ಸರ್ಕಾರಿ ಶಾಲಾ ಮಕ್ಕಳಿಂದ ದೇಣಿಗೆ: ಇದಕ್ಕಿಂತ ದರಿದ್ರ ಸರ್ಕಾರ ಬೇಕೆ: ರಾಮಲಿಮಗಾರೆಡ್ಡಿ
ಬೆಂಗಳೂರು, ಅ.22: 'ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಜನ ಸಾಮಾನ್ಯರ ರಕ್ತ ಹೀರುತ್ತಿದ್ದು, ಅದರ ಮುಂದುವರಿದ ಭಾಗವಾಗಿ ಈಗ ಸರಕಾರಿ ಶಾಲೆ ವಿದ್ಯಾರ್ಥಿಗಳ ಪೋಷಕರಿಂದ ತಿಂಗಳಿಗೆ 100 ರೂ. ದೇಣಿಗೆ ವಸೂಲಿಗೆ ಮುಂದಾಗಿದೆ. ಈ ಸರಕಾರ ಅದೆಷ್ಟು ದರಿದ್ರಗೇಡಿ ಎಂಬುದಕ್ಕೆ ಇದಕ್ಕಿಂತ ಸಾಕ್ಷಿ ಬೇಕೇ' ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸರ್ಕಾರದ ಜನವಿರೋಧಿ ನಿರ್ಧಾರದ ವಿರುದ್ಧ ರಾಮಲಿಂಗಾರೆಡ್ಡಿ ಅವರು ಮಾಧ್ಯಮ ಪ್ರಕಟಣೆ ಮೂಲಕ ಶನಿವಾರ ತಮ್ಮ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.
'ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಶಿಕ್ಷಣ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಸಾವಿರಾರು ಸರ್ಕಾರಿ ಶಾಲೆಗಳನ್ನು ಮುಚ್ಚಲಾಗಿದೆ. 10 ಲಕ್ಷಕ್ಕೂ ಹೆಚ್ಚು ಮಕ್ಕಳು ಶಿಕ್ಷಣದಿಂದ ವಿಮುಖರಾಗಿದ್ದಾರೆ. ಇದು ಸರಕಾರದ ಶಿಕ್ಷಣ ವಿರೋಧಿನೀತಿ ಅಲ್ಲದೆ ಮತ್ತೇನು ಎಂದು ರಾಮಲಿಂಗಾರೆಡ್ಡಿ ಅವರು ಕಿಡಿ ಕಾರಿದ್ದಾರೆ.

ಪ್ರಸಕ್ತ ಶೈಕ್ಷಣಿಕ ವರ್ಷದ ಅವಧಿ ಅರ್ಧದಷ್ಟು ಮುಕ್ತಾಯವಾಗಿದ್ದು, ಇನ್ನೂ ಹಲವೆಡೆ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಪಠ್ಯಪುಸ್ತಕ, ಶೂ ಸಾಕ್ಸ್ ವಿತರಣೆ ಆಗಿಲ್ಲ. ಪಠ್ಯ ಪರಿಕರಗಳನ್ನು ಪೂರೈಸದಿದ್ದರೆ ಮಕ್ಕಳು ಕಲಿಯುವುದಾದರೂ ಹೇಗೆ? ಬಹುಶಃ ಸರಕಾರ 40 % ಕಮಿಷನ್ ಬೆನ್ನು ಬಿದ್ದಿರುವುದರಿಂದ ಈ ವಿಳಂಬ ಆಗಿರಬಹುದು ಎಂದು ಅವರು ಛೇಡಿಸಿದ್ದಾರೆ.
ಸರಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುವ ಬಹುತೇಕ ವಿದ್ಯಾರ್ಥಿಗಳು ಬಡ ಹಾಗೂ ಕೆಳಮಧ್ಯಮ ಕುಟುಂಬಗಳಿಗೆ ಸೇರಿದವರು. ಈಗ ಅವರಿಂದಲೂ ಹಣ ವಸೂಲಿಗೆ ಇಳಿದಿರುವುದು ಖಂಡನೀಯ. ಇದರ ಹಿಂದೆ ಅವರನ್ನು ಶಿಕ್ಷಣ ವಂಚಿತರನ್ನಾಗಿ ಮಾಡುವ ಹುನ್ನಾರವಿದೆ. ಈ ಸರ್ಕಾರದ ಬೇಜವಾಬ್ದಾರಿತನ, ನಿರ್ಲಕ್ಷ್ಯದಿಂದ ಮಕ್ಕಳು ಶಿಕ್ಷಣ ವಂಚಿತರಾಗುತ್ತಿದ್ದಾರೆ ಎಂದು ರಾಮಲಿಂಗಾರೆಡ್ಡಿ ಅವರು ಆರೋಪಿಸಿದ್ದಾರೆ.
ಹಿಂದೆ ಕಾಂಗ್ರೆಸ್ ಸರಕಾರ ವಿದ್ಯಾರ್ಥಿಗಳಿಗೆಂದು ಜಾರಿಗೆ ತಂದಿದ್ದ ಮಧ್ಯಾಹ್ನದ ಬಿಸಿಯೂಟ, ಹಾಲು, ಸಮವಸ್ತ್ರ, ಶೂ-ಸಾಕ್ಸ್ ವಿತರಣೆ, ವಿದ್ಯಾಸಿರಿ, ಹಾಸ್ಟೆಲ್, ವಿದೇಶ ವ್ಯಾಸಂಗಕ್ಕೆ ಸಾಲ ಸೌಲಭ್ಯ ಮತ್ತಿತರ ಯೋಜನೆಗಳನ್ನು ಈಗಿನ ಬಡಜನ ವಿರೋಧಿ ಬಿಜೆಪಿ ಸರಕಾರ ಒಂದೊಂದಾಗಿ ಕಿತ್ತುಕೊಳ್ಳುತ್ತಿದೆ. ಈಗ ಅದರ ಜತೆಗೆ ಬಡ ವಿದ್ಯಾರ್ಥಿಗಳಿಂದ ವಸೂಲಿಗೆ ಮುಂದಾಗಿದೆ. ಇದು ಸರ್ಕಾರದಿಂದ ಬಡ ಜನರಿಗೆ ಆಗುತ್ತಿರುವ ಅನ್ಯಾಯದ ಪರಮಾವಧಿ. ಈ ಸರ್ಕಾರಕ್ಕೆ ಸರ್ಕಾರಿ ಶಾಲೆ ನಡೆಸುವ ಯೋಗ್ಯತೆಯೂ ಇಲ್ಲವಾಗಿದೆ ಎಂದು ರಾಮಲಿಂಗಾರೆಡ್ಡಿ ಅವರು ಹೇಳಿಕೆಯಲ್ಲಿ ಟೀಕಿಸಿದ್ದಾರೆ.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications