ಚನ್ನಪಟ್ಟಣ ಉಪಚುನಾವಣೆಯಲ್ಲಿ ಡಿ.ಕೆ. ಸುರೇಶ್ ಸ್ಪರ್ಧೆ: ಡಿ ಕೆ ಶಿವಕುಮಾರ್ ಹೇಳಿದ್ದೇನು?
ಬೆಂಗಳೂರು, ಜೂನ್ 09: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿ ಕೆ ಸುರೇಶ್ ಅವರು ಹೀನಾಯವಾಗಿ ಸೋಲು ಕಂಡ ಬಳಿಕ ಸೋಲಿನ ಕುರಿತು ಹಲವು ಚರ್ಚೆಗಳು ನಡೆಯುತ್ತಿದ್ದು, ಚನ್ನಪಟ್ಟಣ ಉಪಚುನಾವಣೆಯಲ್ಲಿ ಡಿ.ಕೆ. ಸುರೇಶ್ ಸ್ಪರ್ಧೆ ನಡೆಸುತ್ತಾರೆ ಎನ್ನುವ ಮಾತುಗಳು ಕೇಳಿ ಬರುತ್ತಿದೆ.
ಈ ಕುರಿತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಾತನಾಡಿ, ನಾವು ಚನ್ನಪಟ್ಟಣ ಉಪಚುನಾವಣೆ ಬಗ್ಗೆ ಆಲೋಚನೆ ಮಾಡಿಲ್ಲ. ನಾವು ಇನ್ನು ಸೋಲಿನ ದುಃಖದಿಂದ ಹೊರಬಂದಿಲ್ಲ. ಸಧ್ಯಕ್ಕೆ ಆ ಕ್ಷೇತ್ರದ ಜನ ನಮಗೆ ಕೊಟ್ಟಿರುವ ಮುನ್ನಡೆಗೆ ಧನ್ಯವಾದ ಅರ್ಪಿಸುತ್ತೇನೆ. ಸುರೇಶ್ ಅವರಿಗೆ ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸುವ ಆತುರವಿಲ್ಲ. ಅಲ್ಲಿ ಅನೇಕ ಕಾರ್ಯಕರ್ತರಿದ್ದು, ಮುಂದೆ ನೋಡೋಣ ಎಂದರು.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ನಿಮ್ಮ ತಂತ್ರಗಾರಿಕೆ ವಿಫಲವಾಗಿದ್ದೇಕೆ ಎಂಬ ವಿಚಾರವಾಗಿ ಮಾತನಾಡಿ, ನಾನು ಅತಿಯಾದ ಆತ್ಮವಿಶ್ವಾಸದಲ್ಲಿದ್ದೆ. ನಾನು ರಾಜ್ಯ ಸುತ್ತಬೇಕಾದ ಕಾರಣ ಹೆಚ್ಚು ಸಮಯ ಮೀಸಲಿಡಲು ಆಗಿಲ್ಲ. ಇದು ನನ್ನ ವೈಯಕ್ತಿಕ ಸೋಲು ಎಂದು ನಾನು ಒಪ್ಪಿಕೊಳ್ಳುತ್ತೇನೆ.
ಅವರು ಕೂಡ ವಿವಾದರಹಿತ ಅಭ್ಯರ್ಥಿ ಕಣಕ್ಕಿಳಿಸುವ ಮೂಲಕ ಉತ್ತಮ ತಂತ್ರಗಾರಿಕೆ ಮಾಡಿದ್ದಾರೆ. ದಳದಲ್ಲಿ ನಿಂತರೆ ಮತ ಬರುವುದಿಲ್ಲ ಎಂದು ಬಿಜೆಪಿಯಿಂದ ಟಿಕೆಟ್ ನೀಡಲಾಯಿತು. ನಮ್ಮ ಅಭ್ಯರ್ಥಿ ವಿರುದ್ಧ ಆಡಳಿತ ವಿರೋಧಿ ಅಲೆ ಇರಲಿಲ್ಲ.
ಸೋಲು ಸೋಲೇ ಅದನ್ನು ಒಪ್ಪಿಕೊಳ್ಳುತ್ತೇವೆ. ಕನಕಪುರದಲ್ಲಿ 50-60 ಸಾವಿರ ಮುನ್ನಡೆ ಪಡೆಯುವ ನಿರೀಕ್ಷೆಯಿತ್ತು. ಮಾಗಡಿ, ಕುಣಿಗಲ್, ರಾಮನಗರದಲ್ಲಿ ನಮಗೆ ಮತ ಬಂದಿವೆ. ನಮಗೆ ಪೆಟ್ಟು ಬಿದ್ದಿದ್ದು ನಗರ ಪ್ರದೇಶದಲ್ಲಿ ಎಂದರು.
ಎನ್ ಡಿಎ ಮೈತ್ರಿ ಪಕ್ಷಗಳು ಬೇಡಿಕೆ ಹೆಚ್ಚುತ್ತಿದ್ದು, ಮೋದಿ ಅವರು ಪ್ರಧಾನಮಂತ್ರಿಗಳಾಗಿ ಎಷ್ಟು ವರ್ಷ ಇರುತ್ತಾರೆ ಎಂಬ ವಿಚಾರವಾಗಿ ಮಾತನಾಡಿ, ಒಂದು ಸಂಸದ ಸ್ಥಾನ ಗೆದ್ದವರೇ ನಮ್ಮ ಕ್ಷೇತ್ರಕ್ಕೆ ಇಂತಹ ಸೌಲಭ್ಯಬೇಕು ಎಂದು ಕೇಳುತ್ತಾರೆ. ಸರ್ಕಾರ ರಚಿಸಲು ಬೆಂಬಲಿಸುವವರು ಕೇಳುವುದರಲ್ಲಿ ತಪ್ಪಿಲ್ಲ. ಎಲ್ಲರೂ ಸಿಂಹಪಾಲು ಬೇಕು ಎಂದು ಕೇಳುತ್ತಾರೆ. ರಾಜಕೀಯದಲ್ಲಿ ಅವರು ತಮ್ಮ ಸಂಖ್ಯೆ ಅನುಸಾರ ಬೇಡಿಕೆ ಇಡುತ್ತಾರೆ ಎಂದರು.
ಪರಿಷತ್ ಚುನಾವಣೆಯಲ್ಲಿ ಹಣ ಹಂಚಿ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, ಪರಿಷತ್ತಿನ ಆರು ಸ್ಥಾನಗಳ ಪೈಕಿ ನಾವು ಕೇವಲ 1 ಸ್ಥಾನ ಹೊಂದಿದ್ದೆವು. ಈಗ ನಾವು ಮೂರು ಕ್ಷೇತ್ರ ಗೆದ್ದಿದ್ದೇವೆ.
ಅವರು ಗೆದ್ದಿರುವ ಮೂರು ಕ್ಷೇತ್ರದಲ್ಲಿ ಹಣ ಹಂಚಿಕೆ ಮಾಡಿ ಗೆದ್ದಿದ್ದಾರಾ? ಯಡಿಯೂರಪ್ಪನವರು 28 ಲೋಕಸಭಾ ಕ್ಷೇತ್ರವನ್ನು ಗೆದ್ದು ಬಿಜೆಪಿ ನಾಯಕರ ಜೇಬಿಗೆ ಹಾಕುವುದಾಗಿ ಹೇಳಿದ್ದರಲ್ಲವೇ ಅದೇ ರೀತಿ ನಾವು ಪರಿಷತ್ತಿನ ಆರೂ ಸ್ಥಾನ ಗೆಲ್ಲುತ್ತೇವೆ ಎಂದಿದ್ದೆವು. ಅದರಲ್ಲಿ ಮೂರು ಸ್ಥಾನ ಗೆದ್ದಿದ್ದೇವೆ" ಎಂದು ತಿರುಗೇಟು ನೀಡಿದರು.
ರಾಹುಲ್ ಗಾಂಧಿ ಸಿಎಂ ರಾಜೀನಾಮೆ ಪಡೆಯಲು ಬಂದಿದ್ದಾರಾ ಎಂಬ ಬಿಜೆಪಿ ಶಾಸಕ ಅಶ್ವತ್ಥ್ ನಾರಾಯಣ ಅವರ ಹೇಳಿಕೆ ಕುರಿತು ಮಾತನಾಡಿ, ಮೊದಲು ಅವರ ಪಕ್ಷದ ಬಗ್ಗೆ ಮಾತನಾಡಲಿ. ನಿಗಮ ಮಂಡಳಿಗಳಲ್ಲಿ ಹಣ ದುರುಪಯೋಗ ಪ್ರಕರಣ ಈ ಹಿಂದೆಯೂ ಆಗಿದೆ. ಈಗ ಆತ್ಮಹತ್ಯೆಯಿಂದಾಗಿ ಪ್ರಕರಣ ಈಚೆ ಬಂದಿದೆ.
ಬಿಜೆಪಿ ಅವಧಿಯಲ್ಲಿನ ಪ್ರಕರಣಗಳು ಇವೆ. ಸಚಿವರು ಈಗಾಗಲೇ ಸರ್ಕಾರ ಹಾಗೂ ಪಕ್ಷಕ್ಕೆ ಮುಜುಗರವಾಗಬಾರದು ಎಂದು ಸ್ವಇಚ್ಛೆಯಿಂದ ರಾಜೀನಾಮೆ ನೀಡಿದ್ದಾರೆ. ನಾನು ಹಾಗೂ ಮುಖ್ಯಮಂತ್ರಿಗಳು ಈ ಬಗ್ಗೆ ಸಚಿವರ ಜತೆ ಚರ್ಚೆ ಮಾಡಿದ್ದು, ಅವರು ಈ ಪ್ರಕರಣದಲ್ಲಿ ಭಾಗಿಯಾಗಿಲ್ಲ. ಯಾವುದೇ ತನಿಖೆ ಬೇಕಾದರೂ ನಡೆಯಲಿ ಎಂದು ತಿಳಿಸಿದ್ದಾರೆ ಎಂದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ












Click it and Unblock the Notifications