ದೇಶದ ಪ್ರಮುಖ 4 ಶಕ್ತಿಗಳ ಪರವಾಗಿ ಬಿಜೆಪಿ- ಡಾ.ಸಿ.ಎನ್ ಅಶ್ವತ್ಥ್ ನಾರಾಯಣ್
ಬೆಂಗಳೂರು, ಏಪ್ರಿಲ್ 16: ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಡಾ.ಸಿ.ಎನ್.ಮಂಜುನಾಥ್ ಅವರು ಗೆದ್ದು ನರೇಂದ್ರ ಮೋದಿಯವರ ತಂಡ ಸೇರಲಿದ್ದಾರೆ. ಈ ಭಾಗದಲ್ಲಿ ದೊಡ್ಡ ಸಂಚಲನ ಉಂಟಾಗಲಿದೆ ಎಂದು ಬಿಜೆಪಿ ಮುಖಂಡ ಡಾ.ಸಿ.ಎನ್.ಅಶ್ವತ್ಥನಾರಾಯಣ್ ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಡವರು, ಮಹಿಳೆಯರು, ಯುವಜನತೆ, ರೈತರ ಪರವಾಗಿ 4 ಪ್ರಮುಖ ಶಕ್ತಿಗಳನ್ನು ವಿಂಗಡಣೆ ಮಾಡಿದ್ದಾರೆ. ರೈತರ ಪರವಾಗಿ ಕಿಸಾನ್ ಸಮ್ಮಾನ್ ಮುಂದುವರಿಸುವಿಕೆ ಜೊತೆಗೆ ಬೆಂಬಲ ಬೆಲೆ ಕಾಲಕಾಲಕ್ಕೆ ಕೊಡುವುದಲ್ಲದೆ, ಅದನ್ನು ಹೆಚ್ಚಿಸಲು ಮೋದಿಜೀ ಅವರು ಸಂಕಲ್ಪ ಮಾಡಿದ್ದಾರೆ ಎಂದು ವಿವರಿಸಿದರು.

ಉಪಗ್ರಹ ಬಳಸಿ ಬೆಳೆಗಳ ಮಾಹಿತಿ ಸಂಗ್ರಹಿಸಿ ನೀಡುವುದು, ಹವಾಮಾನದ ಮುನ್ಸೂಚನೆ ನೀಡಲಿದ್ದಾರೆ. ಕೃಷಿ ಮೂಲಸೌಕರ್ಯಕ್ಕೆ ಒತ್ತು ಕೊಡಲು ಸರಕಾರ ಮುಂದಾಗಲಿದೆ ಎಂದು ತಿಳಿಸಿದರು. ವ್ಯವಸಾಯದಲ್ಲಿ ದೊಡ್ಡ ಕ್ರಾಂತಿ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮಹಿಳಾ ಸಬಲೀಕರಣ ಮಾಡಲು ಎಲ್ಲ ಸೌಕರ್ಯಗಳನ್ನು ನೀಡಲಾಗುವುದು. 3 ಕೋಟಿ ಮಹಿಳೆಯರನ್ನು ಲಕ್ಷಪತಿ ಮಾಡಲು ಸರಕಾರ ಮುಂದಾಗಿದೆ. 4 ಕೋಟಿ ಮನೆಗಳ ನಿರ್ಮಾಣ ಆಗಲಿದೆ. ಶೌಚಾಲಯ, ನೀರು ಮತ್ತಿತರ ಮೂಲಭೂತ ಸೌಲಭ್ಯ ಕೊಡಲಾಗುವುದು ಎಂದು ತಿಳಿಸಿದರು.
ಸಮಾನ ನಾಗರಿಕ ಸಂಹಿತೆ ಜಾರಿಗೊಳಿಸಲಾಗುವುದು. ಮಹಿಳಾ ಮೀಸಲಾತಿಯನ್ನು ಈಗಾಗಲೇ ಜಾರಿಗೊಳಿಸಲಾಗಿದೆ. ಪಡಿತರ ವಿಸ್ತರಣೆ ಸೇರಿದಂತೆ ಬಡವರಿಗೆ ಬೇಕಾದ ಎಲ್ಲ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಲು ಸಂಕಲ್ಪ ಪತ್ರವು ಬದ್ಧತೆಯನ್ನು ತೋರಿದೆ ಎಂದು ಹೇಳಿದರು.
ಅಟಲ್ ಪಿಂಚಣಿ, ಆರೋಗ್ಯ ವಿಮೆ ಮೊದಲಾದವುಗಳನ್ನು ಇನ್ನಷ್ಟು ವಿಸ್ತರಿಸಲು ಮುಂದಾಗಿದೆ. ಯುವಕರು ನಮ್ಮ ಆಶಾಕಿರಣ. ಅವರಿಗೆ ಹೆಚ್ಚಿನ ಒತ್ತು ಕೊಡಲು ತಂತ್ರಜ್ಞಾನ, ಕೌಶಲ್ಯಕ್ಕೆ ಒತ್ತು ಕೊಡಲಾಗುವುದು ಎಂದು ತಿಳಿಸಿದರು.
ಮುದ್ರಾ ಯೋಜನೆಯಡಿ ಇನ್ನಷ್ಟು ಜನರಿಗೆ ಪ್ರಯೋಜನ ಸಿಗಲಿದೆ ಎಂದು ಹೇಳಿದರು. ಉದ್ಯೋಗ ಸೃಷ್ಟಿಗೆ ಆದ್ಯತೆ ಕೊಡಲಾಗುವುದು ಎಂದರು. ಈಗಾಗಲೇ 7 ಕೋಟಿ ಉದ್ಯೋಗ ಸೃಷ್ಟಿ ಆಗಿದೆ ಎಂದು ವಿವರ ನೀಡಿದರು. ಮನೆಬಾಗಿಲಿಗೆ ಸರಕಾರದ ಎಲ್ಲ ಸೇವೆಗಳು ದೊರಕಲಿವೆ ಎಂದು ಹೇಳಿದರು. ಇದೇವೇಳೆ ಅವರು ನಟ, ನಿರ್ಮಾಪಕ ದ್ವಾರಕೀಶ್ ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದರು.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ












Click it and Unblock the Notifications