Anil kumble: ಆರ್ಸಿಬಿ ಗೆಲ್ಲುತ್ತೆ ಅಂತ ಈಗ್ಲೇ ಹೇಳ್ಬೇಡಿ: ಅನಿಲ್ ಕುಂಬ್ಳೆ ಹೀಗೆಂದಿದ್ದೇಕೆ?
ಬೆಂಗಳೂರು, ಜೂನ್ 3: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಂದು(ಜೂನ್ 03) ಐಪಿಎಲ್ ಫೈನಲ್ ಆಡುತ್ತಿರುವುದಕ್ಕೆ, ಇದೇ ತಂಡದ ಮಾಜಿ ನಾಯಕರೂ ಆಗಿರುವ ಅನಿಲ್ ಕುಂಬ್ಳೆ ಶುಭ ಹಾರೈಸಿದ್ದಾರೆ. ಆದರೆ, ಆರ್ಸಿಬಿ ಗೆಲ್ಲುತ್ತೆ ಎಂದು ಈಗಲೇ ಹೇಳಬೇಡಿ ಎಂದು ಅನಿಲ್ ಕುಂಬ್ಳೆ ಅವರು ಹೇಳಿದ್ದಾರೆ. ಆರ್ಸಿಬಿ ಗೆಲ್ಲಬೇಕು ಎಂಬುದು ನಮ್ಮ ಹೃದಯದ ಮಾತು. ಹಾಗೆಯೇ ಆಗಲಿ ಎಂದು ಹಾರೈಸೋಣ ಎಂದರು. ಪಂಜಾಬ್ ತಂಡದಲ್ಲೂ ನಾನು ಆಡಿದ್ದೆ. ಆರ್ಸಿಬಿಯಲ್ಲೂ ಆಡಿದ್ದೆ. ಎರಡೂ ತಂಡಗಳು ಬೆಸ್ಟ್. ಉತ್ತಮ ಪ್ರದರ್ಶನ ನೀಡಿದ ತಂಡಗಳೇ ಫೈನಲ್ ಪ್ರವೇಶಿಸಿವೆ. ಆರ್ಸಿಬಿ ಗೆಲ್ಲಲಿ ಎಂಬುದು ಹಾರೈಕೆ ಎಂದು ಅನಿಲ್ ಕುಂಬ್ಳೆ ಅವರು ಹೇಳಿದರು.
ಬೆಂಗಳೂರಿನಲ್ಲಿ ಇಂದು ಅನಿಲ್ ಕುಂಬ್ಳೆ ಮಾತನಾಡಿ, ತಮ್ಮನ್ನು ಅರಣ್ಯ, ವನ್ಯಜೀವಿ ರಾಯಭಾರಿಯಾಗಿ ನೇಮಕ ಮಾಡಲು ಸರ್ಕಾರ ನಿರ್ಧರಿಸಿರುವುದಕ್ಕೆ ಧನ್ಯವಾದ ಅರ್ಪಿಸಿದರು. ಇಲಾಖೆಯ ಜೊತೆಗೂಡಿ ಅರಣ್ಯ, ವನ್ಯಜೀವಿ ಸಂರಕ್ಷಣೆ ಮತ್ತು ಸಂವರ್ಧನೆಗೆ ಶ್ರಮಿಸುವುದಾಗಿ ತಿಳಿಸಿದರು.

ಅರಣ್ಯ ಸಂರಕ್ಷಣೆ, ಸಂವರ್ದನೆಗೆ ಕುಂಬ್ಳೆ ಬಲ: ಈಶ್ವರ ಖಂಡ್ರೆ
ವನ್ಯಜೀವಿ, ಅರಣ್ಯ ಸಂರಕ್ಷಣೆ ಮತ್ತು ಸಂವರ್ಧನೆಗೆ ಈಗ ಅನಿಲ್ ಕುಂಬ್ಳೆ ಬಲ ದೊರೆತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ತಮ್ಮನ್ನು ಭೇಟಿ ಮಾಡಿದ್ದ ಖ್ಯಾತ ಮಾಜಿ ಕ್ರಿಕೆಟಿಗ ಹಾಗೂ ಪರಿಸರ ಪ್ರೇಮಿ ಅನಿಲ್ ಕುಂಬ್ಳೆ ಅವರೊಂದಿಗೆ ಸಮಾಲೋಚಿಸಿದ ಅವರು, ವನ್ಯಜೀವಿ, ಅರಣ್ಯ, ಪರಿಸರದ ಬಗ್ಗೆ ಅಪಾರ ಕಾಳಜಿ ಮತ್ತು ಪ್ರೀತಿ ಹೊಂದಿರುವ ಅನಿಲ್ ಕುಂಬ್ಳೆ ಅವರು ಯಾವುದೇ ಸಂಭಾವನೆ ಇಲ್ಲದೆ ಅರಣ್ಯ, ವನ್ಯಜೀವಿ ರಾಯಭಾರಿ ಆಗಲು ಸಮ್ಮತಿಸಿದ್ದಾರೆ ಇದು ಅವರ ಪರಿಸರ ಕಾಳಜಿ, ಬದ್ಧತೆಗೆ ಸಾಕ್ಷಿಯಾಗಿದೆ ಎಂದರು.
ತಮ್ಮ ಲೆಗ್ ಸ್ಪಿನ್ ಮೋಡಿಯಿಂದ ಭಾರತ ತಂಡದ ಹಲವು ಗಲುವಿನಲ್ಲಿ ಪ್ರಮುಖ ಪಾತ್ರ ವಹಿಸಿರುವ ಕುಂಬ್ಳೆ ಅವರು ಕರ್ನಾಟಕದ ಅಷ್ಟೇ ಅಲ್ಲ ಭಾರತದ ಹೆಮ್ಮೆಯ ಪುತ್ರರಾಗಿದ್ದಾರೆ. ಜಿಂ ಲೇಕರ್ ಬಳಿಕ ಒಂದು ಟೆಸ್ಟ್ ಪಂದ್ಯದ ಒಂದು ಇನ್ನಿಂಗ್ಸ್ ನಲ್ಲಿ ಎಲ್ಲ 10 ವಿಕೆಟ್ ಪಡೆದ ಸಾಧನೆ ಮಾಡೆದ ಮಾಂತ್ರಿಕ ಬೌಲರ್ ಎಂದರು. 110 ಟೆಸ್ಟ್ ಪಂದ್ಯಗಳನ್ನು ಆಡಿ 619 ವಿಕೆಟ್ ಪಡೆದಿರುವ ಅನಿಲ್ ಕುಂಬ್ಳೆ ಅವರು ಜಂಬೂ ಎಂದೂ ಖ್ಯಾತರಾಗಿದ್ದಾರೆ. ಅದೇ ರೀತಿ 264ಕ್ಕೂ ಅಧಿಕ ಏಕ ದಿನ ಪಂದ್ಯ ಆಡಿರುವ ಅವರು 337 ವಿಕೆಟ್ ಕಬಳಿಸಿದ್ದಾರೆ.
ಕ್ರಿಕೆಟ್ ಪ್ರಿಯರ ಹೃದಯದಲ್ಲಿ ನೆಲೆಸಿದ್ದಾರೆ. ಇವರು ಅರಣ್ಯ, ವನ್ಯಜೀವಿ ಸಂರಕ್ಷಣೆಯ ಬಗ್ಗೆ ಪ್ರಚಾರ, ಪ್ರಸಾರ ಮಾಡಲಿದ್ದು, ಜನರಲ್ಲಿ ಜಾಗೃತಿ ಮೂಡಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಈ ಹಿಂದೆ ಕರ್ನಾಟಕ ವನ್ಯಜೀವಿ ಮಂಡಳಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವವೂ ಕುಂಬ್ಳೆ ಅವರಿಗಿದೆ. ಅನಿಲ್ ಕುಂಭ್ಳೆ ಅವರು ರಾಯಭಾರಿ ಆಗುತ್ತಿರುವುದು ಅರಣ್ಯ ಸಂರಕ್ಷಣೆ ಮತ್ತು ಅರಣ್ಯ ಸಂವರ್ಧನೆಗೆ ಬಲ ನೀಡಲಿದೆ ಎಂದು ಈಶ್ವರ ಖಂಡ್ರೆ ಅಭಿಪ್ರಾಯಪಟ್ಟರು.
-
ಚಿನ್ನಸ್ವಾಮಿಯಲ್ಲಿ ಕನ್ನಡಿಗ ದೇವ್, ವಿರಾಟ್ ಅಬ್ಬರದ ಬ್ಯಾಟಿಂಗ್: ಆರ್ಸಿಬಿ ವಿರುದ್ಧ ಎಸ್ಆರ್ಎಚ್ ಹೀನಾಯು ಸೋಲು -
IPL 2026 RCB Vs SRH: ಎಸ್ಆರ್ಎಚ್ನಿಂದ 13,00,00,000 ರೂಪಾಯಿ ಮೌಲ್ಯದ ಸ್ಟಾರ್ ಆಟಗಾರ ಔಟ್ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
RCB Playing 11 Prediction: ಎಸ್ಆರ್ಎಚ್ ವಿರುದ್ಧ ಆರ್ಸಿಬಿ ಪ್ಲೇಯಿಂಗ್ 11 -
RCB Vs SHR: ಚಿನ್ನಸ್ವಾಮಿಯಲ್ಲಿ ಎಸ್ಆರ್ಎಚ್ ವಿರುದ್ಧ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಆರ್ಸಿಬಿ -
Virat Kohli: ಅನುಷ್ಕಾ ಶರ್ಮಾಗೆ ಫ್ಲೈಯಿಂಗ್ ಕಿಸ್ ಕೊಟ್ಟ ಬಳಿಕ ತನ್ನ ಆಟದ ಯಶಸ್ಸಿನ ರಹಸ್ಯ ಬಿಚ್ಚಿಟ್ಟ ವಿರಾಟ್ ಕೊಹ್ಲಿ -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಿಎಸ್ಕೆ ಕಪ್ 5 ರೂಪಾಯಿ, ಆರ್ಸಿಬಿ ಟ್ರೋಫಿ ಬೆಲೆ 5 ಕೋಟಿ ರೂಪಾಯಿ: ಪುಟ್ಟ ಬಾಲಕನ ಹೇಳಿಕೆ ಭಾರೀ ವೈರಲ್ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
RCB: ಆರ್ ಸಿಬಿ ತಂಡದ ಅಧಿಕೃತ ಪೇಮೆಂಟ್ಸ್ ಪಾಲುದಾರ ನವಿ ಯುಪಿಐ, ಫ್ಯಾನ್ಸ್ ಗಮನಿಸಿ -
IPL 2026: RCB ಫ್ಯಾನ್ಸ್ಗಾಗಿ ಬಿಎಂಟಿಸಿ ಬಸ್ಗಳ ಕಾರ್ಯಾಚರಣೆ, ಎಲ್ಲಿಂದ ಎಲ್ಲಿಗೆ? ಮಾರ್ಗ ಡಿಟೇಲ್ಸ್ -
IPL VIP Ticket: ಐಪಿಎಲ್ ಟಿಕೆಟ್ ನನಗಂತೂ ಬೇಡ: ಆರ್ಸಿಬಿ ಪಂದ್ಯದ ಟಿಕೆಟ್ ನಿರಾಕರಿಸಿದ ಬಿಜೆಪಿ ಶಾಸಕ ಸುರೇಶ್ ಕುಮಾರ್












Click it and Unblock the Notifications