KRS Dam: ಜುಲೈ 1ರಂದು ಕೆಆರ್ಎಸ್ (ಕೃಷ್ಣರಾಜ ಸಾಗರ) ಜಲಾಶಯದ ಒಳಹರಿವು ಎಷ್ಟಿದೆ ಗೊತ್ತಾ?
KRS Dam: ಜೂನ್ ಆರಂಭದಿಂದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಚುರುಕು ಪಡೆದಿದ್ದು, ತಿಂಗಳ ಅಂತ್ಯದಲ್ಲಿ ಹಲವೆಡೆ ಮಳೆರಾಯನ ಆರ್ಭಟ ಕಡಿಮೆಯಾಗಿದೆ. ಇನ್ನೂ ಭಾರೀ ಮಳೆಯಿಂದ ಮೈಸೂರು, ಬೆಂಗಳೂರು, ಮಂಡ್ಯ ಜಿಲ್ಲೆಗಳ ಜೀವನಾಡಿ ಕೆಆರ್ಎಸ್ (ಕೃಷ್ಣರಾಜ ಸಾಗರ) ಜಲಾಶಯದಲ್ಲಿ ನೀರಿನ ಪ್ರಮಾಣ ಹೆಚ್ಚಾಗುತ್ತಲೇ ಇತ್ತು. ಆದರೆ ಇದೀಗ ಈ ಭಾಗದಲ್ಲಿ ಮಳೆ ತಗ್ಗಿದ್ದು, ಒಳಹರಿವಿನ ಪ್ರಮಾಣ ಕುಸಿತ ಆಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಹಾಗಾದರೆ ಕೆಆರ್ಎಸ್ ಜಲಾಶಯದಲ್ಲಿ ಇಂದು ನೀರಿನ ಮಟ್ಟ 95.50 ಆಗಿದ್ದರೆ, ಒಳಹರಿವು 9,369 ಕ್ಯೂಸೆಕ್ ಇದ್ದರೆ, ಹೊರಹರಿವಿನ ಪ್ರಮಾಣ 468 ಕ್ಯೂಸೆಕ್ ಇದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಜಲಾಶಯ ಗರಿಷ್ಠ ನೀರಿನ ಸಂಗ್ರಹಣ ಸಾಮರ್ಥ್ಯವು 124.80 ಅಡಿ ಆಗಿದೆ.

ಹೇಮಾವತಿ ಜಲಾಶಯದಲ್ಲಿ ಇಂದಿನ ಒಳಹರಿವು 6,938 ಕ್ಯೂಸೆಕ್ ಇದ್ದರೆ, ಹೊರಹರಿವಿನ ಪ್ರಮಾಣ 250 ಕ್ಯೂಸೆಕ್ ಇದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಜಲಾಶಯ ಗರಿಷ್ಠ ನೀರಿನ ಸಂಗ್ರಹಣ ಸಾಮರ್ಥ್ಯವು 890 ಮೀಟರ್ ಅಡಿ ಆಗಿದೆ.
ಹಾರಂಗಿ ಜಲಾಶಯದಲ್ಲಿ ಇಂದಿನ ಒಳಹರಿವು 1,673 ಕ್ಯೂಸೆಕ್ ಇದ್ದರೆ, ಹೊರಹರಿವಿನ ಪ್ರಮಾಣ 200 ಕ್ಯೂಸೆಕ್ ಇದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಜಲಾಶಯ ಗರಿಷ್ಠ ನೀರಿನ ಸಂಗ್ರಹಣ ಸಾಮರ್ಥ್ಯವು 871.38 ಮೀಟರ್ ಅಡಿ ಆಗಿದೆ.
ಕಬಿನಿ ಜಲಾಶಯದಲ್ಲಿ ಇಂದಿನ ಒಳಹರಿವು 5,560 ಕ್ಯೂಸೆಕ್ ಇದ್ದರೆ, ಹೊರಹರಿವಿನ ಪ್ರಮಾಣ 1,000 ಕ್ಯೂಸೆಕ್ ಇದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಜಲಾಶಯ ಗರಿಷ್ಠ ನೀರಿನ ಸಂಗ್ರಹಣ ಸಾಮರ್ಥ್ಯವು 696.13 ಮೀಟರ್ ಅಡಿ ಆಗಿದೆ.
ಭಾರೀ ಮಳೆ: ಈಗಾಗಲೇ ರಾಜ್ಯದ ಹಲವೆಡೆ ಭಾರೀ ಮಳೆಯಿಂದಾಗಿ ಅನಾಹುತಗಳೇ ಸೃಷ್ಟಿಯಾಗಿವೆ. ಕೆಲವೆಡೆ ಸಾಧಾರಣ ಮಳೆಯಾಗುತ್ತಿದ್ದು, ಇನ್ನೂ ಹಲವೆಡೆ ಮಳೆಯೇ ಇಲ್ಲದೆ ಬಿಸಿಲಿನ ವಾತಾವರಣ ಮುಂದುವರೆದಿದೆ. ಇನ್ನು ಇಂದು (ಜುಲೈ 01) ಬೆಳ್ಳಂಬೆಳಗ್ಗೆಯೇ ಬೆಳಗಾವಿ ಜಿಲ್ಲೆಯ ಹಲವೆಡೆ ಧಾರಾಕಾರ ಮಳೆಯಾಗಿದೆ.
ಭಾರೀ ಮಳೆ ಸುರಿದ ಹಿನ್ನೆಲೆ ಬೆಳಗಾವಿ ಜಿಲ್ಲೆಯ ಹಲವಡೆ ನದಿ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಗೋವಾ ಮತ್ತು ಮಹಾರಾಷ್ಟ್ರ ಭಾಗದಲ್ಲಿಯೂ ಧಾರಾಕಾರ ಮಳೆ ಸುರಿದು ರಸ್ತೆಗಳು ಚರಂಡಿಯಂತೆ ನಿರ್ಮಾಣವಾಗಿ, ವಾಹನ ಸವಾರರು ಪರದಾಡುವುದಲ್ಲದೆ, ಜನಜೀವನ ಅಸ್ತವ್ಯಸ್ಥವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಭಾರೀ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಖಾನಾಪೂರದಲ್ಲಿರುವ ನದಿಗಳು ತುಂಬಿ ಹರಿಯುತ್ತಿದ್ದು, ನದಿಯಲ್ಲಿರುವ ಹಣುಮಾನ ದೇವಸ್ಥಾನ ಮುಳಗಡೆಯಾಗಿದೆ. ಆದ್ದರಿಂದ ಮುಜಾಗ್ರತಾ ಕ್ರಮವಾಗಿ ನದಿ ದಂಡೆಗೆ ಯಾರೂ ಹೋಗದಂತೆ ಜಿಲ್ಲಾಡಳಿತ ಕ್ರಮ ಕೈಗೊಳ್ಳುತ್ತದೆಯಾ ಎಂದು ಕಾದುನೋಡಬೇಕಿದೆ.
ಹಾಗೆಯೇ ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಇನ್ನೂ ನಾಲ್ಕು ದಿನಗಳ ಕಾಳ ಮಳೆರಾಯನ ಆರ್ಭಟ ಮುಂದುವರೆದರೆ, ಏನೆಲ್ಲಾ ಅನಾಹುತಗಳು ಸಂಭವಿಸಲಿವೆ ಎನ್ನುವ ಆತಂಕದಲ್ಲಿ ಬೆಳಗಾವಿ ಜಿಲ್ಲೆ ಜನರಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications