Get Updates
Get notified of breaking news, exclusive insights, and must-see stories!

Bye-Election: ಶಿಗ್ಗಾಂವಿಯಲ್ಲಿ ಒಳ ಒಪ್ಪಂದ, ಕಾಂಗ್ರೆಸ್‌ ನಾಯಕರಿಂದಲೇ ಆರೋಪ!

ಶಿಗ್ಗಾಂವಿ ವಿಧಾನಸಭಾ ಕ್ಷೇತ್ರ ಉಪ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ಅಭ್ಯರ್ಥಿಯನ್ನು ಘೋಷಿಸಿದೆ. ಆದರೆ, ಕಾಂಗ್ರೆಸ್‌ ಘೋಷಿಸಿರುವ ಅಭ್ಯರ್ಥಿಯ ಹೆಸರು ಭಾರೀ ಚರ್ಚೆ ಹುಟ್ಟುಹಾಕಿದೆ. ಅಲ್ಲದೇ ಇದು ಒಳ ಒಪ್ಪಂದವೇ ಎನ್ನುವ ಅನುಮಾನವೂ ಶುರುವಾಗಿದೆ. ಕಾಂಗ್ರೆಸ್‌ ಹಾಗೂ ಬಿಜೆಪಿ ನಡುವೆ ಒಳಒಪ್ಪಂದವಾಗಿರುವ ಬಗ್ಗೆ ಅನುಮಾನ ಮೂಡಲು ಕಾರಣವೂ ಇದೆ ಎಂದು ಸೋಷಿಯಲ್‌ ಮೀಡಿಯಾದಲ್ಲಿ ಜನ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಕರ್ನಾಟಕದ ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭೆ ಉಪ ಚುನಾವಣೆಗಳ ಕಾವು ಜೋರಾಗಿದೆ. ಈ ಮೂರು ವಿಧಾನಸಭೆ ಚುನಾವಣೆಗಳಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಪಕ್ಷಗಳಿಗೆ ಗೆಲ್ಲುವುದು ಒಂದೊಂದು ಕಾರಣಕ್ಕೆ ಇಂಪಾರ್ಟೆಂಟ್‌ ಆಗಿದೆ. ಆದರೆ, ಈ ನಡೆಯುತ್ತಿರುವ ಬೆಳವಣಿಗೆ ಗಮನಿಸಿದರೆ, ಕಾಂಗ್ರೆಸ್‌ ನಿರ್ಧಾರ ಹಲವು ಅನುಮಾನಗಳನ್ನು ಮೂಡಿಸಿದೆ ಎನ್ನಲಾಗಿದೆ.

Doubt about internal agreement Congress decision in Shiggaon

ಶಿಗ್ಗಾಂವಿ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್‌ ಯಾಸಿರ್​ ಅಹ್ಮದ್ ಖಾನ್​​ ಪಠಾಣ್ ಅವರಿಗೆ ಟಿಕೆಟ್‌ ನೀಡಿದೆ. ಈ ಸಂಬಂಧ ಎಐಸಿಸಿ ಆದೇಶ ಹೊರಡಿಸಿದೆ. ಯಾಸೀರ್​ ಅಹ್ಮದ್​ ಖಾನ್​ ಪಠಾಣ್ ಅವರು ಇಲ್ಲಿನ ಹಾನಗಲ್​ ತಾಲ್ಲೂಕಿನ ಬೊಮ್ಮನಳ್ಳಿ ಗ್ರಾಮದವರಾಗಿದ್ದು, ಈ ಹಿಂದೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ್ದರು.

ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಬಸವರಾಜ್ ಬೊಮ್ಮಾಯಿ ಅವರ ವಿರುದ್ಧ ಶಿಗ್ಗಾಂವಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು. ಇದೀಗ ಮತ್ತೆ ಅವರನ್ನೇ ಆಯ್ಕೆ ಮಾಡಿರುವ ಹಿಂದೆ ಯಾವ ಕಾರಣ ಇದೆ ಎಂದು ಜನ ಕೇಳುತ್ತಿದ್ದಾರೆ.

ಬಿಜೆಪಿ - ಕಾಂಗ್ರೆಸ್‌ ನಡುವೆ ಒಳಒಪ್ಪಂದ: ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ ಒಳಒಪ್ಪಂದಗಳು ನಡೆಯುವ ಬಗ್ಗೆ ಈ ಹಿಂದೆಯಿಂದಲೂ ಆರೋಪವಿದೆ. ರಾಜ್ಯದಲ್ಲಿ 2023ನೇ ಸಾಲಿನಲ್ಲಿ ನಡೆದ ರಾಜ್ಯ ವಿಧಾನಸಭೆ ಚುನಾವಣೆಯಲ್ಲೂ ಬಿಜೆಪಿ ಸೋಲುವುದಕ್ಕೆ ಬಿಜೆಪಿಯ ಕೆಲವು ನಾಯಕರು ಕಾಂಗ್ರೆಸ್‌ನೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇ ಕಾರಣ ಎನ್ನುವ ಆರೋಪ ಕೇಳಿ ಬಂದಿತ್ತು.

ಈ ರೀತಿ ಒಳಒಪ್ಪಂದ ಆಗಿದೆ ಎಂದು ಬಿಜೆಪಿಯ ನಾಯಕರೇ ಆರೋಪಿಸಿದ್ದರು. ಈ ಬಾರಿ ಶಿಗ್ಗಾಂವಿ ವಿಧಾನಸಭೆ ಉಪ ಚುನಾವಣೆಯಲ್ಲಿ ಧಾರವಾಡ ಶಾಸಕ ವಿನಯ್​ ಕುಲಕರ್ಣಿ ಅವರ ಮಗಳಿಗೆ ಕಾಂಗ್ರೆಸ್‌ನಿಂದ ಟಿಕೆಟ್​ ಕೊಡುತ್ತೆ. ಹೀಗಾಗಿ, ಶಿಗ್ಗಾಂವಿ ಚುನಾವಣೆ ಭಾರೀ ಜಿದ್ದಾಜಿದ್ದಿನಿಂದ ಕೂಡಿರಲಿದೆ ಎಂದೇ ಹೇಳಲಾಗಿತ್ತು. ಆದರೆ, ಆ ನಿರೀಕ್ಷೆಗಳೆಲ್ಲವೂ ಹುಸಿಯಾಗಿವೆ.

ಕಾಂಗ್ರೆಸ್‌ನ ಕೆಲವು ನಾಯಕರೇ ಈ ಬಗ್ಗೆ ಆರೋಪ ಮಾಡಿದ್ದಾರೆ. ಇಲ್ಲಿ ಒಳಒಪ್ಪಂದ ಆಗಿರುವ ಬಗ್ಗೆ ದೂರಿದ್ದಾರೆ.

ಐದು ಚುನಾವಣೆ: ಇನ್ನು ಶಿಗ್ಗಾಂವಿಯಲ್ಲಿ ನಡೆದಿರುವ ಐದು ಚುನಾವಣೆಗಳಲ್ಲೂ ಮುಸ್ಲಿಂ ಸಮುದಾಯದವರಿಗೆ ಟಿಕೆಟ್‌ ನೀಡಲಾಗಿದೆ. ಈ ಬಾರಿಯೂ ಮುಸ್ಲಿಂ ಸಮುದಾಯವರಿಗೆ ಟಿಕೆಟ್‌ ನೀಡಬೇಕು ಎಂದು ಸಚಿವ ಜಮೀರ್‌ ಅಹ್ಮದ್‌ಖಾನ್‌ ಸೇರಿದಂತೆ ಹಲವು ಮುಸ್ಲಿಂ ಮುಖಂಡರು ಕಾಂಗ್ರೆಸ್‌ ಹೈಕಮಾಂಡ್‌ಗೆ ಮನವಿ ಮಾಡಿದ್ದರು. ಈ ಕ್ಷೇತ್ರದಲ್ಲಿ ಒಟ್ಟು 2,26,079 ಜನ ಇದ್ದಾರೆ. ಲಿಂಗಾಯತ ಹಾಗೂ ಮುಸ್ಲಿಂ ಸಮುದಾಯದವರು ಇಲ್ಲಿ ಹೆಚ್ಚಾಗಿ ಇದ್ದಾರೆ. ಇಲ್ಲಿ ಲಿಂಗಾಯತ ಸಮುದಾಯದವರು 80,000 ಸಾವಿರಕ್ಕೂ ಹೆಚ್ಚು ಹಾಗೂ ಮುಸ್ಲಿಂ ಸಮುದಾಯದವರು 55,000ಕ್ಕೂ ಹೆಚ್ಚಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+