ಆಳುವುದು ಬೇರೆ, ಆಡಳಿತ ಬೇರೆ: ಜಿಲ್ಲಾಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಪಾಠ
ಬೆಂಗಳೂರು, ಅಕ್ಟೋಬರ್ 17: ಜಿಲ್ಲಾಧಿಕಾರಿಗಳು ಸಮಯೋಚಿತ ತೀರ್ಮಾನಗಳ ಮೂಲಕ ಜನರಿಗೆ ನೆರವಾಗಬೇಕು. ಸಮಯಪ್ರಜ್ಞೆ, ಸ್ಥಿತ ಪ್ರಜ್ಞತೆಯಿಂದ ಕಾರ್ಯ ನಿರ್ವಹಿಸಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಲಹೆ ನೀಡಿದರು.
ಸೋಮವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಿ ಮಾತನಾಡಿದ ಮುಖ್ಯಮಂತ್ರಿಗಳು, ಒಬ್ಬ ಐಎಎಸ್ ಅಧಿಕಾರಿಗೆ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸುವುದು ಅದೊಂದು ಮಹತ್ವಪೂರ್ಣ ಅವಕಾಶವೇ ಆಗಿದೆ. ಜಿಲ್ಲೆಯಲ್ಲಿ ನೀವು ಯಾವ ರೀತಿ ಹೆಜ್ಜೆ ಗುರುತು ಮೂಡಿಸುತ್ತೀರಿ ಎನ್ನುವುದು ಮುಖ್ಯವಾಗುತ್ತದೆ ಎಂದರು.
ಇತ್ತೀಚೆಗೆ ಬಹಳಷ್ಟು ಅಧಿಕಾರಿಗಳು ಜಿಲ್ಲಾಧಿಕಾರಿ ಹುದ್ದೆಯನ್ನು ಅಧಿಕಾರದ ಭಾಗವನ್ನಷ್ಟೇ ಆಗಿ ನೋಡುತ್ತಾರೆ. ಆ ಹುದ್ದೆಯ ಜವಾಬ್ದಾರಿ ಮತ್ತು ಆಡಳಿತದ ಪರಿಣಾಮವನ್ನು ಗಮನಕ್ಕೆ ತೆಗೆದುಕೊಳ್ಳುವುದಿಲ್ಲ. ಇಲ್ಲಿ ಆಳುವುದು ಬೇರೆ, ಆಡಳಿತ ಮಾಡುವುದು ಬೇರೆ. ಇದನ್ನು ಗಮನದಲ್ಲಿರಿಸಿಕೊಂಡು ಕಾರ್ಯ ನಿರ್ವಹಿಸಿದರೆ ಅಭಿವೃದ್ಧಿ ಸಾಧ್ಯತೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಸಕಾಲಿಕ ನಿರ್ಧಾರಗಳ ಮೂಲಕ ಉತ್ತಮ ಆಡಳಿತ ನೀಡಿ
ಜಿಲ್ಲಾಧಿಕಾರಿಗಳಾದ ನೀವು ಆಡಳಿತದ ಭಾಗವೇ ಆಗಿದ್ದೀರಿ. ನಿಮಗೆ ಹೆಚ್ಚಿನ ಅಧಿಕಾರವೂ ಇದೆ. ನೀವು ಕೈಗೊಳ್ಳುವ ನಿರ್ಣಯಗಳು ಆಡಳಿತ ನಿರ್ವಹಣೆಯಲ್ಲಿ ಬಹಳ ಮುಖ್ಯವಾಗಿರುತ್ತದೆ. ಯಾವುದೇ ಕೆಲಸ ಮಾಡಬಾರದು ಅಂದುಕೊಂಡರೆ ನೂರು ಕಾರಣ ದೊರೆಯುತ್ತದೆ. ಒಂದು ಒಳ್ಳೆಯ ಕೆಲಸ ಮಾಡಬೇಕೆಂದರೆ ಒಂದೇ ಒಂದು ಕಾರಣ ಸಾಕು. ಆದ್ದರಿಂದ ಸಕಾಲಿಕ ತೀರ್ಮಾನಗಳನ್ನು ಕೈಗೊಳ್ಳುವ ಮೂಲಕ ಉತ್ತಮ ಆಡಳಿತ ನೀಡಿ. ಸಮಸ್ಯೆಗಳಿದ್ದರೆ, ಕೂಡಲೇ ಹಿರಿಯ ಅಧಿಕಾರಿಗಳ ಮಾರ್ಗದರ್ಶನ ಪಡೆಯಿರಿ ಎಂದು ಅವರು ಸಲಹೆ ನೀಡಿದರು.
ಇಂದಿನ ಸಭೆಯಲ್ಲಿ ಎಲ್ಲ ಜಿಲ್ಲಾಧಿಕಾರಿಗಳು ಮುಕ್ತವಾಗಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಬೇಕು. ಆಗ ಸರ್ಕಾರ ಸೂಕ್ತ ನಿರರ್ಧಾರಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತದೆ ಎಂದು ಮುಖ್ಯಮಂತ್ರಿಗಳು ಮುಕ್ತವಾಗಿ ಆಹ್ವಾನಿಸಿದರು. ಆಯವ್ಯಯ ಅನುಷ್ಠಾನ ಕುರಿತಂತೆ ಸರ್ಕಾರಿ ಆದೇಶಗಳಾಗಿದೆ. ತಳ ಹಂತದಲ್ಲಿ ಅವುಗಳ ಅನುಷ್ಠಾನಕ್ಕೆ ಕ್ರಮಗಳನ್ನು ಕೈಗೊಂಡು, ವರ್ಷಾಂತ್ಯದಲ್ಲಿ ಗುರಿ ಸಾಧಿಸುವಂತೆ ಜಿಲ್ಲಾಧಿಕಾರಿಗಳಿಗೆ ಈ ವೇಳೆ ಸೂಚಿಸಲಾಯಿತು.

ಸಭೆಯಲ್ಲಿ ಕಂದಾಯ ಸಚಿವ ಆರ್. ಅಶೋಕ್, ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್, ವಸತಿ ಸಚಿವ ವಿ.ಸೋಮಣ್ಣ, ಸಾರಿಗೆ ಸಚಿವ ಬಿ.ಶ್ರೀರಾಮುಲು, ಅಬಕಾರಿ ಸಚಿವ ಕೆ. ಗೋಪಾಲಯ್ಯ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಮತ್ತು ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications