KPCC ಅಧ್ಯಕ್ಷರ ಬದಲಾವಣೆ ಬಗ್ಗೆ ಡಿಕೆ ಸುರೇಶ್ ಶಾಕಿಂಗ್ ಹೇಳಿಕೆ
ಬೆಂಗಳೂರು, ನವೆಂಬರ್ 16: ಬಿಹಾರ ಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆಯ ಚರ್ಚೆ ನಡೆಯುತ್ತಿದೆ. ಬಿಹಾರ ಫಲಿತಾಂಶದ ಬೆನ್ನಲ್ಲೇ ದಿಢೀರ್ ದೆಹಲಿಗೆ ಹಾರಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿಯಾಗಿ ಸುದೀರ್ಘ ಚರ್ಚೆ ನಡೆಸಿದ್ದಾರೆ. ಈ ವೇಳೆ ಸಚಿವ ಸಂಪುಟ ಪುನಾರಚನೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಚರ್ಚೆಯಾಗಿದ್ದು, ಕೈ ಪಾಳಯದಲ್ಲಿ ಈ ಬಗ್ಗೆ ವಿಭಿನ್ನ ಅಭಿಪ್ರಾಯಗಳು ಕೇಳಿ ಬರುತ್ತಿವೆ.
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಪ್ರಸ್ತಾಪವನ್ನು ಹೈಕಮಾಂಡ್ ಮುಂದೆ ಇಟ್ಟಿರುವ ಬಗ್ಗೆ ಮಾಜಿ ಸಂಸದ ಹಾಗೂ ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಮಾಧ್ಯಮಗಳ ಜೊತೆಗೆ ಮಾತನಾಡಿ, ಹೈಕಮಾಂಡ್ ಯಾವ ತೀರ್ಮಾನ, ಸಲಹೆಯನ್ನು ಶಿವಕುಮಾರ್ ಅವರು ಕೇಳುತ್ತಾರೆ. ಶಿವಕುಮಾರ್ ಅವರು ಮಾತ್ರವಲ್ಲ, ಎಲ್ಲರೂ ಕೇಳುತ್ತಾರೆ. ಅದರಲ್ಲಿ ಯಾವುದೇ ಅನುಮಾನ ಬೇಡ. ಅಧ್ಯಕ್ಷ ಸ್ಥಾನದಲ್ಲೇ ಮುಂದುವರಿಯಬೇಕು ಎಂಬ ಆಸೆ ಶಿವಕುಮಾರ್ ಅವರಿಗಿಲ್ಲ. ಪಕ್ಷ ಮುಂದುವರಿಯಲು ಹೇಳಿದೆ, ಎಷ್ಟು ದಿನ ಅವಕಾಶ ನೀಡುತ್ತಾರೋ ಅಷ್ಟು ದಿನ ಪಕ್ಷದ ಕೆಲಸ ಮಾಡಿಕೊಂಡು ಇರುತ್ತಾರೆ ಎಂದು ಹೇಳಿದರು.

ಬಿಹಾರ ಚುನಾವಣೆ ಕುರಿತು ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಗೆಲುವು ಸೋಲು ಇದ್ದೇ ಇರುತ್ತದೆ. ಬಿಹಾರದಲ್ಲಿ ಚುನಾವಣೆಗೂ ಮುನ್ನ ಎನ್ ಡಿಎ ಸರ್ಕಾರ ಕರ್ನಾಟಕ ಗ್ಯಾರಂಟಿ ಯೋಜನೆ ಮಾದರಿಯಲ್ಲೇ ಅನುಷ್ಠಾನ ಮಾಡಿತು. ಹೀಗಾಗಿ ಮಹಿಳಾ ಮತದಾರರು ಎನ್ ಡಿಎ ಪರ ಒಲವು ತೋರಿದ್ದಾರೆ. 10 ಸಾವಿರ ರೂ. ಒಟ್ಟಿಗೆ ಮಹಿಳೆಯರ ಖಾತೆಗೆ ಹಾಕಿದ ಪರಿಣಾಮ ಹಾಗೂ ಚುನಾವಣೆ ಮುನ್ನ 47 ಲಕ್ಷ ಮತಗಳನ್ನು ಮತಪಟ್ಟಿಯಿಂದ ಕಿತ್ತು ಹಾಕಿದ್ದು ಪ್ರಮುಖ ಕಾರಣವಾಗಿದೆ. ಜನ ತೀರ್ಪು ನೀಡಿದ್ದು, ಅದನ್ನು ಸ್ವಾಗತಿಸುತ್ತೇವೆ. ನಮ್ಮ ಪಕ್ಷಕ್ಕೆ ಸೋಲು, ಗೆಲುವು ಹೊಸತಲ್ಲ. ವಿರೋಧ ಪಕ್ಷವಾಗಿ ಕೆಲಸ ಮಾಡುತ್ತಾ ಪಕ್ಷ ಸಂಘಟನೆ ಮಾಡುತ್ತೇವೆ ಎಂದು ತಿಳಿಸಿದರು.
ಸಂಪುಟ ಪುನಾರಚನೆಯಾದರೆ ಸಿಎಂ ಬದಲಾವಣೆ ಇಲ್ಲ ಎಂಬ ಪರಮೇಶ್ವರ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, ಅವರು ಹಿರಿಯ ಸಚಿವರು, ಅವರು ಹೇಳುತ್ತಾರೆ. ಸಚಿವ ಸಂಪುಟ ಪುನಾರಚನೆ ಸಿಎಂ ಪರಮಾಧಿಕಾರ. ಹೈಕಮಾಂಡ್ ಅಪ್ಪಣೆಯೊಂದಿಗೆ ಅವರು ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ವಿಚಾರದಲ್ಲಿ ಹೈಕಮಾಂಡ್ ಶಿವಕುಮಾರ್ ಅವರ ಬಳಿ ಚರ್ಚೆ ಮಾಡಿದರೆ, ಪಕ್ಷದ ಸಂಘಟನೆ ಹಾಗೂ ಬಲವರ್ಧನೆಗೆ ಅಗತ್ಯವಾದ ಸಲಹೆ ನೀಡುತ್ತಾರೆ. ಸಿಎಂ ಈಗಾಗಲೇ ಇದ್ದಾರೆ. ಸಿಎಂ ಇಲ್ಲದಿದ್ದಾಗ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಮಾಡಬಹುದು ಎಂದು ತಿಳಿಸಿದರು.
ಸಂಪುಟ ಪುನಾರಚನೆ, ಪವರ್ ಶೇರಿಂಗ್ ಎಲ್ಲವನ್ನು ತೀರ್ಮಾನ ಮಾಡುವುದು ಹೈಕಮಾಂಡ್. ಹೈಕಮಾಂಡ್ ಯಾವ ತೀರ್ಮಾನ ಮಾಡಲಿದೆ ಎಂದು ಕಾದು ನೋಡೋಣ ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ತಿಳಿಸಿದರು. ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್ ಒಪ್ಪಿಗೆ ನೀಡಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿ ನೋಡಿದ್ದೇನೆ. ಇದು ಸಿಎಂ ಹಾಗೂ ಹೈಕಮಾಂಡ್ ನಾಯಕರಿಗೆ ಬಿಟ್ಟ ವಿಚಾರ. ಕಾದು ನೋಡೋಣ ಎಂದರು.
ಸಂಪುಟ ಪುನಾರಚನೆ ಆದರೆ ನಾಯಕತ್ವ ಬದಲಾವಣೆ ಆಗುವುದಿಲ್ಲ ಎಂಬ ಚರ್ಚೆ ಇದೆಯಲ್ಲ ಎಂದು ಕೇಳಿದಾಗ, ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಏನೇ ಇದ್ದರೂ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತದೆಯೇ ಹೊರತು ಬೇರೆಯವರಲ್ಲ ಎಂದು ಪ್ರತಿಕ್ರಿಯಿಸಿದರು.ಡಿ.ಕೆ. ಶಿವಕುಮಾರ್ ಅವರು ಈಗಾಗಲೇ ದೆಹಲಿಗೆ ಹೋಗಿದ್ದು, ನೀವೂ ತೆರಳುತ್ತಿರುವ ಕಾರಣ ಎಂದು ಕೇಳಿದಾಗ, ನಾನು ಈಗಾಗಲೇ ದೆಹಲಿಗೆ ತೆರಳಿರುವುದಾಗಿ ಮಾಧ್ಯಮಗಳು ಪ್ರಕಟಿಸಿವೆ. ನಾನು ದೆಹಲಿಗೆ ಹೋಗುವುದು ಹೊಸತಲ್ಲ. ಶಿವಕುಮಾರ್ ಅವರು ಅವರ ಕೆಲಸದ ಮೇಲೆ ಹೋಗಿದ್ದಾರೆ, ನನ್ನ ಪಾಡಿಗೆ ನಾನು ಹೋಗುತ್ತಿರುವೆ ಎಂದು ತಿಳಿಸಿದರು.
ನಿಮ್ಮ ಸಹೋದರ ಸಿಎಂ ಆಗಬೇಕು ಎಂಬ ಆಸೆ ನಿಮ್ಮದು ಎಂಬ ಬಗ್ಗೆ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿ, ಈ ವಿಚಾರ ಸಾಕಷ್ಟು ಬಾರಿ ಹೇಳಿದ್ದೇನೆ. ಎಲ್ಲದಕ್ಕೂ ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮ. ಸಿಎಂ, ಸಚಿವರು, ಶಾಸಕರು, ಶಿವಕುಮಾರ್ ಎಲ್ಲರಿಗೂ ಹೈಕಮಾಂಡ್ ತೀರ್ಮಾನವೇ ಮುಖ್ಯ. ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೆ ಕಾದು ನೋಡಬೇಕು ಎಂದು ತಿಳಿಸಿದರು.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು












Click it and Unblock the Notifications