್ವೀಟ್ ಮಾಡಿದೆ.
"ಕಾಂಗ್ರೆಸ್ ಸಂಸದ ಡಿ. ಕೆ. ಸುರೇಶ್ ಕೇವಲ ಶಿಷ್ಟಾಚಾರ ಉಲ್ಲಂಘಿಸಿದ್ದಲ್ಲ, ಸಂವಿಧಾನ ಶಿಲ್ಪಿ ಅಂಬೇಡ್ಕರ್ ಹಾಗೂ ನಾಡಪ್ರಭು ಕೆಂಪೇಗೌಡರಿಗೆ ಅವಮಾನ ಮಾಡಿದ್ದಾರೆ. ಸರ್ಕಾರಿ ಕಾರ್ಯಕ್ರಮದಲ್ಲಿ ಗೂಂಡಾಗಿರಿ ಪ್ರದರ್ಶಿಸಿದ ಕಾಂಗ್ರೆಸ್ ಪಕ್ಷದ ನಾಯಕರನ್ನು ರಾಜ್ಯದ ಜನತೆ ಎಂದಿಗೂ ಕ್ಷಮಿಸುವುದಿಲ್ಲ" ಎಂದು ಬಿಜೆಪಿ ಹೇಳಿದೆ.
"ಕೆಂಪೇಗೌಡರು ಆಳಿದ ಜಿಲ್ಲೆಯಲ್ಲಿ ಪಕ್ಷದ ನಾಯಕರು ತೋರಿದ ಗೂಂಡಾ ವರ್ತನೆ ಖಂಡನೀಯ. ರಾಜ್ಯದ ಮರ್ಯಾದೆಯನ್ನು ಮಣ್ಣುಪಾಲು ಮಾಡುವ ನಾಯಕರನ್ನು ಕಾಂಗ್ರೆಸ್ ಬೆಳೆಸುತ್ತಿದೆ. ಇಂತಹ ಅನೈತಿಕ ರಾಜಕಾರಣದ ಮೂಲಕ ಕಾಂಗ್ರೆಸ್ ರಾಜ್ಯದ ಜನತೆಗೆ ಯಾವ ಸಂದೇಶ ನೀಡುತ್ತಿದ್ದಾರೆ?" ಎಂದು ಬಿಜೆಪಿ ಪ್ರಶ್ನಿಸಿದೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications