Prajwal Revanna Case: ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಸರ್ಕಾರಕ್ಕೆ ವಿಶೇಷ ಮನವಿ ಮಾಡಿದ ಡಿಕೆ ಸುರೇಶ್
ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಲೋಕಸಭಾ ಚುನಾವಣೆ ಹೊತ್ತಿನಲ್ಲೇ ಈ ಪೆನ್ಡ್ರೈವ್ ಪ್ರಕರಣ ಸದ್ದು ಮಾಡುತ್ತಿದೆ. ಪ್ರಕರಣದ ತನಿಖೆಗಾಗಿ ಈಗಾಗಲೇ ಕರ್ನಾಟಕ ಸರ್ಕಾರ ವಿಶೇಷ ತನಿಖಾ ತಂಡ (ಎಸ್ಐಟಿ) ರಚನೆ ಮಾಡಿದೆ. ಈ ಬೆನ್ನಲ್ಲೇ ಸರ್ಕಾರಕ್ಕೆ ಡಿಕೆ ಸುರೇಶ್ ವಿಶೇಷ ಮನವಿ ಮಾಡಿದ್ದಾರೆ.
ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಸಂಸದ ಡಿಕೆ ಸುರೇಶ್ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಬಲಿಪಶುಗಳಾಗಿರುವ ಕುಟುಂಬಗಳಿಗೆ ರಕ್ಷಣೆ ಕೊಡುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಪ್ರಜ್ವಲ್ ರೇವಣ್ಣ ರಾಜಕೀಯ ಕುಟುಂಬದವರಾಗಿದ್ದು, ಪ್ರಭಾವಿಗಳಾಗಿರುವ ಕಾರಣ, ದೌರ್ಜನ್ಯಕ್ಕೊಳಗಾದ ಹೆಣ್ಣು ಮಕ್ಕಳಿಗೆ ಅಪಾಯ ಉಂಟು ಮಾಡುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
"ಪ್ರಜ್ವಲ್ ರೇವಣ್ಣನಿಂದ ದೌರ್ಜನ್ಯಕ್ಕೊಳಗಾದ ಹೆಣ್ಣು ಮಕ್ಕಳಿಗೆ "ಆ ಕುಟುಂಬ" ದಿಂದ ಯಾವುದೇ ಸಮಯಕ್ಕೂ ಆಪತ್ತು ತಪ್ಪಿದ್ದಲ್ಲ. ಹೀಗಾಗಿ ಸರ್ಕಾರ ಜವಾಬ್ಧಾರಿ ತಗೆದುಕೊಂಡು ಎಲ್ಲಾ ಸಂತ್ರಸ್ತೆಯರಿಗೂ ಸೂಕ್ತ ರಕ್ಷಣೆ ಕೊಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸುತ್ತೇನೆ." ಎಂದು ಟ್ವೀಟ್ ಮಾಡಿದ್ದಾರೆ.
ಪ್ರಜ್ವಲ್ ರೇವಣ್ಣನಿಂದ ದೌರ್ಜನ್ಯಕ್ಕೊಳಗಾದ ಹೆಣ್ಣು ಮಕ್ಕಳಿಗೆ "ಆ ಕುಟುಂಬ" ದಿಂದ ಯಾವುದೇ ಸಮಯಕ್ಕೂ ಆಪತ್ತು ತಪ್ಪಿದ್ದಲ್ಲ. ಹೀಗಾಗಿ ಸರ್ಕಾರ ಜವಾಬ್ಧಾರಿ ತಗೆದುಕೊಂಡು ಎಲ್ಲಾ ಸಂತ್ರಸ್ತೆಯರಿಗೂ ಸೂಕ್ತ ರಕ್ಷಣೆ ಕೊಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸುತ್ತೇನೆ.#Hassan #PrajwalRevanna
— DK Suresh (@DKSureshINC) April 28, 2024
ಆತ್ಮಹತ್ಯೆಗೆ ಯತ್ನ?
ಈಗಾಗಲೇ ಪೆನ್ಡ್ರೈವ್ನಲ್ಲಿರುವ ವಿಡಿಯೋದಲ್ಲಿರುವ ಸಂತ್ರಸ್ತೆಯೊಬ್ಬರು ಆತ್ಮಹತ್ಯೆಗೆ ಕೂಡ ಯತ್ನಿಸಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಪೆನ್ಡ್ರೈವ್ನಲ್ಲಿದ್ದ ವಿಡಿಯೋಗಳು ವ್ಯಾಪಕವಾಗಿ ಹಂಚಿಕೆಯಾಗುತ್ತಿದ್ದು, ಇವು ಸಂತ್ರಸ್ಥರ ಕುಟುಂಬದ ಮೇಲೂ ಪರಿಣಾಮ ಬೀರುವ ಆತಂಕ ವ್ಯಕ್ತವಾಗಿದೆ. ಈ ಬಗ್ಗೆ ರಾಜ್ಯ ಮಹಿಳಾ ಆಯೋಗ ಕೂಡ ಆತಂಕ ವ್ಯಕ್ತಪಡಿಸಿದ್ದು, ಪೆನ್ಡ್ರೈವ್ ಸಾರ್ವಜನಿಕಗೊಳಿಸಿದವರ ಮೇಲೂ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಸರ್ಕಾರಕ್ಕೆ ಪತ್ರ ಬರೆದಿದೆ.
ದೇಶ ಬಿಟ್ಟ ಪ್ರಜ್ವಲ್ ರೇವಣ್ಣ?
ಇನ್ನು ತಮ್ಮ ಮೇಲೆ ಆರೋಪ ಬರುತ್ತಿದ್ದಂತೆ ಸಂಸದ ಪ್ರಜ್ವಲ್ ರೇವಣ್ಣ ಈಗಾಗಲೇ ದೇಶ ಬಿಟ್ಟಿದ್ದಾರೆ ಎನ್ನಲಾಗಿದೆ. ಅವರು ಜರ್ಮನಿಗೆ ತೆರಳಿದ್ದಾರೆ ಎಂದು ಹೇಳಲಾಗಿದೆ. ಪ್ರಜ್ವಲ್ ರೇವಣ್ಣ ಬಂಧನಕ್ಕೆ ಈಗಾಗಲೇ ಭಾರಿ ಒತ್ತಾಯ ಕೇಳಿ ಬಂದಿದೆ.
-
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
BESCOM Mithra: 'ಬೆಸ್ಕಾಂ ಮಿತ್ರ' ಸೇವೆ ತಾತ್ಕಾಲಿಕ ಸ್ಥಗಿತ, ಸುಧಾರಿತ ವ್ಯವಸ್ಥೆ ಶೀಘ್ರವೇ ಲಭ್ಯ











Click it and Unblock the Notifications