ಗೋವಿಂದ ರಾಜು ಡೈರಿ ಎಫೆಕ್ಟ್: ಮಂತ್ರಿ ಮಂಡಲದಿಂದ ಪ್ರಭಾವಿ ಸಚಿವರು ಔಟ್?
ಎಂಎಲ್ ಸಿ ಗೋವಿಂದ ರಾಜು ಅವರ ಡೈರಿಯಲ್ಲಿನ ಸ್ಫೋಟಕ ಮಾಹಿತಿಗಳು ಮಾಧ್ಯಮಗಳ ಮೂಲಕ ಬಹಿರಂಗಗೊಂಡ ಹಿನ್ನೆಲೆಯಲ್ಲಿ ರಾಜ್ಯ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ನಡೆಸಲು ಕಾಂಗ್ರೆಸ್ ಹೈಕಮಾಂಡ್ ಚಿಂತನೆ.
ಬೆಂಗಳೂರು, ಫೆಬ್ರವರಿ 25: ಕಾಂಗ್ರೆಸ್ ಕಪ್ಪ ಪ್ರಕರಣ ಕುರಿತಂತೆ ವಿಧಾನ ಪರಿಷತ್ ಸದಸ್ಯ ಗೋವಿಂದ ರಾಜು ಅವರ ಡೈರಿಯ ವಿವರಗಳು ಬಹಿರಂಗಗೊಂಡ ಹಿನ್ನೆಲೆಯಲ್ಲಿ ರಾಜ್ಯ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ಮಾಡಲು ಕಾಂಗ್ರೆಸ್ ಹೈಕಮಾಂಡ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರೆನ್ನಲಾಗಿದೆ.
ಸುಮಾರು 20 ಸಚಿವರನ್ನು ಸಂಪುಟದಿಂದ ಕೈಬಿಡಲು ನಿರ್ಧರಿಸಲಾಗಿದೆ ಎಂದೂ ಹೇಳಲಾಗಿದೆ.
ಈ ನಿಟ್ಟಿನಲ್ಲಿ ಈಗಾಗಗಲೇ ಹೈಕಮಾಂಡ್ ಹಾಗೂ ಸಿದ್ದರಾಮಯ್ಯ ನಡುವೆ ಒಂದು ಸುತ್ತಿನ ಮಾತುಕತೆ ನಡೆದಿದ್ದು, ಶೀಘ್ರದಲ್ಲೇ ಮಂತ್ರಿ ಮಂಡಲ ಪುನರಾಚನೆಯಾಗಲಿದೆ ಎಂದು ಹೇಳಲಾಗಿದೆ. ಇದಕ್ಕೆ ಪೂರಕವಾಗಿ ಹಿರಿಯ ಸಚಿವರಿಗೆ ಮಂತ್ರಿ ಮಂಡಲ ಪುನಾರಾಚನೆಗೆ ಸಿದ್ಧರಾಗಿ ಎಂದು ಮಾರ್ಮಿಕವಾದ ಸಂದೇಶವೊಂದು ರವಾನೆಯಾಗಿದೆ ಎಂದು ಹೇಳಲಾಗಿದೆ.[ಡೈರಿಯಲ್ಲಿ ಕಂಡ ಡೊನೆಷನ್ ಆರ್ ಜಿ ಟೂರಿಗೆ ವಿನಿಯೋಗ: ಸಿಟಿಆರ್]

ಮೂಲಗಳ ಪ್ರಕಾರ, ಮಂತ್ರಿ ಮಂಡಲ ಪುನಾರಚನೆ ವೇಳೆ ಕಿರಿಯ ನಾಯಕರಿಗೆ ಪ್ರಾಮುಖ್ಯತೆ ನೀಡಲು ನಿರ್ಧರಿಸಲಾಗಿದ್ದು, ಈ ಹಿನ್ನೆಲೆಯಲ್ಲಿ, ಹಾಲಿ ಹಿರಿಯ ಸಚಿವರಾದ ಎಚ್. ಆಂಜನೇಯ, ಎಚ್.ಕೆ. ಪಾಟೀಲ್, ಡಿ.ಕೆ. ಶಿವಕುಮಾರ್, ರಾಮಲಿಂಗಾ ರೆಡ್ಡಿ ಮೊದಲಾದವರು ಸ್ಥಾನ ಕಳೆದುಕೊಳ್ಳಲಿದ್ದಾರೆಂದು ಹೇಳಲಾಗಿದೆ. ಹೀಗಾದಲ್ಲಿ, ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಭಿನ್ನಮತ ಭುಗಿಲೆೇಳಲಿದೆ ಎಂದೂ ಹೇಳಲಾಗುತ್ತಿದೆ.[ಕಾಂಗ್ರೆಸ್ ಅಧಿಕಾರದಲ್ಲಿರುವ ಯಾವ ರಾಜ್ಯವೂ ಉದ್ಧಾರವಾಗಲ್ಲ: ಮೋದಿ]
ಫೆ. 25ರಂದು ಸಮನ್ವಯ ಸಮಿತಿ ಸಭೆ: ಮಂತ್ರಿಮಂಡಲ ಪುನಾರಚನೆಗೆ ಸಂಬಂಧಿಸಿದಂತೆ, ಫೆ. 25ರಂದು ರಾಜ್ಯ ಕಾಂಗ್ರೆಸ್ ನ ಸಮನ್ವಯ ಸಮಿತಿ ಸಭೆ ಕರೆಯಲಾಗಿದ್ದು, ಮಂತ್ರಿಮಂಡಲದಲ್ಲಿ ಯಾರನ್ನು ಉಳಿಸಿಕೊಳ್ಳಬೇಕು, ಯಾರನ್ನು ಹೊರಹಾಕಬೇಕು ಎಂಬುದರ ಬಗ್ಗೆ ತೀರ್ಮಾನವಾಗುವ ನಿರೀಕ್ಷೆಯಿದೆ.
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications