ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ಸರ್ಕಾರಕ್ಕೆ ಮಹತ್ವದ ಸೂಚನೆ ಕೊಟ್ಟ ರಾಜ್ಯಪಾಲರು

|
Google Oneindia Kannada News

ಬೆಂಗಳೂರು, ಜುಲೈ 11 : ಕರ್ನಾಟಕದ ರಾಜಕೀಯ ಹೈಡ್ರಾಮಕ್ಕೆ ತೆರೆ ಬೀಳುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಮತ್ತೊಂದು ಕಡೆ ಆಡಳಿತಯಂತ್ರ ಕುಸಿದು ಹೋಗಿದ್ದು, ಯಾವುದೇ ಕೆಲಸಗಳು ಆಗುತ್ತಿಲ್ಲ. ಈ ಸಂದರ್ಭದಲ್ಲಿಯೇ ರಾಜ್ಯಪಾಲ ವಜುಭಾಯಿ ವಾಲಾ ಅವರು ಸರ್ಕಾರಕ್ಕೆ ಮಹತ್ವದ ಸೂಚನೆ ಕೊಟ್ಟಿದ್ದಾರೆ.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಗುರುವಾರ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ನಡೆಸುತ್ತಿದ್ದಾರೆ. ಸರ್ಕಾರ ಯಾವುದೇ ಆಡಳಿತಾತ್ಮಕ ತೀರ್ಮಾನವನ್ನು ಕೈಗೊಳ್ಳುವಂತಿಲ್ಲ ಎಂದು ರಾಜ್ಯಪಾಲರು ಸೂಚನೆ ನೀಡಿದ್ದಾರೆ.

ನಾನ್ಯಾಕೆ ರಾಜೀನಾಮೆ ನೀಡಲಿ: ಸಿಎಂ ಕುಮಾರಸ್ವಾಮಿನಾನ್ಯಾಕೆ ರಾಜೀನಾಮೆ ನೀಡಲಿ: ಸಿಎಂ ಕುಮಾರಸ್ವಾಮಿ

Dont take any administrative decisions Vajubhai Vala to Karnataka govt

ರಾಜ್ಯಪಾಲರ ಸೂಚನೆಯಿಂದಾಗಿ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳು ಯಾವುದೇ ಆಡಳಿತಾತ್ಮಕ ವಿಚಾರಗಳ ಕುರಿತು ತೀರ್ಮಾನಗಳನ್ನು ಕೈಗೊಳ್ಳುವಂತಿಲ್ಲ. ಕಾಂಗ್ರೆಸ್ ಮತ್ತು ಜೆಡಿಎಸ್‌ನ ಎಲ್ಲಾ ಸಚಿವರು ರಾಜೀನಾಮೆ ನೀಡಿದ್ದಾರೆ ಎಂದು ಎರಡೂ ಪಕ್ಷಗಳ ನಾಯಕರು ಹೇಳುತ್ತಿದ್ದಾರೆ.

ಮ್ಯಾಜಿಕ್ ನಂಬರ್ ಸಿಕ್ಕರೂ ಬಿಜೆಪಿ ಸರ್ಕಾರ ರಚನೆಗೆ ಮುಂದಾಗಿಲ್ಲವೇಕೆ?ಮ್ಯಾಜಿಕ್ ನಂಬರ್ ಸಿಕ್ಕರೂ ಬಿಜೆಪಿ ಸರ್ಕಾರ ರಚನೆಗೆ ಮುಂದಾಗಿಲ್ಲವೇಕೆ?

16 ಶಾಸಕರ ರಾಜೀನಾಮೆಯಿಂದಾಗಿ ಕರ್ನಾಟಕದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಬಹುಮತವನ್ನು ಕಳೆದುಕೊಂಡಿದೆ. ಆದ್ದರಿಂದ, ಸರ್ಕಾರ ಯಾವುದೇ ಆಡಳಿತಾತ್ಮಕ ತೀರ್ಮಾನವನ್ನು ಕೈಗೊಳ್ಳಬಾರದು ಎಂದು ರಾಜ್ಯಪಾಲರು ಸೂಚನೆ ಕೊಟ್ಟಿದ್ದಾರೆ.

ಕರ್ನಾಟಕದಲ್ಲಿ ರಾಜಕೀಯ ಬಿಕ್ಕಟ್ಟಿಗೆ ಇವರಿಬ್ಬರೇ ಮುಖ್ಯ ಕಾರಣಕರ್ನಾಟಕದಲ್ಲಿ ರಾಜಕೀಯ ಬಿಕ್ಕಟ್ಟಿಗೆ ಇವರಿಬ್ಬರೇ ಮುಖ್ಯ ಕಾರಣ

ಇಂದಿನ ಸಚಿವ ಸಂಪುಟ ಸಭೆಯಲ್ಲಿ ಒಟ್ಟು 21 ವಿಚಾರಗಳ ಕುರಿತು ಚರ್ಚೆ ನಡೆಸಲು ತೀರ್ಮಾನಿಸಲಾಗಿತ್ತು. ರಾಜ್ಯಪಾಲರ ಸೂಚನೆ ಬಳಿಕ ಮುಖ್ಯಮಂತ್ರಿಗಳು ಯಾವ ತೀರ್ಮಾನವನ್ನು ಕೈಗೊಳ್ಳುತ್ತಾರೆ ಎಂದು ಕಾದು ನೋಡಬೇಕಿದೆ.

English summary
Karnataka governor Vajubhai Vala directed the Karnataka government not to take administrative decisions due to political crises and govt has no magic number.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X