ಕಾಶ್ಮೀರದಲ್ಲಿ 370ನೇ ವಿಧಿ ಮರುಜಾರಿಗೆ ಕಾಂಗ್ರೆಸ್ ಒಪ್ಪಿಗೆ ಇದೆಯೇ?: ವಿ.ಸುನೀಲ್ಕುಮಾರ್
ಬೆಂಗಳೂರು, ಆಗಸ್ಟ್ 24: ಕಾಶ್ಮೀರದಲ್ಲಿ 370ನೇ ವಿಧಿಯನ್ನು ಮರುಜಾರಿ ಮಾಡಲು ನಿಮ್ಮ ಒಪ್ಪಿಗೆ ಇದೆಯೇ ಎಂದು ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷವು ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್ಕುಮಾರ್ ಅವರು ಒತ್ತಾಯಿಸಿದರು.
ಶನಿವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ದೇಶದಲ್ಲಿ ಎರಡು ಕಾನೂನು ಜಾರಿಗೊಳಿಸಲು ನಿಮ್ಮ ಒಪ್ಪಿಗೆ ಇದೆಯೇ ಎಂದು ಅವರು ಪ್ರಶ್ನಿಸಿದರು. ನ್ಯಾಶನಲ್ ಕಾನ್ಫರೆನ್ಸ್ ತನ್ನ ಪ್ರಣಾಳಿಕೆಯಲ್ಲಿ ಈಗಾಗಲೇ 370ನೇ ವಿಧಿ ಮರುಜಾರಿ ಮಾಡುವುದಾಗಿ ಹೇಳಿದೆ. ನ್ಯಾಶನಲ್ ಕಾನ್ಫರೆನ್ಸ್ ಜೊತೆ ಚುನಾವಣೆ ಹೊಂದಾಣಿಕೆ ಮಾಡಿದ್ದರಿಂದ 370ನೇ ವಿಧಿ ಬಗ್ಗೆ ನಿಮ್ಮ ನಿಲುವೇನು ಎಂದು ಕಾಂಗ್ರೆಸ್ ಪಕ್ಷದವರು ಜನರಿಗೆ ತಿಳಿಸಬೇಕು ಎಂದು ಒತ್ತಾಯಿಸಿದರು.

ದೇಶದಲ್ಲಿ ಎರಡು ಕಾನೂನು ತರುವ ಸಿದ್ಧತೆ ಮಾಡಿಕೊಳ್ಳುತ್ತಿದ್ದೀರಾ? ದೇಶದಲ್ಲಿ ಎರಡು ಧ್ವಜ ಮಾಡಲು ಕಾಂಗ್ರೆಸ್ ಸಮ್ಮತಿಸುವುದೇ ಎಂದು ಅವರು ಕೇಳಿದರು. ಇದು ಕೇವಲ ಚುನಾವಣೆ ಹೊಂದಾಣಿಕೆ ಅಲ್ಲ. 370ನೇ ವಿಧಿಯನ್ನು ಬಿಜೆಪಿ ರದ್ದು ಮಾಡಿದ ಬಳಿಕ ಇವತ್ತು ಅದನ್ನು ಮರುಜಾರಿ ಮಾಡುವುದಾಗಿ ನ್ಯಾಶನಲ್ ಕಾನ್ಫರೆನ್ಸ್ ಹೇಳಿದೆ. ಆ ಪಕ್ಷದ ಜೊತೆ ಕಾಂಗ್ರೆಸ್ ಪಕ್ಷ ಹೊಂದಾಣಿಕೆ ಮಾಡಿಕೊಂಡಿದ್ದು, ದೇಶದ ಜನರ ಹಲವು ಪ್ರಶ್ನೆಗಳಿಗೆ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷವು ಉತ್ತರ ಕೊಡಬೇಕು ಎಂದು ಆಗ್ರಹಿಸಿದರು.
370ನೇ ವಿಧಿಯನ್ನು ಬಿಜೆಪಿ ರದ್ದು ಮಾಡಿದ ಪರಿಣಾಮವಾಗಿ ಸ್ವಾತಂತ್ರ್ಯ ಬಂದ ಬಳಿಕ ಮೊದಲ ಬಾರಿಗೆ ಮೀಸಲಾತಿ ಆರಂಭವಾಗಿದೆ. ಹಾಗಿದ್ದರೆ ಜಮ್ಮು- ಕಾಶ್ಮೀರದಲ್ಲಿ ಕಾಂಗ್ರೆಸ್ಸಿನ ವಿರೋಧ ಇದೆಯೇ ಎಂದು ಕೇಳಿದರು. ಇದೆಲ್ಲ ಪ್ರಶ್ನೆಗೆ ಕಾಂಗ್ರೆಸ್ ಉತ್ತರ ಕೊಡಬೇಕೆಂದು ಅವರು ತಿಳಿಸಿದರು.
ಚುನಾವಣೆ ಬಂದಾಗ ಯಾರು ಬೇಕಾದರೂ ನನ್ನ ಮಿತ್ರಪಕ್ಷ ಆಗಬಹುದೆಂದು ಅಂದುಕೊಂಡು ದೇಶದ ಹಿತಾಸಕ್ತಿಯನ್ನು ಕಾಂಗ್ರೆಸ್ ಮರೆತಿದೆ. ಇಲ್ಲಿನತನಕ ಅಲ್ಲಿದ್ದ ಸೈನಿಕರಿಗೆ ಕಲ್ಲು ತೂರಾಟವನ್ನು ಕಾಂಗ್ರೆಸ್ ಸಮರ್ಥಿಸುವುದೇ ಎಂದು ಅವರು ಪ್ರಶ್ನಿಸಿದರು. ಅಲ್ಲಿರುವ ಯುವಕರ ಕೈಗೆ ಕಲ್ಲನ್ನು ಬಿಟ್ಟು ಲ್ಯಾಪ್ಟಾಪ್ ಕೊಟ್ಟಿದ್ದು ಬಿಜೆಪಿ ಸರಕಾರದಲ್ಲಿ ಎಂದು ನೆನಪಿಸಿದರು.
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ದೊಡ್ಡ ಪ್ರಮಾಣದಲ್ಲಿ ಹದಗೆಟ್ಟಿದೆ. ಪೊಲೀಸರ ಬಗ್ಗೆ ಭಯ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಟೀಕಿಸಿದರು. ಕೊಲೆ, ಸುಲಿಗೆ, ಅತ್ಯಾಚಾರಗಳು ದಿನನಿತ್ಯ ಜಾಸ್ತಿ ಆಗುತ್ತಿವೆ ಎಂದು ಆಕ್ಷೇಪಿಸಿದರು. ನಿನ್ನೆ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಅಮಲು ಪದಾರ್ಥ (ಡ್ರಗ್ಸ್) ಕೊಟ್ಟು ಯುವತಿಯ ಮೇಲೆ ಅತ್ಯಾಚಾರ ಮಾಡಿದ ಪ್ರಕರಣ ನಡೆದಿದೆ ಎಂದು ಖಂಡಿಸಿದರು.
ಇದೊಂದು ಪೈಶಾಚಿಕ ಕೃತ್ಯ. ಅವರಿಗೆ ಡ್ರಗ್ಸ್ ಸಿಕ್ಕಿದ್ದು ಹೇಗೆ? ಇದರ ಹಿಂದೆ ಯಾವ ಕೈವಾಡ ಇದೆ? ಹುಬ್ಬಳ್ಳಿ ಘಟನೆ ಆದಾಗ ಲವ್ ಜಿಹಾದ್ ಎಂದು ಹೇಳಿದಾಗ ಮುಖ್ಯಮಂತ್ರಿ, ಗೃಹಸಚಿವರು ಅದನ್ನು ಅಲ್ಲಗಳೆದಿದ್ದರು. ಡ್ರಗ್ಸ್ ನೀಡಿ ಅಪಹರಿಸಿ ದುಷ್ಕøತ್ಯ ಎಸಗಿದವರ ಹಿಂದೆ ಯಾವ ಶಕ್ತಿ ಅಡಗಿದೆ? ಇದನ್ನು ಸರಕಾರ, ಜಿಲ್ಲಾಡಳಿತ ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು. ಹೆಣ್ಮಕ್ಕಳ ರಕ್ಷಣೆಗೆ ಸರಕಾರ ಮುಂದಾಗಬೇಕು ಎಂದು ಅವರು ಆಗ್ರಹಿಸಿದರು.
ಮಿಸ್ಡ್ ಕಾಲ್ ಕೊಡುವ ಮೂಲಕ ಸದಸ್ಯತ್ವಕ್ಕೆ ನೋಂದಣಿ ಮಾಡಿಕೊಳ್ಳುವ ಅಭಿಯಾನದ ಕುರಿತು ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಇಂದು ತಿಳಿಸಿದ್ದಾರೆ. 8800002024 ನಂಬರನ್ನು ಸಾರ್ವಜನಿಕವಾಗಿ ಪ್ರಕಟಿಸಿದ್ದೇವೆ ಎಂದು ಸುನೀಲ್ ಕುಮಾರ್ ತಿಳಿಸಿದರು.
ಬೂತ್ ಅಧ್ಯಕ್ಷರಿಂದ ಆರಂಭಿಸಿ ಎಲ್ಲ ಹಂತದ ಪದಾಧಿಕಾರಿಗಳು, ಗ್ರಾಮ ಪಂಚಾಯಿತಿ ಸದಸ್ಯರಿಂದ ಎಲ್ಲ ಹಂತದ ಜನಪ್ರತಿನಿಧಿಗಳು ಒಂದು ತಿಂಗಳ ಕಾಲ ಈ ಅಭಿಯಾನವನ್ನು ಯಶಸ್ವಿಗೊಳಿಸಲು ಜೋಡಿಸಿಕೊಳ್ಳಲು ಕರೆ ಕೊಡಲಾಗಿದೆ. ಬಿಜೆಪಿ ಸದಸ್ಯರಾಗುವುದು ಎಂದರೆ ವಿಕಸಿತ ಭಾರತಕ್ಕೆ ಸಾಕ್ಷಿಗಳಾಗುವುದು ಎಂದು ವಿಶ್ಲೇಷಿಸಿದರು.
-
Upendra: ನಟ ಉಪೇಂದ್ರ ಅವರ "ಪ್ರಜಾಕೀಯ" ಪಕ್ಷದ ವೆಬ್ಸೈಟ್ ಲೋಕಾರ್ಪಣೆ, ಟಿಕೆಟ್ ಆಕಾಂಕ್ಷಿಗಳಿಗೆ ಹೊಸ ರೂಲ್ಸ್ -
Vijay: ಪ್ರಚಾರದ ವೇಳೆ ಹೂವಿನ ಚೆಂಡು ಎಸೆದ ಅಭಿಮಾನಿ; ಸೈಕಲ್ನಿಂದ ಇಳಿದು ಗಾಡಿ ಹತ್ತಿದ ದಳಪತಿ ವಿಜಯ್, ವಿಡಿಯೋ ವೈರಲ್ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
ಕೆಲವೇ ಗಂಟೆಗಳಲ್ಲಿ ಇರಾನ್ ಬಂದರುಗಳಿಗೆ ಅಮೆರಿಕದಿಂದ ಕಡಲ ದಿಗ್ಬಂಧನ? ಯುದ್ಧದ ಭೀತಿಯಲ್ಲಿ ಕೊಲ್ಲಿ ರಾಷ್ಟ್ರಗಳು -
Bihar: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ, ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಆಯ್ಕೆ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
Siddaramaiah: ಜನರ ದಾರಿತಪ್ಪಿಸುವ ಬಿಜೆಪಿಯನ್ನು ನಂಬಬೇಡಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರಣವೇನು -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು












Click it and Unblock the Notifications