''ಸರ್ಕಾರಿ ವೈದ್ಯರ ಮುಷ್ಕರ: ಆರೋಗ್ಯ ಇಲಾಖೆಗೆ ಅನಾರೋಗ್ಯ, ಅಂಗನವಾಡಿ ಮಕ್ಕಳ ತರಕಾರಿಗೆ ಕೇವಲ 50 ಪೈಸೆ''
ಮಂಡ್ಯ: ರಾಜ್ಯ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಇತ್ತೀಚೆಗೆ ಮುಷ್ಕರ ಮಾಡಿದ್ದರು. ಇದೀಗ ಮಾರ್ಚ್ 13 ರಿಂದ ಸರ್ಕಾರಿ ವೈದ್ಯರು ಪ್ರತಿಭಟನೆ ನಡೆಸಲಿದ್ದಾರೆ. ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ಪಾಪರ್ ಮಾಡಲು ಮುಂದಾಗಿದೆ. ಇದರಿಂದಾಗಿ ಎಲ್ಲರೂ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ದೂರಿದರು. 'ಅಂಗನವಾಡಿ ಮಕ್ಕಳ ತರಕಾರಿ ಖರೀದಿಗೆ 50 ಪೈಸೆ' ನೀಡುವುದು ಸೇರಿದಂತೆ ಕೆಲವು ಆರೋಪ ಮಾಡಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರ, ಸಿಎಂ ಕುರ್ಚಿ ಕಾಳಗ, ಅನುದಾನ ಕೊರತೆ ಮೊದಲಾದ ಸಾವಿರಾರು ಸಮಸ್ಯೆಗಳಲ್ಲೇ ಕಾಂಗ್ರೆಸ್ ಸರ್ಕಾರದ ಸಾವಿರದ ದಿನಗಳು ಕಳೆದು ಹೋಗಿದೆ. ಸರ್ಕಾರಿ ಆಸ್ಪತ್ರೆಗಳಿಗಾಗಿ ಇನ್ನೂ ಅಗತ್ಯ ಔಷಧಿಗಳನ್ನು ಖರೀದಿ ಮಾಡಿಲ್ಲ. ಈ ನಡುವೆ, ಸ್ಥಳೀಯ ವೈದ್ಯಾಧಿಕಾರಿಗಳು ಔಷಧಿ ಖರೀದಿಸುವುದು ಬೇಡ, ಸರ್ಕಾರದಿಂದಲೇ ಖರೀದಿಸುವವರೆಗೆ ಕಾಯಬೇಕೆಂದು ಸುತ್ತೋಲೆ ಹೊರಡಿಸಲಾಗಿದೆ. ಮಾರ್ಚ್ 13 ರಿಂದ ಸರ್ಕಾರಿ ವೈದ್ಯರು ಪ್ರತಿಭಟನೆ ನಡೆಸಲಿದ್ದಾರೆ. ಇದರಿಂದಾಗಿ ರೋಗಿಗಳು ಸಂಕಷ್ಟಕ್ಕೆ ಸಿಲುಕಲಿದ್ದಾರೆ. ಇದಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರೇ ನೇರ ಕಾರಣ ಎಂದು ಹೇಳಿದರು.

ಇ-ಖಾತಾ ಮಾಡಿಸಲು ಬೇಕು 30 ಸಾವಿರ ಲಂಚ
ಆರೋಗ್ಯ ಇಲಾಖೆಯೇ ಅನಾರೋಗ್ಯ ಪೀಡಿತವಾಗಿದ್ದು, ಬಜೆಟ್ ನಲ್ಲಿ ಶೇ 40ರಷ್ಟು ಅನುದಾನ ಕಡಿತವಾಗಿದೆ. ಗ್ಯಾರಂಟಿಗಳು ಹೊರೆಯಾಗುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಒಪ್ಪಿಕೊಂಡಿದ್ದಾರೆ. ಈ ಕಾರಣಕ್ಕಾಗಿಯೇ ಎಲ್ಲ ಇಲಾಖೆಗಳಲ್ಲಿ ಅನುದಾನ ಕೊರತೆಯಾಗಿದೆ. ಇ-ಖಾತೆಯನ್ನು ಉಚಿತವಾಗಿ ಸರ್ಕಾರದಿಂದಲೇ ಮಾಡಬೇಕಿತ್ತು. ಅದನ್ನು ಬಿಟ್ಟು ಲಂಚಕ್ಕೆ ದಾರಿ ಮಾಡಿದ್ದಾರೆ. ಇ-ಖಾತಾ ಮಾಡಿಸಲು 30,000 ರೂ. ಲಂಚ ನೀಡಬೇಕಿದೆ. ನಿಗದಿತ ಗುರಿಗಿಂತ 20ರಷ್ಟು ಆದಾಯ ಖೋತಾ ಆಗಿದೆ. ಅಬಕಾರಿ ಇಲಾಖೆಯಲ್ಲಿ ಮದ್ಯದಂಗಡಿ ಆರಂಭಿಸಲು ಕೋಟಿಗಟ್ಟಲೆ ಹಣ ನೀಡಬೇಕಿದೆ. ಮಹಾತ್ಮ ಗಾಂಧಿಯ ಆದರ್ಶಗಳ ಬಗ್ಗೆ ಮಾತಾಡುವ ಕಾಂಗ್ರೆಸ್ ನಾಯಕರು ಹೊಸ ಮದ್ಯದಂಗಡಿಗಳನ್ನು ಆರಂಭಿಸಲು ಲಂಚ ಪಡೆಯುತ್ತಿದ್ದಾರೆ ಎಂದು ವಿವರಿಸಿದರು.
05 ರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಹಣ ಸಂಗ್ರಹಿಸಲಾಗುತ್ತಿದೆ. ಸಚಿವರ ಬದಲಾವಣೆಯ ಸುದ್ದಿ ಬಂದರೆ ಸಚಿವರು ಹೈಕಮಾಂಡ್ಗೆ ಹಣ ನೀಡಬೇಕಾಗುತ್ತದೆ. ಡಿಸಿಎಂ ಡಿ.ಕೆ.ಶಿವಕುಮಾರ್, ಜಾರ್ಜ್ ಮೊದಲಾದವರನ್ನು ಚುನಾವಣೆಗೆ ನೇಮಿಸಲಾಗಿದೆ. ಕರ್ನಾಟಕವನ್ನು ಕಾಂಗ್ರೆಸ್ ಹೈಕಮಾಂಡ್ ಎಟಿಎಂ ಮಾಡಿಕೊಂಡಿದೆ. ಇದರ ಪರಿಣಾಮ ಪ್ರತಿಭಟನೆಯ ಪರ್ವ ಶುರುವಾಗಿದೆ. ಅಂಗನವಾಡಿ ಕಾರ್ಯಕರ್ತರು, ಗುತ್ತಿಗೆದಾರರು, ಸಾರಿಗೆ ನೌಕರರು ಪ್ರತಿಭಟನೆ ಮಾಡುತ್ತಿದ್ದಾರೆ.
ಅಂಗನವಾಡಿ ಹತ್ತು ಮಕ್ಕಳ ತರಕಾರಿಗೆ 5 ರೂ.!
ಸರ್ಕಾರದ ಬೊಕ್ಕಸ ಖಾಲಿಯಾಗಿರುವುದರಿಂದ ಎಲ್ಲರೂ ಪ್ರತಿಭಟನೆ ಮಾಡುತ್ತಿದ್ದಾರೆ. ಅಂಗನವಾಡಿ ಮಕ್ಕಳಿಗೆ ತರಕಾರಿಗೆ 50 ಪೈಸೆ ನೀಡುತ್ತಿದ್ದಾರೆ. ಅಂದರೆ ಹತ್ತು ಮಕ್ಕಳಿಗೆ 5 ರೂ. ನೀಡಲಾಗುತ್ತದೆ. ಅರ್ಧ ಕೆಜಿ ತರಕಾರಿಯನ್ನು ಹತ್ತು ಮಕ್ಕಳಿಗೆ ನೀಡಬೇಕಾಗುತ್ತದೆ. ಆದರೆ ಒಂದು ಕೆಜಿ ತರಕಾರಿಗೆ ಕನಿಷ್ಠ 40 ರೂ. ಇದೆ. ಗ್ಯಾರಂಟಿಗಳಿಂದಾಗಿ ಹಣವಿಲ್ಲದೆ ಇಷ್ಟು ದರದಲ್ಲಿ ತರಕಾರಿ ಖರೀದಿ ಮಾಡಬೇಕಿದೆ ಎಂದು ಸರ್ಕಾರದ ವಿರುದ್ಧ ಕಿಡಿ ಕಾರಿದರು.
ಸರ್ಕಾರದ ಸಾಲ 6 ಲಕ್ಷ ಕೋಟಿ ಆಗುತ್ತೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಮೂರೂವರೆ ಲಕ್ಷ ಕೋಟಿ ರೂ. ಸಾಲ ಮಾಡಿದ್ದಾರೆ. ಹಿಂದಿನ ಯಾವುದೇ ಮುಖ್ಯಮಂತ್ರಿ ಇಷ್ಟು ಸಾಲ ಮಾಡಿಲ್ಲ. ಐದು ವರ್ಷ ಪೂರ್ಣಗೊಳ್ಳುವಾಗ ಒಟ್ಟು ಸಾಲ 6 ಲಕ್ಷ ಕೋಟಿ ರೂಪಾಯಿಗೆ ಏರಲಿದೆ. ಪ್ರತಿ ವ್ಯಕ್ತಿಯ ಮೇಲೆ 1 ಲಕ್ಷ ರೂ. ಸಾಲವಿದ್ದು, ಇನ್ನೂ 1 ಲಕ್ಷ ರೂ. ಸಾಲ ಹೇರಿಕೆಯಾಗಲಿದೆ. ಜನರ ಮೇಲೆ ಸಾಲ ಮತ್ತು ತೆರಿಗೆಗಳ ಹೊರೆಯನ್ನು ಹಾಕಿದ್ದಾರೆ. ಕೇಂದ್ರ ಸರ್ಕಾರ ತುಪ್ಪದ ದರ ಇಳಿಸಿದರೆ, ಕೂಡಲೇ ತುಪ್ಪದ ದರ ಹೆಚ್ಚು ಮಾಡಿದ್ದಾರೆ. ಮಾರ್ಗಸೂಚಿ ದರವನ್ನು ನಾಲ್ಕು ಪಟ್ಟು ಏರಿಸಿದ್ದಾರೆ. ಕಸಕ್ಕೆ ಮೂರು ಪಟ್ಟು ಅಧಿಕ ತೆರಿಗೆ ನೀಡಬೇಕಿದೆ. ಕಾಂಗ್ರೆಸ್ ದಿವಾಳಿಯಾಗಿ ಕರ್ನಾಟಕವನ್ನು ಪಾಪರ್ ರಾಜ್ಯ ಮಾಡಲು ಮುಂದಾಗಿದೆ ಎಂದು ದೂರಿದರು.
20 ತಾಲೂಕುಗಳು ಹಿಂದುಳಿದ ಪಟ್ಟಿಗೆ ಸೇರ್ಪಡೆ
ಬಜೆಟ್ ಅಧಿವೇಶನದಲ್ಲಿ ಕಾಂಗ್ರೆಸ್ ಮಾಡಿರುವ ತಪ್ಪುಗಳ ಬಗ್ಗೆ ಚರ್ಚೆಯಾಗಲಿದೆ. ಬಿಜೆಪಿ-ಜೆಡಿಎಸ್ ಜಂಟಿಯಾಗಿ ಹೋರಾಟ ಮಾಡಲಿದೆ. ಸಿಎಂ ಸಿದ್ದರಾಮಯ್ಯನವರ ಆಡಳಿತದಿಂದಾಗಿ ಹಿಂದುಳಿದ ತಾಲೂಕುಗಳ ಪಟ್ಟಿಗೆ ಇನ್ನೂ 20 ತಾಲೂಕುಗಳು ಸೇರ್ಪಡೆಯಾಗಿದೆ. ವಿದ್ಯಾರ್ಥಿಗಳ ಹೋರಾಟಕ್ಕೆ ಹೆದರಿ 56 ಸಾವಿರ ನೇಮಕಾತಿ ಮಾಡಲು ತೀರ್ಮಾನಿಸಲಾಗಿದೆ. ಆದರೆ ಬಿಜೆಪಿಯಿಂದ 2 ಲಕ್ಷ ಹುದ್ದೆಗಳ ನೇಮಕಾತಿಗೆ ಆಗ್ರಹಿಸಲಾಗಿತ್ತು. ಒಳಮೀಸಲಾತಿಗೆ ಸಂಬಂಧಿಸಿದಂತೆ ಕೋರ್ಟ್ಗೆ ಸರ್ಕಾರ ಅಫಿಡವಿಟ್ ನೀಡಬೇಕಿದೆ. ಕೋರ್ಟ್ ಆದೇಶದಂತೆ ಸರ್ಕಾರ ಕ್ರಮ ವಹಿಸಬೇಕಾಗುತ್ತದೆ ಎಂದರು.
ಹಿಂದೂಗಳ ಮೇಲೆ ಹಲ್ಲೆ ಖಂಡನೀಯ
ಕೊಡಗು ಜಿಲ್ಲೆಯಲ್ಲಿ ಹಿಂದೂ ಸಮಾಜೋತ್ಸವದ ಹಿಂದಿನ ದಿನ ಹಿಂದೂಗಳ ಮೇಲೆ ಹಲ್ಲೆಯಾಗಿದೆ. ಈ ರೀತಿಯ ಘಟನೆಗಳು ಹೆಚ್ಚಾಗಿದೆ. ಕಾಂಗ್ರೆಸ್ ಸರ್ಕಾರ ಹಿಂದೂ ಸಂಘಟನೆಗಳ ಕಾರ್ಯಕ್ರಮಗಳಿಗೆ ಅಡ್ಡಿ ಮಾಡುತ್ತಿದೆ. ಬಾಗಲಕೋಟೆಯಲ್ಲಿ ಶಿವಾಜಿ ಮೆರವಣಿಗೆಗೆ ಕಲ್ಲು ತೂರಾಟ ಮಾಡಲಾಗಿತ್ತು. ಎಲ್ಲ ಜಿಲ್ಲೆಗಳ ಹಿಂದೂ ಕಾರ್ಯಕ್ರಮಗಳ ಮೇಲೆ ಕಲ್ಲು ತೂರಾಟವಾಗುತ್ತಿದೆ. ಕಾಂಗ್ರೆಸ್ ಇದನ್ನು ಮಾಡಿಸುತ್ತಿದೆ. ವಾಲ್ಮೀಕಿ ನಿಗಮದ ಹಗರಣ, ಮುಡಾ ಹಗರಣದಲ್ಲಿ ಬಿಜೆಪಿ ನಡೆಸಿದ ಹೋರಾಟದಿಂದಲೇ ಬದಲಾವಣೆ ಸಾಧ್ಯವಾಗಿದೆ. ರಾಜ್ಯದಲ್ಲಿ ಎಲ್ಲೇ ಏನೇ ಆದರೂ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.
-
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ











Click it and Unblock the Notifications