ಕರ್ನಾಟಕ ಸರ್ಕಾರಕ್ಕೆ ಮಹತ್ವದ ಸೂಚನೆ ಕೊಟ್ಟ ರಾಜ್ಯಪಾಲರು

ಬೆಂಗಳೂರು, ಜುಲೈ 11 : ಕರ್ನಾಟಕದ ರಾಜಕೀಯ ಹೈಡ್ರಾಮಕ್ಕೆ ತೆರೆ ಬೀಳುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಮತ್ತೊಂದು ಕಡೆ ಆಡಳಿತಯಂತ್ರ ಕುಸಿದು ಹೋಗಿದ್ದು, ಯಾವುದೇ ಕೆಲಸಗಳು ಆಗುತ್ತಿಲ್ಲ. ಈ ಸಂದರ್ಭದಲ್ಲಿಯೇ ರಾಜ್ಯಪಾಲ ವಜುಭಾಯಿ ವಾಲಾ ಅವರು ಸರ್ಕಾರಕ್ಕೆ ಮಹತ್ವದ ಸೂಚನೆ ಕೊಟ್ಟಿದ್ದಾರೆ.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಗುರುವಾರ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ನಡೆಸುತ್ತಿದ್ದಾರೆ. ಸರ್ಕಾರ ಯಾವುದೇ ಆಡಳಿತಾತ್ಮಕ ತೀರ್ಮಾನವನ್ನು ಕೈಗೊಳ್ಳುವಂತಿಲ್ಲ ಎಂದು ರಾಜ್ಯಪಾಲರು ಸೂಚನೆ ನೀಡಿದ್ದಾರೆ.

Dont take any administrative decisions Vajubhai Vala to Karnataka govt

ರಾಜ್ಯಪಾಲರ ಸೂಚನೆಯಿಂದಾಗಿ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳು ಯಾವುದೇ ಆಡಳಿತಾತ್ಮಕ ವಿಚಾರಗಳ ಕುರಿತು ತೀರ್ಮಾನಗಳನ್ನು ಕೈಗೊಳ್ಳುವಂತಿಲ್ಲ. ಕಾಂಗ್ರೆಸ್ ಮತ್ತು ಜೆಡಿಎಸ್‌ನ ಎಲ್ಲಾ ಸಚಿವರು ರಾಜೀನಾಮೆ ನೀಡಿದ್ದಾರೆ ಎಂದು ಎರಡೂ ಪಕ್ಷಗಳ ನಾಯಕರು ಹೇಳುತ್ತಿದ್ದಾರೆ.

16 ಶಾಸಕರ ರಾಜೀನಾಮೆಯಿಂದಾಗಿ ಕರ್ನಾಟಕದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಬಹುಮತವನ್ನು ಕಳೆದುಕೊಂಡಿದೆ. ಆದ್ದರಿಂದ, ಸರ್ಕಾರ ಯಾವುದೇ ಆಡಳಿತಾತ್ಮಕ ತೀರ್ಮಾನವನ್ನು ಕೈಗೊಳ್ಳಬಾರದು ಎಂದು ರಾಜ್ಯಪಾಲರು ಸೂಚನೆ ಕೊಟ್ಟಿದ್ದಾರೆ.

ಇಂದಿನ ಸಚಿವ ಸಂಪುಟ ಸಭೆಯಲ್ಲಿ ಒಟ್ಟು 21 ವಿಚಾರಗಳ ಕುರಿತು ಚರ್ಚೆ ನಡೆಸಲು ತೀರ್ಮಾನಿಸಲಾಗಿತ್ತು. ರಾಜ್ಯಪಾಲರ ಸೂಚನೆ ಬಳಿಕ ಮುಖ್ಯಮಂತ್ರಿಗಳು ಯಾವ ತೀರ್ಮಾನವನ್ನು ಕೈಗೊಳ್ಳುತ್ತಾರೆ ಎಂದು ಕಾದು ನೋಡಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+